ದಿನದ ಸುದ್ದಿ
ಚಿತ್ರದುರ್ಗ | ‘ಸೌಹಾರ್ದ ನಡಿಗೆ ಶರಣ ಸಂಸ್ಕೃತಿ ಕಡೆಗೆ’ ಕಾರ್ಯಕ್ರಮ
ಸುದ್ದಿದಿನ, ಚಿತ್ರದುರ್ಗ : ಶ್ರೀ ಮುರುಘಾಮಠದಲ್ಲಿರುವ ನಡೆಯುತ್ತಿರುವ ಶರಣ ಸಂಸ್ಕøತಿಯ ಉತ್ಸವ 2018ರ ಪ್ರಯುಕ್ತ “ಸೌಹಾರ್ದ ನಡಿಗೆ ಶರಣ ಸಂಸ್ಕøತಿ ಕಡೆಗೆ” ಕಾರ್ಯಕ್ರಮದೊಂದಿಗೆ ಉದ್ಘಾಟನಾ ಕಾರ್ಯಕ್ರಮದೊಂದಿಗೆ ಆರಂಭವಾಯಿತು.
ಈ ಜಾಥಾವು ನಗರದ ಕನಕ ವೃತ್ರದಿಂದ, ಕೋಟೆಯ ಮುಂಬಾಗ, ಜೋಗಿಮಟ್ಟಿ ರಸ್ತೆ, ಪಟ್ಟದ ಪರಮೇಶ್ವರಿ ಶಾಲೆ, ಚಳ್ಳಕೆರೆ ಗೇಟ್, ಆರ್.ಟಿ.ಒ ಕಚೇರಿ ಹತ್ತಿರ, ರಾಷ್ಟ್ರೀಯ ಹೆದ್ದಾರಿ 13ರ ಗ್ರಾಮಾಂತರ ಪೋಲಿಸ್ಠಾಣೆ, ರೈಲ್ವೆಸ್ಟೇಷನ್, ಎಸ್.ಜೆ.ಎಮ್.ವಿದ್ಯಾರ್ಥಿ ನಿಲಯದ ಬಳಿ ಸಾಗಿತು. ನಗರದ ಪ್ರಮುಖರು, ರಾಜಕೀಯ ದುರೀಣರು, ಎಸ್.ಜೆ.ಎಮ್.ವಿದ್ಯಾಪೀಠದ ಶಾಲಾ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು, ನಾಗರೀಕರು ತಂಡೋಪತಂಡವಾಗಿ ವಿವಿಧೆಡೆಯಿಂದ ಆಗಮಿಸಿ ಚಿತ್ರದುರ್ಗದ ಗಾಂಧೀ ವೃತ್ತದಲ್ಲಿ ಸಮಾವೇಶಗೊಂಡು ಶ್ರೀ ಮಠದ ಅನುಭವ ಮಂಟಪಕ್ಕೆ ಬಂದು ಸಂಪನ್ನವಾಯಿತು.
ಪರಿವರ್ತನೆ ಜಗದ ನಿಯಮ, ಪರಿವರ್ತನೆಯಾಗದಿದ್ದಲ್ಲಿ ಕಾಲವೇ ಪರಿವರ್ತಿಸುತ್ತದೆ. ಮರುಕವಿಲ್ಲದ ಮಾನವನನಿಗಿಂತ ಮರದ ನೆರಳೆ ವಾಸಿ. ಸ್ವಪ್ರಯತ್ನದಿಂದ ಸಾಮಾನ್ಯನೂ ಸಮರ್ಥನಾಗಬಲ್ಲ. ಆಸಕ್ತಿಯಿಂದ ಜೀವನ ಅನಾವರಣ ನಿರಾಸಕ್ತಿಯಿಂದ ಜೀವನ್ಮರಣ. ಅಂತರಂಗದ ಶುದ್ದತೆ ಬಹಿರಂಗದಲ್ಲಿ ಸಾತ್ವಿಕತೆ ಸಾಧಿಸುವುದೇ ಬದುಕಿನ ಬದ್ದತೆ ಎನ್ನುವಂತಹ ಘೋಷವಾಕ್ಯಗಳನ್ನು ಕೂಗುತ್ತ ಜಾತವು ಸಾಗಿತು.
ನಂತರ ಅನುಭವಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾನಿದ್ಯ ವಹಿಸಿ ಮಾತನಾಡಿದಡಾ.ಶಿವಮೂರ್ತಿಮುರುಘಾಶರಣರು, ಸರ್ವಜನಾಂಗದ ಶಾಂತಿಯ ತೋಟ ಎಂಬುವ ರೀತಿಯಲ್ಲಿ ಶ್ರೀಮಠವು ನಡೆಯುತ್ತ ಸಾಗಿದೆ. ಇಂದು ಚಿತ್ರರಂಗದ ಕಲಾವಿದರು ಆಗಮಿಸಿ ನಮ್ಮ ಸೌಹಾರ್ಧ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಶರಣ ಸಂಸ್ಕøತಿ ಉತ್ಸವಕ್ಕೆ ಮೆರಗು ತಂದಿದೆ ಎಂದು ನುಡಿದರು.
ಚಿತ್ರನಟ ಹಾಗು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮಾತನಾಡಿ ಇಂತಹ ಒಂದು ಅನುಭವ ವಿಶೇಷವಾದದ್ದು . ದಸರ ಉತ್ಸವವನ್ನು ಇಡೀ ನಾಡೆನೆಲ್ಲೆಡೆ ಆಚರಿಸುತ್ತಾರೆ. ಚಿತ್ರರಂಗದವರಿಗೆ ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಾಲನೆ ನೀಡಲು ಅವಕಾಶ ಕೊಟ್ಟಿದ್ದಕ್ಕಾಗಿ ಧನ್ಯವಾದಗಳು.. ಜಾತಿ ಮತ ಯಾವುದನ್ನು ನೋಡದೆ ನಾವೆಲ್ಲರು ಒಂದೇ ಎಂದು ಸಾರುವ ಮಠ ಶ್ರೀಮಠವು ಆಗಿದೆ. ಚಿತ್ರರಂಗದಲ್ಲಿ ನಾವೆಲ್ಲರೂ ಒಂದೊಂದು ಪಾತ್ರ ಮಾಡುತ್ತ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಪ್ರಯತ್ನ ಮಾಡುತ್ತೇವೆ. ಹಲವು ವಿಧವಾದ ಅನುಭವಗಳಾಗಿವೆ. ಇಂದು ಮುರುಘಾಶರಣರ ಪಾದದಲ್ಲಿರುವುದು ನನ್ನ ಅದೃಷ್ಟವಾಗಿದೆ. ಈ ಸಂಧರ್ಭವನ್ನು ನನ್ನ ಜೀವನದಲ್ಲಿ ಎಂದು ಮರೆಯುವುದಿಲ್ಲ ಎಂದು ತಿಳಿಸಿದರು.
ಹಿರಿಯ ಚಿತ್ರನಟ ದೊಡ್ಡಣ್ಣ ಮಾತನಾಡಿ, ಜನಿಸಿದ ಸಕಲ ಜೀವರಾಶಿಗಳಿಗೆ ಆಹಾರವೇ ಮುಖ್ಯ, ಜಗತ್ತಿನಲ್ಲಿ ಅನ್ನ ದೊಡ್ಡದು. ಜಗತ್ತಿನಲ್ಲಿ ತಾಯಿ ಸತ್ತರೆ ಬದುಕುವರು, ಆದರ ಅನ್ನವಿಲ್ಲದೇ ಯಾವ ಜೀವರಾಶಿಯು ಬದುಕುವುದಿಲ್ಲ. ಶರಣರು ಅನ್ನದಾಸೋಹವನ್ನು ಶ್ರೀಮಠದಲ್ಲಿ ಉಚಿತವಾಗಿ ನೀಡುವಂತಹ ಕಾರ್ಯವನ್ನು ಮಾಡುತ್ತಿರುತ್ತಾರೆ, ಅದು ನಮ್ಮೆಲ್ಲರ ಪುಣ್ಯ ಹಾಗು ಭಾಗ್ಯವೆನ್ನಬೇಕು ಎಂದು ನುಡಿದರು.
ಸಾಹಿತಿ ಬಿ.ಎಲ್.ವೇಣು ಮಾತನಾಡಿ, ನಾನು ನಿಮ್ಮೂರಿನ ಮಗ, ನನ್ನ ಬೆಳವಣ ಗೆಯಲ್ಲಿ ಈ ಮಠದ ಪಾತ್ರ ಮಹತ್ವದ್ದಾಗಿದೆ. ಆದಿಕವಿ ಪಂಪ ಹೇಳಿರುವಂತೆ ಮಾನವ ಜಾತಿ ತಾನೊಂದೆ ವಲಂ ಎನ್ನುವಂತೆ ಶರಣರು ಸಹ ಇದನ್ನೆ ಹೇಳುತ್ತ ಪಾಲಿಸುತ್ತಿದ್ದಾರೆ. ಅವರ ಆಶೀರ್ವಾದವು ಸದಾ ನಮ್ಮಗಳ ಮೇಲಿರಲೆಂದು ನುಡಿದರು.
ಕಾರ್ಯಕ್ರಮದಲ್ಲಿ ಶರಣ ಸಂಸ್ಕøತಿ ಉತ್ಸವ 2018ರ ಗೌರಾಧ್ಯಕ್ಷರಾದ ಮಧುರೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಜ.ಶ್ರೀ.ಪುರುಷೋತ್ತಮನಂದಪುರಿ ಮಹಾಸ್ವಾಮಿಗಳು, ಕಾರ್ಯಧ್ಯಕ್ಷರಾದ ಪಟೇಲ್ ಶಿವಕುಮಾರ್, ವಿಧಾನ ಪರಿಷತ್ ಸದಸ್ಯರಾದ ಜಯಮ್ಮ ಬಾಲರಾಜ್, ಚಿತ್ರದುರ್ಗದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಚಲನಚಿತ್ರ ನಿರ್ದೇಶಕ ರಾಜೇಂದ್ರಸಿಂಗ್ ಬಾಬು, ನಟ ಶ್ರೀನಿವಾಸ್ ಮೂರ್ತಿ, ಎಸ್.ಜೆ.ಎಮ್.ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಾಹಕ ನಿರ್ದೇಶಕರುಗಳಾದಡಾ.ಈ.ಚಿತ್ರಶೇಖರ್,ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಕಾರ್ಯನಿರ್ವಾಹಣಾಧಿಕಾರಿ ದೊರೆಸ್ವಾಮಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಮುರಾ ಕಲಾವಿದರು ವಚನಗೀತೆ ಪ್ರಾರ್ಥಿಸಿ,ಪ್ರದೀಪ್ಕುಮಾರ್.ಜಿ.ಟಿ. ಸ್ವಾಗತಿಸಿ, ಪ್ರೊ.ಸಾಲಿಮಠ್ ನಿರೂಪಿಸಿ ವಂದಿಸಿದರು.
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243