ದಿನದ ಸುದ್ದಿ
2019 ರ ಚುನಾವಣಾ ತೀರ್ಪು : ಬಲಪಂಥೀಯ ದಾಳಿಯ ಕ್ರೋಡೀಕರಣದ ಸೂಚನೆ
- ಮೋದಿಯವರನ್ನು ಒಬ್ಬ ಬಲಿಷ್ಠ ನಾಯಕನನ್ನಾಗಿ ಬಿಂಬಿಸಿ ಬಿಜೆಪಿ ಪ್ರಚಾರ ನಡೆಸಿದ್ದು ಮತ್ತು ಪುಲ್ವಾಮಾ ನಂತರದ ಪರಿಸ್ಥಿತಿ ಹಾಗೂ ಬಾಲಾಕೋಟ್ ದಾಳಿಯನ್ನು ಬಳಸಿಕೊಂಡು ಕೋಮುವಾದಿ ಛಾಯೆಯ ರಾಷ್ಟ್ರವಾದವನ್ನು ಬಡಿದೆಬ್ಬಿಸಿದ್ದು ಮೋದಿ ಸರಕಾರದ ಅಡಿಯಲ್ಲಿ ಜನರು ಎದುರಿಸಿದ ನೈಜ ಸಮಸ್ಯೆಗಳಾದ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಹದಗೆಡುತ್ತಿರುವ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ದಲಿತರ ಮೇಲಿನ ನಿರಂತರ ದಾಳಿಗಳು ಇವುಗಳನ್ನು ಮೀರಿ ನಿಲ್ಲುವಲ್ಲಿ ಯಶಸ್ಸನ್ನು ತಂದುಕೊಟ್ಟಿತೆಂದು ಕಾಣಿಸುತ್ತದೆ. 2014ರ ನಂತರ ಬಲಪಂಥೀಯ ದಾಳಿ ಇನ್ನಷ್ಟು ಕ್ರೋಡೀಕರಣಗೊಂಡಿರುವುದನ್ನು ಈ ಫಲಿತಾಂಶ ಸೂಚಿಸುತ್ತದೆ.
17ನೇ ಲೋಕಸಭೆ ಚುನಾವಣೆಯ ಫಲಿತಾಂಶವಾಗಿ ಬಿಜೆಪಿ ಮತ್ತು ಎನ್ಡಿಎ ನಿರ್ಣಾಯಕ ಬಹುಮತವನ್ನು ಪಡೆದು ಮೋದಿ ಸರಕಾರ ಅಧಿಕಾರಕ್ಕೆ ಮರಳಿದೆ. ಬಿಜೆಪಿಯ ಬಹುಮತ ಏರಿಕೆಯಾಗಿದೆ ಹಾಗೂ ಎನ್ಡಿಎಯ ಒಟ್ಟಾರೆ ಸಂಖ್ಯೆಯೂ ಏರಿದೆ.
ಮೋದಿಯವರನ್ನು ಒಬ್ಬ ಬಲಿಷ್ಠ ನಾಯಕನನ್ನಾಗಿ ಬಿಂಬಿಸಿ ಬಿಜೆಪಿ ಪ್ರಚಾರ ನಡೆಸಿದ್ದು ಹಾಗೂ ಪುಲ್ವಾಮಾ ನಂತರದ ಪರಿಸ್ಥಿತಿ ಹಾಗೂ ಬಾಲಾಕೋಟ್ ದಾಳಿಯನ್ನು ಬಳಸಿಕೊಂಡು ಕೋಮುವಾದಿ ಛಾಯೆಯ ರಾಷ್ಟ್ರವಾದವನ್ನು ಬಡಿದೆಬ್ಬಿಸಿದ್ದು ಮೋದಿ ಸರಕಾರದ ಅಡಿಯಲ್ಲಿ ಜನರು ಎದುರಿಸಿದ ನೈಜ ಸಮಸ್ಯೆಗಳಾದ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಹದಗೆಡುತ್ತಿರುವ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ದಲಿತರ ಮೇಲಿನ ನಿರಂತರ ದಾಳಿಗಳು ಇವುಗಳನ್ನು ಮೀರಿ ನಿಲ್ಲುವಲ್ಲಿ ಯಶಸ್ಸನ್ನು ತಂದುಕೊಟ್ಟಿತೆಂದು ಕಾಣಿಸುತ್ತದೆ.
ಮೋದಿ ಯುದ್ಧಕೋರ ರಾಷ್ಟ್ರವಾದ ಮತ್ತು ಅದರ ಜತೆಗೆ ರಾಷ್ಟ್ರವಾದದ ಮುಸುಕಿನಲ್ಲಿ ಬಹುಸಂಖ್ಯಾತತ್ವದ ಭಾವನೆಗಳನ್ನು ಬಡಿದೆಬ್ಬಿಸುವ ಉದ್ದೇಶವನ್ನೇ ಹೊಂದಿದ ಕೋಮುವಾದಿ ಅಜೆಂಡಾವನ್ನು ಬೆರೆಸಿದ ಪ್ರಚಾರದ ನೇತೃತ್ವವನ್ನು ವಹಿಸಿದ್ದರು. ಚುನಾವಣೆ ಪ್ರಚಾರದ ಎಲ್ಲಾ ರಂಗಗಳಲ್ಲಿ ಅಭೂತಪೂರ್ವ ರೀತಿಯಲ್ಲಿ ಹಣಬಲದ ಬಳಕೆಯಾಯಿತು. ಸಾಮಾಜಿಕ ಮಾಧ್ಯಮ ಪ್ರಚಾರಕ್ಕೆ ಬಿಜೆಪಿ ನೂರಾರು ಕೋಟಿ ರೂಪಾಯಿಗಳನ್ನು ವ್ಯಯಿಸಿತು. ಮೋದಿ ಒಬ್ಬ ನಿರ್ಣಾಯಕ ನಾಯಕ ಎಂಬ ಸಂದೇಶ ಹಾಗೂ ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಒಂದು ಗೌರವಯುತ ದೇಶವನ್ನಾಗಿ ಅವರು ಮಾಡಿದರು ಮತ್ತು ಪಾಕಿಸ್ತಾನದಿಂದ ನಡೆಯುವ ಭಯೋತ್ಪಾದನೆಯನ್ನು ಎದುರಿಸಿದರು ಎಂದು ವಾಟ್ಸ್ಆಪ್ ಮತ್ತು ಇತರೆ ಸಾಮಾಜಿಕ ಮಾಧ್ಯಮಗಳ ಮೂಲಕ ವ್ಯಾಪಕವಾಗಿ ಬಿಂಬಿಸಲಾಯಿತು.
2014ರ ಚುನಾವಣೆ ನಂತರ ಹರಿಬಿಡಲಾದ ಬಲಪಂಥೀಯ ದಾಳಿ ಇನ್ನಷ್ಟು ಕ್ರೋಡೀಕರಣಗೊಂಡಿರುವುದನ್ನು ಈ ಚುನಾವಣೆ ಫಲಿತಾಂಶ ಸೂಚಿಸುತ್ತದೆ. ಬಿಜೆಪಿ-ಆರ್ಎಸ್ಎಸ್ ಕೂಟ ಸ್ಥಾಪಿಸಿರುವ ರಾಜಕೀಯ ಮತ್ತು ಸೈದ್ಧಾಂತಿಕ ಪ್ರಾಬಲ್ಯದ ವಿರುದ್ಧ ಪರಿಣಾಮಕಾರಿ ಸವಾಲನ್ನು ಎಸೆಯಲು ಎಡ ಪಕ್ಷಗಳೂ ಸೇರಿದಂತೆ ಜಾತ್ಯತೀತ ಪ್ರತಿಪಕ್ಷಗಳಿಗೆ ಸಾಧ್ಯವಾಗಲಿಲ್ಲ ಎನ್ನುವುದು ವಾಸ್ತವ ಸಂಗತಿ.
ಚುನಾವಣೆ ಆಯೋಗ ತಾನು ಮಾಡಬೇಕಾದ್ದನ್ನು ಮಾಡದೆ, ಮಾಡಬಾರದ್ದನ್ನು ಮಾಡುವ ಮೂಲಕ ಬಿಜೆಪಿಗೆ ನೆರವು ನೀಡುತ್ತ ವಹಿಸಿದ ಪಾತ್ರವೂ ಈ ಚುನಾವಣೆಯ ಒಂದು ಕಳವಳಕಾರಿ ಸಂಗತಿಯಾಗಿದೆ. ಪ್ರತಿಪಕ್ಷಗಳಿಗೆ ಸಮಾನ ನೆಲೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಖಾತ್ರಿಗೊಳಿಸುವಲ್ಲಿ ಚುನಾವಣೆ ಆಯೋಗ ವಿಫಲವಾಗಿದ್ದು ಮಾತ್ರವೇ ಅಲ್ಲದೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಕೋಮುವಾದಿ ಹಾಗು ಜಗಳಗಂಟಿ ಭಾಷಣಗಳನ್ನು ನ್ಯಾಯಸಮ್ಮತಗೊಳಿಸಿತು ಕೂಡ.
ಸಿಪಿಐ (ಎಂ) ಮತ್ತು ಎಡ ಪಕ್ಷಗಳು ತೀವ್ರ ಸೋಲನ್ನು ಅನುಭವಿಸಿವೆ. ಪಶ್ಚಿಮ ಬಂಗಾಳ ಮತ್ತು ತ್ರಿಪುರಾದಲ್ಲಿ ಸಿಪಿಐ (ಎಂ) ಭಾರೀ ಅಡ್ಡಿ ಆತಂಕಗಳಲ್ಲದೆ ಭಯೋತ್ಪಾದನೆ, ಹಿಂಸೆ ಮತ್ತು ದಾಳಿಗಳ ನಡುವೆ ಈ ಚುನಾವಣೆಗಳನ್ನು ಎದುರಿಸಿತು. ಸರ್ವ ಪ್ರಯತ್ನಗಳನ್ನು ಮಾಡಿದರೂ ಯಾವುದೇ ಯಶಸ್ಸನ್ನು ಸಾಧಿಸಲು ಪಕ್ಷಕ್ಕೆ ಸಾಧ್ಯವಾಗಲಿಲ್ಲ. ಕೇರಳದಲ್ಲಿ ಎಲ್ಡಿಎಫ್ ಭಾರೀ ಸೋಲನ್ನು ಅನುಭವಿಸಿದ್ದು ನಿರಾಶಾದಾಯಕ ಹಾಗೂ ದೊಡ್ಡ ಹಿನ್ನಡೆಯಾಗಿದೆ. ತಮಿಳುನಾಡಿನಲ್ಲಿ ಮಾತ್ರ ಪಕ್ಷ ಉತ್ತಮ ಫಲಿತಾಂಧ ಪಡೆದಿದೆ. ಅಲ್ಲಿ ಡಿಎಂಕೆ ನೇತೃತ್ವದ ಮೈತ್ರಿಯ ಭಾಗವಾಗಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸಿಪಿಐ (ಎಂ) ಜಯ ಸಾಧಿಸಿದೆ.
ಈ ಗಂಭೀರ ಚುನಾವಣಾ ಹಿನ್ನಡೆಯ ಬಗ್ಗೆ ಪಕ್ಷವು ಸ್ವಯಂಟೀಕಾತ್ಮಕ ಪರೀಕ್ಷಣೆಯನ್ನು ನಡೆಸಲಿದೆ. ಆ ಮೂಲಕ ಸರಿಯಾದ ಪಾಠವನ್ನು ಕಲಿತು ಪಕ್ಷದ ರಾಜಕೀಯ, ಸೈದ್ಧಾಂತಿಕ ಮತ್ತು ಸಂಘಟನಾತ್ಮಕ ಕಾರ್ಯವನ್ನು ನವೀಕರಿಸಲು ಮತ್ತು ಬಲಪಡಿಸಲು ಒಂದು ಸಮಗ್ರ ಕಾರ್ಯತಂತ್ರವನ್ನು ಅಂಗೀಕರಿಸಲಾಗುವುದು.
–ಪ್ರಕಾಶ್ ಕಾರಟ್
ಲೇಖನ ಕೃಪೆ : ಜನಶಕ್ತಿ ಮೀಡಿಯಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು