ದಿನದ ಸುದ್ದಿ
ಕೊರೋನಾ ರೋಗ ನಿರೋಧಕ ಶಕ್ತಿವರ್ಧನೆ ತಂತ್ರಗಳು
ಸುದ್ದಿದಿನ,ದಾವಣಗೆರೆ : ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ರೋಗನಿರೋಧಕ ಶಕ್ತಿವರ್ಧನೆ ಮತ್ತು ಸದೃಢ ಆರೋಗ್ಯಕ್ಕಾಗಿ ಆಯುರ್ವೇದ ಸಲಹಾ ಸೂಚಿಯಲ್ಲಿ ತಿಳಿಸಿರುವಂತೆ ಕೋವಿಡ್-19 ವೈರಸ್ ತಡೆಗಟ್ಟುವ ಹಂತ-ಎರಡು ತಂತ್ರವನ್ನು ಅನುಸರಿಸಲು ಸೂಚಿಸಲಾಗಿದೆ.
- ಹಾಟ್ ಸ್ಪಾಟ್ ಮತ್ತು ಬಫರ್ ಝೋನ್ ವಲಯದಲ್ಲಿ ವಾಸಿಸುವ ಜನರು.
- 60 ವರ್ಷಕ್ಕಿಂತ ಮೇಲ್ಪಟ್ಟ ಆರೋಗ್ಯವಂತ ವೃದ್ಧರು.
- ಬೇರೆ ಖಾಯಿಲೆಗಳಿಂದ ಬಳಲುತ್ತಿರುವ 50 ವರ್ಷಕ್ಕಿಂತ ಮೇಲ್ಪಟ್ಟವರು.
ಆಗಾಗ್ಗೆ ಉಸಿರಾಟದ ಕಾಯಿಲೆಯ ಇತಿಹಾಸ ಹೊಂದಿರುವ ಯಾವುದೇ ವಯಸ್ಸಿನ ಜನರು, ಸುತ್ತುವರಿದ ಗಾಳಿ ಕಲುಷಿತ ಪ್ರದೇಶದಲ್ಲಿ ವಾಸಿಸುವ ಜನರು ಮತ್ತುಧೂಮಪಾನಿಗಳು (ಸಕ್ರಿಯ ಮತ್ತು ನಿಷ್ಕ್ರಿಯ) ಆರೋಗ್ಯ ಸೇವೆ ಕಾರ್ಯಕರ್ತರು ಈ ಮೇಲ್ಕಂಡ ವರ್ಗದವರು ಈ ಕೆಳಕಂಡ ಕಾರ್ಯತಂತ್ರಗಳನ್ನು ಅನುಸರಿಸಿ ರೋಗನಿರೋಧಕ ಶಕ್ತಿಯನ್ನು ವರ್ಧಿಸಿಕೊಂಡು ಸದೃಢ ಆರೋಗ್ಯವನ್ನು ಉತ್ತೇಜಿಸಿಕೊಳ್ಳಬಹುದಾಗಿರುತ್ತದೆ.
ನಿರೋಧಕ ಕಾರ್ಯತಂತ್ರ – 2ನೇ ಹಂತ
ಗುರಿ
- ಉತ್ತಮ ಹಸಿವು, ಉತ್ತಮ ನಿದ್ರೆ, ಮಾನಸಿಕ ಶಾಂತಿಯನ್ನು ಕಾಪಾಡಲು ಮತ್ತು ಪೋಷಕಾಂಶವುಳ್ಳ ಆಹಾರವನ್ನು ಒದಗಿಸುವುದರ ಜೊತೆಗೆ ಅಲ್ಪ ಪ್ರಮಾಣದ ಔಷಧಿಯೊಂದಿಗೆ ರೋಗ ನಿರೋಧಕ ಶಕ್ತಿಯನ್ನು ವರ್ಧಿಸುವುದು.
- ಆರೋಗ್ಯವಂತ ವೃದ್ಧರು, ಬೇರೆ ಖಾಯಿಲೆಗಳಿಂದ ಬಳಲುತ್ತಿರುವ 50 ವರ್ಷಕ್ಕಿಂತ ಮೇಲ್ಪಟ್ಟವರು ಆರೋಗ್ಯ ಸೇವೆ ಕಾರ್ಯಕರ್ತರು, ಆಗಾಗ್ಗೆ ಉಸಿರಾಟದ ಕಾಯಿಲೆಯ ಇತಿಹಾಸ ಹೊಂದಿರುವ ಯಾವುದೇ ವಯಸ್ಸಿನ ಜನರು, ಸುತ್ತುವರಿದ ಗಾಳಿ ಕಲುಷಿತ ಪ್ರದೇಶದಲ್ಲಿ ವಾಸಿಸುವ ಜನರು ಮತ್ತು ಧೂಮಪಾನಿಗಳು(ಸಕ್ರಿಯ ಮತ್ತು ನಿಷ್ಕ್ರಿಯ), ಆಯುರ್ವೇದದಿಂದ ತಡೆಗಟ್ಟುವ ಚಿಕಿತ್ಸೆಯನ್ನು ತೆಗೆದುಕೊಳ್ಳಲು ಸಿದ್ಧರಿರುವವರು.
ಕಾರ್ಯತಂತ್ರಗಳು
- ಬೇಗನೆ ಮಲಗುವುದು, ಬೇಗನೆ ಏಳುವುದು.
- ಹಲ್ಲುಜ್ಜಿದ ನಂತರ, 2 ಹನಿ ಅಣುತೈಲ ಅಥವಾ ಎಳ್ಳೆಣ್ಣೆಯನ್ನು ಮೂಗಿನ ಎರಡು ಹೊಳ್ಳೆಗಳಲ್ಲಿ ಹಾಕುವುದು (ಪ್ರತಿಮರ್ಷ ನಸ್ಯ)
- ತದನಂತರ 50 ಮಿಲೀ ತ್ರಿಫಲಾ ಕಷಾಯವನ್ನು (ನೆಲ್ಲಿಕಾಯಿ, ಅಳಲೆಕಾಯಿ, ತಾರೆಕಾಯಿ) 3-5 ನಿಮಿಷಗಳ ಕಾಲ ಮೌಖಿಕ ಕುಳಿಯಲ್ಲಿ (ಬಾಯಿಯಲ್ಲಿ) ಒಂದು ಚಿಟಿಕೆ ಟಂಕಣ ಭಸ್ಮ (ಶುದ್ಧೀಕರಿಸಿದ ಬೋರಕ್ಸ್) ದೊಂದಿಗೆ ಹಿಡಿದಿಟ್ಟುಕೊಳ್ಳುವುದು ಅಥವಾ 1 ಟೇಬಲ್ ಸ್ಪೂನ್ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು 3-5 ನಿಮಿಷಗಳ ಕಾಲ ಬಾಯಲ್ಲಿ ತಿರುಗಾಡಿಸಿ ಉಗಳಬೇಕು ನಂತರ ಬಿಸಿ ನೀರಿನಿಂದ ಬಾಯಿ ಮುಕ್ಕಳಿಸುವುದು ಇದನ್ನು ದಿನಕ್ಕೆ ಎರಡು ಬಾರಿ ಮಾಡುವುದು.
- ಪುದೀನ ಎಲೆಗಳು ಹಾಗೂ ಅಜವಾಯನದೊಂದಿಗೆ ಕುದಿಸಿದ ನೀರಿನಿಂದ ಹಬೆ ತೆಗೆದುಕೊಳ್ಳುವುದು.
- ಮೂವತ್ತು ನಿಮಿಷಗಳ ಕಾಲ ದೇಹ ಸಡಿಲಗೊಳಿಸುವ ವ್ಯಾಯಾಮ, ಸೂರ್ಯ ನಮಸ್ಕಾರ (6 ಸುತ್ತು) ಯಾವುದಾದರೂ ನಾಲ್ಕು ಆಸನಗಳು, ಪ್ರಾಣಾಯಾಮ ಮತ್ತು ಧ್ಯಾನ.
- 4 ತುಳಸಿ ಎಲೆಗಳು, ನಿಂಬೆರಸ, ಒಣ ದ್ರಾಕ್ಷಿಯೊಂದಿಗೆ ಈ ಕೆಳಗೆ ಹೇಳಿರುವ ಯಾವುದಾದರೊಂದು ಮೂಲಿಕೆಯನ್ನು ಅರ್ಧ ಗ್ರಾಂ ನಂತೆ ಸೇರಿಸಿ(ಪ್ರತಿದಿನ ಒಂದು ಮೂಲಿಕೆ) ಗಿಡಮೂಲಿಕೆ ಚಹಾವನ್ನು ತಯಾರಿಸಿ ದಿನಕ್ಕೆ ಒಂದರಿಂದ ಎರಡು ಭಾರಿ ಸೇವಿಸುವುದು.
1) ದಾಲ್ಚಿನಿ
2) ಕರಿಮೆಣಸು
3) ಶುಂಠಿ - ಅರಿಶಿನ, ಜೀರಿಗೆ, ಕೊತ್ತಂಬರಿ ಹಾಗೂ ಬೆಳ್ಳುಳ್ಳಿಯನ್ನು ದಿನನಿತ್ಯದ ಅಡಿಗೆಯಲ್ಲಿ ಉಪಯೋಗಿಸುವುದು.
- ಒಂದು ಲೀಟರ್ ಕುದಿಯುವ ನೀರಿಗೆ 8 ತುಳಸಿ ಎಲೆಗಳು ಅಥವಾ ಶುಂಠಿ, ಲಾವಂಚ ಸೇರಿಸಿ 2-3 ನಿಮಿಷಗಳ ಕಾಲ ಮತ್ತೆ ಕುದಿಸಿ ಸೋಸಿ ಕುಡಿಯುವುದು.
- ಪ್ರತಿದಿನ ಸಂಜೆ 10 ಗ್ರಾಂ ಅಮೃತಬಳ್ಳಿ ಕಾಂಡ ಅಥವಾ ಷಡಂಗ ಪಾನೀಯ ಕಷಾಯ ಚೂರ್ಣವನ್ನು 640 ಮಿ.ಲೀ. ನೀರಿಗೆ ಸೇರಿಸಿ 320 ಮಿ.ಲೀ. ಆಗುವವರೆಗು ಕುದಿಸಿ ಸೋಸಿ ತಯಾರಿಸಿದ ಅಮೃತಬಳ್ಳಿ ಪಾನೀಯ ಅಥವಾ ಷಡಂಗ ಪಾನೀಯವನ್ನು ಕುಡಿಯುವುದು.
- ಸಂಶಮನಿವಟಿ, 2 ಮಾತ್ರೆಗಳು, ದಿನಕ್ಕೆ ಎರಡು ಬಾರಿ, ಊಟದ ನಂತರ, 15 ದಿವಸಗಳ ಕಾಲ.
- 2 ಟೀ ಚಮಚ ಅಗಸ್ತ್ಯ ರಸಾಯನವನ್ನು ಬಿಸಿ ನೀರಿನೊಂದಿಗೆ ಸೇವಿಸುವುದು.
- ಒಂದು ಲೋಟ ಕುದಿಯುವ ಹಾಲಿಗೆ 1/3 ಟೀ ಚಮಚ ಅರಿಶಿನ ಪುಡಿ, 1/3 ಟೀ ಚಮಚ ಅಶ್ವಗಂಧ ಚೂರ್ಣವನ್ನು ಸೇರಿಸಿ, ನಂತರ ಹಾಲನ್ನು 2 ನಿಮಿಷ ಕುದಿಸಿ, ಸೋಸಿ ತಯಾರಿಸಿದ ಗೋಲ್ಡನ್ ಮಿಲ್ಕ್ನ್ನು ಪ್ರತಿದಿನ ರಾತ್ರಿ ಮಲಗುವ ಮುನ್ನ ಸೇವಿಸುವುದು.
ನಿಗದಿಪಡಿಸಿದ ಸಮಯ ವೈದ್ಯರ ಹೆಸರು ಮತ್ತು ತಜ್ಞತೆ ಮೊಬೈಲ್ ಸಂಖ್ಯೆ,ಆಯುರ್ವೇದ ವೈದ್ಯಾಧಿಕಾರಿಗಳು
- ಬೆಳಗ್ಗೆ 08:00 ರಿಂದ ಮಧ್ಯಾಹ್ನ 12:00
- ಡಾ|| ಶಾಂತ ಮೂರ್ತಿ.ಎ. ಬಿ.ಎ.ಎಂ.ಎಸ್. 9448346798
- ಡಾ|| ಮಲ್ಲಿಕಾರ್ಜುನ.ಬಿ.ಎಸ್. ಬಿ.ಎ.ಎಂ.ಎಸ್. 9448415175
- ಡಾ|| ಕಿಶೋರಿ.ಕೆ.ಎಸ್. ಬಿ.ಎ.ಎಂ.ಎಸ್. 8197719498
- ಡಾ|| ಅನುರಾಧ.ಎಸ್.ಎಸ್. ಬಿ.ಎ.ಎಂ.ಎಸ್. 9986743079
- ಡಾ|| ಸಯ್ಯುದ್ ಶಂಷುದ್ದೀನ್. ಬಿ.ಎ.ಎಂ.ಎಸ್. 9448567574
- ಡಾ|| ಸುಧಾ.ಹೆಚ್.ಎಂ. ಬಿ.ಎ.ಎಂ.ಎಸ್., ಎಂ.ಎಸ್. (ಶಲ್ಯತಂತ್ರ). 9880132397
- ಡಾ|| ಸಿದ್ದೇಶ್.ಈ.ಬಿಸನಳ್ಳಿ. ಬಿ.ಎ.ಎಂ.ಎಸ್. 9663666426
- ಮಧ್ಯಾಹ್ನ 12:00 ರಿಂದ ಸಂಜೆ 04:00
- ಡಾ|| ರೇವ್ಯಾ ನಾಯ್ಕ.ಟಿ. ಬಿ.ಎ.ಎಂ.ಎಸ್. 9886145132
- ಡಾ|| ಸುಚಿತ್ರಾ.ಎಸ್.ಎಸ್. ಬಿ.ಎ.ಎಂ.ಎಸ್., ಎಂ.ಡಿ. (ಕಾಯಚಿಕಿತ್ಸ). 9844428797
- ಡಾ|| ಸುರೇಶ್.ಎಂ.ಸಿ. ಬಿ.ಎ.ಎಂ.ಎಸ್. 9448423933
- ಡಾ|| ಸದಾಶಿವ.ಕೆ. ಬಿ.ಎ.ಎಂ.ಎಸ್. 9902183131
- ಡಾ|| ಶಾಲಿನಿ.ಡಿ. ಬಿ.ಎ.ಎಂ.ಎಸ್. 8762294359
- ಡಾ|| ದ್ಯಾವನ್ ಗೌಡ.ಬಿ.ಹೆಚ್. ಬಿ.ಎ.ಎಂ.ಎಸ್. 9448534506
- ಸಂಜೆ 04:00 ರಿಂದ ರಾತ್ರಿ 08:00
- ಡಾ|| ಚಂದ್ರಕಾಂತ್.ಎಸ್.ನಾಗಸಮುದ್ರ. ಬಿ.ಎ.ಎಂ.ಎಸ್. 9449361108
- ಡಾ|| ಪ್ರೀತಿ.ಡಿ.ಎಸ್. ಬಿ.ಎ.ಎಂ.ಎಸ್. 9731155440
- ಡಾ|| ಲಿಂಗರಾಜೇಂದ್ರ.ಎನ್.ಕೆ. ಬಿ.ಎ.ಎಂ.ಎಸ್. 9448414906
- ಡಾ|| ಶಿಲ್ಪ.ಎಸ್.ಟಿ. ಬಿ.ಎ.ಎಂ.ಎಸ್. 9986081977
ಹೆಚ್ಚಿನ ಮಾಹಿತಿಗಾಗಿ ಈ ಮೇಲ್ಕಂಡ ಆಯುರ್ವೇದ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಕವಿತೆ | ನೆನಪು