ದಿನದ ಸುದ್ದಿ
ನೋಟುರದ್ಧತಿ : ಪ್ರಧಾನಿಗಳ ಯಾವ ತರ್ಕವನ್ನೂ ಒಪ್ಪದಿದ್ದ ಆರ್ಬಿಐ ‘ಅನುಮೋದನೆ’..!
ಓಟುಗಳ ಮುದ್ರಣ, ಚಲಾವಣೆ ರಿಝರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಕಾರ್ಯಕ್ಷೇತ್ರದಲ್ಲಿ ಬರುವಂತದ್ದು. ಆದರೂ ನವಂಬರ್ 8, 2016ರಂದು ಪ್ರಧಾನ ಮಂತ್ರಿಗಳು ಕಪ್ಪು ಹಣದ, ಖೋಟಾ ನೋಟುಗಳ ಮತ್ತು ಭಯೋತ್ಪಾದಕರ ಹಣಕಾಸಿನ ಮೂಲದ ವಿರುದ್ಧ 56 ಅಂಗುಲದ ಧೀರ ಕಾರ್ಯಾಚರಣೆ ಎಂದ 500 ರೂ. ಮತ್ತು 1000 ರೂ. ನೋಟುಗಳ ರದ್ಧತಿಯ ಪ್ರಕಟಣೆ ಮಾಡಿದಾಗ ಅದು ಆರ್ಬಿಐನ ನಿರ್ಧಾರವಾಗಿತ್ತೇ, ಅಥವ ಅದಕ್ಕೆ ಆರ್ಬಿಐ ನ ಮಂಜೂರಾತಿಯಾದರೂ ಸಿಕ್ಕಿತ್ತೇ? ಇದುವರೆಗೆ ಬಹಳ ಊಹಾಪೋಹದಲ್ಲೇ ಇದ್ದ ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.
ಮಾಹಿತಿ ಹಕ್ಕು ಕಾರ್ಯಕರ್ತ ವೆಂಕಟೇಶ್ ನಾಯಕ್ ಅವರ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸುತ್ತ ಬಂದ ಆರ್.ಬಿ.ಐ. ಕೊನೆಗೂ ನೀಡಿರುವ ಮಾಹಿತಿಯ ಪ್ರಕಾರ, ನೋಟುರದ್ಧತಿಯ ಮೋದಿ ಸರಕಾರದ ಪ್ರಸ್ತಾವನೆ ಆರ್.ಬಿ.ಐ. ಆಡಳಿತ ಮಂಡಳಿಯಲ್ಲಿ ಪ್ರಧಾನ ಮಂತ್ರಿಗಳು ಅದರ ಪ್ರಕಟಣೆ ಮಾಡುವ ಕೇವಲ ಎರಡೂವರೆ ಗಂಟೆಗಳ ಮೊದಲಷ್ಟೇ ಚರ್ಚೆಗೆ ಬಂತು.
ಆದರೆ ಪ್ರಧಾನ ಮಂತ್ರಿಗಳು ಅದನ್ನು ಪ್ರಕಟಿಸುವಾಗ ಅದಕ್ಕೆ ಆರ್.ಬಿ. ಐ. ಮಂಜೂರಾತಿ ಸಿಕ್ಕಿರಲಿಲ್ಲ, ಅದನ್ನು ಸರಕಾರಕ್ಕೆ ಕಳಿಸಿದ್ದು 38 ದಿನಗಳ ನಂತರ, ಡಿಸೆಂಬರ್ 6, 2016ರಂದು; ಕೊನೆಗೂ, ಆರ್ಬಿಐ ಆಡಳಿತ ಮಂಡಳಿ ಅನುಮೋದನೆ ನೀಡಿದರೂ, ಸರಕಾರದ ಹೆಚ್ಚಿನ ತರ್ಕಗಳನ್ನು ಅದು ಒಪ್ಪಲಿಲ್ಲ;
- ನೋಟುರದ್ಧತಿಯಿಂದ ಕಪ್ಪು ಹಣವನ್ನು ತಡೆಯಲು ಸಹಾಯವಾಗುವದಿಲ್ಲ, ಏಕೆಂದರೆ, ಹೆಚ್ಚಿನ ಕಪ್ಪು ಹಣ ನಗದಿನಲ್ಲಿ ಇಲ್ಲ, ಬದಲಾಗಿ ರಿಯಲ್ ಎಸ್ಟೇಟ್ ಮತ್ತು ಚಿನ್ನದ ರೂಪದಲ್ಲಿದೆ, ಅವುಗಳ ಮೇಲೆ ಈ ಕ್ರಮದ ಪರಿಣಾಮ ಅತ್ಯಲ್ಪ;
- ಖೋಟಾ ನೋಟಿನ ಪ್ರಮಾಣ 400 ಕೋಟಿ ರೂ.ಗಳಷ್ಟಾದರೂ ಒಟ್ಟು ನೋಟುಗಳ ಚಲಾವಣೆಯಲ್ಲಿ ಅದರ ಪ್ರಮಾಣ ಅತ್ಯಲ್ಪ, ಅದಕ್ಕಾಗಿ ನೋಟುರದ್ಧತಿಯ ಕ್ರಮದ ಅಗತ್ಯವಿರಲಿಲ್ಲ;3. ಚಲಾವಣೆಯಲ್ಲಿದ್ದ 500 ರೂ. ಮತ್ತು 1000ರೂ. ನೋಟುಗಳ ಏರಿಕೆಯ ಪ್ರಮಾಣ ಆರ್ಥಿಕ ಬೇಳವಣಿಗೆಯ ದರಕ್ಕೆ ಹೋಲಿಸಿದರೆ ಬಹಳ ಹೆಚ್ಚು ಎಂಬ ತರ್ಕವೂ ಅವುಗಳ ನಿಜಮೌಲ್ಯವನ್ನು ಪರಿಗಣಿಸಿದಾಗ ಒಪ್ಪುವಂತದ್ದಲ್ಲ;4. ಪ್ರಸಕ್ತ ವರ್ಷದಲ್ಲಿ ಈ ಕ್ರಮ ಜಿಡಿಪಿ ಬೆಳವಣಿಗೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತದೆ.
ಅಂದರೆ ಒಟ್ಟಿನಲ್ಲಿ, ಪ್ರಧಾನ ಮಂತ್ರಿಗಳು ನೋಟುರದ್ಧತಿಗೆ ಕೊಟ್ಟ ಯಾವ ಕಾರಣವನ್ನೂ ಒಪ್ಪದಿದ್ದರೂ, ಬದಲಾಗಿ ಇದರಿಂದ ಆರ್ಥಿಕ ವ್ಯವಸ್ಥೆಯ ಮೇಲೆ ಅಲ್ಪಾವಧಿ ದುಷ್ಪರಿಣಾಮ ಉಂಟಾಗಬಹುದು ಎಂದು ಎಚ್ಚರಿಸಿದ್ದರೂ ಆರ್ಬಿಐ ಈ ಕ್ರಮವನ್ನು ಶಿಪಾರಸು ಮಾಡಿತು ಎಂಬುದು ಈ ಆರ್ಟಿಐ ಉತ್ತರದಿಂದ ತಿಳಿಯುವ ಆಂಶ.
ಇವೆಲ್ಲವೂ ಈಗಾಗಲೇ ಎಲ್ಲರ ಗಮನಕ್ಕೆ ಬಂದಿರುವ ಸಂಗತಿ, ನೋಟುರದ್ಧತಿ ಆರ್ಬಿಐ ಎಚ್ಚರಿಸಿದ್ದಕ್ಕಿತಲೂ ಹೆಚ್ಚಿನ ದುಷ್ಪರಿಣಾಮವನ್ನು ಜನಸಾಮಾನ್ಯರ ಮೇಲೆ ಅಲ್ಪಾವಧಿಯಲ್ಲಿ, ನಗದಿಗಾಗಿ ಪರದಾಟದಲ್ಲಿ ಮಾತ್ರವಲ್ಲ, ಅನೌಪಚಾರಿಕ, ಸಣ್ಣ ಉತ್ಪಾದನೆಯ ವಲಯದ ಧ್ವಂಸ ಮತ್ತು ಅಪಾರ ಪ್ರಮಾಣದ ಉದ್ಯೋಗ ನಷ್ಟದಲ್ಲಿ ಈಗಲೂ ಕಾಣ ಬರುತ್ತಿದೆ.
ಆದರೂ ರಿಝರ್ವ್ ಬ್ಯಾಂಕ್ ಈ ಕ್ರಮವನ್ನು ಬೆಂಬಲಿಸಿದ್ದು ಏಕೆ ಎಂಬ ಪ್ರಶ್ನೆಯೂ ಈಗ ಅರ್ಥಹೀನವಾಗಿದೆ.. ಆಗ ಆಡಳಿತ ಮಂಡಳಿಯ ಸದಸ್ಯರಾಗಿ ನವಂಬರ್ 8ರ ಸಭೆಯಲ್ಲಿ ಭಾಗವಹಿಸಿದ್ದವರಲ್ಲಿ ಒಬ್ಬರು ಈಗ ಆರ್ಬಿಐ ಗವರ್ನರ್ ಆಗಿದ್ದಾರೆ.
(ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
‘ಕಣ್ಣಪ್ಪ’ ಚಿತ್ರದ ವಿಶೇಷ ಪಾತ್ರದಲ್ಲಿ ಪ್ರಭಾಸ್ ನಟನೆ
ಸುದ್ದಿದಿನ ಡೆಸ್ಕ್ : ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ‘ಕಣ್ಣಪ್ಪ’ ಚಿತ್ರಕ್ಕೆ ಇನ್ನೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ರಭಾಸ್.
ಈಗಾಗಲೇ ಅಕ್ಷಯ್ ಕುಮಾರ್, ಮೋಹನ್ ಬಾಬು, ಮೋಹನ್ ಲಾಲ್, ಶರತ್ಕುಮಾರ್ ಮುಂತಾದವರು ‘ಕಣ್ಣಪ್ಪ’ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್ ತಾರಾಬಳಗಕ್ಕೆ ಪ್ರಭಾಸ್ ಅವರ ಎಂಟ್ರಿಯೂ ಆಗಿದೆ.
ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಕಣ್ಣಪ್ಪ’ ಚಿತ್ರದಲ್ಲಿ ಶಿವನ ಪರಮ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ನಟಿಸಲಿದ್ದಾರೆ. ಹಾಲಿವುಡ್ನ ಶೆಲ್ಡೋನ್ ಚಾವ್ ಅವರ ಛಾಯಾಗ್ರಹಣ, ಕೇಚ ಖಂಫಕದೀ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇದೇ 12 ರಂದು ದಾವಣಗೆರೆಯಲ್ಲಿ ಪಾರಂಪರಿಕ ಬೀಜೋತ್ಸವ; ಒಂದು ಸಾವಿರಕ್ಕೂ ಹೆಚ್ಚು ದೇಸಿ ಧಾನ್ಯಗಳ ಪ್ರದರ್ಶನ
ಸುದ್ದಿದಿನ, ದಾವಣಗೆರೆ : ದೇಸಿಯ ಬಿತ್ತನೆ ಬೀಜಗಳ ವೈವಿಧ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಇದೇ 12ರಂದು ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ‘ಪಾರಂಪರಿಕ ಬೀಜೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ದೇವರಾಜ್ ಹೇಳಿದ್ದಾರೆ.
ಒಂದು ದಿನದ ಈ ಉತ್ಸವದಲ್ಲಿ ದೇಶದ ವಿವಿಧ ಭಾಗಗಳಿಂದ 30ಕ್ಕೂ ಹೆಚ್ಚಿನ ಬೀಜ ಸಂರಕ್ಷಕರ ತಂಡಗಳು ಪಾಲ್ಗೊಳ್ಳಲಿವೆ. ವಿವಿಧ ದೇಸಿ ತಳಿಗಳನ್ನು ಪ್ರದರ್ಶಿಸಲಾಗುತ್ತಿದ್ದು, ಒಂದು ಸಾವಿರಕ್ಕೂ ಹೆಚ್ಚಿನ ದೇಸಿ ಧಾನ್ಯ, ತರಕಾರಿ, ಕಾಳು, ಗೆಡ್ಡೆ ಗೆಣಸು, ಸೊಪ್ಪು ಮತ್ತು ಹಣ್ಣಿನ ತಳಿಗಳು ಪ್ರದರ್ಶನಗೊಳ್ಳಲಿವೆ.
ಗುಣಮಟ್ಟದ ಭತ್ತ, ಸಿರಿಧಾನ್ಯ ಮತ್ತು ತರಕಾರಿ ಬೀಜಗಳು ಮಾರಾಟಕ್ಕೆ ಸಿಗಲಿವೆ. ಕೆಂಪು ಬಣ್ಣದ ’ಸಿದ್ಧ ಹಲಸು’ ಮತ್ತು ಇತರೆ ಹಣ್ಣಿನ ಗಿಡಗಳು ಮಾರಾಟಕ್ಕೆ ಲಭ್ಯವಿರುತ್ತವೆ. ರೈತ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಭತ್ತದ ತಳಿಗಳ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆಯುವ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಕೋಲಾರದ ಬೀಜಮಾತೆ ಪಾಪಮ್ಮ ಮತ್ತು ಮೈಸೂರಿನ ಬೀಜಮಾತೆ ಪದ್ಮಾವತಮ್ಮ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ ಡಿಗ್ರಿ ಕಾಲೇಜಿನಲ್ಲಿ ಬಸವ ಜಯಂತಿ ಆಚರಣೆ
ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಭಾವಚಿತ್ರ ಅನಾವರಣ ಮಾಡುವುದರ ಮೂಲಕ ಬಸವ ಜಯಂತಿಯನ್ನು ಇಂದು ಬೆಳಗ್ಗೆ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿಜಿ ಅಮೃತೇಶ್ವರ ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಆತ್ಮಕತೆ | ಹಿಂದಿರುಗಿ ನೋಡುತ್ತಾಽ……
-
ದಿನದ ಸುದ್ದಿ4 days ago
ದಾವಣಗೆರೆ | ಲೋಕಸಭಾ ಚುನಾವಣೆ ; ಶೇ 70.94 ಮತದಾನ
-
ದಿನದ ಸುದ್ದಿ4 days ago
ಸಂಸತ್ತಿನ ಕಡೆಗೆ ಪ್ರಭಾ ನಡಿಗೆ
-
ದಿನದ ಸುದ್ದಿ4 days ago
ಹೊನ್ನಾಳಿಯಲ್ಲಿ ವಿಶೇಷಚೇತನರಿಂದ ಶೇ 100 ರಷ್ಟು ಮತದಾನ
-
ದಿನದ ಸುದ್ದಿ6 days ago
2ನೇ ಹಂತದ ಮತದಾನ ; ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ದಾವಣಗೆರೆ ಜಿಲ್ಲೆಯಲ್ಲಿ 63 ವಿಶೇಷ ಮತಗಟ್ಟೆಗಳ ಸ್ಥಾಪನೆ, ವಿಭಿನ್ನವಾಗಿ ಸಿದ್ದವಾಗಿರುವ ಮತಗಟ್ಟೆಗಳು
-
ದಿನದ ಸುದ್ದಿ4 days ago
ದಾವಣಗೆರೆ | ಲೋಕಸಭಾ ಚುನಾವಣೆ ; ಶೇ 23.79 ಮತದಾನ
-
ದಿನದ ಸುದ್ದಿ4 days ago
ಸೆಲ್ಫಿಯಲ್ಲಿ ಸೆರೆಯಾದ ಒಂದೇ ಕುಟುಂಬದ 38 ಮತದಾರರು