Connect with us

ದಿನದ ಸುದ್ದಿ

ಭೈರಪ್ಪನವರೇ, ನಿಮ್ಮ ‘ಧರ್ಮಶಾಸ್ತ್ರ’ ಅಂದರೆ ಯಾವುದು..?

Published

on

ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪನವರು ಸಂವಿಧಾನದ ಬಗ್ಗೆ, ತಮ್ಮ ‘ಧರ್ಮಶಾಸ್ತ್ರ’ದ ಬಗ್ಗೆ ತಮ್ಮ ಸಹಜ ಅಭಿಪ್ರಾಯಗಳನ್ನು ಹೇಳುತ್ತಾ ಹಿಂದೂಗಳಲ್ಲಿನ ಗಂಡುಹೆಣ್ಣಿನ ಸಂಭಂದದ ಬಗ್ಗೆ, ನಮ್ಮ ನ್ಯಾಯಾಲಯ, ನ್ಯಾಯಾಲಯದ ತೀರ್ಪುಗಳ ಬಗ್ಗೆಯೂ ಕೀಟಲೆಯ ದ್ವನಿಯಲ್ಲಿ ಮಾತನಾಡಿದ್ದಾರೆ!

ಪ್ರಗತಿಪರರು ಸಾಮಾಜಿಕ ಜಾಲತಾಣಗಳಲ್ಲಿ
ಭೈರಪ್ಪನವರ ಮಾತುಗಳನ್ನು ಉಗ್ರವಾಗಿ ವಿರೋಧಿಸುತ್ತಾ ಎಸ್.ಎಲ್.ಭೈರಪ್ಪನವರನ್ನು ವೈಯಕ್ತಿಕ ನಿಂದೆಗೆ ಇಳಿದಿದ್ದಾರೆ.!

ಭೈರಪ್ಪನವರು ಇದನ್ನು ಬಿಟ್ಟು ಮತ್ತೇನು ಮಾತಾಡಲು ಸಾದ್ಯ..? ಅವರು ನಂಬಿದ ಸಿದ್ದಾಂತಕ್ಕೆ ಅವರು ತೋರುವ ಕಾಳಜಿ, ಬದ್ದತೆಗಳು ನಿಜಕ್ಕೂ ಶ್ಲಾಘನೀಯ! ಅವರು ಮಾತಾಡಿರುವುದಾದರೂ ಎಲ್ಲಿ? ಅವರ ಜಾತಿಯವರೇ ಆದವರೊಬ್ಬರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ, ಅವರದೇ ಪರಿಸರದಲ್ಲಿ, ಅವರ ಅನುಯಾಯಿಗಳ ನಡುವೆ. ಅದರಲ್ಲೂ ಅವರು ಅವರದೇ ‘ಧರ್ಮಗ್ರಂಥ’ಗಳನ್ನು ಬೇರೆ ಸಮರ್ಥಿಸಿಕೊಂಡಿದ್ದಾರೆ! ಇದೂ ನನಗೆ ಆಶ್ಚರ್ಯ ಎನಿಸಲಿಲ್ಲ!? ಅವರು, ಅವರ ಯಥಾಸ್ಥಿತಿವಾದದ, ಅವರಿಗೆ ಶ್ರೇಯಕರವಾದ ಧರ್ಮಗ್ರಂಥವನ್ನು ಸಮರ್ಥಿಸದೆ ನಿಮ್ಮ ಧರ್ಮಗ್ರಂಥವಾದ ಸಂವಿಧಾನವನ್ನು ಏಕೆ ಸಮರ್ಥಿಸಬೇಕು? ಅವರ ಧರ್ಮಗ್ರಂಥಗಳಿಗೆ ‘ಹಿಂದೂ’. ‘ಭಾರತೀಯ’ ‘ಪ್ರಾಚೀನ’ ‘ಪುರಾತನ’ ‘ಸನಾತನ’ ಎಂದು ಏನೇ ನಾಮಕರಣ ಮಾಡಿ, ಹೆಸರಿಟ್ಟು ಕರೆದರೂ ಅದು ಬ್ರಾಹ್ಮಣ ಶ್ರೇಷ್ಟತೆಯನ್ನು ಪ್ರತಿಪಾದಿಸುವ ಧರ್ಮಗ್ರಂಥವಾಗಿರುತ್ತದೆ! ಬ್ರಾಹ್ಮಣರಾದ ಭೈರಪ್ಪನವರಿಗೆ, ಅವರ ಕುಲಭಾಂಧವರಿಗೆ ಅದರಿಂದ ಲಾಭವಿದೆ! ಪರಂಪರಾನುಗತವಾಗಿ ಅವರು ಅದರ ಹಣ್ಣುಗಳನ್ನು ಸವಿದಿದ್ದಾರೆ!

‘ಭಾರತೀಯತೆ’ ಅಂದರೆ ಅವರ ಅರ್ಥದಲ್ಲಿ ಅದು ‘ವೈದಿಕೇಯತೆ’ಯೇ ಅಲ್ಲವೆ? ಭಾರತೀಯತೆ ಅರ್ಥಾತ್ ಬ್ರಾಹ್ಮಣೀಯತೆಯನ್ನು ಯಥಾಸ್ಥಿತಿಗೊಳಿಸುವುದು, ಸ್ಥಾವರಗೊಳಿಸುವುದೇ ಅವರ ಮೂಲ ಉದ್ದೇಶವೆಂಬುದನ್ನು ನಾವೇಕೆ ಗ್ರಹಿಸುತ್ತಿಲ್ಲ.? ಇದನ್ನು ಕೇವಲ ಎಸ್.ಎಲ್.ಭೈರಪ್ಪನವರು ಹೇಳುತ್ತಿರುವುದಲ್ಲ, ಇವರ ಪೂರ್ವಿಕರಾದ ಸಂಘಪರಿವಾರದ ಸ್ಥಾಪಕರೆಲ್ಲಾ ಹಿಂದಿನಿಂದಲೂ ಹೇಳುತ್ತಾ ಬಂದಿರುವುದೇ ಇದೇ ಆಗಿದೆ!? ಉದಾಹರಣೆಗೆ ಇಂದು ಎಸ್.ಎಲ್.ಬೈರಪ್ಪನವರು ನಮ್ಮ ಮದುವೆಗಳ, ವಿಚ್ಚೇದನಗಳ, ಗಂಡು ಹೆಣ್ಣು ಸಂಭಂದಗಳ ಪರಿಸ್ಥಿತಿ ಯನ್ನು ಕಂಡು ವ್ಯಂಗ್ಯವಾಡಿದ್ದಾರಲ್ಲ, ಅದನ್ನೇ ಇಂದಿಗೆ ಸರಿಯಾಗಿ ಎಪ್ಪತ್ತು ವರ್ಷಗಳ ಹಿಂದೆ ಭೈರಪ್ಪನವರ ಪೂರ್ವಿಕರಾದ ಗೋಳ್ವಾಲ್ಕರ್ ರವರೂ ಹೇಳಿದ್ದನ್ನು ನಮ್ಮ ಇತಿಹಾಸಕಾರ ರಾಮಚಂದ್ರ ಗುಹ ಕೋಟ್ ಮಾಡಿದ್ದನ್ನೇ ನಾನೂ ಕೋಟ್ ಮಾಡಿದ್ದೇನೆ ಗಮನಿಸಿ….

The RSS sarsanghchalak, M.S. Golwalkar, complained in a speech of August 1949 that the reforms piloted by Ambedkar “has nothing Bharatiya about it. The questions like those of marriage and divorce cannot be settled on the American or British model in this country. Marriage, according to Hindu culture and law is a sanskar which cannot be changed even after death and not a ‘contract’ which can be broken any time”. Golwalkar continued: “Of course some lower castes in Hindu Society in some parts of the country recognise and practise divorce by custom. But their practice cannot be treated as an ideal to be followed by all”. (Organiser, September 6, 1949).

ಯಥಾಸ್ಥಿತಿವಾದ ಅಂದರೆ ಇದೇ.. ಅದಕ್ಕೆ ಕಾಲಮಾನಗಳ ಅಂತರವಿರಲ್ಲ, ಬಾಷೆ ಮತ್ತು ಚಿಂತನೆಯಲ್ಲಿ ವ್ಯತ್ಯಾಸ ಇರಲ್ಲ, ವ್ಯಕ್ತಿ ವ್ಯಕ್ತಿಗಳ ನಡುವೆ ಗೊಂದಲವಿರಲ್ಲ..! ಇದನ್ನೇ ನಮ್ಮವರು ಪ್ಯಾಸಿಸಂ ಎಂದು ಕರೆದರು. ಅಂದು ಅವರು ಪ್ರತಿಪಾದಿಸಿದ್ದು, ಅದು ಮುಂದುವರೆದಿದ್ದೂ, ಇಂದು ಪ್ರತಿಪಾದಿಸುತ್ತಿರುವುದು ಒಂದೇ.‌.!? ಭಾರತೀಯತೆಯ ಹೆಸರಲ್ಲಿ ಬ್ರಾಹ್ಮಣೀಯತೆಯನ್ನು, ಇದರಿಂದ ಭಾರತೀಯರಾದ ಇತರ ಬ್ರಾಹಮಣೇತರರಿಗೆ ಏನೇ ನಷ್ಟವಾದರೂ ಚಿಂತೆಯಿಲ್ಲ ಅವರಿಗೆ ಮಾತ್ರ ಲಾಭವಾಗಬೇಕಷ್ಟೆ ಅವರ ಸವರ್ಣಕುಲದ ಶ್ರೇಷ್ಠತೆ ಉಳಿಯಬೇಕಷ್ಟೆ!

ಇಲ್ಲಿ ಭಾರತೀಯರು, ಅದರಲ್ಲೂ ಬ್ರಾಹ್ಮಣ ಹೆಣ್ಣುಮಕ್ಕಳನ್ನೂ ಸೇರಿಸಿದಂತೆ ಇಡೀ ಸ್ತ್ರೀಕುಲಕ್ಕೆ ಇವರ ‘ಸಿದ್ದಾಂತ’ ಅದೆಷ್ಟು ಅಪಾಯಕಾರಿಯಾಗಿದೆ ಗಮನಿಸಿ? ಭೈರಪ್ಪನವರು ಹೆಣ್ಣಿನ ಮುಟ್ಟಿನ ಬಗ್ಗೆ, ಶಬರಿಮಲೆ ದೇವಾಲಯದ ಪ್ರವೇಶದ ಬಗ್ಗೆ ಅಸಹನೆ ಬೆರೆತ ವ್ಯಂಗ್ಯದಲ್ಲಿ ಮಾತನಾಡಿದ್ದಾರೆ. ಇದರಲ್ಲಿ ಅವರ ‘ಧ್ವನಿ’ಯನ್ನು ಗಮನಿಸಿ..? ಅದೇ ಏಳು ದಶಕಗಳ ಹಿಂದೆ ಅಪ್ಪನ ಆಸ್ತಿಯಲ್ಲಿ(ಪಿತ್ರಾರ್ಜಿತ ಆಸ್ತಿ) ಹೆಣ್ಣು ಮಕ್ಕಳಿಗೆ ಸಮಪಾಲು ನೀಡಬೇಕೆಂದು ಬಾಬಾಸಾಹೇಬರು ‘ಹಿಂದು ಕೋಡ್ ಬಿಲ್’ ತಂದಾಗ, ಅಂದೂ ಬೈರಪ್ಪನವರ ತಲೆಮಾರಿನವರು ಮಾತಾಡಿದ್ದು ಇಲ್ಲಿದೆ ಗಮನಿಸಿ…

An article in the Organiser, dated November 2, 1949, characterised the Hindu Code Bill “as a direct invasion on the faith of the Hindus”, remarking that “its provisions empowering women to divorce is revolting to the Hindu ideology”. An editorial published a month later (“The Hindu Code Bill”, the Organiser, December 7, 1949) led with this paragraph: “We oppose the Hindu Code Bill. We oppose it because it is a derogatory measure based on alien and immoral principles. It is not a Hindu Code Bill. It is anything but Hindu. We condemn it because it is a cruel and ignorant libel on Hindu laws, Hindu culture and Hindu dharma”.

ಮಾತೆತ್ತಿದರೆ ಭಾರತಮಾತೆಯನ್ನು ಉದ್ಗರಿಸುವ ಇವರ ಉದರದಲ್ಲಿರುವ ಸ್ತ್ರೀದ್ವೇಶವನ್ನು ಗಮನಿಸಿ..? ಅಂದಿಗೂ ಇಂದಿಗೂ ಬೈರಪ್ಪನವರ ಮತ್ತವರ ಪೂರ್ವಿಕರ ಚಿಂತನೆ ಮತ್ತು ಉದ್ದೇಶದಲ್ಲಿ ಏನಾದರೂ ಎಳ್ಳಷ್ಟು ವ್ಯತ್ಯಾಸವಿದೆಯೇ..? ಇಂತದ್ದೇ ಸ್ಪಷ್ಟತೆ ಅಂದು ಹಿಟ್ಲರ್ ನಲ್ಲೂ ಇತ್ತು ಇಂದು ಇವರಲ್ಲೂ ಇದೆ!

ನಾವು ಭೈರಪ್ಪನಂತವರನ್ನು ಬೈಯುವುದನ್ನು ನಿಲ್ಲಿಸಬೇಕು ಇಂದಾದರೂ ಒಂದಾಗಿ ಪರ್ಯಾಯಗಳನ್ನು ಹುಡುಕಬೇಕು.. ಈ ದೇಶವನ್ನು ಇವರಿಂದ ಉಳಿಸಬೇಕಾದರೆ ಇವರ ಮಾತುಗಳನ್ನು, ಇವರ ನುಡಿಕಟ್ಟನ್ನು ಅದರ ಹಿಂದಿನ ದುರುದ್ದೇಶಗಳನ್ನು ಮುಂದಿನ ತಲೆಮಾರಿಗಾದರೂ ಅರ್ಥಮಾಡಿಸಬೇಕು..

ಸಿ.ಎಸ್.ದ್ವಾರಕಾನಾಥ್

ನಮ್ಮ ಸಂವಿಧಾನದಲ್ಲಿ ಪರಂಪರೆ’ ಇಲ್ಲ ಎಂದು ಹೇಳಿದ ಎಸ್.ಎಲ್.ಭೈರಪ್ಪ ಅವರ ಸುದ್ದಿ ಲಿಂಕ್ ಮೇಲೆ ಕ್ಲಿಕ್ ಮಾಡಿ

https://www.prajavani.net/stories/stateregional/shreevasta-smruti-632572.html

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ5 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ1 week ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending