Connect with us

ದಿನದ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಬೆತ್ತಲಾದ ಖಾವಿದಾರಿ ‘ಕಾಳಿ ಸ್ವಾಮಿ’

Published

on

ರಿಷಿ ಕುಮಾರ ಸ್ವಾಮಿ (ಕಾಳಿ ಸ್ವಾಮಿ)

ಹೌದು ಅರಸೀಕೆರೆಯಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿದ್ದ ಒಬ್ಬ ವ್ಯಕ್ತಿ ಈಗ ಸ್ವಾಮೀಜಿ ಅಂದಿನಿಂದ ಇಂದಿನವರೆಗೆ ಅವನ ಜೀವನ ಪಯಣ ಅಬ್ಬಬ್ಬಾ .. ಅಂದಿಗು ಮತ್ತು ಇಂದಿಗೂ ನಡುವೆ ಇದ್ಯಲ್ಲ ಅದು ಅದ್ಭುತ ಪ್ರತಿಯೊಂದರಲ್ಲೂ ತನ್ನ ಬೇಳೆ ಬೇಯಿಸಿಕೊಳ್ಳಲು ಹೋಗಿ ಕೈ ಸುಟ್ಟುಕೊಳ್ಳುವ ಖತರ್ನಾಕ್ ಕಳ್ಳ ಸ್ವಾಮೀಜಿ. ಕಾಳಿ ಕಾಳಿ ಅಂದುಕೊಂಡು ಜನರನ್ನ ಬೋಳಿ ಮಾಡುವ ಐನಾತಿ.

ಜಾತಿಯಲ್ಲಿ ಸುಳ್ಳು ಹೇಳಿದ್ದ ಮಹಾನುಭಾವ ತನ್ನ ತಂದೆ ತಾಯಿಯ ಐಡೆಂಟಿಟಿಯನ್ನೇ ಬದಲಿಸಿದ್ದವ , ನಿಂತ್ಯಾನಂದನ ಕರ್ಮಕಾಂಡ ಬಯಲು ಮಾಡುತ್ತಿನಂತ ಹೇಳಿ ಅವನ ಬಳಿ 10 ಕೋಟಿ ರೂಪಾಯಿ ಒಂದು ಫಾರ್ಚೂನರ್ ಕಾರ್ ನ ಬೇಡಿಕೆ ಇಟ್ಟಿದ್ದ , ಇದರಲ್ಲಿ ಸಿಕ್ಕಿ ಹಾಕಿಕೊಂಡ ಮಹಾನುಭಾವ ಮಾಧ್ಯಮವೊಂದರಲ್ಲಿ ತನ್ನ ಪೇಟವನ್ನ ತೆಗೆದಿಟ್ಟು ಕ್ಷಮಾಪಣೆ ಪತ್ರ ಬೇರೆ ಬರೆದು ಕೊಟ್ಟಿದ್ದನ್ನ ಜನ ಇನ್ನೂ ಮರೆತಿಲ್ಲ ಈಗ ಗೊತ್ತಾಗಿರಬೇಕು ಅವನು ಯಾರು ಅಂತ ಅವನೇ ರೀ ಶ್ರಿ ರಿಷಿಕುಮಾರ.(ಸ್ವಾಮೀಜಿ ಅನ್ನಲು ಮನಸೊಪ್ಪದು)

ಈತ ಸಾಮಾಜಿಕವಾಗಿ ಜನರಿಗೆ ಏನು ಉಪಯೋಗ ಮಾಡಿದ್ದಾನೋ ಅದು ಭಗವಂತನಿಗೆ ಗೊತ್ತು ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಂಡ ಕುಡಿದ ಕೋತಿ ತರ ಆಡುತ್ತಿದ್ದಾನೆ , ಅಡಲಿ ಬೇಡ ಅನ್ನಲ್ಲ ಅದು ಅವನ ಅಭಿವ್ಯಕ್ತಿ ಸ್ವಾತಂತ್ರ್ಯ ಅಂದುಕೊಂಡರೂ ಖಾವಿ ತೊಟ್ಟು ತನ್ನನ್ನ ತಾನು ಸ್ವಾಮೀಜಿ ಅಂತ ಕರೆಸಿಕೊಳ್ಳುವವರು ಮಾಡುವಂತ ಕೆಲಸವಂತೂ ಅಲ್ಲವೇ ಅಲ್ಲ.

ಒಂದು ಬಾಯಿಗೆ ಬಟ್ಟೆ ಕಟ್ಟಿಕೊಳ್ಳಬೇಕು ಇಲ್ಲವೇ ತೊಟ್ಟಿರುವ ಖಾವಿ ಬಟ್ಟೆ ಬಿಚ್ಚಬೇಕು ಯಾಕಂದ್ರೆ ನಮ್ಮ ದೇಶದಲ್ಲಿ ಇಂದಿಗೂ ಜನ ನಂಬಿಕೆ ಇಟ್ಟಿರುವುದು ಖಾವಿ ಮೇಲೆ , ಖಾವಿ ತೊಟ್ಟವರು ಸಮಾಜಕ್ಕೆ ಶಾಂತಿ ಮಂತ್ರ ಹೇಳಿಕೊಡಬೇಕು, ಸಮಾಜದಲ್ಲಿ ಸಾಮರಸ್ಯ ಬೆಳೆಯುವಂತಹ ಕೆಲಸಗಳನ್ನ ಮಾಡಬೇಕು ಆದರೆ ಈತ ಬಾಯಿ ತೆರೆದರೆ ಕೋಮು ಸೃಷ್ಟಿಸುವಂತಹ ಅನ್ಯಧರ್ಮದ ಬಗ್ಗೆ ಕೇವಲವಾಗಿ ಮಾತನಾಡೋದು, ಹೆಣ್ಣು ಮಕ್ಕಳ ಬಗ್ಗೆ ಅಸಹ್ಯ ಹುಟ್ಟಿಸುವಂತಹ ಮಾತುಗಳು ಅಲ್ಲದೆ ಅದನ್ನ ಪ್ರಶ್ನೆ ಮಾಡೋರಿಗೆ ಬೋಳಿ ಮಗನೆ, ಶಾಟ ಎಂಬಿತ್ಯಾದಿ ಸೆನ್ಸಾರ್ ಪದ ಬಳಕೆ ಮಾಡುತ್ತಾ ಖಾವಿ ಬಟ್ಟೆಗೆ ಇರುವ ಗೌರವವನ್ನು ಹಾಳು ಮಾಡುತ್ತಿದ್ದಾನೆ.

ಇಂತವರಿಗೆ ಖಾವಿ ಒಂದು ರಕ್ಷಾ ಕವಚ ಅಷ್ಟೇ , ಧರ್ಮವನ್ನ ರಕ್ಷಿಸುತ್ತಿನಿ ಅಂತ ಹೇಳುವ ಇವರುಗಳು ಇಂತಹ ಕೃತ್ಯಗಳಿಂದ ಧರ್ಮವನ್ನ ಹಾಳು ಮಾಡುತ್ತಿದ್ದಾರೆ ವಿನಃ ಇವರುಗಳಿಂದ ಧರ್ಮಕ್ಕೆ ಒಂದಿಷ್ಟು ಉಪಯೋಗ ಇಲ್ಲ , ಧರ್ಮದ ಹೆಸರಿನಲ್ಲಿ ಇವರನ್ನ ಇವರು ರಕ್ಷಿಸಿಕೊಳ್ಳುತ್ತಿದ್ದಾರೆ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ.

ಇಂತಹವರು ಸಮಾಜಕ್ಕೆ ಕಂಟಕ ಮತ್ತು ಇದೆ ರೀತಿ ಮುಂದುವರಿದಲ್ಲಿ ಖಾವಿ ತೊಟ್ಟ ನಿಜವಾದ ಸ್ವಾಮೀಜಿಗಳಿಗೆ ಕೂಡ ಮರ್ಯಾದೆ ಗೌರವ ಸಿಗದ ರೀತಿ ಆಗುವುದರಲ್ಲಿ ಸಂಶಯವೇ ಇಲ್ಲ ಈ ಹಿಂದೆ ಒಮ್ಮೆ ಒಂದಷ್ಟು ಜನ ಮಹಿಳೆಯರು ಸೇರಿ ಈತನನ್ನು ಥಳಿಸಿದ್ದು ಕೂಡ ಯಾರು ಮರೆತಿಲ್ಲ ಆದರೆ ಪಾಪ ಆತ ಮರೆತಿರಬೇಕು.

ಇಂತಹವರಿಂದ ಧರ್ಮಕ್ಕೆ ಸಮಾಜಕ್ಕೆ ನಾಲ್ಕು ಪೈಸದ ಪ್ರಯೋಜನ ಇಲ್ಲ ಜನ ಇಂತವರನ್ನು ನಂಬಿ ಮೋಸ ಹೋಗುವುದು ಬೇಡ ಮತ್ತು ಖಾವಿಗೆ ಅದರದ್ದೇ ಆದ ಮಹತ್ವ ಇದೆ ಅದು ಇಂತಹವರಿಂದ ಹಾಳಾಗುವುದು ಬೇಡ ಎಂಬ ಸಣ್ಣ ಕಳಕಳಿ ಅಷ್ಟೇ … ಆತನ ಸಾಮಾಜಿಕ ಜಾಲತಾಣದ ಪೋಸ್ಟ್ಗಳು ಕಾಮೆಂಟ್ಗಳು ನೋಡಿದರೆ ಈತ ಸ್ವಾಮೀಜಿ ನ ಅಂತ ಎಲ್ಲರೂ ಒಂದು ಸಲ ತಮ್ಮನ್ನ ತಾವು ಪ್ರಶ್ನಿಸಿಕೊಳ್ಳದೆ ಇರಲಾರರು !!

ನಿಜವಾದ ಹಿಂದೂಗಳು , ಧರ್ಮ ಮತ್ತು ಖಾವಿ ಮೇಲೆ ನಂಬಿಕೆ ಗೌರವ ಇರುವವರು ಖಂಡಿತವಾಗಿಯೂ ಆತನ ಉದ್ದಟತನವನ್ನ ಖಂಡಿಸಿದೆ ಇರಲಾರರು. ಒಟ್ಟಾರೆ ಖಾವಿಯಿಂದ ಸಮಾಜದಲ್ಲಿ ತನ್ನನ್ನು ತಾನು ಮುಚ್ಚಿಟ್ಟುಕೊಂಡಿದ್ದ ಶ್ರಿ ರಿಷಿಕುಮಾರ ಸಾಮಾಜಿಕ ಜಾಲತಾಣದಲ್ಲಿ ಬೆತ್ತಲಾದ !!!

ಬಿಂದು ಗೌಡ ಕೆಪಿಸಿಸಿ
ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending