Connect with us

ದಿನದ ಸುದ್ದಿ

ಹರಪನಳ್ಳಿ,ಹಡಗಲಿ,ಹಗರಿಬೊಮ್ಮನಳ್ಳಿಯಲ್ಲಿ ನೆರೆಹಾವಳಿ ಭೀತಿ : ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತಾ ಕ್ರಮ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬಳ್ಳಾರಿ : ತುಂಗಾ ಮತ್ತು ಭದ್ರಾದಿಂದ ಹೊರಹರಿಯುವ ನೀರಿನ ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದ್ದು ಅಪಾರ ಪ್ರಮಾಣದಲ್ಲಿ ತುಂಗಾಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ತುಂಗಾ ಮತ್ತು ಭದ್ರಾದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಪರಿಣಾಮ ಹರಪನಳ್ಳಿ,ಹಡಗಲಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿ ನೆರೆಹಾವಳಿ ಭೀತಿ ಉಂಟಾಗಿದೆ. ಇದನ್ನರಿತ ಬಳ್ಳಾರಿ ಜಿಲ್ಲಾಡಳಿತ ತುರ್ತು ಸಭೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ತುರ್ತುಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಪ್ರತಿನಿತ್ಯ 10 ಟಿಎಂಸಿಯಷ್ಟು ನೀರು ತುಂಗಾಭದ್ರಾ ಜಲಾಶಯಕ್ಕೆ ನೀರು ಹರಿದುಬರುತ್ತಿದೆ. ತುಂಗಾ ಮತ್ತು ಭದ್ರಾದಿಂದ ನೀರು ಅಪಾರ ಪ್ರಮಾಣದಲ್ಲಿ ಹರಿದು ಬರುತ್ತಿರುವ ಪರಿಣಾಮ ಹರಪನಳ್ಳಿ,ಹಗರಿಬೊಮ್ಮನಳ್ಳಿ ಮತ್ತು ಹಡಗಲಿ ತಾಲೂಕಿನ ನದಿಪಾತ್ರದ ಗ್ರಾಮಗಳಲ್ಲಿ ನೆರೆಹಾನಿ ಉಂಟಾಗುವ ಸಾಧ್ಯತೆ ಇದ್ದು, ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಸಭೆ ನಡೆಸಿ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನದಿಪಾತ್ರದಲ್ಲಿರುವ ಮನೆಗಳಿಗೆ ಧಕ್ಕೆಯಾಗಲಿವೆ ಎಂದು ಹೇಳಿದ ಡಿಸಿ ನಕುಲ್ ಅವರು ಸಂಭಾವ್ಯ ನೆರೆಹಾನಿ ಉಂಟಾಗುವ ಪ್ರದೇಶಗಳಿಗೆ ಕೂಡಲೇ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು, ತಾಪಂ ಇಒಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಅಲ್ಲಿನ ಗ್ರಾಪಂ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳೊಂದಿಗೆ ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ನದಿಪಾತ್ರದಲ್ಲಿ ಮನೆಕಟ್ಟಿಕೊಂಡವರ ಮನೆಗಳಿಗೆ ಹಾಗೂ ಮಣ್ಣಿನ ಗೊಡೆ ಮನೆಗಳಲ್ಲಿರುವ ಮನೆಗಳಿಗೆ ಗ್ರಾಪಂ ಪಿಡಿಒಗಳು ಮತ್ತು ಗ್ರಾಮಲೆಕ್ಕಿಗರು ತೆರಳಿ ಅವರಿಗೆ ಸ್ಥಳಾಂತರಕ್ಕೆ ಸೂಚಿಸಬೇಕು ಮತ್ತು ತಮ್ಮ ಮೊಬೈಲ್ ನಂಬರ್‍ಗಳನ್ನು ಅವರಿಗೆ ನೀಡಬೇಕು. ತುರ್ತು ಸಂದರ್ಭದಲ್ಲಿ ಅವರು ತಮ್ಮನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ ಎಂದರು.

ತುರ್ತುಸಂದರ್ಭದಲ್ಲಿ ಜನ-ಜಾನುವಾರುಗಳನ್ನು ರಕ್ಷಣೆ ಮಾಡಲು ಅನುಕೂಲವಾಗುತ್ತದೆ ಎಂಬ ಕಾರಣಕ್ಕೆ ಹಗರಿಬೊಮ್ಮನಹಳ್ಳಿ ಮತ್ತು ಹರಪನಳ್ಳಿಗಳಲ್ಲಿ ಎರಡು ಬೋಟ್‍ಗಳು ರಕ್ಷಣಾ ತಂಡಗಳು ಲಭ್ಯವಿರುವಂತೆ ಮಾಡಲಾಗಿದೆ ಮತ್ತು ಇದರ ಜತೆಗೆ ಆರೋಗ್ಯ ತಂಡಗಳು ಇರಲಿವೆ ಎಂದು ಅವರು ವಿವರಿಸಿದರು.

ಪ್ರತಿನಿತ್ಯ ವರದಿ ನೀಡಲು ಸೂಚನೆ

ಜನ-ಜಾನುವಾರು ಹಾಗೂ ಮನೆಗಳ ಹಾನಿ ಕುರಿತಂತೆ ಒಂದು ನಮೂನೆ ಸಿದ್ದಪಡಿಸಲಾಗಿದ್ದು, ಅದರಂತೆ ಪ್ರತಿನಿತ್ಯ ತಮ್ಮ ವ್ಯಾಪ್ತಿಯಲ್ಲಾಗುವ ಹಾನಿಗಳ ವಿವರವನ್ನು ಜಿಲ್ಲಾಡಳಿತಕ್ಕೆ ಉಪವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರರು ಕಳುಹಿಸಿಕೊಡಬೇಕು. ಹಾನಿಗಿಡಾದವರ ಕುಟುಂಬಕ್ಕೆ ವಿಪತ್ತು ನಿಧಿ ಅಡಿ 3 ದಿನದೊಳಗೆ ಪರಿಹಾರ ನೀಡುವಂತೆ ನೋಡಿಕೊಳ್ಳಿ; ಈ ವಿಷಯದಲ್ಲಿ ಯಾವುದೇ ಸಬೂಬು ಮತ್ತು ಶಿಷ್ಟಾಚಾರ ಬೇಡ ಎಂದು ಅವರು ಡಿಸಿ ನಕುಲ್ ಸೂಚಿಸಿದರು.

ಕುರವತ್ತಿಯಲ್ಲಿ ಹಾನಿಯಾಗಿದೆ ಎಂಬ ಮಾಹಿತಿಯಿದ್ದು,ಪರಿಹಾರ ಕೂಡಲೇ ಒದಗಿಸಿ ಎಂದು ಸೂಚನೆ ನೀಡಿದ ಅವರು, ಅವಶ್ಯ ಬಿದ್ದರೇ ಗಂಜಿಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಧರಿಸಿದ್ದು, ಅಂತ ಸ್ಥಳಗಳನ್ನು ಗುರುತಿಸಿ ಪಟ್ಟಿ ಮಾಡಿಟ್ಟುಕೊಳ್ಳಿ. ನೆರೆಹಾವಳಿಯಿಂದ ರಸ್ತೆ ಮತ್ತು ಬ್ರಿಡ್ಜ್‍ಗಳಿಗೆ ಆಗುವ ಹಾನಿ ಪ್ರಮಾಣದ ವಿವರವನ್ನು ಒದಗಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ತುಂಗಾಭದ್ರಾ ಜಲಾಶಯದಿಂದ ನೀರು ಬಿಡುವ ಸಂದರ್ಭದಲ್ಲಿ ನದಿಪಾತ್ರದೂದ್ದಕ್ಕೂ ಹಂಪಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಹಾನಿಯುಂಟಾಗದಂತೆ ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ವಿವರ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಡಿಸಿ ನಕುಲ್ ಅವರು, ಎಸಿಗಳು ಮತ್ತು ತಹಸೀಲ್ದಾರರು ಕೂಡಲೇ ಸಭೆ ನಡೆಸಿ ಕಾರ್ಯಪ್ರವೃತ್ತರಾಗಿ ಹಾಗೂ ಸ್ಥಳೀಯಮಟ್ಟದ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಸ್ಪಂದಿಸುವ ಕೆಲಸ ಮಾಡಿ ಎಂದರು.

ಸಹಾಯವಾಣಿ ಕೇಂದ್ರಗಳ ಸ್ಥಾಪನೆ

ನೆರೆಹಾನಿಯಾದ ಸಂದರ್ಭದಲ್ಲಿ ಜನರಿಗೆ ತುರ್ತು ನೆರವಿಗೆ ಧಾವಿಸಬೇಕೆಂಬ ದೃಷ್ಟಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಿ ಮತ್ತು ನಿರಂತರ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಬೇಕು. ದೂರು ಬಂದ ತಕ್ಷಣ ಸ್ಪಂದಿಸಬೇಕುಎಂದು ಡಿಸಿ ನಕುಲ್ ಸೂಚಿಸಿದರು.

ಎನ್‍ಡಿಆರ್‍ಎಫ್ ಸಹಾಯಬೇಕಿದ್ದಲ್ಲಿ ಕೇಳಿ ಅಗತ್ಯ ನೆರವು ಒದಗಿಸಲಾಗುವುದು ಎಂದು ಹೇಳಿದ ಅವರು, ಗ್ರಾಮಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಫಾಗಿಂಗ್ ಮಶೀನ್ ಮತ್ತು ಬ್ಲೀಚಿಂಗ್ ಪೌಡರ್ ವ್ಯವಸ್ಥೆ ಮಾಡಿಟ್ಟುಕೊಳ್ಳಬೇಕು. ಡಿಎಚ್‍ಒ ಮತ್ತು ಟಿಎಚ್‍ಒಗಳು ಸಂಭ್ಯಾವ ನೆರೆಹಾವಳಿ ಪ್ರದೇಶಗಳಿಗೆ ಭೇಟಿ ನೀಡಿ ಆ ವ್ಯಾಪ್ತಿಯ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮರ್ಪಕ ಔಷಧಿಗಳಿರುವಂತೆ ನೋಡಿಕೊಳ್ಳಬೇಕು ಎಂದರು.

ಕೃಷಿ ಚಟುವಟಿಕೆಗಳಿಗಾಗಿ ಬಳ್ಳಾರಿ ಜಿಲ್ಲೆಗೆ ನೀರು ಬಿಡುಗಡೆ

ಬಳ್ಳಾರಿ ರೈತಾಪಿ ಸಮುದಾಯ ಕೃಷಿ ಚಟುವಟಿಕೆಗಳಿಗಾಗಿ ಬಹಳ ದಿನಗಳಿಂದ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ತುಂಗಾಭದ್ರಾ ಜಲಾಶಯದ ನೀರು ಕೃಷಿ ಚಟುವಟಿಕೆಗಳಿಗಾಗಿ ಶುಕ್ರವಾರ ಬೆಳಗ್ಗೆ ಬಿಡುಗಡೆ ಮಾಡಲಾಗುತ್ತಿದೆ.

ಈಗಾಗಲೇ 50 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಿದ್ದು, ಪ್ರತಿನಿತ್ಯ 10 ಟಿಎಂಸಿ ನೀರು ಜಲಾಶಯಕ್ಕೆ ಹರಿದುಬರುತ್ತಿರುವ ಹಿನ್ನೆಲೆ ನೀರು ಬಿಡಲಾಗುತ್ತಿದೆ ಎಂದು ತುಂಗಾಭದ್ರಾ ಬೋರ್ಡ್ ಅಧೀಕ್ಷಕ ವೆಂಕಟರಮಣ ಸಭೆಗೆ ತಿಳಿಸಿದರು.

ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಸಿ.ಕೆ.ಬಾಬಾ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಈಶ್ವರ್ ಕಾಂಡೂ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್, ಉಪವಿಭಾಗಾಧಿಕಾರಿಗಳಾದ ರಮೇಶ ಕೋನರೆಡ್ಡಿ, ಪಿ.ಎನ್.ಲೋಕೇಶ ಸೇರಿದಂತೆ ವಿವಿಧ ತಾಲೂಕುಗಳ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending