ದಿನದ ಸುದ್ದಿ
ನೋಟು ರದ್ದು ಸುದ್ದಿಯಲ್ಲಿ ಅಮಿತ್ ಶಾ ಹೆಸರು ಡಿಲಿಟ್!
ಸುದ್ದಿದಿನ ಡೆಸ್ಕ್: ನೋಟು ರದ್ದತಿ ಸಮಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ನ ಬ್ಯಾಂಕ್ವೊಂದರಲ್ಲಿಅತಿ ಹೆಚ್ಚು ನೋಟುಗಳು ಹೊಸ ನೋಟುಗಳಿಗೆ ಬದಲಾವಣೆಯಾಗಿರುವ ಸುದ್ದಿಯನ್ನು ದೇಶದ ಪ್ರಮುಖ ಪತ್ರಿಕೆಗಳ ವೆಬ್ ಪೋರ್ಟಲ್ಗಳು ಈಗ ಅದನ್ನು ಡಿಲಿಟ್ ಮಾಡಿವೆ.
ಈ ಕುರಿತು ಬೂಮ್ ನ್ಯೂಸ್ ಪೋರ್ಟಲ್ ವರದಿಮಾಡಿದ್ದು, ಈಗ ಆ ಪೋಸ್ಟ್ ವೈರಲ್ ಆಗುತ್ತಿದೆ.
ಫಸ್ಟ್ ಪೋಸ್ಟ್, ನ್ಯೂಸ್ 18 ಡಾಟ್ ಕಾಂ, ಟೈಮ್ಸ್ ನೌ ಹಾಗೂ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವೆಬ್ ತಾಣಗಳು ಶಾ ಅವರ ಹೆಸರು ತಳಕುಹಾಕಿಕೊಂಡಿರುವ ಈ ಸುದ್ದಿಯನ್ನು ಡಿಲಿಟ್ ಮಾಡಿದ್ದು, ಎಕನಾಮಿಕ್ ಟೈಮ್ಸ್ ಸುದ್ದಿ ತಾಣವು ಒಂದು ಹೆಜ್ಜೆ ಮುಂದೆ ಹೋಗಿ ಅಮಿತ್ ಶಾ ಹೆಸರನ್ನು ಮಾತ್ರ ತೆಗೆದುಹಾಕಿದೆ.
ಇಟಿ ವೆಬ್ ಪೋರ್ಟಲ್ನಲ್ಲಿರುವ ಈ ಸುದ್ದಿಯಲ್ಲಿರುವ ರೀಡ್ ಮೋರ್ ಬಟನ್ಅನ್ನು ಕ್ಲಿಕ್ ಮಾಡಿದಾಗ ಅಲ್ಲಿ ಬಿಜೆಪಿ ನಾಯಕ ಎಂದಷ್ಟೇ ಉಲ್ಲೇಖವಾಗಿದೆ. ಮೊದಲ ಪ್ಯಾರಾದಲ್ಲಿ ದಾಖಲಾಗಿದ್ದ ಅಮಿತ್ ಶಾ ಅವರ ಹೆಸರನ್ನು ಉದ್ದೇಶಪೂರ್ವಕವಾಗಿಯೇ ಡಿಲಿಟ್ ಮಾಡಲಾಗಿದೆ ಎಂಬುದು ಇದರ ಅರ್ಥ.
ಈ ಕುರಿತು ಹೆಚ್ಚಿನ ಮಾಹಿತಿಪಡೆಯುವ ಸಲುವಾಗಿ ಬೂಮ್ ಪತ್ರಿಕೆ ವರದಿಗಾರ ಇಟಿ ವೆಬ್ ತಾಣದ ಮುಖ್ಯಸ್ಥ ದೀಪಕ್ ಅಜ್ವಾನಿ ಅವರನ್ನು ಸಂಪರ್ಕಿಸಿದ್ದು, ಇದರ ಬಗ್ಗೆ ಪ್ರತಿಕ್ರಿಯಿಸಲು ಅವರು ಒಪ್ಪಿಲ್ಲ.
ಇಂಡಿಯನ್ ಎಕ್ಸ್ಪ್ರೆಸ್ ವೆಬ್ ತಾಣದಲ್ಲಿ ಜೂ.21ರಂದು ಸುದ್ದಿ ಅಪ್ಲೋಡ್ ಮಾಡಲಾಗಿದ್ದು, ನಾಲ್ಕು ಗಂಟೆಗಳ ಕಾಲ ಇದು ಆನ್ಲೈನ್ನಲ್ಲಿ ಲಭ್ಯವಿತ್ತು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
“ಐಎಎನ್ಎಸ್ ಸುದ್ದಿಸಂಸ್ಥೆಯ ಸುದ್ದಿಗಳನ್ನು ಡೆಸ್ಕ್ ವಿಭಾಗದವರು ಪರಿಶೀಲಿಸಿ ಅಪ್ಲೋಡ್ ಮಾಡುತ್ತಾರೆ. ಹಿರಿಯರ ಸೂಚನೆ ಮೇರೆಗಷ್ಟೆ ಸುದ್ದಿಗಳನ್ನು ಡಿಲಿಟ್ ಮಾಡಲಾಗುತ್ತದೆ,’ ಎಂದು ಎಕ್ಸ್ಪ್ರೆಸ್ ಮೂಲಗಳು ಬೂಮ್ ಸುದ್ದಿತಾಣಕ್ಕೆ ತಿಳಿಸಿದ್ದಾರೆ.
ಬೂಮ್ ಸುದ್ದಿ ತಾಣವು ಎಕ್ಸ್ಪ್ರೆಸ್ ಸುದ್ದಿ ತಾಣದ ಮುಖ್ಯಸ್ಥ ಸುರೇಶ್ ಇವಾತುರಿ ಅವರನ್ನು ಸಂಪರ್ಕಿಸಿದ್ದು ಈ ಕುರಿತು ಸದ್ಯದಲ್ಲೇ ವಿವರಣೆ ನೀಡುವುದಾಗಿ ತಿಳಿಸಿದ್ದಾರೆ. ಫಸ್ಟ್ಪೋಸ್ಟ್ ಪ್ರಕಟಿಸಿದ್ದ ಸುದ್ದಿಯ ಆರ್ಕೈವ್ಅನ್ನು ಬೂಮ್ ತಾಣವು ಪತ್ತೆ ಮಾಡಿದ್ದು, ಈ ಸುದಿಯಲ್ಲಿ ಅಮಿತ್ ಶಾ ಅವರ ಹೆಸರಿರುವುದು ಪಕ್ಕಾ ಆಗಿದೆ. ಆದರೆ, ದೇಶದ ಬಹುತೇಕ ವಾಹಿನಿಗಳು, ಪತ್ರಿಕೆಗಳು ಈ ಸುದ್ದಿಯನ್ನು ಏಕೆ ಪ್ರಕಟಿಸಿಲ್ಲ. ಹಾಗೂ ವೆಬ್ ತಾಣದಲ್ಲಿ ಸುದ್ದಿಯನ್ನು ಡಿಲಿಟ್ ಮಾಡಿದ್ದು ಏಕೆ ಎಂಬುದು ಈವರೆಗೂ ಗೊತ್ತಾಗಿಲ್ಲ.
ಸುದ್ದಿಯಲ್ಲಿ ಏನಿತ್ತು?
ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ ಸಹಕಾರ ಬ್ಯಾಂಕ್ನಲ್ಲಿ 745.59 ಕೋಟಿ ರೂ. ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾವಣೆ ಮಾಡಿಕೊಟ್ಟಿರುವುದು ಆರ್ಟಿಐ ಅರ್ಜಿ ಮೂಲಕ ಬೆಳಕಿಗೆ ಬಂದಿರುವುದು ಫಸ್ಟ್ಪೋಸ್ಟ್ನ ಆರ್ಕೈವ್ ವರ್ಷನ್ನಲ್ಲಿಸಿಕ್ಕಿದೆ.
ಈ ಕುರಿತು ಐಎಎನ್ಎಸ್ ಸುದ್ದಿಸಂಸ್ಥೆಯು ಜೂ.21ರಂದು ಸುದ್ದಿಯೊಂದನ್ನು ಪ್ರಕಟಿಸಿದೆ ಮನೋರಂಜನ್ ರೈ ಎಂಬುವವರು ಸಲ್ಲಿಸಿದ್ದ ಆರ್ಟಿಐ ಅರ್ಜಿಯೊಂದರಿಂದ ಈ ಮಾಹಿತಿ ಸ್ಪಷ್ಟವಾಗಿದೆ.
ಸಹಕಾರಿ ಬ್ಯಾಂಕ್ನ ವೆಬ್ ತಾಣದಲ್ಲಿರುವ ಮಾಹಿತಿಗಳ ಪ್ರಕಾರ ಹಲವು ವರ್ಷಗಳಿಂದ ಈ ಬ್ಯಾಂಕ್ನ ನಿರ್ದೇಶಕರಾಗಿ ಅಮಿತ್ ಶಾ ಕಾರ್ಯ ನಿರ್ವಹಿಸಿದ್ದಾರೆ. ಮಾರ್ಚ್ 31 , 2017ರ ಹೊತ್ತಿಗೆ ಈ ಬ್ಯಾಂಕ್ನ ಒಟ್ಟು ಡೆಪಾಸಿಟ್ 5,050 ಕೋಟಿ ರೂ ತಲುಪಿತ್ತು. 2016-17ನೇ ಸಾಲಿನಲ್ಲಿ ಈ ಬ್ಯಾಂಕ್ನ ನಿವ್ವಳ ಲಾಭ 14.31 ಕೋಟಿ ರೂ.ಗಳಾಗಿದ್ದವು ಎಂಬುದನ್ನು ಆರ್ಟಿಐ ಮಾಹಿತಿ ಸ್ಪಷ್ಟವಾಗಿ ಹೇಳಿದೆ.
ಸುದ್ದಿ ನಿಜ ಎಂದ ಐಎಎನ್ಎಸ್
ಐಎಎನ್ಎಸ್ ತಾನು ಈ ಸುದ್ದಿ ಪ್ರಕಟಿಸಿರುವುದಾಗಿ ಒಪ್ಪಿಕೊಂಡಿದೆ. ಬೂಮ್ ಸುದ್ದಿತಾಣವು ಐಎಎನ್ಎಸ್ ಸುದ್ದಿಸಂಸ್ಥೆ ಮುಖ್ಯಸ್ಥ ಹರ್ದೇವ್ ಸನೊತ್ರಾ ಅವರನ್ನು ಸಂಪರ್ಕಿಸಿದಾಗ, ಇಲ್ಲಿ ಮುಚ್ಚಿಡುವುದು ಏನೂ ಇಲ್ಲ. ಆರ್ಟಿಐ ಅರ್ಜಿಯೊಂದಕ್ಕೆ ಸಿಕ್ಕಿರುವ ಮಾಹಿತಿಯನ್ನು ನಾವು ಸುದ್ದಿ ರೂಪದಲ್ಲಿ ಕೊಟ್ಟಿದ್ದೆವೆ ಎಂದು ಪ್ರತಿಕ್ರಿಯಿಸಿದ್ದಾರೆ.
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?