ದಿನದ ಸುದ್ದಿ
ಮಾನವೀಯತೆ ಮರೆತು ದಲಿತ ಯುವಕನ ಬೆತ್ತಲೆ ಮೆರವಣಿಗೆ
ಸುದ್ದಿದಿನ, ಮೈಸೂರು : ಇದೇ ಜೂನ್ 2ರಂದು ಎಸ್. ಪ್ರತಾಪ್ ರವರು ಶ್ಯಾನಾಡ್ರಹಳ್ಳಿ, ಗುಂಡ್ಲುಪೇಟೆ ನಿವಾಸಿಯಾಗಿದ್ದು ಐ.ಎ.ಎಸ್. ಪರೀಕ್ಷೆಯನ್ನು ಬರೆಯಲು ಮೈಸೂರಿನ ಮರಿಮಲ್ಲಪ್ಪ ಹಿರಿಯ ಪ್ರಾಥಮಿಕ ಶಾಲೆಗೆ ಬಂದಿದ್ದು, ಈತ ತಡವಾಗಿ ಹೋದ ಕಾರಣ ಪರೀಕ್ಷೆ ವಂಚಿತನಾಗಿ, ಇದೆ ಬೇಸರದಿಂದ ಮೈಸೂರಿನಲ್ಲಿ ಕಾಲ ಕಳೆದು ವಾಪಸ್ಸು ಗುಂಡ್ಲುಪೇಟೆ ಕಡೆಗೆ ತನ್ನ ಬೈಕಿನಲ್ಲಿ ಬಂದು ಅದೇ ದಿನ ರಾತ್ರಿ ರಾಘವಾಪುರ ಗ್ರಾಮದ ಹತ್ತಿರ ತನ್ನ ಬೈಕ್ ಕೆಟ್ಟುಹೋಗಿದ್ದು, ಅಲ್ಲಿ ಯಾರೋ ದುಷ್ಕರ್ಮಿಗಳು ಬಂದು ಈತನನ್ನು ದರೋಡೆ ಮಾಡಿದ್ದಾರೆ.
ನಂತರ ಮಾನಸಿಕವಾಗಿ ಹೆದರಿಹೋದ ಈತನು ರಾತ್ರಿಯಿಡಿ ಅಲ್ಲೆ ಕಾಲ ಕಳೆದು ಬೆಳಿಗ್ಗೆ ಜೂನ್ 3 ರಂದು ಬೆಳಿಗ್ಗೆ 6-00 ಗಂಟೆಗೆ ಆಶ್ರಯಕ್ಕಾಗಿ ವೀರನಪುರ ಗೇಟ್ ಹತ್ತಿರವಿರುವ ಶನಿಮಹಾತ್ಮ (ಕೆಬ್ಬೆಕಟ್ಟೆ ಹತ್ತಿರ) ದೇವಸ್ಥಾನಕ್ಕೆ ಹೋಗಿದ್ದು, ಈತನನ್ನು ಕಂಡ ಅರ್ಚಕರು ಈತನ ಮೇಲೆ ಅನುಮಾನಸ್ಪದ ವ್ಯಕ್ತಪಡಿಸಿ ವಿಚಾರಿಸಿದಾಗ ಈತನ ಗಾಬರಿಯಾಗಿದ್ದಾನೆ ನಂತರ ಗ್ರಾಮಸ್ಥರ ಗುಂಪು ಈತನ ಬಗ್ಗೆ ವಿಚಾರಿಸಿ ಈತನ ಊರು ಮತ್ತು ಈತ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೆಂದು ತಿಳಿದ ನಂತರ ಹಲ್ಲೆ ನಡೆಸಿ ಈತನ ಬಟ್ಟೆಯನ್ನೆಲ್ಲ ಬಿಚ್ಚಿ ಕೈಗೆ ಹಗ್ಗದಿಂದ ಕಟ್ಟಿ ಬೆತ್ತಲೆ ಮೆರವಣಿಯನ್ನು ದೇವಸ್ಥಾನದಿಂದ ಊಟಿ ಮೈಸೂರು ರಸ್ತೆಯ ಮುಖ್ಯ ರಸ್ತೆಯವರೆವಿಗೂ ಮೆರವಣಿಗೆ ಮಾಡಿದ್ದಾರೆ.
ಜಾತಿಯ ಕ್ರೂರತೆಯೂ ಎಷ್ಟರ ಮಟ್ಟಿಗೆ ಇದೆ ಎಂಬುದು ಇಲ್ಲಿ ಕಾಣಬಹುದು. ಒಬ್ಬ ವ್ಯಕ್ತಿ ಇನ್ನೊಬ್ಬನ ಎದುರು ಬೆತ್ತಲೆ ಇದ್ದಾಗ ಕನಿಷ್ಠ ಸೌಜನಕ್ಕೂ ಬಟ್ಟೆಕೊಡಬಾರದೇ ಇದು ಮಾನವೀಯತೆಯನ್ನೆ ತಲ್ಲಣಿಸುವ ಸಂಗತಿ ಎಂದರೆ ತಪ್ಪಾಗಲಾರದು! ನಂತರ ಈಗಾಗಲೇ ದಣಿದಿದ್ದ ದೇಹಕ್ಕೆ ಒಂದು ಗುಟುಕು ನೀರು ಕೊಡದೇ ಏಕಾಏಕಿ ಥಳಿಸಿ ಅವನ ತಲೆಯಿಂದ ರಕ್ತಸೋರುತ್ತಿದ್ದರೂ ಮಾನವೀಯನ್ನು ಕಾಣದೇ ವಿಜೃಂಭಿಸಿದ್ದಾರೆ. ಇದು ಇಂದಿನ ಜಾಗತೀಕರಣ ಎಂದು ಕೂಗಾಡುವಾಡುವ ನಮ್ಮ ದೇಶ, ಇಂತಹ ಪೈಶಾಚೀಕ ಕೃತ್ಯಕ್ಕೆ ಹೊಣೆಯಾರು.
ಈ ರೀತಿ ಗುಂಪು ಹಲ್ಲೆ, ಜಾತಿ ನಿಂದನೆ, ಬೆತ್ತಲೆ ಮೆರವಣಿಗೆ ನಡೆದು ಒಂದು ವಾರವಾದರೂ ಪೊಲೀಸ್ ಯಾಕೆ ಯಾವ ಕ್ರಮ ಕೈಗೊಂಡಿಲ್ಲ, ಪೊಲೀಸ್ನವರು ಕನಿಷ್ಠ suo-motto ಅಡಿಯಲ್ಲಿ ದಾಖಲಿಸಬಹುದಿತ್ತು. ಇಂತಹ ಪ್ರಕರಣವು ಸಂವಿಧಾನ ಕಲಂ. 17 ರ ಉಲ್ಲಂಘನೆಯಾಗಿದೆ. ಪೊಲೀಸ್ ವ್ಯವಸ್ಥೆ ಇವತ್ತು ತಳಸಮುದಾಯ ಮತ್ತು ಕಟ್ಟಕಡೆಯ ಜನರಿಗೆ ತನ್ನ ಬಾಗಿಲನ್ನು ಮುಚ್ಚಿದೆಯೇ ಎಂಬುವುದು ನಮ್ಮೆಲ್ಲರ ಪ್ರಶ್ನೆಯಾಗಿದೆ! ಜಾತಿಯ ಕ್ರೂರತೆಯ ವಿಜೃಂಭಿಸುವ ಈ ಗುಂಪು ಇಂದು ಇವರ ಪ್ರಬಲಶಕ್ತಿ ತೋಳ್ಬಲ ಮತ್ತು ಇನ್ಯಾವುದೋ ಅಗೋಚರ ಅಧಿಕಾರದ ಶಕ್ತಿಯಿಂದ ಕಾನೂನಿಂದ ತಪ್ಪಿಸಿಕೊಂಡಿದ್ದಾರೆ.
ಸದ್ಯ ನೊಂದ ಪ್ರತಾಪನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರ ಯೋಗಕ್ಷೇಮವನ್ನು ಅವರ ತಮ್ಮನಾದ ಕಾಂತರಾಜು ರವರು ನೋಡಿಕೊಳ್ಳುತ್ತಿದ್ದಾರೆ. ಈ ಸ್ಥಿತಿಯನ್ನು ಕಂಡು ಪ್ರತಾಪನ ಪೋಷಕರು ಯಾವ ಮಾರ್ಗವು ತೋಚದೇ ದಿನನಿತ್ಯ ನೋವನ್ನು ನುಂಗಿಕೊಂಡು ಬದುಕುತ್ತಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರ ಮತ್ತು ನೊಂದ ಪ್ರತಾಪನಿಗೆ ನ್ಯಾಯ ದೊರಕುವಂತಾಗಬೇಕು ಎಂಬುದು ಈತನ ಸಹೋದರ ಕಾಂತರಾಜುರವರ ಅಳಲು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್
-
ದಿನದ ಸುದ್ದಿ7 days ago
ವಿಶ್ವ ಫ್ಲಂಬರ್ ದಿನಾಚರಣೆ
-
ದಿನದ ಸುದ್ದಿ7 days ago
ಪಿಎಚ್ ಡಿ ; ಅವಧಿ ವಿಸ್ತರಣೆ
-
ದಿನದ ಸುದ್ದಿ7 days ago
ದಾವಣಗೆರೆ ವಿಶ್ವವಿದ್ಯಾಲಯ | 11ನೇ ಘಟಿಕೋತ್ಸವ :ದೀಪ್ತಿಗೆ ಐದು ; ಸಿಂಧುಬಾಯಿಗೆ ಮೂರು ಚಿನ್ನದ ಪದಕ
-
ದಿನದ ಸುದ್ದಿ7 days ago
ದಾವಣಗೆರೆ ವಿವಿ ಘಟಿಕೋತ್ಸವ ; ಮೂವರಿಗೆ ಗೌರವ ಡಾಕ್ಟರೇಟ್
-
ದಿನದ ಸುದ್ದಿ4 days ago
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
-
ದಿನದ ಸುದ್ದಿ9 hours ago
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
-
ದಿನದ ಸುದ್ದಿ9 hours ago
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ