Connect with us

ದಿನದ ಸುದ್ದಿ

ದಾವಣಗೆರೆ | ಲಾಕ್‍ಡೌನ್ ಜಿಲ್ಲೆಗೆ ಹೋಗುವುದು ಮತ್ತು ಬರುವುದು ಬೇಡ ; ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್ : ಜಿಲ್ಲಾಧಿಕಾರಿ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಯುಗಾದಿ ಹಬ್ಬವನ್ನು ತಾವು ಸದ್ಯ ಇರುವ ಸ್ಥಳದಲ್ಲೇ ಆಚರಿಸಬೇಕು. ಅನಗತ್ಯವಾಗಿ ಪರವೂರಿಗೆ, ನೆಂಟರ ಊರು ಎಂದು ತೆರಳಬಾರದು ಹಾಗೂ ಬೇರೆ ಜಿಲ್ಲೆಗಳಿಂದ ಸಹ ಯಾರೂ ದಾವಣಗೆರೆ ಜಿಲ್ಲೆಗೆ ಆಗಮಿಸಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸಾರ್ವಜನಿಕರಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್ ನಿಯಂತ್ರಣ ಮತ್ತು ತಡೆ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳಿದ್ದು ಲಾಕ್‍ಡೌನ್ ಆಗಿರುವ ಒಂಭತ್ತು ಜಿಲ್ಲೆಗಳ ನಾಗರೀಕರು ದಾವಣಗೆರೆ ಜಿಲ್ಲೆಗೆ ಹಬ್ಬ ಅಥವಾ ಇತರೆ ಕಾರಣಗಳಿಗೆ ಬರಬಾರದು ಎಂಬುದು ಎಸ್‍ಪಿ, ಸಿಇಓ ಹಾಗೂ ನಮ್ಮೆಲ್ಲರ ಒಕ್ಕೊರಲ ಮನವಿಯಾಗಿದೆ ಎಂದರು.

ಚೆಕ್‍ಪೋಸ್ಟ್ ಮೂಲಕ ನಿಗಾವಣೆ

ದಾವಣಗೆರೆ ಜಿಲ್ಲೆಗೆ ಲಾಕ್‍ಡೌನ್ ಆಗಿರುವ ಒಂಭತ್ತು ಜಿಲ್ಲೆಗಳಿಂದ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುವುದು. ಇದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ಆರಂಭಿಸಲಾಗುವುದು. ಜಿಲ್ಲೆಗೆ ಬೇರೆ ಬೇರೆ ಊರುಗಳಿಂದ ಬರುವ ವಾಹನಗಳಲ್ಲಿನ ಜನರನ್ನು ತಪಾಸಣೆ(ಸ್ಕ್ರೀನಿಂಗ್) ಮಾಡಲಾಗುವುದು.

ಅವರಿಗೆ ಯಾವುದೇ ಸೋಂಕು ಇರುವುದು ಕಂಡು ಬಂದರೆ ಅಂತಹವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ನಿಗಾವಣೆಗೆ ಇರಿಸಲಾಗುವುದು. ಚೆಕ್‍ಪೋಸ್ಟ್‍ಗಳಲ್ಲಿ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆಗಳ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.

ಬಸ್ ಓಡಾಟ ರದ್ದು

ಲಾಕ್‍ಡೌನ್ ಆಗಿರುವ 9 ಜಿಲ್ಲೆಗಳಿಂದ ಓಡಾಡುವ ಖಾಸಗಿ ಬಸ್‍ಗಳನ್ನು ಸಹ ನಿಲ್ಲಿಸಲಾಗುವು. ಹಾಗೂ ಜಿಲ್ಲೆಯಿಂದ ಸಹ ಈ 9 ಜಿಲ್ಲೆಗಳಿಗೆ ಯಾವುದೇ ಬಸ್‍ಗಳು ಓಡಾಡಬಾರದಂತೆ ಕೆಎಸ್‍ಆರ್‍ಟಿಸಿ, ಆರ್‍ಟಿಓ ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚನೆ ನೀಡಿದರು.

ಎಲ್ಲ ಅಧಿಕಾರಿಗಳ ಮೊದಲ ಆದ್ಯತೆ ಕೊರೊನಾ ನಿಯಂತ್ರಣ

ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿ ಕೆಲಸಕ್ಕಿಂತ ಮುಖ್ಯವಾಗಿ ಮೊದಲನೇ ಆದ್ಯತೆಯಾಗಿ ಕೊರೊನಾ ವೈರಸ್ ನಿಯಂತ್ರಣದ ಕಾರ್ಯಗಳಲ್ಲಿ ಭಾಗಯಾಗಬೇಕು.

ಅಗತ್ಯ ಸೇವೆ ಹೊರತುಪಡಿಸಿ ಇತರೆ ಸೇವೆಗಳ ಬಂದ್

ಮೆಡಿಕಲ್ ಶಾಪ್, ಹಾಲು, ತರಕಾರಿ, ದಿನಸಿ ಅಂಗಡಿಗಳು, ಆಸ್ಪತ್ರೆಗಳು, ಪೆಟ್ರೋಲ್ ಬಂಕ್, ಕುಡಿಯುವ ನೀರಿನ ವ್ಯವಸ್ಥೆ, ಅಂಚೆ ಸೇವೆ, ಆಹಾರ, ಅಗ್ನಿಶಾಮಕ, ವಿದ್ಯುತ್ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ವಾಣಿಜ್ಯ ಸೇವೆಗಳನ್ನು ಈ ಕ್ಷಣದಿಂದ ಸ್ಥಗಿತಗೊಳಿಸಲು ಆದೇಶಿಸಲಾಗುವುದು. ಬಾರ್ ಮತ್ತು ರೆಸ್ಟೋರೆಂಟ್, ಬಂಗಾರದ ಅಂಗಡಿ, ಬಟ್ಟೆ, ಪಾತ್ರೆ ಅಂಡಿಗಳು, ಹಾರ್ಡ್‍ವೇರ್ ಶಾಪ್‍ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದರು.

ಆಹಾರ ಪಾರ್ಸೆಲ್‍ಗೆ ಅವಕಾಶ

ಹೋಟೆಲ್, ಕ್ಯಾಂಟಿನ್‍ಗಳಲ್ಲಿ ಕುಳಿತು ಊಟ ಮಾಡಲು ಅವಕಾಶ ಇಲ್ಲ. ಬದಲಾಗಿ ಪಾರ್ಸೆಲ್ ತೆಗೆದುಕೊಂಡು ಹೋಗಬಹುದು.

ಸುಳ್ಳುಸುದ್ದಿ ಹರಡಿದವರಿಗೆ ಕಠಿಣ ಕ್ರಮ

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. ಆದರೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಇದೆ ಎಂದು ಸುಳ್ಳುಸುದ್ದಿ ಹರಡುತ್ತಿದ್ದಾರೆಂಬ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂತಹ ಸುಳ್ಳು ಸುದ್ದಿ ಹರಡಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಸ್‍ಪಿ ಹನುಮಂತರಾಯ ಮಾತನಾಡಿ, ಪಾಲಿಕೆ, ಆರ್‍ಟಿಓ, ಕೆಎಸ್‍ಆರ್‍ಟಿಸಿ ಹಾಗೂ ಸಿಜಿ ಆಸ್ಪತ್ರೆಯ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆಗೆ ಅನುಕೂಲವಾಗುವಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳನ್ನು ನೀಡಲಾಗುವುದು.

ವಿದೇಶಕ್ಕೆ ಹೋಗಿ ಬಂದು ಮನೆಯಲ್ಲಿ ಪ್ರತ್ಯೇಕವಾಗಿ ಅವಲೋಕನ ಅವಧಿಯಲ್ಲಿ ಇರಿಸಲಾಗಿರುವ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಪ್ರತಿ ದಿನ ನೀಡಬೇಕು. ನಮ್ಮ ನಿಯೋಜಿತ ಸಿಬ್ಬಂದಿಗಳು ಅಂತವರನ್ನು ಮನೆಯಲ್ಲೇ ಇರುವಂತೆ ನಿಗಾ ವಹಿಸುವರು. ಹಾಗೂ ಅವರ ಮನೆ ಮುಂದೆ ಕೊರೊನಾ ವೈರಸ್ ಜಾಗೃತಿ ಬಗ್ಗೆ ಭಿತ್ತಿಚಿತ್ರ ಅಂಟಿಸಲಾಗುವುದು. ಅವರು ಹೊರಗೆ ಹೋಗುವುದರಿಂದ ತೊಂದರೆ ಆಗುವ ಹಿನ್ನೆಲೆಯಲ್ಲಿ ವಿದೇಶಕ್ಕೆ ಹೋಗಿ ಬಂದವರು ಕಡ್ಡಾಯವಾಗಿ ಅವಲೋಕನ ಅವಧಿಯನ್ನು ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿಗಳು, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಆರೋಗ್ಯ, ಕಂದಾಯ, ಸ್ಥಳೀಯ ಸಂಸ್ಥೆಗಳು, ಪಾಲಿಕೆ, ಆರ್‍ಟಿಓ, ಕೆಎಸ್‍ಆರ್‍ಟಿಸಿ ಸೇರಿದಂತೆ ನಿಗಾವಣೆಗಾಗಿ ನಿಯೋಜಿಸಲಾಗಿರುವ 6 ತಂಡಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ದಾಖಲಾತಿಗಳನ್ನು ನಿಖರವಾಗಿ ನಿರ್ವಹಿಸಬೇಕು ಎಂದರು.

ಲಾಕ್‍ಡೌನ್ ಬಗ್ಗೆ ಚಿಂತನೆ

ದಾವಣಗೆರೆ ಜಿಲ್ಲೆಯು ಸರ್ಕಾರ ಲಾಕ್‍ಡೌನ್ ಮಾಡಿರುವ ಜಿಲ್ಲೆಗಳಿಗೆ ಗಡಿಯಾಗಿರುವುದರ ಹಿನ್ನೆಲೆ ಹಾಗೂ ಸಾರ್ವಜನಿಕರು ಇಂದು ನಡೆದ ಫೋನ್‍ಇನ್ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣ ವರದಿಯಾಗುವವರೆಗೆ ಕಾಯದೇ ಮುನ್ನೆಚ್ಚರಿಕಾ ಕ್ರಮವಾಗಿ ಇಂದಿನಿಂದಲೇ ಲಾಕ್‍ಡೌನ್ ಮಾಡಬೇಕೆಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದಿನಿಂದಲೇ ಲಾಕ್‍ಡೌನ್ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದ ಅವರು, ಲಾಕ್‍ಡೌನ್ ಮಾಡುವವರೆಗೆ ಕಾಯದೇ ವ್ಯಾಪಾರಸ್ಥರು, ವಾಣಿಜ್ಯ ಅಂಗಡಿಗಳ ಮಾಲೀಕರು ಸ್ವಯಂ ಬಂಧ್ ಮಾಡಬೇಕೆಂದರು.

ವಾರ್ಡುವಾರು ಕೈತೊಳೆಯುವ ಪಾಯಿಂಟ್

ಕೊರೊನಾ ಸೋಂಕು ಮುನ್ನೆಚ್ಚರಿಕೆ ಕ್ರಮವಾಗಿ ನಗರದ 45 ವಾರ್ಡುಗಳು ಸೇರಿದಂತೆ ಇತರೆ ಸ್ಥಳೀಐ ಸಂಸ್ಥೆಗಳು ಸೇರಿ ಒಟ್ಟು 158 ಪಾಯಿಂಟ್‍ಗಳಲ್ಲಿ ಸ್ಯಾನಿಟೈಸರ್/ಸಾಬೂನಿನಿಂದ ‘ಕೈ ತೊಳೆಯುವ ಕೇಂದ್ರ’ ಗಳನ್ನು ಮೊದಲನೇ ಹಂತದಲ್ಲಿ 15 ದಿನಗಳ ಕಾಲ ತೆರೆಯಲಾಗುವುದು. ಇಲ್ಲಿ ಸಾರ್ವಜನಿಕರು ಆಗಾಗ ಕೈ ತೊಳೆಯುವ ಮೂಲಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬಹುದು ಎಂದರು.

ಎಟಿಎಂ ಸ್ಯಾನಿಟೈಸರ್ ಕಡ್ಡಾಯ

ಎಲ್ಲ ಎಟಿಎಂ ಗಳಲ್ಲಿ ಸ್ಯಾನಿಟೈಸರ್‍ಗಳನ್ನು ಕಡ್ಡಾಯವಾಗಿ ಇಡಬೇಕು. ಸ್ಯಾನಿಟೈಸರ್ ಇಡದೇ ಇರುವ ಎಟಿಎಂನ ಬ್ಯಾಂಕುಗಳಿಗೆ ನೋಟಿಸ್ ನೀಡಲಾಗುವುದು.

ಎನ್-95 ಅವಶ್ಯಕತೆ ಇಲ್ಲ

ಚಿಗಟೇರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೆಡಿಕಲ್ ವಿದ್ಯಾರ್ಥಿಗಳು ಇದುವರೆಗೂ ಎನ್-95 ಮಾಸ್ಕ್ ಲಭ್ಯವಾಗಿಲ್ಲ ಹಾಗಾಗಿ ಕರ್ತವ್ಯ ನಿರ್ವಹಿಸಲು ಕಷ್ಟ ಎಂದು ದೂರಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಕರ್ತವ್ಯ ನಿರ್ವಹಿಸಲು ಎನ್-95 ಮಾಸ್ಕ್ ಬೇಕೆಂದಿಲ್ಲ. ಬದಲಾಗಿ ಟ್ರಿಪಲ್ ಲೇಯರ್ ಮಾಸ್ಕ್ ಸಾಕು.

ಸರ್ಕಾರದ ಆದೇಶದ ಅನ್ವಯ ಎಲ್ಲೆಡೆಯೂ ಎನ್-95 ಮಾಸ್ಕ್ ಅವಶ್ಯಕವಲ್ಲ. ಬದಲಾಗಿ ಐಸಿಯು ಹಾಗೂ ಐಸೋಲೇಷನ್ ವಾರ್ಡ್‍ಗಳಲ್ಲಿ ಅದರ ಅವಶ್ಯಕತೆ ಇದೆಯಷ್ಟೇ. ವಿದ್ಯಾರ್ಥಿಗಳಿಗೆ ಈ ಕುರಿತು ಯಾವುದೇ ಆತಂಕ ಬೇಡ. ಇದನ್ನು ಅರಿತು ಕರ್ತವ್ಯ ನಿರ್ವಹಿಸುವುದರೊಂದಿಗೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕು. ಅದರಂತೆ ಅವಶ್ಯಕವಾಗಿರುವ ಸ್ಯಾನಿಟೈಸರ್ ಮತ್ತು ಮಾಸ್ಕ್‍ಗಳ ಕೊರತೆ ಬರದಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.ತಾಲ್ಲೂಕುಗಳಿಂದ ಬರುವ ಖಾಸಗಿ ಬಸ್‍ಗಳಲ್ಲಿ ಯದ್ವಾತದ್ವ ಜನರನ್ನು ತುಂಬಿಸುವುದು ಸೂಕ್ತವಲ್ಲ. ಈ ಬಗ್ಗೆ ಆರ್‍ಟಿಓ ಕ್ರಮ ವಹಿಸಬೇಕೆಂದರು ಹೇಳಿದರು.

ಬಸ್ ವ್ಯವಸ್ಥೆ ಇಲ್ಲದ ಕಡೆ ಆಟೋದವರು ಸಾರ್ವಜನಿಕರಿಂದ ದುಪ್ಪಟ್ಟು ಹಣ ಕೇಳುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ಈಗಲೇ ನಿಲ್ಲಿಸಬೇಕೆಂದು ಸೂಚಿಸಿದರು.

ಪೊಲೀಸ್ ಇಲಾಖೆಯ ಸಹಾಯ ಪಡೆದು ಪಾಲಿಕೆಯ ಆರೋಗ್ಯ ನಿರೀಕ್ಷಕರು, ಅಂಗಡಿ, ಬಾರ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಮಳಿಗೆಗಳನ್ನು ಎಲ್ಲೆಡೆ ಮುಚ್ಚಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಎಲ್ಲ ಕ್ವಾರಿಗಳನ್ನು ಸಹ ಇಂದಿನಿಂದಲೇ ಬಂದ್ ಮಾಡಬೇಕು ಎಂದು ಸೂಚಿಸಿದರು.

ಹಕ್ಕಿಜ್ವರ

ಜಿಲ್ಲಾಧಿಕಾರಿಗಳು, ಎಲ್ಲ ಕೋಳಿ ಫಾರಂಗಳನ್ನು ಸ್ವಚ್ಚಗೊಳಿಸುವ ಕೆಲಸ ಆಗಬೇಕು. ಸ್ವಚ್ಚತೆ ಮಾಡಿಸದೇ ಇರುವ ಫಾರ್ಮ್‍ಗಳನ್ನು ಶಾಶ್ವತವಾಗಿ ನಿಲ್ಲಿಸಲಾಗುವುದು ಎಂದರು.

ಸಭೆಯಲ್ಲಿ ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕರಿ ಪೂಜಾರ ವೀರಮಲ್ಲಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಕೆಎಸ್‍ಆರ್‍ಟಿಸಿ ಡಿಸಿ ಸಿದ್ದೇಶ್, ಆರ್‍ಟಿಓ ಎನ್.ಜೆ.ಬಣಕಾರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending