Connect with us

ದಿನದ ಸುದ್ದಿ

ಆರ್ ಎಸ್ ಎಸ್ ಗೇ ತಿರುಗೇಟು ಕೊಟ್ಟ ಶಿಕ್ಷಣ ಸಚಿವ ಸುರೇಶ್ ಕುಮಾರ್ ! : ಕೇರಳ ಮಾದರಿ ಅಂದ ಸುರೇಶ್ ಕುಮಾರ್ ರಾಜೀನಾಮೆಗೆ ಪಕ್ಷ-ಸಂಘಟನೆಯಲ್ಲಿ ಒತ್ತಾಯ ?

Published

on

  • ಅರುಣ್ ಕುಮಾರ್, ಪತ್ರಕರ್ತರು

ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೂ, ಆರ್ ಎಸ್ಎಸ್, ಬಿಜೆಪಿಗೂ ಶೀತಲ ಸಮರ ನಡೆಯುತ್ತಿದ್ದು ಯಾವಾಗ ಬೇಕಾದರೂ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ಪಡೆಯಬಹುದು ಎನ್ನಲಾಗುತ್ತಿದೆ. ಇದಕ್ಕೆ ಕಾರಣ ಸುರೇಶ್ ಕುಮಾರ್ ರವರು ಕೇರಳ ಸರ್ಕಾರವನ್ನು ಮಾದರಿಯಾಗಿ ತೆಗೆದುಕೊಂಡಿರೋದು ! ಇದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ (ಸಂತೋಷ್ ಜೀ)ಯವರನ್ನು ಕೆರಳಿಸಿದೆ. ಆರ್ ಎಸ್ ಎಸ್, ಹಿಂದೂ ಸಂಘಟನೆಗಳು, ಬಿಜೆಪಿ ಇಡೀ ದೇಶದಾದ್ಯಂತ ಕೇರಳ ವಿರೋಧಿ ನಿಲುವನ್ನು ತಳೆದಿರುವಾಗ ಸುರೇಶ್ ಕುಮಾರ್ ಮಾತ್ರ ಕೇರಳ ಶಿಕ್ಷಣ ವ್ಯವಸ್ಥೆಯನ್ನು ಹೊಗಳಿರೋದು ಅವರಿಗೆ ಕಂಟಕವಾಗಿದೆ.

ಕೇರಳದ ಮಾದರಿ ಎಂದು ಜಗತ್ತಿನಲ್ಲಿಯೇ ಕೇರಳವನ್ನು ಹೊಗಳುತ್ತಿರುವಾಗ ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮಾತ್ರ ಕೇರಳ ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ ಎಂದು ಸಾರುತ್ತಲೇ ಬರುತ್ತಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರಂತೂ ಬಹಿರಂಗವಾಗಿ ಕೇರಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಬಿ ಎಲ್ ಸಂತೋಷ್ ಗೆ ಮುಜುಗರ ಆಗೋ ರೀತಿಯಲ್ಲಿ ಸುರೇಶ್ ಕುಮಾರ್ ಕೇರಳದ ಶಿಕ್ಷಣ ವ್ಯವಸ್ಥೆಯನ್ನು ಫೇಸ್ ಬುಕ್ ನಲ್ಲಿ ಹೊಗಳಿದ್ದಾರೆ. ಇದು ಸಂತೋಷ್ ಜೀ ಆಕ್ರೋಶಕ್ಕೆ ಕಾರಣವಾಗಿದ್ದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಫೇಸ್‌ಬುಕ್‌ ಪೋಸ್ಟ್

ಸಂಘಪರಿವಾರಕ್ಕೂ ಕಮ್ಯೂನಿಷ್ಟರಿಗೂ ನೇರ ಯುದ್ದವೇನಾದರೂ ಇದ್ದರೆ ಅದು ಕೇರಳದಲ್ಲಿ. ಮಚ್ಚು ಕತ್ತಿಗಳು ಮಾತ್ರವಲ್ಲದೇ ಬಾಂಬ್ ಗಳ ಮೂಲಕವೂ ಎರಡೂ ಸಂಘಟನೆಗಳು ಪರಸ್ಪರ ದಾಳಿ ಮಾಡುತ್ತದೆ. ನೂರಾರು ಆರ್ ಎಸ್ ಎಸ್ ಕಾರ್ಯಕರ್ತರನ್ನು ಕೇರಳದಲ್ಲಿ ಕಳೆದುಕೊಳ್ಳಲಾಗಿದೆ. ಪಿನರಾಯಿ ವಿಜಯನ್ ಸರ್ಕಾರ ಸಂಘಪರಿವಾರದ ಮುಖಂಡರನ್ನು ಹತ್ಯೆ ಮಾಡುತ್ತಿದೆ ಎಂದು ನಿರಂತರ ಅಭಿಯಾನವನ್ನು ಆರ್ ಎಸ್ ಎಸ್ ಮಾಡುತ್ತಿದೆ.

ಇದೀಗ ಅದೇ ಕೇರಳವನ್ನು ಕರ್ನಾಟಕದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೊಗಳಿದ್ದು ಕೇರಳದಲ್ಲಿ ಭಾರೀ ಚರ್ಚೆಗೆ ಒಳಗಾಗಿದೆ. “ನಾವಿಲ್ಲಿ ಸಂಘಟನೆಗಾಗಿ ಪ್ರಾಣ ಬಿಡುತ್ತಿದ್ದರೆ ಅಧಿಕಾರ ಪಡೆದುಕೊಂಡ ಬಿಜೆಪಿಗ ಸುರೇಶ್ ಕುಮಾರ್ ನಮ್ಮ ಶತ್ರುಗಳ ಜೊತೆ ನಿಂತಿದ್ದಾರೆ” ಎಂದು ಹಿಂದೂ ಸಂಘಟನೆಗಳು ಪ್ರತಿಕ್ರಿಯಿಸಿದ್ದರೆ, ಈಗ ಕರ್ನಾಟಕದ ಸಚಿವರೇ ಕೇರಳ ಮಾದರಿ ಎಂದಿರೋದ್ರಿಂದ ಆರ್ ಎಸ್ ಎಸ್, ಸಂತೋಷ್ ಜೀ ಏನಂತಾರೆ? ಎಂದು ಎಡಪಂಥೀಯರು ಟ್ವೀಟ್ ಅಭಿಯಾನ ಶುರು ಮಾಡಿದ್ದಾರೆ.

ಸುರೇಶ್ ಕುಮಾರ್ ರವರು ಕರ್ನಾಟಕದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಿ ಇಡೀ ದೇಶಕ್ಕೆ ಮಾದರಿ ಮಾಡಬೇಕಿತ್ತು. ಅದನ್ನು ಮಾಡಲಾಗದೇ ಇನ್ನೊಂದು ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಕರ್ನಾಟಕದಲ್ಲಿ ಹೊಗಳೋ ಅವಶ್ಯಕತೆ ಏನಿದೆ ? ಬೇರೆ ರಾಜ್ಯಗಳಿಗಿಂತ ಉತ್ತಮ ವ್ಯವಸ್ಥೆಯನ್ನು ನೀವು ಮಾಡಬೇಕು.‌ ಮಾಡಲಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಬಿಜೆಪಿಗರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ಮುಖ್ಯಮಂತ್ರಿಗಳು, ಹಿಂದೂ ಸಂಘಟನೆಗಳು, ಆರ್ ಎಸ್ ಎಸ್ ಆಕ್ರೋಶಕ್ಕೆ ತುತ್ತಾಗಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜೀನಾಮೆಗೆ ಒತ್ತಡಗಳು ಜಾಸ್ತಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.

ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending