ದಿನದ ಸುದ್ದಿ
ಆರ್ಥಿಕ ಸದೃಢ ಕುಟುಂಬಗಳು ಪಡೆದಿರುವ ಬಿಪಿಎಲ್ ಕಾರ್ಡ್ಗಳನ್ನು ಸ್ವಯಂಪ್ರೇರಿತವಾಗಿ ಹಿಂತಿರುಗಿಸಿ : ಜಿಲ್ಲಾಧಿಕಾರಿ
ಸುದ್ದಿದಿನ,ದಾವಣಗೆರೆ :ಜಿಲ್ಲೆಯಲ್ಲಿ ಕೆಲವು ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವವಿದ್ಯಾಲಯ/ಸಂಸ್ಥೆಯ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡು ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.
ಇದು ಒಬ್ಬ ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆಯಾಗಿರುತ್ತದೆ. ಬಿಪಿಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಒಬ್ಬ ಸರ್ಕಾರಿ ಅಧಿಕಾರಿ/ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನರೇಖೆಗಿಂತ ಕೆಳಗೆ ಬರುವುದಿಲ್ಲ.
ಆದ್ದರಿಂದ ಒಂದು ವೇಳೆ ಯಾವುದೇ ಸರ್ಕಾರಿ, ಸರ್ಕಾರದ ನಿಗಮ/ ಮಂಡಳಿ/ ಪ್ರಾಧಿಕಾರ/ವಿಶ್ವವಿದ್ಯಾಲಯ/ಸಂಸ್ಥೆಯ ಅಧಿಕಾರಿ/ನೌಕರ ಅಥವಾ ಆತನ/ಆಕೆಯ ಅವಲಂಬಿತ ಕುಟುಂಬ ಸದಸ್ಯ ಈಗಾಗಲೇ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿದ್ದರೆ ದಿ:10.07.2020 ರೊಳಗಾಗಿ ಅದನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕೊಡಲೇ ಹಿಂತಿರುಗಿಸಿ ರದ್ದುಪಡಿಸಿಕೊಳ್ಳತಕ್ಕದ್ದು.
ಒಂದು ವೇಳೆ ದಿ:10.07.2020 ರ ನಂತರವೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಬಗ್ಗೆ ಮಾಹಿತಿ/ದೂರುಗಳು ಸ್ವೀಕೃತವಾದರೆ ಅಂತಹವರ ವಿರುದ್ದ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಮತ್ತು ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243