ದಿನದ ಸುದ್ದಿ
ಇಸ್ರೇಲಿ ಬೇಹುಗಾರಿಕೆ ಸಾಧನವನ್ನು ಬಳಸಿದವರು ಯಾರು?
ವಾಟ್ಸ್ ಆಪ್ ಸರಕಾರಕ್ಕೆ ನೀಡಿರುವ ತನ್ನ ಖಾತೆಗಳ ಹ್ಯಾಕ್ ಆಗಿರುವ ಹೆಸರುಗಳಲ್ಲಿ ಭೀಮ-ಕೋರೆಗಾಂವ್ ವಿಷಯದಲ್ಲಿ ಆಪಾದಿತರಾಗಿರುವವರು ಮತ್ತು ಅವರ ರಕ್ಷಣೆಗೆ ನಿಂತಿರುವ ವಕೀಲರಲ್ಲಿ ಹಲವರ ಹೆಸರುಗಳು ಇವೆ. ಆದ್ದರಿಂದ ಇವೆರಡರ ನಡುವಿನ ಸಂಬಂಧ ಸಾಕಷ್ಟು ಸ್ಪಷ್ಟವಾಗಿದೆ.. ಇವೆಲ್ಲವೂ ಸರಕಾರವೇ ತನ್ನನ್ನು ಟೀಕಿಸುವವರ ಖಾತೆಗಳನ್ನು ಸೀಳಲು ಇಸ್ರೇಲೀ ಬೇಹುಗಾರಿಕೆ ಸಾಧನವನ್ನು ಬಳಸುವಲ್ಲಿ ಶಾಮೀಲಾಗಿದೆ ಎಂಬ ಸಂದೇಹಗಳನ್ನು ದೃಢಪಡಿಸುತ್ತವೆ. ಈ ಇಡೀ ಕೊಳಕು ವ್ಯವಹಾರದ ಆಮೂಲಾಗ್ರ ತನಿಖೆ ನಡೆಯಬೇಕು.
- ಪೀಪಲ್ಸ್ ಡೆಮಾಕ್ರಸಿ ಸಂಪಾದಕೀಯ, ನವಂಬರ್ 10
ವಿವಿಧ ಕಾರ್ಯಕರ್ತರು, ಪತ್ರಕರ್ತರು ಮತ್ತು ರಾಜಕಾರಣಿಗಳ ವಾಟ್ಸ್ ಆಪ್ ಖಾತೆಗಳನ್ನು ಇಸ್ರೇಲಿ ಕಂಪನಿ ಪೆಗಸಸ್ ನ ಬೇಹುಗಾರಿಕೆ ಸಾಧನವನ್ನು ಬಳಸಿ ಸೀಳಿರುವ(ಹ್ಯಾಕ್ ಮಾಡಿರುವ) ಸುದ್ದಿ ಕಳವಳಕಾರಿ ಮತ್ತು ಖಂಡನೀಯ. ಇದು ಹೇಗಾಯಿತು, ಖಾಸಗಿತ್ವದ ಉಲ್ಲಂಘನೆ ಹೇಗೆ ಸಂಭವಿಸಿತು, ಇದಕ್ಕೆ ಯಾರು ಹೊಣೆ ಎಂಬುದಕ್ಕೆ ವಿವರಣೆ ನೀಡಬೇಕಾಗಿದೆ. ಸರಕಾರ ಯಾವುದೇ ವಿವರಣೆಯನ್ನು ಕೊಟ್ಟಿಲ್ಲವಾದರೂ, ಇದರಲ್ಲಿ, ಈ ಬೇಹುಗಾರಿಕೆಯಲ್ಲಿ ಸರಕಾರದ ಶಾಮೀಲಿನತ್ತ ಬೊಟ್ಟು ಮಾಡುವ ಹೆಚ್ಚಿನ ತಥ್ಯಗಳು ಸಾರ್ವಜನಿಕಗೊಂಡಿವೆ.
ಸರಕಾರ, ಈ ಸುದ್ದಿ ಹೊರಬಂದಾಗ, ಹಲವಾರು ಭಾರತೀಯರ ಖಾಸಗಿತ್ವದ ಉಲ್ಲಂಘನೆಯ ಬಗ್ಗೆ ವಾಟ್ಸ್ ಆಪ್ ಯಾವುದೇ ಸರಕಾರೀ ಸಂಸ್ಥೆಗೆ ಯಾವುದೇ ಮಾಹಿತಿ ನೀಡಿರಲಿಲ್ಲ ಎಂದು ಹೇಳಿತು. ಆದರೆ ತಾವು ದಸ್ತಾವೇಜುಗಳೊಂದಿಗೆ ಈ ಮಾಹಿತಿಯನ್ನು ನೀಡಿ, ವಾಸ್ತವವಾಗಿ, ಖಾಸಗಿತ್ವದ ಉಲ್ಲಂಘನೆಯಾಗಬಹುದು ಎಂದು ಭಾರತ ಸರಕಾರವನ್ನು ಎಚ್ಚರಿಸಿದ್ದೆವು ಎಂದು ವಾಟ್ಸ್ ಆಪ್ ನವರು ಪ್ರತ್ಯುತ್ತರ ನೀಡಿದರು. ಮೇ ತಿಂಗಳಲ್ಲಿ ಮತ್ತು ನಂತರ ಮತ್ತೆ ಸಪ್ಟಂಬರಿನಲ್ಲಿ ಈ ಎಚ್ಚರಿಕೆಯನ್ನು ನೀಡಿರುವುದಾಗಿ ಅವರು ಹೇಳಿದ್ದಾರೆ. ಸರಕಾರದ ಹೇಳಿಕೆಗೆ ಉತ್ತರವಾಗಿ ವಾಟ್ಸ್ ಆಪ್ ಮೇ ತಿಂಗಳಲ್ಲಿ ಕಳಿಸಿದ ಟಿಪ್ಪಣಿ ಮತ್ತು ಸಪ್ಟಂಬರ್ನಲ್ಲಿ ಕಳಿಸಿದ ಪತ್ರವನ್ನು ಲಗತ್ತಿಸಿತ್ತು.
ನಂತರ, ಸರಕಾರ ಇದನ್ನು ದೃಢ ಪಡಿಸಿತು, 121 ಭಾರತೀಯರನ್ನು ಪೆಗಸಸ್ ಬೇಹುಗಾರಿಕೆ ಸಾಧನ ಗುರಿ ಮಾಡಿರುವ ಮಾಹಿತಿಯನ್ನು ಸಪ್ಟಂಬರ್ ನಲ್ಲಿ ಪಡೆದಿರುವುದಾಗಿ ಹೇಳಿತು, ಆದರೆ ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಪ್ರಕಾರ ಈ ಪತ್ರ ಬಹಳ ಅಸ್ಪಷ್ಟವಾಗಿತ್ತು.
ವಾಟ್ಸ್ ಆಪ್ ಸರಕಾರದೊಂದಿಗೆ ಹಂಚಿಕೊಂಡ ಮಾಹಿತಿಯ ವಿವರಗಳನ್ನು ನೀಡಿರುವುದು, ಈ ಬೇಹುಗಾರಿಕೆಗೆ ಗುರಿಯಾದ ಜನಗಳ ಹೆಸರುಗಳೆಲ್ಲ ಸರಕಾರ ಮತ್ತು ಅದರ ಧೋರಣೆಗಳ ಟೀಕಾಕಾರರಾಗಿರುವ ಸುಪರಿಚಿತ ಕಾರ್ಯಕರ್ತರು ಮತ್ತು ಪತ್ರಕರ್ತರದ್ದಾಗಿರುವುದು, ಈ ಬಗ್ಗೆ ತಮಗೆ ಗೊತ್ತಿರಲಿಲ್ಲ ಎಂದು ನಟಿಸುವ ಸರಕಾರದ ಅಸಮರ್ಪಕ ಮತ್ತು ಕುಂಟು ನೆವವೊಡ್ಡುವ ಪ್ರಯತ್ನಗಳು-ಇವೆಲ್ಲವೂ ಸರಕಾರವೇ ತನ್ನನ್ನು ಟೀಕಿಸುವವರ ಖಾತೆಗಳನ್ನು ಸೀಳಲು ಇಸ್ರೇಲೀ ಬೇಹುಗಾರಿಕೆ ಸಾಧನವನ್ನು ಬಳಸುವಲ್ಲಿ ಶಾಮೀಲಾಗಿದೆ ಎಂಬ ಸಂದೇಹಗಳನ್ನು ದೃಢಪಡಿಸುತ್ತವೆ. ವಾಟ್ಸ್ ಆಪ್ ಸರಕಾರಕ್ಕೆ ನೀಡಿರುವ ಹೆಸರುಗಳಲ್ಲಿ ಭೀಮ-ಕೋರೆಗಾಂವ್ ವಿಷಯದಲ್ಲಿ ಆಪಾದಿತರಾಗಿರುವವರು ಮತ್ತು ಅವರ ರಕ್ಷಣೆಗೆ ನಿಂತಿರುವ ವಕೀಲರಲ್ಲಿ ಹಲವರ ಹೆಸರುಗಳು ಇವೆ. ಆದ್ದರಿಂದ ಇವೆರಡರ ನಡುವಿನ ಸಂಬಂಧ ಸಾಕಷ್ಟು ಸ್ಪಷ್ಟವಾಗಿದೆ.
ತನ್ನ ಬೇಹುಗಾರಿಕೆ ತಂತ್ರಜ್ಞಾನವನ್ನು ಸರಕಾರಗಳಿಗೆ ಮತ್ತು ಸರಕಾರೀ ಏಜೆನ್ಸಿಗಳಿಗೆ ಮಾತ್ರ ನೀಡುವುದು ಎಂದು ಅದನ್ನು ಉತ್ಪಾದಿಸಿದ ಎನ್ ಎಸ್ ಒ ಕಂಪನಿ ಹೇಳಿಕೆ ನೀಡಿದೆ. ಈ ಬೇಹುಗಾರಿಕೆ ತಂತ್ರಜ್ಞಾನ ವಿಪರೀತ ವೆಚ್ಚದಾಯಕವಾಗಿದ್ದು ಯಾವುದೇ ಖಾಸಗಿ ಸಂಸ್ಥೆಗೆ ಇದರ ವೆಚ್ಚ ಭರಿಸುವುದು ಸಾಧ್ಯವಿಲ್ಲ ಎಂಬುದನ್ನೂ ಇಲ್ಲಿ ಗಮನಿಸಬಹುದು.
ಈ ಇಡೀ ಕೊಳಕು ವ್ಯವಹಾರದ ಆಮೂಲಾಗ್ರ ತನಿಖೆ ನಡೆಯಬೇಕು. ಸರಕಾರೀ ಏಜೆನ್ಸಿಗಳು ಯಾವುದಾದರೂ ಈ ಕಾನೂನುಬಾಹಿರ ಕೃತ್ಯಕ್ಕೆ ಕಾರಣರಾಗಿದ್ದರೆ, ಅದಕ್ಕೆ ಹೊಣೆಗಾರರಾದವರನ್ನು ಶಿಕ್ಷಿಸಬೇಕು. ಈ ಪ್ರಕರಣ ಸಾಮಾನ್ಯ ನಾಗರಿಕರ ಹಕ್ಕುಗಳು ಮತ್ತು ಖಾಸಗಿತ್ವವನ್ನು ಕಾಪಾಡಿಕೊಳುವ್ಳ ಒಂದು ಸಮಗ್ರ ಮಾಹಿತಿ ರಕ್ಷಣಾ ಕಾಯ್ದೆಯನ್ನು ತರಬೇಕಾದ ತುರ್ತನ್ನು ಎತ್ತಿತೋರಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ6 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
-
ದಿನದ ಸುದ್ದಿ2 days ago
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ