ದಿನದ ಸುದ್ದಿ
ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಲೇಖಕರ ಆಯ್ಕೆ
ಸುದ್ದಿದಿನ,ಶಿವಮೊಗ್ಗ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಸಕ್ತ ಸಾಲಿನ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ ಲೇಖಕರಿಗೆ ಪ್ರಶಸ್ತಿಗಳನ್ನು ಘೋಷಿಸಿದೆ.
ಲೇಖಕರು ಪ್ರಶಸ್ತಿಗಾಗಿ ಸಲ್ಲಿಸಿದ ಪ್ರಕಟಣೆಗಳನ್ನು ಆಯಾ ಕ್ಷೇತ್ರದ ತಜ್ಞರಿಂದ ಮೌಲ್ಯಮಾಪನ ಮಾಡಿಸಿ, ಪ್ರಶಸ್ತಿಗೆ ಪುಸ್ತಕಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಲೇಖಕರಿಗೆ ಜುಲೈ ಮಾಸಾಂತ್ಯದಲ್ಲಿ ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಡಾ.ಟಿ.ಎಸ್.ಚನ್ನೇಶ್ ಅವರು ಬರೆದ ಅನುರಣ ವಿಜ್ಞಾನ ಪ್ರಬಂಧಗಳ ಕೃತಿಗೆ ಶ್ರೇಷ್ಠ ವಿಜ್ಞಾನ ಪುಸ್ತಕ ಪ್ರಶಸ್ತಿ, ಶ್ರೀಮತಿ ಸಿ.ತ್ರಿವೇಣಿ ಅವರು ರಚಿಸಿದ ಮಣ್ಣು-ಉಸಿರಾಡುವ ಜೀವವಸ್ತು ಎಂಬ ವಿಜ್ಞಾನ ಕೃತಿಗೆ ಶ್ರೇಷ್ಠ ಪುಸ್ತಕ ಪ್ರಶಸ್ತಿ, ಡಾ.ಉದಯಶಂಕರ ಪುರಾಣಿಕ್ ಅವರು ಬರೆದ ಆರ್ಟಿಫಿಸಿಯಲ್ ಇಂಟೆಲಿಜೆನ್ಸ್ – ಹೊಸ ತಂತ್ರಜ್ಞಾನ ಹೊಸ ಅವಕಾಶಗಳು ಎಂಬ ತಂತ್ರಜ್ಞಾನಾಧಾರಿತ ಕೃತಿಗೆ ಹಾಗೂ ಪ್ರೊ.ಮಹದೇವಯ್ಯ ಅವರು ರಚಿಸಿದ ವೃತ್ತಿಪರ ಕಂಪ್ಯೂಟರ್ ಸಾಕ್ಷರತೆ ಎಂಬ ತಂತ್ರಜ್ಞಾನಾಧಾರಿತ ಕೃತಿಗೆ ಹಾಗೂ ಡಾ.ರಣಜಿತ ಬೀರಣ್ಣ ನಾಯಕ ಅವರು ರಚಿಸಿದ ವೈದ್ಯ-ವಿಜ್ಞಾನ ಕೃತಿ ಹಾಗೂ ಡಾ. ಮುರಲೀಮೋಹನ್ ಚೂಂತಾರು ಅವರು ರಚಿಸಿದ ಸಂಜೀವಿನಿ-ಆರೋಗ್ಯ ಮಾರ್ಗದರ್ಶಿ ಎಂಬ ವೈದ್ಯಕೀಯ ಕೃತಿಗೆ ಶ್ರೇಷ್ಠ ಪುಸ್ತಕ ಪ್ರಶಸ್ತಿ ಲಭಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243