ದಿನದ ಸುದ್ದಿ
ಹೊಸಕೆರೆಹಳ್ಳಿ ಕೆರೆಗೆ ವಿಷಪಾಷಾಣ : ಕೆರೆ ಉಳಿಸಲು ಬಂದರು ಹಸಿರು ಪಡ್ಡೆಗಳು
ನಮ್ಮಹೊಸಕೆರೆಹಳ್ಳಿ ಕೆರೆ ಉಳಿಸಿ ಅಭಿಯಾನ
ಸುದ್ದಿದಿನ ವಿಶೇಷ : ಕೆಂಪೇಗೌಡರ ಆಳ್ವಿಕೆಯಲ್ಲಿ ನಿರ್ಮಾಣವಾದ ಬೆಂಗಳೂರಿನ ಹೊಸಕೆರೆಹಳ್ಳಿ ಗ್ರಾಮದ ಮೂಕಾಂಬಿಕಾ ನಗರದಲ್ಲಿರುವ ಕೆರೆ ಹೊಸಕೆರೆಹಳ್ಳಿ ಕೆರೆ ಎಂದೇ ಹೆಸರು ವಾಸಿ. ಆದರೀಗ ಈ ಕೆರೆ ಒಡಲಿಗೆ ಕೊಳಚೆ, ಕಸದ ವಿಷವಸ್ತುಗಳು ಸೇರುತ್ತಿವೆ.
ಸ್ವಚ್ಛ, ಸುಂದರ ಪರಿಸರದಲ್ಲಿರುವ ಈ ಕೆರೆ ಈಗ ಅಂದಾಜು 44 ಎಕರೆ ಪ್ರದೇಶವಿದೆ. ಪಶ್ಚಿಮದಲ್ಲಿ ನೈಸ್ ರಸ್ತೆ, ಪೂರ್ವದಲ್ಲಿ ವಸತಿ ಪ್ರದೇಶ ಹಾಗೂ ಉತ್ತರದಲ್ಲಿ ಕೆರೆಕೋಡಿ ಮುಖ್ಯರಸ್ತೆ ಮತ್ತು ದಕ್ಷಿಣ ದಿಕ್ಕಿನಲ್ಲಿ ಅರಣ್ಯ ಪ್ರದೇಶ ಜತೆಗೆ ಹನುಮಗಿರಿ ಗುಡ್ಡವಿದೆ. ಆದರೀಗ, ಈ ಸುಂದರ ಪ್ರವಾಸಿ ತಾಣದಂತಿರುವ ಕೆರೆಯ ಮೂಲಸ್ವರೂಪಕ್ಕೆ ಧಕ್ಕೆ ಉಂಟಾಗುತ್ತಿದೆ.
ಕೆರೆ ಅತಿಕ್ರಮಣ
ಹೊಸಕೆರೆಹಳ್ಳಿ ಕೆರೆ ಮೊದಲಿಗೆ 59.26 ಎಕರೆ ಪ್ರದೇಶ ಹೊಂದಿದ್ದ ಕೆರೆಯಾಗಿತ್ತೆಂದು ಇಂಡಿಯನ್ ಎಕ್ಸ್ಪ್ರೆಸ್ ಮೇ 1, 2017ರಂದು ವರದಿ ಪ್ರಕಟಿಸಿತ್ತು. ಆದರೀಗ ಇದು ಹಲವಾರು ಕಾರಣಗಳಿಗಾಗಿ ಅತಿಜ್ರಮಣಗೊಂಡು 44 ಎಕರೆ ಪ್ರದೇಶ ಮಾತ್ರ ಉಳಿದಿದೆ.
ಈ ಕೆರೆಗೆ ಹೊಂದಿಕೊಂಡು ಕಿರುಅರಣ್ಯ ಪ್ರದೇಶ, ಇದರ ಅಂಗಳದಲ್ಲಿ ಹನುಮಗಿರಿ ಮತ್ತು ಯೇಸುಬೆಟ್ಟ ಎಂಬ ಎರಡು ಗುಡ್ಡಗಳಿದ್ದವು. ಪಕ್ಕದಲ್ಲಿದ್ದ ವಸತಿ ಪ್ರದೇಶದ ಕೊಳಚೆ ನೀರು ಹಾಗೂ ಹೊಸಕೆರೆಹಳ್ಳಿ ಮತ್ತಿತರ ಗ್ರಾಮಗಳ ಜನರು ಕಸದ ತಂದು ಸುರಿಯುತ್ತಿದ್ದಾರೆ. ಪಶ್ಚಿಮ ದಿಕ್ಕಿನಲ್ಲಿ ನೈಸ್ ರಸ್ತೆ ಕೆರೆಯನ್ನು ಇಬ್ಭಾಗಿಸಿದರೆ, ಇದರ ಹತ್ತಿರ ವಸತಿ ಪ್ರದೇಶ ಅಭಿವೃದ್ಧಿಗೊಳ್ಳುತ್ತಿದೆ. ಕೆರೆಯ ಸೌಂದರ್ಯ ಹೆಚ್ಚಿರುವ, ಕಣ್ಣುಗಳಿಗೆ ತಂಪು ನೀಡುವ ಹನುಮಗಿರಿ ಪ್ರದೇಶಕ್ಕೆ ಟಾಟಾ ಕಂಪನಿ ಟಾಟಾ ಹೇಳಿಸಿಬಿಟ್ಟಿದೆ. “ಹಿಲ್ ರೆಸಿಡೆಂಟ್ಸ್” ಎಂದು ಹೆಮ್ಮೆಯಿಂದ ಹೊಗಳಿಕೊಂಡಿದೆ.
ಕೆರೆ ಪರಿಸರ
ಸಾಮಾನ್ಯವಾಗಿ ಬೆಂಗಳೂರಿನ ಕೆರೆಗಳು ಪಾದಚಾರಿ ಪಥ (ವಾಕ್ ವೇ), ಸುತ್ತಲು ತಂತಿಬೇಲಿ ಹಾಗೂ ರಸ್ತೆ ಇರುತ್ತದೆ. ಆದರೆ, ಹೊಸಕೆರೆಹಳ್ಳಿ ಕಿರು ಪರಿಸರ ವ್ಯವಸ್ಥೆಯೇ ಇದೆ. ಇಲ್ಲಿ ಮ್ಯಾಂಗ್ರೋವ್ ಮರಗಳು, ಕಾಡು ನಾಯಿ, ಹಾವು, ಗ್ರೇಟ್ ಕಾರ್ಮೊರೆಂಟ್, ಹೆರನ್, ಶಿಕ್ರಾ, ವಿವಿಧ ಜಾತಿಯ ಚಿಟ್ಟೆಗಳು ಸೇರಿದಂತೆ ವೈವಿಧ್ಯಮಯ ಪ್ರಾಣಿ, ಪಕ್ಷಿ, ಸಸ್ಯ ಪ್ರಭೇದಗಳನ್ನು ಹೊಂದಿದೆ. ಕೆರೆಯ ಪಾತ್ರದಲ್ಲಿ ಔಷಧಿಯ ಸಸ್ಯಗಳು ಬೆಳೆದಿವೆ.
ಇಪ್ಪತ್ತು ವರ್ಷಗಳ ಹಿಂದೆ ಅನೇಕ ಗ್ರಾಮಗಳ ಜನರಿಗೆ ಈ ಕೆರೆಯ ನೀರೇ ಜೀವಜಲವಾಗಿತ್ತು. ಆದರೆ, ಇದೀಗ ಈ ನೀರನ್ನು ನೋಡುತ್ತಿದ್ದಂತೆ ದೂರ ಓಡುವ ದುಃಸ್ಥಿತಿ ಎದುರಾಗಿದೆ. ಶೀಘ್ರ ಕೆರೆ ಮಾಲಿನ್ಯ ಮುಕ್ತವಾದರೆ ಜನರಿಗೆ ಅನುಕೂಲವಾಗುತ್ತದೆ ಎಂಬುದು ಪರಿಸರ ಪ್ರೇಮಿಗಳ ಆಶಯ.
ಕೆರೆ ಉಳಿಸಲು ಬಂದರು ಹಸಿರು ಪಡ್ಡೆಗಳು
ಬೆಂಗಳೂರಿನ ಕೆರೆಗಳನ್ನು ಹೇಳ ಹೆಸರಿಲ್ಲದಂತೆ ಮಾಡಿದ ಸರಕಾರಗಳು ಈಗ ತಪ್ಪನ್ನು ಒಬ್ಬರ ಮೇಲೊಬ್ಬರು ಹಾಕುತ್ತಿವೆ. ಕೆರೆ ಏಕೆ ಹಾಳಾಗುತ್ತಿದೆ ಎಂದು ಜನರಿಗೆ ಜಾಗೃತಿ ಬರುವಷ್ಟರಲ್ಲಿ ಆ ಕೆರೆ ಒತ್ತುವರೆ ಮಾಡಿ ಅಪಾರ್ಟ್ಮೆಂಟ್ ಕಟ್ಟಿರುವ ಉದಾಹರಣೆಗಳೂ ಇವೆ.
ಪರಿಸ್ಥಿತಿ ಕೈ ಮೀರುವ ಮುನ್ನವೇ ಕೆರೆ ಉಳಿಸಿಕೊಳ್ಳುವ ಸಲುವಾಗಿ ಬೆಂಗಳೂರು ಗ್ರೀನ್ ರೋಡೀಸ್ ಎಂಬ ಸಂಘಟನೆ ಹುಟ್ಟಿಕೊಂಡಿದೆ. ವಿಷಯದಲ್ಲಿ ತಪ್ಪು ನಿರ್ಧಾರಗಳ್ಳುವ ಅಧಿಕಾರಿಗಳಿಗೆ, ಕೆರೆಯೊಳಗೆ ಕಸ ಎಸೆಯುವ ಜನರನ್ನು ಧೈರ್ಯವಾಗಿ ಪ್ರಶ್ನಿಸುವವರು ಇವರು.
ಹಸಿರು ಕೈಗಾರಿಕಾ ಒಕ್ಕೂಟಗಳ (ಗ್ರೀನ್ ಇಂಡಸ್ಟ್ರೀಸ್) ನಿರ್ದೇಶಕ ಸುನೀಲ್ ಸೂದ್ ಅವರು ಕಳೆದ ಏಪ್ರಿಲ್ 28ಕ್ಕೆ ವಾಟ್ಸ್ಆ್ಯಪ್ ಗ್ರೂಪ್ ಮೂಲಕ ಗ್ರೀನ್ ರೌಡೀಸ್ ಎಂಬ ಸಂಘಟನೆಯನ್ನು ಹುಟ್ಟುಹಾಕಿದರು.
ಕೆರೆ ಸಂರಕ್ಷಣೆ, ಪರಿಸರ ಮಾಲಿನ್ಯ ನಿಯಂತ್ರ ಕುರಿತು ಜಾಗೃತಿ, ಸಸಿ ನೆಡುವುದು, ಕೆರೆಗಳಲ್ಲಿರುವ ಹೂಳು ತೆಗೆಯುವುದು, ಪ್ಲಾಸ್ಟಿಕ್ ಬಳಕೆಯಿಂದಾಗುವ ಪ್ರತಿಕೂಲ ಪರಿಣಾಮಗಳ ಕುರಿತು ಅಭಿಯಾನ ಹಮ್ಮಿಕೊಳ್ಳುವುದು ಮೊದಲಾದವು ಗ್ರೀನ್ ರೋಡೀಸ್ ಸಂಘಟನೆಯ ಪ್ರಮುಖ ಉದ್ದೇಶವಾಗಿದೆ. ಪ್ರಾರಂಭವಾದ ಒಂದೇ ತಿಂಗಳಲ್ಲಿ 200ಕ್ಕೂ ಹೆಚ್ಚು ಸ್ವಯಂ ಸೇವಕರು ಸಂಘಟನೆಯನ್ನು ಸೇರಿದ್ದಾರೆ. ವಿಶೇಷವೆಂದರೆ ಏಳರಿಂದ 70ರ ವಯಸ್ಸಿನ ಸ್ವಯಂ ಸೇವಕರು ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಎಲ್ಲ ವರ್ಗಗಳ ಸ್ವಯಂ ಸೇವಕರು
ಗ್ರೀನ್ ರೋಡೀಸ್ ಸಂಘಟನೆಯಲ್ಲಿ ಎಲ್ಲ ವರ್ಗದವರಿಗೂ ಅವಕಾಶ ನೀಡುವ ಉದ್ದೇಶದಿಂದ ಐಟಿ, ಬಿಟಿ, ಸರಕಾರಿ ಅಧಿಕಾರಿಗಳು, ಪುಟ್ಟ ಮಕ್ಕಳು, ಹಿರಿಯರು, ಗಣ್ಯರು, ರಾಜಕಾರಣಿಗಳು ಮೊದಲಾದವರನ್ನು ಸಂಘಟನೆಯ ಸದಸ್ಯರನ್ನಾಗಿ ಮಾಡಲಾಗಿದೆ.
ಕಾರ್ಯಾಗಾರಗಳು
ಗ್ರೀನ್ ರೋಡೀಸ್ ಸಂಘಟನೆಯು ಪರಿಸರಕ್ಕೆ ಸಂಬಂಧಪಟ್ಟ ವಿಷಯಗಳ ಕುರಿತಂತೆ ಕಾರ್ಯಗಾರಗಳನ್ನು ಹಮ್ಮಿಕೊಳ್ಳುತ್ತದೆ. ಈ ಮೂಲಕ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವ ಜನರಿಗೆ ಜಾಗೃತಿ ಮೂಡಿಸಲು ಉದ್ದೇಶಿಸಿದೆ.
ಪ್ರತಿ ಭಾನುವಾರ ಸಭೆ
ಬೆಂಗಳೂರು ಗ್ರೀನ್ ರೋಡೀಸ್ ಅಥವಾ ಬಿಜಿಆರ್ ಸಂಘಟನೆಯು ಪ್ರತಿ ಭಾನುವಾರ ಒಂದು ಸಭೆಯನ್ನು ಹಮ್ಮಿಕೊಳ್ಳುತ್ತದೆ. ಭವಿಷ್ಯದಲ್ಲಿ ಹಮ್ಮಿಕೊಳ್ಳಬೇಕಿರುವ ಕಾರ್ಯಕ್ರಮಗಳು, ನಿರ್ಧಾರಗಳ ಕುರಿತು ಚರ್ಚಿಸಲಾಗುತ್ತದೆ. ಮೇ. 2ರಂದು ಲಾಲ್ಬಾಗ್ನಲ್ಲಿ ಬಿಜಿಆರ್ನ ಮೊದಲ ಸಭೆ ನಡೆಯಿತು. ಸಂಘದ ಸದಸ್ಯರು ಲಾಲ್ಬಾಗ್ಅನ್ನು ಸಂಪೂರ್ಣ ಸ್ವಚ್ಛಗೊಳಿಸಿದರು.
ಹೊಸಕೆರೆ ಹಳ್ಳಿ ಕೆರೆಗೆ ಭೇಟಿ
ಬೆಂಗಳೂರು ಗ್ರೀನ್ ರೋಡೀಸ್ ಸಂಘಟನೆಯು 2018 ಮೇ 2ರಂದು ಮೊದಲಬಾರಿಗೆ ಹೊಸಕೆರೆ ಹಳ್ಳಿ ಕೆರೆಗೆ ಭೇಟಿ ನೀಡಿತು. ಸಂಘದ ಸದಸ್ಯ ಪ್ರಶಾಂತ್ ಸೇಠ್ ಅವರು ಕೆರೆ ಮೇಲ್ಭಾಗದಿಂದ ಆರ್ಆರ್ ನಗರ ಸಂಪರ್ಕಿಸುವ ರಸ್ತೆಯ ಮೇಲೆ ಹಾದು ಬಂದಾಗ ಹೊಸಕೆರೆ ಹಳ್ಳಿ ಕೆರೆಯು ಯಾವ ಪರಿಸ್ಥಿತಿಯಲ್ಲಿದೆ ಎಂದು ಒಂದು ಅಂದಾಜು ಸಿಕ್ಕಿತು.
‘‘ಕೆರೆಯನ್ನು ಮೇಲ್ನೋಟದಿಂದಲೇ ಅಧ್ಯಯನ ಮಾಡಿದಾಗ ಕೆರೆ ಸ್ವಚ್ಛತಾ ಕಾರ್ಯವು ಅರ್ಧಕ್ಕೆ ನಿಂತಿರುವುದು ಗೊತ್ತಾಯಿತು. ಇಡೀ ಕೆರೆಯಲ್ಲಿ ನೀರಿರುವ ಪ್ರದೇಶ ಹೆಚ್ಚಾಗಿರುವುದೂ ಕೂಡ ಕಂಡುಬಂತು. ಹೊಸಕೆರೆ ಹಳ್ಳಿ ಕೆರೆಯನ್ನು ಉಳಿಸುವುದು ಬೆಂಗಳೂರನ್ನು ಉಳಿಸಲು ಇರುವ ಏಕೈಕ ಮಾರ್ಗ ಎಂದೂ ಅನ್ನಿಸಿತು. ಬೆಂಗಳೂರಿಗರು ಕುಡಿಯುವ ನೀರಿನ ತೊಂದರೆ ಎದುರಿಸಬೇಕಾಗುತ್ತದೆ ಎಂಬ ಭವಿಷ್ಯವಾಣಿ ನಿಜವಾಗುತ್ತದೆಯೇನೋ ಎಂಬ ಭಯವಿದೆ. ಈಗಾಗಲೇ ಕೆರೆಯ ಏರಿ ಜಾಗವನ್ನು ಹಲವು ಲೇಔಟ್ಗಳು ಒತ್ತರಿಸಿಕೊಂಡು ಬಂದಿವೆ. ಟಾಟಾ ಪ್ರೊಮೋಂಟ್ ಕಂಪನಿಯೂ ಸಹ ಕೆರೆ ಒತ್ತುವರಿ ಪ್ರದೇಶದಲ್ಲೇ ನೆಲೆ ನಿಂತಿದೆ. ಆದರೆ, ಈಗಾಗಲೇ ಒತ್ತುವರಿಯಾಗಿರುವ ಜಾಗವನ್ನು ಈಗ ಏನೂ ಮಾಡಲು ಸಾಧ್ಯವಿಲ್ಲ. ಆದರೆ, ಸದ್ಯ ಕೆರೆ ಎಂದು ಕಾಣುವ ಜಾಗವನ್ನಾದರೂ ಉಳಿಸಿಕೊಳ್ಳಬೇಕಿದೆ. ಇತ್ತೀಚೆಗೆ ಮತ್ತೊಮ್ಮೆ ಕೆರೆಗೆ ಭೇಟಿ ನೀಡಿದ್ದೆ. ಎಲ್ಲರೂ ಒಟ್ಟಾದರೆ ಕೆರೆಯನ್ನು ಸ್ವಚ್ಛಮಾಡಿ ಅದನ್ನು ಉಳಿಸಿಕೊಳ್ಳಬಹುದು,’’ ಎಂಬುದು ಪ್ರಶಾಂತ್ ಸೇಠ್ ಅವರ ಅಭಿಮತ.
ಕೆರೆ ಭೇಟಿಯ ಉದ್ದೇಶಗಳು ಏನೆಂದರೆ
1. ಕೆರೆ ಪರಿಸರದ ಮೇಲ್ನೋಟ ಅಧ್ಯಯನ
2. ಕೆರೆ ಶುಚಿಗೊಳಿಸುವುದು
3. ನಮಗೆ ತಿಳಿದಿರುವ ವಿಷಯವನ್ನು ಹಂಚಿಕೊಳ್ಳುವುದು
ಈ ಎಲ್ಲ ಉದ್ದೇಶಗಳನ್ನಿಟ್ಟುಕೊಂಡು ಹೊಸಕೆರೆ ಹಳ್ಳಿ ಕೆರೆ ಅಧ್ಯಯನ ಮಾಡಿದಾಗ ನಮಗೆ ಅಚ್ಚರಿ ಎನಿಸುವ ಹಲವಾರು ವಿಷಯಗಳು ತಿಳಿದುಬಂದವು. ಅಷ್ಟಕ್ಕೂ ಕೆರೆಯು ಅದಾಗಲೇ ಅದೋಗತಿ ತಲುಪಿತ್ತು. ಫೇಸ್ಬುಕ್ನಲ್ಲಿ #benglalurugreenrodies ಎಂಬ ಪುಟ ನೋಡಿದ ಪ್ರಶಾಂತ್ ಸೇಠ್ ಅವರು ಬೆಂಗಳೂರು ಗ್ರೀನ್ ರೋಡೀಸ್ ಸಂಸ್ಥೆಗೆ ಹಲವಾರು ವಿಷಯಗಳನ್ನು ತಿಳಿಸಿದರು. ಕೆಲವು ಸ್ಥಳೀಯರಿಂದ ಬಿಜಿಆರ್ ಸಂಘಟನೆಯು ಇನ್ನಷ್ಟು ಮಾಹಿತಿಯನ್ನು ಸಂಗ್ರಹಿಸಿತು.
ಬಿಜಿಆರ್ ಸಂಗ್ರಹಿಸಿದ ಮಾಹಿತಿಗಳು
1. ಹೊಸಕೆರೆ ಹಳ್ಳಿ ಕೆರೆಯು ಸಂಪೂರ್ಣ ಬತ್ತಿಹೋಗಿರುವುದು ಮೇಲ್ನೋಟದ ಅಧ್ಯಯನದಲ್ಲಿ ಕಂಡುಬಂತು. ಈ ಕೆರೆಯುನ್ನು ಸೀಳಿಕೊಂಡು ಹೋಗುವ ರಸ್ತೆಯ ಬಲ ಭಾಗವು ಸಂಪೂರ್ಣ ಬತ್ತಿಹೋಗಿದ್ದು, ಅಲ್ಲಿ ಪೊದೆಗಳು, ಮುಳ್ಳುಗಂಟಿಗಳು ಬೆಳೆದುಕೊಂಡಿದೆ. ಮತ್ತೊಂದು ಭಾಗದಲ್ಲಿ ಸ್ವಲ್ಪವೇ ನೀರಿದ್ದು, ಅದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳು, ಬಾಟೆಲ್ಗಳು ಮೊದಲಾದ ತ್ಯಾಜ್ಯಗಳನ್ನು ಎಸೆಯಲಾಗಿದೆ.
2. ಕೆರೆಯಲ್ಲಿ ಅಪಾರ ಪ್ರಮಾಣದ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಅದು ಸುತ್ತಮುತ್ತಲಿನವರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಟಾಟಾ ಪ್ರೊಮೊಂಟ್ ಸಂಸ್ಥೆಯು ಕೆರೆ ಸ್ವಚ್ಛಗೊಳಿಸುವ ಕಾರ್ಯ ಕೈಗೆತ್ತಿಕೊಂಡು, ಕೆರೆ ಕೋಡಿ ಹಳ್ಳಿಗೆ ಸಂಪರ್ಕಿಸುವ ರಸ್ತೆಯನ್ನು ನಿರ್ಮಿಸಿದೆ. ಹೂಳೆತ್ತುವ ಕಾರ್ಯಕ್ಕೆ ಸರಕಾರದಿಂದ ಸಂಸ್ಥೆಯು ಅನುಮತಿ ಪಡೆದಿತ್ತಾದರೂ, ಮಳೆ ಪರಿಣಾಮವಾಗಿ ಅದು ನಿಂತುಹೋಗಿದೆ.
3. ಕೆರೆ ದಡದಿಂದ ಸ್ವಲ್ಪವೇ ದೂರದಲ್ಲಿ ಅರಣ್ಯ ಪ್ರದೇಶವೊಂದಿದೆ. ಅಲ್ಲಿ ಸಾಕಷ್ಟು ಪಕ್ಷಿಗಳು ವಾಸವಿವೆ. ಬಿಜಿಆರ್ ಸಂಘಟನೆಯ ಸದಸ್ಯ ರಾಮ್ ಕುಮಾರ್ ಅವರು ಇತ್ತೀಚೆಗೆ ಯಶುಬೆಟ್ಟಕ್ಕೆ ಭೇಟಿ ನೀಡಿದ್ದರು. ಇದು ವಾಯುವಿಹಾರಕ್ಕೆ ಹೇಳಿಮಾಡಿಸಿದ ಸ್ಥಳವಾಗಿದ್ದು, ಇದನ್ನು ಉಳಿಸಿಕೊಳ್ಳುವುದು ಅತಿ ಮುಖ್ಯ.
4. ಹೊಸಕೆರೆ ಹಳ್ಳಿ ಕೆರೆಯನ್ನು ಯೇಸು ಬೆಟ್ಟ ಹಾಗೂ ಹನುಮಗಿರಿ ಎಂಬ ಎರಡು ಬೆಟ್ಟಗಳು ಹೊಂದಿಕೊಂಡಿವೆ. ಟಾಟಾ ಪ್ರೊಮೊಂಟ್ ಸಂಸ್ಥೆಯು ಹನುಮಗಿರಿ ಬೆಟ್ಟದ ಮೇಲೆ ಹೆಲಿಪ್ಯಾಡ್ ಇರುವ ನಾಲ್ಕು ಗಗನ ಚುಂಬಿ ಕಟ್ಟಡಗಳನ್ನು ಕಟ್ಟಿದ್ದು, ಇದಕ್ಕೆ ಹಿಲ್ ರೆಸಿಡೆನ್ಸ್ ಎಂದು ಹೆಸರಿಟ್ಟಿದೆ.
ಬೆಳವಣಿಗೆಗಳು
1. ಹೊಸಕೆರೆಹಳ್ಳಿ ಕುರಿತು ಬಿಜಿಆರ್ ಹಮ್ಮಿಕೊಂಡ ಆಂದೋಲನವು ರಾಜ್ಯವ್ಯಾಪಿ ಹಬ್ಬಿತು. ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯು ಸಂಘಟನೆಯ ಶ್ರಮವನ್ನು ಹಾಡಿ ಹೊಗಳಿತು.
2. ಡಿಜಿಪಿ ಭಾಸ್ಕರ್ ರಾವ್ ಅವರು ಸುನೀಲ್ ಸೂದ್ ಅವರನ್ನು ಭೇಟಿಯಾಗಿ, ಭಾನುವಾರ ನಡೆಯಲಿರುವ ಕೆರೆ ಸ್ವಚ್ಛತಾ ಕಾರ್ಯಕ್ಕೆ 60 ಪೊಲೀಸ್ ಸಿಬ್ಬಂದಿ ನಿಯೋಜಿಸುವುದಾಗಿ ಭರವಸೆ ನೀಡಿದರು.
3. ಬಿಜಿಆರ್ ಸಂಘಟನೆಯ ಹಲವು ಸದಸ್ಯರು ಹೊಸಕೆರೆ ಹಳ್ಳಿ ಕೆರೆಯನ್ನು ಪ್ರತಿದಿನ ಭೇಟಿ ಮಾಡಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
4. ಹೊಸಕೆರೆ ಹಳ್ಳಿಯ ಈ ದುರ್ಗತಿಗೆ ಕೆರೆ ಅಭಿವೃದ್ಧಿ ಪ್ರಾಧಿಕಾರದ ರುದ್ರಯ್ಯ ಎಂಬುವರೇ ಕಾರಣ ಎಂಬುದು ಗೊತ್ತಾಗಿದೆ. ಸಂಘದ ಸದಸ್ಯ ರಾಮ್ ಕುಮಾರ್ ಅವರು ಕೆರೆ ಅಭಿವೃದ್ಧಿ ಮಂಡಳಿಗೆ ಭೇಟಿ ನೀಡಿದ ನಂತರ ತಿಳಿದ ವಿಷಯವಿದು.
ಕಾರ್ಯಕ್ರಮಗಳೇನು?
ಭಾನುವಾರ ನಡೆಯಲಿರುವ ಹೊಸಕೆರೆ ಹಳ್ಳಿ ಕೆರೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮೂರು ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.
1. ಕೆರೆ ಸ್ವಚ್ಛತೆ
2. ಸಸಿ ನೆಡುವುದು
3. ಜ್ಞಾನ ಹಂಚಿಕೊಳ್ಳುವುದು
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?