Connect with us

ದಿನದ ಸುದ್ದಿ

ಮೀಸಲಾತಿಯ ಜನಕ ‘ಛತ್ರಪತಿ ಶಾಹು ಮಹರಾಜ್’ ಬಗ್ಗೆ ನಿಮಗೆಷ್ಟು ಗೊತ್ತು ?

Published

on

ದು ಒಂದು ಪುರೋಹಿತಶಾಹಿಗಳ ಕಾಲ, ಚಾತುರ್ವರ್ಣ ಪದ್ದತಿಗಳು ಶ್ರೇಣೆಕೃತ ಜಾತಿ ವ್ಯವಸ್ಥೆಗಳು ತಾಂಡವವಾಡುತ್ತಿದ್ದಂತಹ ಕಾಲ, ಪುರೋಹಿತಶಾಹಿಗಳು ಬಹುಜನರನ್ನು ಮೂಡನಂಬಿಕೆಗಳಿಗೆ ತಲ್ಲಲ್ಪಟ್ಟಂತಹ ಕಾಲ, ಬಹುಜನರನ್ನು ಬ್ರಾಹ್ಮಣರ ಸೇವಕರಾಗಿ, ಗುಲಾಮರನ್ನಾಗಿ ಮಾಡಿಕೊಂಡಿದ್ದಂತಹ ಕಾಲ, ಅಸ್ಪೃಶ್ಯರನ್ನು ಹಂದಿ ನಾಯಿಗಳನ್ನು ಹೊಡೆದೋಡಿಸುತ್ತಿದ್ದ ಆಗೆ ಹೊಡೆದೋಡಿಸುತ್ತಿದ್ದಂತಹ ಕಾಲ, ಇಂತಹ ಕಾಲದಲ್ಲಿ ಬಹುಜನರಿಗಾಗಿ ಅವರ ರಕ್ಷಣೆಗಾಗಿ, ಏಳಿಗೆಗಾಗಿ ಒಬ್ಬ ಮಹಾ ಮೇಧಾವಿ ಪುರುಷನೊಬ್ಬ ಹುಟ್ಟುತ್ತಾರೆ ಅವರೇ “ಛತ್ರಪತಿ ಶಾಹು ಮಹಾರಾಜ್”. ಶಾಹುರವರು ಹುಟ್ಟಿದ್ದು 26, ಜೂನ್ 1874 ರಂದು. ಶಾಹು ರವರ ಮೊದಲ ಹೆಸರು ಯಶ್ವಂತರಾವ್ ಘಟ್ಗೆ ಇವರ ತಂದೆಯ ಹೆಸರು ಜಯಸಿಂಹರಾವ್ ಘಟ್ಗೆ, ತಾಯಿ ರಾಧಬಾಯಿ ಇವರು ಮೂಲತಃ ಕೊಲ್ಲಾಪುರದ ಮಹಾರಾಣಿ ಆನಂಧಿಬಾಯಿರವರು ಮಾರ್ಚ್ 11, 1884ರಂದು ಶಾಹುರವರನ್ನು ದತ್ತು ಸ್ವೀಕಾರ ಮಾಡಿಕೊಳ್ಳುತ್ತಾರೆ.

ಶಾಹುರವರಿಗೆ ಏಪ್ರಿಲ್ 2, 1894ರಂದು ಮಹರಾಜರಾಗಿ ಪಟ್ಟಾಭಿಷೇಕವಾಗುತ್ತದೆ.
ಕ್ರಿ.ಶ.1900ರಲ್ಲಿ ಒಂದು ಘಟನೆ ನಡೆಯುತ್ತದೆ ಅದೇನೆಂದರೆ ರಾಜನಾದವನು ಗಂಗಾ ಘಾಟ್ ಎಂಬಲ್ಲಿ ಸ್ನಾನ ಮಾಡಬೇಕಾಗಿರುತ್ತದೆ ಆ ಸಂದರ್ಭದಲ್ಲಿ ರಾಜನಿಗೆ ಬ್ರಾಹ್ಮಣರು ಮಂತ್ರಗಳನ್ನು ಪಟಿಸಬೇಕಾಗಿರುತ್ತದೆ ಆದರೆ ಬ್ರಾಹ್ಮಣರು ರಾಜನಿಗೆ ಪಟಿಸಬೇಕಾಗಿರುವ ಮಂತ್ರಗಳನ್ನು ಹೇಳುತ್ತಿರುವುದಿಲ್ಲ ಬದಲಾಗಿ ಶೂದ್ರ ಮಂತ್ರಗಳನ್ನು ಹೇಳುತ್ತಿರುತ್ತಾರೆ ಇದನ್ನರಿತ ರಾಜರ ಆಪ್ತರೊಬ್ಬರು ಈ ವಿಚಾರವನ್ನು ಮಹಾರಾಜರಿಗೆ ತಿಳಿಸುತ್ತಾರೆ. ಕೂಡಲೇ ಶಾಹುರವರು ಪುರೋಹಿತರನ್ನು ಪ್ರಶ್ನಿಸುತ್ತಾರೆ. ಆದರೆ ಪುರೋಹಿತರು ನೀವು ಶೂದ್ರರಾಗಿರುವ ಕಾರಣದಿಂದ ನಾವು ಶೂದ್ರ ಮಂತ್ರಗಳನ್ನೆ ಹೇಳಬೇಕಾಗುತ್ತದೆ ಎಂದು ಬಹಳ ಸೂಕ್ಷ್ಮವಾಗಿ ಪ್ರತಿಕ್ರಿಯಿಸುತ್ತಾರೆ. ಆಗ ಶಾಹುರವರು “ಒಬ್ಬ ಮಹಾರಾಜನಾಗಿ ನನಗೆ ಈ ಬ್ರಾಹ್ಮಣರಿಂದ ಅವಮಾನವಾಗುತ್ತಿದೆ ಜಾತಿ ಶೋಷಣೇಯಾಗುತ್ತಿದೆ ಎಂದರೆ ಇನ್ನು ಸಾಮನ್ಯ ಜನರಿಗೆ ಇವರಿಂದ ಇನ್ನೇಷ್ಟು ಶೋಷಣೆಯಾಗುತ್ತಿರಬಹುದು ಇವರಿಂದ ನಮ್ಮ ಬಹುಜನರು ಇನ್ನೇಷ್ಟು ಅವಮಾನ ಅಪಮಾನಗಳಿಗೆ ಗುರಿಯಾಗುತ್ತಿರಬಹುದು ಇದಕ್ಕೇನಾದರು ಪರಿಹಾರ ಹುಡುಕಬೇಕು” ಎಂದು ಮನಸ್ಸಿನಲ್ಲಿಯೇ ಮರುಕ ಪಡುತ್ತಾರೆ.

ಕೊಲ್ಲಾಪುರ್-ಶಾಹುಮಹಾರಾಜರ ಪ್ಯಾಲೇಸ್

ರಾಜರ ಆಸ್ಥಾನದಲ್ಲಿ ರಾಜೋಪಾಧ್ಯೆ ಎಂಬ ಪ್ರಧಾನ ಪುರೋಹಿತನಿರುತ್ತಾನೆ. ಇವನಿಗೆ ಬಾಲಗಂಗಾದರ್ ತಿಲಕರ ನೆರವಿರುತ್ತದೆ. ಒಂದು ದಿನ ಮಹಾರಾಜರು ಅಡುಗೆ ಮನೆ ಪರಿಶೀಲನೆ ಮಾಡಲೆಂದು ಅರಮನೆಯ ಅಡುಗೆ ಮನೆಯೊಳಗೆ ಹೋಗಲು ಮುಂದಾಗುತ್ತರೆ ಆದರೆ ರಾಜೋಪಾಧ್ಯೆ ಎಂಬ ಪುರೋಹಿತನು ಶಾಹು ಮಹಾರಜರನ್ನು ನೀವು ಶೂದ್ರರು ಅಡುಗೆ ಮನೆಯೊಳಗೆ ಬರಕೂಡದು ಬಂದರೆ ಅಡುಗೆ ಮನೆಯೆಲ್ಲಾ ಮೈಲಿಗೆಯಾಗುತ್ತದೆ ದಯವಿಟ್ಟು ಒಳಗೆ ಬರಬೇಡಿ ಎಂದು ಮಹಾರಜರನ್ನು ತಡೆಯುತ್ತಾನೆ. ಆಗ ಮಹಾರಜರು ಕೆಂಡಾಮಂಡಲವಾಗುತ್ತಾರೆ ಮಹರಾಜನಾದ ನನಗೆ ಜಾತಿನಿಂದನೆ ಮಾಡುತ್ತೀರ? ನಿಮಗೆ ಕೆಲಸ ಕೊಟ್ಟು, ಹಣಕೊಟ್ಟು, ಇರೋದಕ್ಕೆ ಮನೆಕೊಟ್ಟು ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಟ್ಟಿರುವ ನನಗೆ ಜಾತಿನಿಂದನೆಯೇ? ಈ ಕ್ಷಣದಿಂದ ನೀನು ನನ್ನ ಆಸ್ಥಾನದಲ್ಲಿರಕೂಡದೆಂದು 06 ಮೇ1902 ರಂದು ಅವನನ್ನು ಸ್ಥಾನದಿಂದ ವಜಾ ಮಾಡುತ್ತಾರೆ.

ಶಾಹುರವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲು ಲಂಡನ್ನಿಗೆ ತೆರಲಿರುತ್ತಾರೆ ಅಲ್ಲಿ ಅವರಿಗೆ ತಾವು ಅನುಭವಿಸಿದ ಕೆಲವು ಘಟನೆಗಳು ನೆನಪಿಗೆ ಬರುತ್ತವೆ ಅದಕ್ಕೆ ಅವರು ಒಂದು ತೀರ್ಮಾನ ಮಾಡುತ್ತಾರೆ ಅಲ್ಲಿಂದ ಒಂದು ಸುದ್ಧಿಯನ್ನು ಕಳುಹಿಸುತ್ತಾರೆ ಅದೇನೆಂದರೆ “ಶೂದ್ರರಿಗೆ 50% ಮೀಸಲಾತಿ” ಭಾರತದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಮೀಸಲಾತಿಯೆಂಬ ಯೋಜನೆಯನ್ನು ಕಂಡುಹಿಡಿದ ಕೀರ್ತಿ ಶಾಹು ಮಹಾರಾಜರಿಗೆ ಸಲ್ಲಬೇಕು.

ಶಾಹು ಮಹಾರಾಜರು ಕಳುಹಿಸಿಕೊಟ್ಟ ಮೀಸಲಾತಿಯ ಸುದ್ಧಿ ಕೇಳಿ ಬ್ರಾಹ್ಮಣರಿಗೆ ಹೃದಯ ಬಡಿತವೇ ನಿಂತಂತಾಯಿತು, ಬಾಲಗಂಗಾದರ್ ತಿಲಕರಿಗಂತೂ ಅಥೀವಾ ಆತಂಕ ಉಂಟಾಯಿತು ಆದ್ದರಿಂದ ಮೀಸಲಾತಿ ವಿಷಯಕ್ಕೆ ಸಂಬಂದಿಸಿದಂತೆ ತಿಲಕರು ವಿರೋದವನ್ನು ವ್ಯಕ್ತಪಡಿಸುತ್ತಾರೆ.

ಮಹಾರಾಜರ ಮೀಸಲಾತಿಯ ವಿಚಾರವನ್ನು ಬಹುತೇಕ ಬ್ರಾಹ್ಮಣರು ವಿರೋಧ ಮಾಡುತ್ತಿರುತ್ತಾರೆ, ಬೇಸೆತ್ತ ಕೆಲವು ಗೂಂಡಗಳಿಂದ ಮಹಾರಾಜರನ್ನು ಕೊಲೆ ಮಾಡುವ ಪ್ರಯತ್ನವು ನಡೆಯುತ್ತದೆ. ಶಾಹುರವರಿದ್ದ ರೈಲಿಗೆ ಬಾಂಬನ್ನು ಸಹ ಇಡಲಾಗುತ್ತದೆ ಆದರೆ ಆ ಕೊಲೆಯ ಪ್ರಯತ್ನವು ವಿಫಲವಾಗಿಬಿಡುತ್ತದೆ.

ಒಮ್ಮೆ ಮಹಾರಾಜರು ಅರಮನೆಯ ಆವರಣದಲ್ಲಿ ಗಾಳಿ ಸಂಚಾರ (walking) ಮಾಡುತ್ತಿರುತ್ತಾರೆ ಆ ಸಮಯದಲ್ಲಿ ಗಣಪತಿರಾವ್ ಎಂಬ ಬ್ರಾಹ್ಮಣ ವಕೀಲ ಶಾಹುರವರನ್ನು ಕಾಣಲು ಬರುತ್ತಾರೆ ಮೀಸಲಾತಿಯ ಬಗ್ಗೆ ಚರ್ಚೆ ಮಾಡುತ್ತಾ ಅರ್ಹತೆಯಿಲ್ಲದವರಿಗೆಲ್ಲಾ ಉದ್ಯೋಗದಲ್ಲಿ, ಶಿಕ್ಷಣದಲ್ಲಿ ಹಾಗೂ ಎಲ್ಲಾ ರಂಗಗಳಲ್ಲೂ ನೀವು ಮೀಸಲಾತಿ ಕೊಟ್ಟರೆ ಪ್ರತಿಭೆಗೆ ದಕ್ಕೆಯುಂಟಾಗುವುದಿಲ್ಲವೇ? ಎಂದು ಮಹಾರಾಜರನ್ನು ಪ್ರಶ್ನಿಸುತ್ತಾನೆ. ಆಗ ಶಾಹು ಮಹಾರಾಜರು ಓ.. ನಿಮಗೆ ಆ ರೀತಿ ಅರ್ಥವಾಗಿದೆಯೇ ಬನ್ನಿ ನನ್ನ ಜೊತೆ ಎಂದು ಆ ವಕೀಲನನ್ನು ಕರೆದುಕೊಂಡು ಸಂಚಾರ(walk) ಮಾಡುತ್ತಾ ಮಾಡುತ್ತಾ ಅರಮನೆಯ ಆವರಣದಲ್ಲಿ ಕುದುರೆಗಳನ್ನು ಕಟ್ಟಿರುವ ಜಾಗಕ್ಕೆ ತಲುಪುತ್ತಾರೆ ಅಲ್ಲಿ ಕುದುರೆಗಳನ್ನು ಗುಂಪು ಗುಂಪುಗಳಾಗಿ ಮಾಡಿ ಮೇವನ್ನು ಹಾಕಲಾಗಿರುತ್ತದೆ ಇದನ್ನು ಗಮನಿಸಿದ ಮಹಾರಾಜರು ಯಾರಲ್ಲಿ ಈ ಕುದುರೆಗಳನ್ನು ಕಟ್ಟಿದವರು ಎಂದಾಗ ಸ್ಥಳದಲ್ಲೇ ಇದ್ದ ಕುದುರೆಗಳನ್ನು ನೋಡಿಕೊಳ್ಳುವವನು ನಾನೇ ಪ್ರಭು ಎನ್ನುತ್ತಾನೆ. ಆಗ ಮಹಾರಾಜರು ಅವನನ್ನು “ಏನಯ್ಯ ನಿನಗೆ ಬುದ್ಧಿ ಇದೆಯಾ? ಕುದುರೆಗಳನ್ನು ಏಕೆ ಈ ರೀತಿ ಗುಂಪುಗುಂಪುಗಳನ್ನಾಗಿ ವಿಂಗಡನೆ ಮಾಡಿ ಬೇರೆ ಬೇರೆ ಕಡೆ ಮೇವನ್ನಕಿದ್ದೀಯಾ? ಎಲ್ಲಾ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬಹುದಾಗಿತ್ತಲ್ಲವೇ? ಎಂದು ಪ್ರಶ್ನಿಸಿ ಜೊತೆಯಲ್ಲಿದ್ದ ವಕೀಲನನ್ನು ಕೇಳುತ್ತಾರೆ ಗಣಪತಿರಾವ್ ರವರೇ ನಾನು ಕೇಳಿದ್ದು ಸರಿ ತಾನೆ? ಎಂದಾಗ ಆ ವಕೀಲ ಹೌದು ಮಹಾರಾಜರೇ ನೀವು ಕೇಳಿದ್ದು ಸರಿಯಾಗಿದೆ ಅವನು ಆ ಕುದುರೆಗಳನ್ನು ಒಂದೇ ಕಡೆ ಬಿಟ್ಟು ಮೇವನ್ನಾಕಬೇಕಿತ್ತು ಎನ್ನುತ್ತಾನೆ. ಆಗ ಸೇವಕನು ಮಹಾರಾಜರ ಪ್ರಶ್ನೆಗಳನ್ನು ಉದ್ದೇಶಿಸಿ “ಮಹಾರಾಜರೇ ಈ ಕುದುರೆಗಳಲ್ಲಿ ಕೆಲವು ವಯಸ್ಸಾಗಿರುವ ಕುದುರೆಗಳಿವೆ, ಗಾಯಗಳಾಗಿ ಪೆಟ್ಟು ಮಾಡಿಕೊಂಡಿರುವ ಕುದುರೆಗಳಿವೆ, ಸಣ್ಣ ಪ್ರಾಯದ ಕುದುರೆಗಳಿವೆ ಹಾಗೂ ದಷ್ಟಪುಷ್ಟವಾದ ಬಲಿಷ್ಟವಾಗಿರುವ ಕುದುರೆಗಳಿವೆ ಈ ಎಲ್ಲಾ ಕುದುರೆಗಳನ್ನು ಒಂದೇ ಕಡೆ ಸೇರಿಸಿ ಮೇವನ್ನಾಕಿದರೆ ಯಾವ ಕುದುರೆಗಳಿಗೆ ಹೆಚ್ಚು ಶಕ್ತಿ ಇದೆಯೋ ಅಂದರೆ ದಷ್ಟಪುಷ್ಟವಾದ ಕುದುರೆಗಳು ಮೇವೆಲ್ಲಾ ತಿಂದು ಬಿಡುತ್ತವೇ ಆಗ ವಯಸ್ಸಾದ ಕುದುರೆಗಳಿಗೆ, ಗಾಯಗಳಾಗಿರುವ ಕುದುರೆಗಳಿಗೆ, ಸಣ್ಣ ಪ್ರಾಯದ ಕುದುರೆಗಳಿಗೆ ಮೇವು ಸಿಗದೇ ದುರ್ಬಲವಾಗಿ ಹಸಿವಿನಿಂದಲೇ ಸತ್ತು ಹೋಗುತ್ತವೇ ಆದ್ದರಿಂದ ವಯಸ್ಸಾದ ಕುದುರೆಗಳಿಗೆ ಒಂದು ಕಡೆ, ಸಣ್ಣ ಪ್ರಾಯದ ಕುದುರೆಗಳಿಗೆ ಒಂದು ಕಡೆ, ಗಾಯಗೊಂಡಿರುವ ಕುದುರೆಗಳಿಗೆ ಒಂದು ಕಡೆ, ಬಲಿಷ್ಟ ಕುದುರೆಗಳಿಗೊಂದು ಕಡೆ ಮೇವನ್ನಾಕಿದ್ದೇನೆ ಆಗ ಎಲ್ಲಾ ಕುದುರೆಗಳಿಗೂ ಮೇವು ಸಿಗುತ್ತದೆ” ಎಂದು ಉತ್ತರಿಸುತ್ತಾನೆ. ಆಗ ಆ ಬ್ರಾಹ್ಮಣ ವಕೀಲನಿಗೆ ಮೀಸಲಾತಿಯ ಬಗ್ಗೆ ಅರ್ಥವಾಗಿ “ಮಹಾರಾಜರೇ ದಯವಿಟ್ಟು ಕ್ಷಮಿಸಿ ಈಗ ನಿಮ್ಮ ಮೀಸಲಾತಿಯ ಬಗ್ಗೆ ನನಗೆ ಸಂಪೂರ್ಣವಾಗಿ ಅರ್ಥವಾಯಿತೆಂದು” ಅಲ್ಲಿಂದ ಒರಟುಹೋಗುತ್ತಾನೆ.

• ಶಾಹು ಮಹಾರಜರು ಅಸ್ಪೃಶ್ಯರಿಗೋಸ್ಕರ 18 ಪ್ರತ್ಯೇಕ ಶಾಲೆಗಳನ್ನು ಸ್ಥಾಪಿಸುತ್ತಾರೆ.

• 1908ರಲ್ಲಿ ವಿಧ್ಯಾಸಂಸ್ಥೆಯನ್ನು ಪ್ರಾರಂಭ ಮಾಡುತ್ತಾರೆ.

• 1896 ರಿಂದ 1912ರ ಅವಧಿಯಲ್ಲಿ ಶೂದ್ರರಿಗೆ 22, ಅಸ್ಪೃಶ್ಯರಿಗೆ 27 ಶಾಲೆಗಳನ್ನು ಸ್ಥಾಪಿಸುತ್ತಾರೆ.

• 1918 ರಲ್ಲಿ ಶೂದ್ರರಿಗೆ ಅರಿವು ಮತ್ತು ಜಾಗೃತಿ ಮೂಡಿಸಲು “ಮೂಕ ನಾಯಕ್” ಎಂಬ ಪತ್ರಿಕೆಯನ್ನು ಪ್ರಾರಂಭಿಸುತ್ತಾರೆ.

• 1918 ರಲ್ಲಿ ಮಹಾತ್ಮ ಜೋತಿಬಾಫುಲೆ ರವರ ಸತ್ಯಶೋಧಕ ಸಮಾಜವನ್ನು ಮುನ್ನಡೆಸಲು “ಶಾಹು ಸತ್ಯ ಶೋಧಕ ಸಮಾಜ”ವನ್ನು ಸ್ಥಾಪನೆ ಮಾಡುತ್ತಾರೆ.

1920 ಮಾರ್ಚ 27ರಂದು ಕೊಲ್ಲಾಪುರದ ಜನಗಳನ್ನು ಉದ್ದೇಶಿಸಿ ಮಾತನಾಡುತ್ತ ” ಮಹಾ ಜನಗಳೇ ನನ್ನ ಆಸ್ಥಾನ ಎಷ್ಟಿದೆಯೋ ಅಷ್ಟರಲ್ಲಿ ಶೂದ್ರರಿಗಾಗಿ ಅಸ್ಪೃಷ್ಯರಿಗಾಗಿ ಎಲ್ಲಾವನ್ನು ಮಾಡಿದ್ದೇನೆ ಒಂದು ವೇಳೆ ನಾನು ಇಡೀ ಭಾರತಕ್ಕೆ ಮಹಾರಾಜನಾಗಿದ್ದರೆ ದೇಶದಲ್ಲಿರುವ ಎಲ್ಲಾ ಶೋಷಿತರನ್ನು ಉದ್ದರಿಸುತ್ತಿದ್ದೆ ಆದರೆ ನನ್ನ ಆಸ್ಥಾನ ಕೇವಲ ಕೊಲ್ಲಾಪುರಕ್ಕೆ ಮಾತ್ರ ಸೀಮಿತವಾಗಿರುವ ಕಾರಣದಿಂದ ಅದು ಅಸಾಧ್ಯವಾಗಿದೆ”. ಆದರೆ, ಇನ್ನುಮುಂದೆ “ಅಖಿಲ ಭಾರತ ಮಟ್ಟದಲ್ಲಿ ಬಡವರನ್ನು, ಶೋಷಿತರನ್ನು, ಅಸ್ಪೃಷ್ಯರನ್ನು ಉದ್ದರಿಸಲು ಒಬ್ಬ ಮಹಾನ್ ನಾಯಕ, ದೇಶ-ವಿದೇಶಗಳಲ್ಲಿ ಶಿಕ್ಷಣವನ್ನು ಪಡೆದ ವಿಧ್ಯಾವಂತ, ಬುದ್ಧಿವಂತ, ಮುಂದಿನ ರಾಷ್ಟ್ರೀಯ ನಾಯಕನನ್ನು ಈ ದಿನ ನಿಮಗೆಲ್ಲಾ ಪರಿಚಯಿಸುತ್ತೇನೆ ನೀವೆಲ್ಲಾ ಅವರಿಗೆ ಬೆಂಬಲಕೊಟ್ಟರೆ ಇಡೀ ದೇಶವನ್ನೇ ಬದಲಾಯಿಸತ್ತಾರೆ, ಬಹುಜನರಿಗೋಸ್ಕರ ಹೊಸ ಚರಿತೆಯನ್ನೇ ಸೃಷ್ಟಿಸುತ್ತಾರೆ” ಎಂದು ಆ ವ್ಯಕ್ತಿಯನ್ನು ಪರಿಚಯಿಸುತ್ತಾರೆ ಆ ವ್ಯಕ್ತಿಯೇ ಮಹಾ ಮಾನವತವಾದಿ, ವಿಶ್ವ ಮಾನವ, ರಾಷ್ತ್ರೀಯತಾವಾದಿ, ಕಾನೂನು ತಜ್ನ, ರಾಜಕೀಯ ನೇತಾರ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತ, ಶ್ರೇಷ್ಟ ಇತಿಹಾಸಗಾರ, ಮಹಾದಾರ್ಶನಿಕ, ಅಪ್ರತಿಮ ಚಿಂತಕ, ಮಾನವಶಾಸ್ತ್ರಜ್ನ, ಖ್ಯಾತ ಅರ್ಥಶಾಸ್ತ್ರಜ್ನ, ಸಮೃದ್ದ ಬರಹಗಾರ, ಕ್ರಾಂತಿಕಾರಿ, ಅಸಾಮಾನ್ಯ ವಾಕ್ಪಟು, ಅಪ್ರತಿಮ ನಾಯಕ, ಬೌದ್ಧ ಧರ್ಮದ ಪುನರುಜ್ಜೀವಕ, ಭಾರತ ರತ್ನ, ಸಂವಿಧಾನ ಶಿಲ್ಪಿ, ಪರಮಪೂಜ್ಯ “ಡಾ. ಬಾಬಾ ಸಾಹೇಬ್ ಅಂಬೇಡ್ಕರ್” ರವರು.

-ಅಜೀತ ಮಾದರ

ಸುದ್ದಿದಿನ.ಕಾಂ|ವಾಟ್ಸಾಪ್|998675401

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 days ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ1 week ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ2 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending