Connect with us

ದಿನದ ಸುದ್ದಿ

ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆಗೆ ನಾಲ್ಕು ವರ್ಷ : 1059.92 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಪ್ರಗತಿ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್‌ಸಿಟಿ ಯೋಜನೆ ಪ್ರಾರಂಭವಾದಾಗಿನಿಂದ ಇಂದಿನವರೆಗೆ ನಗರದಲ್ಲಿ ರೂ.1059.92 ಕೋಟಿ ವೆಚ್ಚದಲ್ಲಿ 74 ಕಾಮಗಾರಿಗಳನ್ನು ರೂಪಿಸಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ದಾವಣಗೆರೆ ಸ್ಮಾರ್ಟ್‌ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಶರೀಫ್ ತಿಳಿಸಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್‌ಸಿಟಿ ಯೋಜನೆಗೆ ಆಯ್ಕೆಯಾಗಿ ಜೂ.25 ಕ್ಕೆ 4 ವರ್ಷಗಳು ಪೂರೈಸಿದ ಹಿನ್ನಲೆಯಲ್ಲಿ ಸ್ಮಾರ್ಟ್‌ಸಿಟಿ ಲಿ, ಕಚೇರಿಯಲ್ಲಿ ಮಂಗಳವಾರ ಕರೆಯಲಾಗಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೂ.5.88 ಕೋಟಿಯಲ್ಲಿ 12 ಕಾಮಗಾರಿಗಳು ಮುಕ್ತಾಯಗೊಂಡಿವೆ. ರೂ. 549.06 ಕೋಟಿಯಲ್ಲಿ 41 ಕಾಮಗಾರಿಗಳು ಪ್ರಗತಿಯಲ್ಲಿವೆ. ರೂ.161.73 ಕೋಟಿಯಲ್ಲಿ 09 ಕಾಮಗಾರಿಗಳು ಟೆಂಡರ್ ಹಂತದಲ್ಲಿದ್ದು, ಡಿ.ಪಿ.ಆರ್ ಹಂತದಲ್ಲಿ ರೂ.353.25 ಕೋಟಿ ವೆಚ್ಚದಲ್ಲಿ 12 ಕಾಮಗಾರಿಗಳಿವೆ.ದಾವಣಗೆರೆ ಜಿಲ್ಲೆಯು ಸ್ಮಾರ್ಟ್‌ಸಿಟಿ ಯೋಜನೆಯಡಿ ಮೊದಲ ಹಂತದಲ್ಲೇ ಆಯ್ಕೆಯಾಗಿದ್ದು, ಈ ಯೋಜನೆಯಲ್ಲಿ ಎಬಿಡಿ ಹಾಗೂ ಪಾನ್‌ಸಿಟಿ ಎಂದು ಎರಡು ವಿಭಾಗ ಮಾಡಿ ನಗರದಾದ್ಯಂತ ಹಲವಾರು ಕಾಮಗಾರಿಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದರು.

ಮೊದಲ ಹಂತದಲ್ಲಿ ರೂ.1.39 ಕೋಟಿಯಲ್ಲಿ 9 ಪಾರ್ಕ್‌ಗಳು ಹಾಗೂ ಎರಡನೇ ಹಂತದಲ್ಲಿ 37 ಪಾರ್ಕ್‌ಗಳನ್ನು ಆಯ್ಕೆ ಮಾಡಿಕೊಂಡು ಪಾರ್ಕ್‌ನಲ್ಲಿ ಇ-ಶೌಚಾಲಯಗಳನ್ನು ಒಂದು ಯುರೋಪಿಯನ್ ಶೈಲಿ ಹಾಗೂ ಇನ್ನೊಂದು ಭಾರತೀಯ ಶೈಲಿಯಲ್ಲಿ ನಿರ್ಮಿಸಲಾಗುತ್ತಿದೆ. 1 ರಿಂದ 10 ರ ವರೆಗಿನ ನಾಣ್ಯ ಹಾಕಿದರೆ ಇ-ಶೌಚಾಲಯ ಬಾಗಿಲು ತೆರಯುತ್ತದೆ. ಪ್ರತಿ 5 ಜನರ ಉಪಯೋಗದ ನಂತರ ಸ್ವಯಂ ಚಾಲಿತವಾಗಿ ಒಳಗಡೆ ಫ್ಲೋರ್‌ನ್ನು ಸ್ವಚ್ಛಗೊಳಿಸುತ್ತದೆ ಎಂದರು.

ರೂ. 3.58 ಕೋಟಿಯಲ್ಲಿ ನಗರದ 52 ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಸ್ಮಾರ್ಟ್ ಬಸ್ ಶೆಲ್ಟರ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಎಲ್ಲಾ ಬಸ್‌ಗಳಿಗೆ ಜಿಪಿಎಸ್ ಅಳವಡಿಸಿ ಬಸ್ ಬರುವ ಸಮಯನ್ನು ಪ್ರದರ್ಶಿಸುವಂತೆ ಎಲ್‌ಇಡಿ ಫಲಕಗಳನ್ನು ಅಳವಡಿಸಲಾಗುವುದು. ರೂ. 25.41 ಕೋಟಿ ವೆಚ್ಚದಲ್ಲಿ ಹಳೇ ಬಸ್ ನಿಲ್ದಾಣದ ಪುನರಾಭಿವೃದ್ಧಿ ಕಾಮಗಾರಿಯನ್ನು ರೂಪಿಸಲಾಗಿದ್ದು, 21420.74 ಚ.ಮೀ. ವಿಸ್ತೀರ್ಣದಲ್ಲಿ ಕೆಳ ಮಹಡಿಯಲ್ಲಿ 92 ನಾಲ್ಕು ಚಕ್ರದ ವಾಹನ ಮತ್ತು 122 ದ್ವಿಚಕ್ರ ವಾಹನ ನಿಲುಗಡೆ ಹಾಗೂ ನೆಲ ಮಹಡಿಯಲ್ಲಿ 12 ಬಸ್ ನಿಲ್ಲುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ನಿಲ್ದಾಣದಲ್ಲಿ ಅಂಗಡಿಗಳು, ನಿರ್ವಹಣಾ ಕೊಠಡಿ, ಶೌಚಾಲಯ, ಸ್ನಾನದ ಕೊಠಡಿ, ರ‌್ಯಾಂಪ್, ಪ್ರಯಾಣಿಕರಿಗೆ ಆಸನದ ವ್ಯವಸ್ಥೆ, ಕುಡಿಯುವ ನೀರು, ಲಿಫ್ಟ್, ಬಸ್ ಸಂಚಾರದ ಫಲಕಗಳು ಹಾಗೂ ಭದ್ರತೆಗಾಗಿ ಸಿ.ಸಿ ಟಿವಿ ಅಳವಡಿಸಲಾಗುವುದು ಎಂದರು.

ಬೈಸಿಕಲ್ ಷೇರಿಂಗ್ ಸಿಸ್ಟಮ್ ಹಾಗೂ ಇ-ರಿಕ್ಷಾ: ನಗರದಲ್ಲಿ ಸಾರ್ವಜನಿಕರಿಗೆ ಪರಿಸರ ಸ್ನೇಹಿ ಮತ್ತು ಸುರಕ್ಷತೆ ಸಂಚಾರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರೂ.9.90 ಕೋಟಿಗಳಲ್ಲಿ ಸಾರ್ವಜನಿಕ ಬೈಸಿಕಲ್ ಷೇರಿಂಗ್ ಸಿಸ್ಟಮ್ ಅಳವಡಿಸಲಾಗುವುದು. 20 ಡಾಕಿಂಗ್ ಸ್ಟೇಷನ್ಸ್‌ಗಳಿದ್ದು, 100 ವಿದ್ಯುತ್ ಚಾಲಿತ ಮತ್ತು 100 ಸಾಮಾನ್ಯ ಬೈಸಿಕಲ್ ವ್ಯವಸ್ಥೆ ಮಾಡಲಾಗುವುದು. ಈ ಕಾಮಗಾರಿಗೆ ಈಗಾಗಲೇ ಗುತ್ತಿಗೆ ನೀಡಲಾಗಿದ್ದು, ಮುಂದಿನ 15 ರಿಂದ 20 ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ಪರಿಸರ ಮಾಲಿನ್ಯ ಕಡಿಮೆ ಮಾಡುವ ದೃಷ್ಠಿಯಿಂದ ಹಾಗೂ ಉದ್ಯೋಗ ನೀಡುವ ಸಲುವಾಗಿ ಆಧುನಿಕ ತಂತ್ರಜ್ಞಾನವುಳ್ಳ ಬ್ಯಾಟರಿ ಚಾಲಿತ 80 ಆಟೋಗಳನ್ನು ಸ್ಥಳೀಯರಿಗೆ (60:40) ಸಬ್ಸಿಡಿ ಆಧಾರದಲ್ಲಿ ನೀಡಲಾಗುವುದು. ಈಗಾಗಲೇ ನಾಲ್ವರು ಮುಂದೆ ಬಂದಿದ್ದು, ಕೆಲವೇ ದಿನಗಳಲ್ಲಿ ಆಟೋಗಳನ್ನು ವಿತರಿಸಲಾಗುವುದು. ಮಹಿಳೆಯರಿಗೆ ಶೇ.75 ರಷ್ಟು ಸಬ್ಸಿಯಡಿಯಲ್ಲಿ ನೀಡಲಿದ್ದೇವೆ ಎಂದರು.

ಜಿಲ್ಲೆಯ ಸಾರ್ವಜನಿಕರ ಹಿತದೃಷ್ಠಿಯಿಂದ ರೂ.2.85 ಕೋಟಿಗಳಲ್ಲಿ ವಿದ್ಯುತ್ ಚಿತಾಗಾರವನ್ನು ನಿರ್ಮಿಸಲು ಚಿಂತಿಸಲಾಗಿದ್ದು, ಈ ಕುರಿತು ಸರ್ವೆ ಕಾರ್ಯ ನಡೆಯುತ್ತಿದೆ. ನಗರದಲ್ಲಿ ಜನರ ಆರೋಗ್ಯಾಭಿವೃದ್ಧಿ ಮತ್ತು ಮಕ್ಕಳ ಆಟಕ್ಕೆ ಅನುಕೂಲವಾಗುವಂತೆ ವ್ಯಾಯಾಮ ಶಾಲೆ ಮತ್ತು ಮಕ್ಕಳ ಆಟಿಕೆ ಉಪಕರಣಗಳನ್ನು ನಗರದ 16 ಉದ್ಯಾನವನಗಳಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಯಲ್ಲಿ ಬೈಸಿಕಲ್, ಸೀಟೆಡ್ ಚೆಸ್ಟ್ ಪ್ರಸ್, ಎಚ್‌ಡಿ ಸಿಟ್ ಆಫ್, ಎಚ್.ಡಿ. ಸ್ಕಾಟ್ ಪುಶಿಂಗ್, ಹೆಲ್ತ್ ವಾಕರ್ ಸೇರಿದಂತೆ ಮಕ್ಕಳ ಆಟಿಕೆ ಉಪಕರಣಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ತುಂಗಾಭದ್ರ ನದಿಗೆ ಅಣೆಕಟ್ಟು ನಿರ್ಮಾಣ: ದಾವಣಗೆರೆ ನಗರಕ್ಕೆ 24*7 ಕುಡಿಯುವ ನೀರು ಒದಗಿಸಲು ತುಂಗಾಭದ್ರ ನದಿಗೆ 550 ಮೀ ಉದ್ದದ ಹಾಗೂ 2.5 ಮೀ ಅಗಲದ ಅಣೆಕಟ್ಟನ್ನು ರಾಜನಹಳ್ಳಿ ಜಾಕ್‌ವಲ್ ಬಳಿ ರೂ.76.11 ಕೋಟಿಯಲ್ಲಿ ನಿರ್ಮಿಸಲಾಗುವುದು. ಈ ಅಣೆಕಟ್ಟಿನಲ್ಲಿ 0.2 ಟಿಎಂಸಿ ನೀರು ಶೇಖರಣೆ ಮತ್ತು 50+5 ಸ್ವಯಂ ಚಾಲಿತ ಗೇಟ್ ನಿರ್ಮಾಣ ಮಾಡಲಾಗುವುದು. ಈ ಕಾಮಗಾರಿಯನ್ನು ಒಂದರೆಡು ತಿಂಗಳಿನಲ್ಲಿ ಪಾರಂಭಿಸಲಾಗುವುದು ಎಂದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವನ್ನು ರೂ.120 ಕೋಟಿಯಲ್ಲಿ ಅಭಿವೃದ್ಧಿಪಡಿಸಿ ಅದರಲ್ಲಿ ಮೂರು ಘಟಕಗಾಳಾಗಿ ಬಸ್ ಟರ್ಮಿನಲ್, ಕೆಎಸ್‌ಆರಟಿಸಿ ಕಚೇರಿ ಹಾಗೂ ಶಾಪಿಂಗ್ ಮಾಲ್ ಮತ್ತು ಚಿತ್ರ ಮಂದಿರ ನಿರ್ಮಿಸಲಾಗುವುದು. ಒಂದು ನೆಲಮಹಡಿ ಸೇರಿದಂತೆ 4 ಮಹಡಿಯ ಕಟ್ಟಡವನ್ನು ನಿರ್ಮಿಸಲಾಗುವುದು. 45 ಬಸ್‌ಗಳ ನಿಲುಗಡೆ ಹಾಗೂ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಕಲ್ಪಿಸಿ ಭದ್ರತೆಯ ದೃಷ್ಟಿಯಿಂದ ಸಿ,ಸಿ.ಕ್ಯಾಮಾರಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ನಗರದ ಎಂಟು ಸರ್ಕಾರಿ ಕಚೇರಿಗಳ ಮೇಲ್ಚಾವಣಿಯಲ್ಲಿ ರೂ.2.21 ಕೋಟಿ ವೆಚ್ಚದಲ್ಲಿ ಸೋಲಾರ್ ಪ್ಯಾನಲ್ಸ್ ಅಳವಡಿಕೆ ಮಾಡಿ ಸೌರ ವಿದ್ಯುಚ್ಛಕ್ತಿಯನ್ನು ಉತ್ಪಾದಿಸುವ ಗುರಿ ಹೊಂದಲಾಗಿದೆ. ಇದರಿಂದ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಉಳಿತಾಯ ಮತ್ತು ಬೆಸ್ಕಾಂ ಇಲಾಖೆಗೆ ಪ್ರತಿ ಯೂನಿಟ್‌ಗೆ ಪಾವತಿಸುತ್ತಿದ್ದ ರೂ. 8.50 ಬದಲಿಗೆ ಪ್ರತಿ ಯೂನಿಟ್‌ಗೆ ರೂ. 5.90 ಗಳನ್ನು 25 ವರ್ಷಗಳವರೆಗೆ ಪಾವತಿಸಲು ನಿಗದಿಯಾಗಿರುತ್ತದೆ. ಹೆಚ್ಚುವರಿಯಾಗಿರುವ ವಿದ್ಯುಚ್ಛಕ್ತಿಯನ್ನು ಬೆಸ್ಕಾಂ ಇಲಾಖೆಗೆ ಮಾರಾಟ ಮಾಡಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಅಪರಾಧ ನಿಯಂತ್ರಿಸಲು, ಸ್ವಚ್ಚತೆ ಬಗ್ಗೆ ಮಾಹಿತಿ ಪಡೆಯಲು ಮತ್ತು ಸುರಕ್ಷತೆಯ ದೃಷ್ಠಿಯಿಂದ ಸಿ.ಸಿ ಟಿವಿ ಕ್ಯಾಮರಾಗಳನ್ನು ರೂ.74.84 ಕೋಟಿ ವೆಚ್ಚದಲ್ಲಿ ಅಳವಡಿಸಲಾಗುವುದು. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್, ಇಂಟಲಿಜೆಂಟ್ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿ, ಈ ಯೋಜನೆಯಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್‌ನಿಂದ ಸಾರ್ವಜನಿಕರಿಗೆ ಸಾರಿಗೆ ಮತ್ತು ತುರ್ತು ಸೇವೆಗಳ ಮಾಹಿತಿ ನೀಡುವುದು, ಆನ್‌ಲೈನ್ ಅಪ್ಲಿಕೇಷನ್‌ಗಳನ್ನು ನಿಯಂತ್ರಣದಲ್ಲಿಡುವ ವ್ಯವಸ್ಥೆ ಕಲ್ಪಿಸುವುದು, ವಾಯು ಮಾಲಿನ್ಯದ ಮಾಹಿತಿಗಾಗಿ ಸೆನ್ಸಾರ್‌ಗಳನ್ನು ಅಳವಡಿಸುವುದು ಸೇರಿದಂತೆ ಇ-ಕಲಿಕಾ ಕೇಂದ್ರದ ಮೂಲಕ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು. ಇ-ಆಡಳಿತ ಕಾರ್ಯಕ್ರಮದಲ್ಲಿ ಕಿಯೋಸ್ಕ್, ಒಂದು ನಗರ ಒಂದು ಸಂಖ್ಯೆ ಮತ್ತು ಇತರೆ ಸಾರ್ವಜನಿಕ ಸೇವೆಗಳನ್ನು ರೂಪಿಸಲಾಗಿದೆ ಹಾಗೂ ಮಾಹಿತಿ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ನಾಗರಿಕರಿಗೆ ಒದಗಿಸಲಾಗುವುದು ಎಂದರು.

ನಗರದ 10 ಸರ್ಕಾರಿ ಕಚೇರಿಗಳ ಆವರಣಗಳಲ್ಲಿ 2.42 ಕೋಟಿ ವೆಚ್ಚದಲ್ಲಿ ಡಿಸ್‌ಪ್ಲೇ ಬೋರ್ಡ್‌ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಮಾಹಿತಿ, ಹವಾಮಾನ ವರದಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ಹಲವು ಮಾಹಿತಿಗಳನ್ನು ನೇರ ಪ್ರಸಾರ ಮತ್ತು 19 ಸರ್ಕಾರಿ ಶಾಲೆಗಳಲ್ಲಿ 2.57 ಕೋಟಿ ವೆಚ್ಚದಲ್ಲಿ ಗಣಕಯಂತ್ರದ ಲ್ಯಾಬ್‌ಗಳನ್ನು ಒದಗಿಸಿ ಡಿಜಿಟಲ್ ತರಗತಿಗಳನ್ನು ಸ್ಥಾಪಿಸಲಾಗುವುದು ಎಂದರು.

ನಗರದಲ್ಲಿ ನಾಲ್ಕು ರಸ್ತೆಗಳನ್ನು ಸ್ಮಾರ್ಟ್ ರಸ್ತೆಗಳನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದ್ದು, ಕಾಮಗಾರಿಯು ಪೂರ್ಣಗೊಳ್ಳುವ ಹಂತದಲ್ಲಿವೆ. ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಈ ರಸ್ತೆಗಳಲ್ಲಿ ಮಳೆ ನೀರು ಪೈಪ್ ಚರಂಡಿ, ವಿದ್ಯುತ್, ದೂರವಾಣಿ ಯುಜಿಡಿ, ಗ್ಯಾಸ್ ನೀರಿನ ಪೈಪ್‌ಲೈನ್‌ಗಳನ್ನು ಭೂಗತವಾಗಿ ಸ್ಥಾಪಿಸಲಾಗುವುದು. ರಸ್ತೆಗಳ ಬದಿಯಲ್ಲಿ ಸುಂದರವಾದ ಮರಗಳನ್ನು ನೆಡುವುದರಿಂದ ಮತ್ತು ಎಲ್.ಇ.ಡಿ ಬೀದಿ ದೀಪಗಳನ್ನು ಅಳವಡಿಸುವುದರಿಂದ ಈ ರಸ್ತೆಗಳು ಸುಂದರವಾಗಿ ಕಾಣುತ್ತವೆ ಎಂದು ತಿಳಿಸಿದರು.

ಸ್ಮಾರ್ಟ್ ಸಿಟಿ ಮುಖ್ಯ ಅಭಿಯಂತರ ಸತೀಶ್, ಮುಖ್ಯ ಹಣಕಾಸು ಅಧಿಕಾರಿ ಪ್ರಭಾವತಿ, ಟೀಮ್ ಲೀಡರ್ ಶ್ರೀನಾಥ್‌ರೆಡ್ಡಿ, ಜನರಲ್ ಮ್ಯಾನೇಜರ್ ಚಂದ್ರಶೇಖರ್, ಕಾರ್ಯಪಾಲಕ ಅಭಿಯಂತರ ಗುರಪಾದಯ್ಯ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.

ಹೇಳಿಕೆ

  • ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ನಗರದ ಹೊರ ವಲಯದಲ್ಲಿರುವ ಗಾಜಿನ ಮನೆಗೆ ಶೌಚಾಲಯ ನಿರ್ಮಾಣ, ರೂ. 5 ಕೋಟಿ ವೆಚ್ಚದಲ್ಲಿ ಆಕರ್ಷಕ ಅಕ್ವೇರಿಯಂ, ಲೇಸರ್ ಶೋ, ಪ್ಲಾಂಟೇನ್ ಹಾಗೂ ಟಂಗಲ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ನಗರದಲ್ಲಿ ಪೊಲೀಸರ ನೈಟ್ ಬೀಟ್ ಬದಲಾಗಿ ದ್ರೋಣ್‌ಬೀಟ್ ಮಾಡಲು ಉದ್ದೇಶಿಸಿದ್ದ್ದು, ಇದು ನಿರ್ಮಾಣವಾದರೆ ಪೊಲೀಸರಿಗೆ ರಾತ್ರಿ ವೇಳೆ ಬೀಟ್ ಮಾಡವುದು ತಪ್ಪಲಿದೆ. ಈ ಯೋಜನೆ ಸಾಕಾರಗೊಂಡರೆ ಇದು ದೇಶದಲ್ಲೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ನಗರದಲ್ಲಿ ಸಾರ್ಟ್‌ಸಿಟಿ ಯೋಜನೆಯಲ್ಲಿ ನಡೆಯುತ್ತಿರುವ ಹಾಗೂ ಮುಂದೆ ನಡೆಯಲಿರುವ ಕಾಮಗಾರಿ ಬಗ್ಗೆ ಊಹಾಪೋಹಗಳಿಗೆ ಕಿವಿಕೊಡಬೇಡಿ. ಎಲ್ಲಾ ಕಾಮಗಾರಿಗಳು ಗುಣಮಟ್ಟ ಮತ್ತು ತ್ವರಿತ ಗತಿಯಲ್ಲಿ ನಡೆಯುವಂತೆ ಹಾಗೂ ಯಾವುದೇ ಅವ್ಯವಹಾರಗಳು ನಡೆಯದಂತೆ ಕ್ರಮ ವಹಿಸಲಾಗುವುದು.

|ದಾವಣಗೆರೆ ಸ್ಮಾರ್ಟ್‌ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ, ಶರೀಫ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.

ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ. ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು...

ದಿನದ ಸುದ್ದಿ1 day ago

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty...

ದಿನದ ಸುದ್ದಿ5 days ago

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ...

ದಿನದ ಸುದ್ದಿ1 week ago

ದಾವಣಗೆರೆ ವಿವಿ ಘಟಿಕೋತ್ಸವ ; ಮೂವರಿಗೆ ಗೌರವ ಡಾಕ್ಟರೇಟ್

ಸುದ್ದಿದಿನ, ದಾವಣಗೆರೆ : ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಶಿವರಾಜ ಪಾಟೀಲ, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ...

ದಿನದ ಸುದ್ದಿ1 week ago

ದಾವಣಗೆರೆ ವಿಶ್ವವಿದ್ಯಾಲಯ | 11ನೇ ಘಟಿಕೋತ್ಸವ :ದೀಪ್ತಿಗೆ ಐದು ; ಸಿಂಧುಬಾಯಿಗೆ ಮೂರು ಚಿನ್ನದ ಪದಕ

ಸುದ್ದಿದಿನ,ದಾವಣಗೆರೆ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,357ವಿದ್ಯಾರ್ಥಿಗಳು ದಾವಣಗೆರೆ ವಿಶ್ವವಿದ್ಯಾಲಯದ ಹನ್ನೊಂದನೇ ಘಟಿಕೋತ್ಸವದಲ್ಲಿ ಪದವಿ ಪಡೆಯಲಿದ್ದಾರೆ. 45ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದರೆ, 64 ಸಂಶೋಧನಾ ವಿದ್ಯಾರ್ಥಿಗಳು...

ದಿನದ ಸುದ್ದಿ1 week ago

ಪಿಎಚ್ ಡಿ ; ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾ.19 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವ ವಿದ್ಯಾನಿಲಯದ ವೆಬ್‍ಸೈಟ್...

ದಿನದ ಸುದ್ದಿ1 week ago

ವಿಶ್ವ ಫ್ಲಂಬರ್ ದಿನಾಚರಣೆ

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕಾವೇರಿ ಮಾತಾ ಪ್ಲಂಬರ್ಸ್ ಕಾರ್ಮಿಕರ ಸಂಘದಿಂದ ಸಂಘದ ಕಚೇರಿಯಲ್ಲಿ ವಿಶ್ವ ಪ್ಲಂಬರ್ ದಿನಾಚರಣೆ ಹಾಗೂ ವಿಶ್ವ ಜಲ ಸಂಗ್ರಹಣಾ ದಿನವನ್ನು ಸರಳವಾಗಿ ಆಚರಿಸಲಾಯಿತು. ಈ...

ದಿನದ ಸುದ್ದಿ1 week ago

ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್

ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು...

ಕ್ರೀಡೆ1 week ago

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ....

ದಿನದ ಸುದ್ದಿ1 week ago

ನರೇಂದ್ರ ಮೋದಿ ಹರಿಯಾಣದ ಗುರುಗ್ರಾಮಕ್ಕೆ ಭೇಟಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ...

Trending