Connect with us

ದಿನದ ಸುದ್ದಿ

ದೇವಸ್ಥಾನಗಳ ಜಾಗಗಳು ಅನ್ಯರ ಪಾಲಾಗುತ್ತಿವೆ : ಸಚಿವ ಸಿ.ಟಿ ರವಿ

Published

on

ಸುದ್ದಿದಿನ,ಚಿಕ್ಕಮಗಳೂರು: ರಾಜ್ಯದಲ್ಲಿ ಪುರಾಣ ಪ್ರಸಿದ್ಧ ಇತಿಹಾಸ ಹೊಂದಿರುವ ಪಾರಂಪರಿಕ ದೇವಸ್ಥಾನ ಹಾಗೂ ವಾಸ್ತುಶಿಲ್ಪಗಳನ್ನು ಸಂರಕ್ಷಣಾ ಯೋಜನೆಯ ಹೆಸರಿನಲ್ಲಿ ಸಂರಕ್ಷಿಸಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು ಹೇಳಿದರು.

ಅವರು ಸೋಮವಾರ ಕಡೂರು, ಹಾಗೂ ತರೀಕೆರೆ, ಅಜ್ಜಂಪುರ ತಾಲ್ಲೂಕುಗಳ ಮಚ್ಚೇರಿ, ಹಿರೇನಲ್ಲೂರು, ಆಸಂದಿ, ಬಗ್ಗವಳ್ಳಿ, ಅಮೃತಾಪುರ, ಸೋಂಪುರದಲ್ಲಿರುವ ಪುರಾಣ ಪ್ರಸಿದ್ಧ ಪ್ರಾಚೀನ ದೇವಾಲಯಳಿಗೆ ಭೇಟಿ ನೀಡಿ ಪರಿಶೀಲಿಸಿ ನಡೆಸಿದರು.

ಜಿಲ್ಲೆಯಲ್ಲಿ ಹೊಯ್ಸಳರು, ಕದಂಬರು, ಚೋಳರು, ಚಾಲುಕ್ಯರು ಸೇರಿದಂತೆ ವಿವಿಧ ರಾಜಮನೆತನಗಳ ಆಳ್ವಿಕೆ ನಡೆಸಿ ಆ ಕಾಲದಲ್ಲಿ ನಿರ್ಮಿತವಾದ ಪ್ರಸಿದ್ದ ಪ್ರಾಚೀನ ಇತಿಹಾಸದ ದೇವಾಲಯಗಳಿದ್ದು ಅವುಗಳನ್ನು ಉಳಿಸುವ ಹೊಣೆ ನಮ್ಮೆಲ್ಲರದಾಗಿದ್ದು ಅವುಗಳ ಮೂಲ ಸ್ವರೂಪ ವಿರೂಪವಾಗದಂತೆ ಜೀರ್ಣೋದ್ದಾರ ಕೈಗೊಂಡು ಅಭಿವೃದ್ಧಿಪಡಿಸಲಾಗುವುದು ಎಂದರು.

ರಾಜ್ಯದಲ್ಲಿ ರಾಜ್ಯ ಹಾಗೂ ಕೇಂದ್ರ ಪುರಾತತ್ವ ಇಲಾಖೆಗೆ ಒಳಪಡುವ1400ಕ್ಕೂ ಹೆಚ್ಚು ದೇವಾಲಯಗಳಿದ್ದು, ಇವುಗಳನ್ನು ಹೊರತುಪಡಿಸಿಯೂ ಸಹ ಹಲವು ದೇವಾಲಯಗಳಿವೆ ಇವುಗಳ ಸಂರಕ್ಷಣೆಗೆ ಕ್ರಮವಹಿಸಲಾಗುವುದು ಎಂದ ಅವರು ಪ್ರಾಚೀನ ಮತ್ತು ಪುರಾತನ ದೇವಾಲಯಗಳ ಸಂರಕ್ಷಣೆಗೆ ಸರ್ಕಾರವು ಮುಂದಿನ ಬಜೆಟ್‌ನಲ್ಲಿ ಸಂರಕ್ಷಣಾ ಯೋಜನೆಯನ್ನು ತೆರೆದು ಅವುಗಳ ಅಡಿಯಲ್ಲಿ ಪುರಾತನ ದೇವಾಲಯ ಹಾಗೂ ವಾಸ್ತುಶಿಲ್ಪಗಳ ನಿರ್ವಹಣೆ ಹಾಗೂ ಅಭಿವೃದ್ಧಿಪಡಿಸಲಿದೆ ಇದಕ್ಕಾಗಿ ಪುರಾತತ್ವ್ವ ಇಲಾಖೆ ಹಾಗೂ ಧರ್ಮೊತ್ಥಾನ ಟ್ರಸ್ಟ್ ಜೊತೆಯಾಗಿ ಒಡಂಬಡಿಕೆ ಮಾಡಿಕೊಂಡು ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದರು.

ಕೋವಿಡ್-19ಕಾರಣದಿಂದಾಗಿ ಈ ಬಾರಿ ಅನುದಾನದ ಕೊರತೆ ಇದ್ದು ಸದ್ಯ ಆದ್ಯತೆ ಮೇರೆಗೆ ಆಯ್ದ ಪ್ರಸಿದ್ದ ದೇವಾಲಯಗಳನ್ನು ಅಭಿವೃದ್ಧಿ ಪಡಿಸಿ ಉಳಿದವುಗಳನ್ನು ಹಂತ- ಹಂತವಾಗಿ ಜೀರ್ಣೋದ್ದಾರ ಮಾಡಲಾಗುವುದು ಹಿಂದೆ ದೇವಾಲಯಗಳಿಗಾಗಿ ಧಾನದತ್ತಿಯ ರೂಪದಲ್ಲಿ ಜಾಗಗಳನ್ನು ನೀಡಿದ್ದು ಪ್ರಸ್ತುತ ದಿನಗಳಲ್ಲಿ ಎಷ್ಟೂ ದೇವಸ್ಥಾನಗಳ ಜಾಗಗಳು ಅನ್ಯರ ಪಾಲಾಗುತ್ತಿವೆ. ಎಷ್ಟೋ ದೇವಾಲಯಗಳು ನಿರ್ಲಕ್ಷ್ಯಕ್ಕೆ ಒಳಗಾಗಿ ಪಾಳು ಬಿದ್ದಿವೆ ಅಂತವುಗಳನ್ನು ಗುರುತಿಸಿ ಸಂರಕ್ಷಣೆ ಮಾಡಲಾಗುವುದು ಎಂದರು.

ಪ್ರವಾಸಿ ತಾಣಗಳಲ್ಲಿ ಯಾತ್ರಿ ನಿವಾಸಗಳ ಸ್ಥಾಪನೆ ಕುರಿತು ಮಾತನಾಡಿದ ಅವರು ಈ ಬಾರಿಯ ಬಜೆಟ್‌ನಲ್ಲಿ ಯಾತ್ರಿ ನಿವಾಸಗಳ ಸ್ಥಾಪನೆಗೆ ಅವಕಾಶವಿಲ್ಲ ಆದರು ಈ ಬಗ್ಗೆ ಅಧ್ಯಯನ ಕೈಗೊಂಡು ಅಗತ್ಯ ಸ್ಥಳಗಳಲ್ಲಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಅನೇಕ ಯಾತ್ರಿ ನಿವಾಸಗಳು ಹಾಳುಬಿದ್ದಿವೆ ಎಂದು ದೂರು ಇದೆ ಹಾಗಾಗಿ ಹೊಸದಾದ ಯಾತ್ರಿ ನಿವಾಸಗಳ ಮಂಜೂರು ಕುರಿತು ಚರ್ಚಿಸಲಾಗವುದು ಎಂದು ತಿಳಿಸಿದರು.

ಅಮೃತಾಪುರ ದೇವಾಲಯ ವೀಕ್ಷಣೆ ಮಾಡಿ ಮಾತನಾಡಿದ ಅವರು ಸೂಕ್ಷ್ಮ ಕೆತ್ತನೆ ವಾಸ್ತಶಿಲ್ಪ ಹೊಂದಿರುವ ದೇವಾಲಯಗಳಲ್ಲಿ ಅಮೃತೇಶ್ವರ ದೇಗುಲವು ಒಂದಾಗಿದ್ದು ಪೂರ್ವಿಕರು ಕೊಟ್ಟಿರುವ ಒಂದು ಬಳುವಳಿಯಾಗಿದ್ದು ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಜೀರ್ಣೊದ್ದಾರ ಕೈಗೊಳ್ಳಲು ಹಂತ- ಹಂತವಾಗಿ ಅನುದಾನ ಬಿಡುಗಡೆಗೊಳಿಸಲಾಗುವುದು. ಇದೊಂದು ಪ್ರವಾಸಿ ಕೇಂದ್ರವಾಗಿ ಗುರುತಿಸಿಕೊಂಡಿದ್ದು ಇದರ ಸೂಕ್ಷ್ಮ ಕೆತ್ತನೆ ಕುರಿತು ಸಂಶೋಧನೆಗೆ ವಿವಿಧ ಭಾಗಗಳಿಂದ ಜನ ಇಲ್ಲಿಗೆ ಆಗಮಿಸುತ್ತಿದ್ದಾರೆ ಹಾಗಾಗಿ ಇದನ್ನು ಸಂರಕ್ಷ್ಷಿಸಿ ಪೋಷಿಸುವ ಕರ್ತವ್ಯ ನಮ್ಮೆಲ್ಲರದಾಗಿದೆ ಎಂದರು.

ಈ ಸಂದರ್ಭದಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ಸೋಮಶೇಖರ್, ಶರತ್ ಕೃಷ್ಣಮೂರ್ತಿ, ತರೀಕೆರೆ ಉಪವಿಭಾಗಾಧಿಕಾರಿ ರೇಣುಕಾ ಪ್ರಸಾದ್, ತಹಶೀಲ್ದಾರ್‌ಗಳಾದ ಉಮೇಶ್, ವಿಶ್ವೇಶ್ವರ ರೆಡ್ಡಿ, ಪುರಾತತ್ವ ಇಲಾಖೆಯ ಸಂರಕ್ಷಣಾ ಅಧಿಕಾರಿಗಳು. ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending