ದಿನದ ಸುದ್ದಿ
ದಾವಣಗೆರೆ | ಕೆಟಿಜೆ ನಗರ ಕಂಟೈನ್ಮೆಂಟ್ ವಲಯದ ಡಿನೋಟಿಫಿಕೇಷನ್
ಸುದ್ದಿದಿನ,ದಾವಣಗೆರೆ: ನಗರದಲ್ಲಿ ದಾಖಲಾಗಿದ್ದ ಒಂದು ಪಾಸಿಟಿವ್ ಪ್ರಕರಣ ದಾಖಲಾಗಿದ್ದ ಕೆಟಿಜೆ ನಗರದಲ್ಲಿ ಇದೀಗ 28 ದಿನಗಳಿಂದ ಯಾವುದೇ ಹೊಸ ಕೊರೊನಾ ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣೆ ಕಾಯ್ದೆ 2005 ರ ಅಧಿಕೃತ ಜ್ಞಾಪನೆ ಅನ್ವಯ ಈ ಕಂಟೈನ್ಮೆಂಟ್ ವಲಯವನ್ನು ಡಿನೋಟಿಪಿಫೈ ಮಾಡಲಾಗಿದೆ.
ಮೇ 6 ರ ಸಂಜೆಯಿಂದ ಕೋವಿಡ್ ಪಾಸಿಟಿವ್ ಆಗಿದ್ದ ರೋಗಿ ಸಂಖ್ಯೆ 665 ನೆಲೆಸಿದ್ದ ಕೆಟಿಜೆ ಬಡಾವಣೆಯ ಪೂರ್ವಕ್ಕೆ : ನಿಟ್ಟುವಳ್ಳಿ ಮೇನ್ ರಸ್ತೆ , ಕೆ.ಟಿ.ಜೆ ನಗರ ಹಾಗೂ ಶಿವಪ್ಪ ಸರ್ಕಲ್. ಪಶ್ಚಿಮಕ್ಕೆ : ಕೆ.ಟಿ.ಜೆ ನಗರ 3ನೇ ಮೇನ್ (10 ರಿಂದ 18ನೇ ಕ್ರಾಸ್).. ಉತ್ತರಕ್ಕೆ : ಕೆ.ಟಿ.ಜೆ ನಗರ 10ನೇ ಕ್ರಾಸ್, (ಕೆ.ಟಿ.ಜೆ ನಗರ 3ನೇ ಮೇನ್ ನಿಂದ ನಿಟ್ಟುವಳ್ಳಿ ಮೇನ್ ರಸ್ತೆ). ದಕ್ಷಿಣಕ್ಕೆ; ಕೆ.ಟಿ.ಜೆ ನಗರ 18ನೇ ಕ್ರಾಸ್ ( ಡಾಂಗೆ ಪಾರ್ಕ್ ನಿಂದ ಕೆ.ಟಿ.ಜೆ ನಗರ 3ನೇ ಮೇನ್ ರಸ್ತೆ).
ಹಾಗೂ ಈ ಬಡಾವಣೆಯಲ್ಲಿ ಪೂರ್ವಕ್ಕೆ ರಾಮ್ಪುರ, ಕೆಂಚಮ್ಮನಹಳ್ಳಿ, ಚಿಕ್ಕನಹಳ್ಳಿ, ಆವರಗೆರೆ, ಪಶ್ಚಿಮಕ್ಕೆ: ದೊಡ್ಡಬಾತಿ, ಕುಂದವಾಡ, ಹಳೆ ಕುಂದವಾಡ. ಉತ್ತರಕ್ಕೆ: ಆವರಗೊಳ್ಳ, ದೊಡ್ಡಬೂದಿಹಾಳು, ಕಲ್ಪನಹಳ್ಳಿ, ಬೇತೂರು. ದಕ್ಷಿಣಕ್ಕೆ: ಮಿಟ್ಲಕಟ್ಟೆ, ನಾಗನೂರು, ಶಿರಮಗೊಂಡನಹಳ್ಳಿ, ಪಾಮೇನಹಳ್ಳಿ. 2198 ವಸತಿಗಳು, 250 ಅಂಗಡಿಗಳು, 8792 ಜನಸಂಖ್ಯೆ, 02 ಸರ್ಕಾರಿ ಶಾಲೆ, 4 ಅಂಗನವಾಡಿಗಳು ಹಾಗೂ 3 ಖಾಸಗಿ ಶಾಲೆಗಳ ಈ ಬಡಾವಣೆಯಲ್ಲಿ ಬಫರ್ ಜೋನ್ 5 ಕಿ ಮೀ ಪರಿದಿಯ ಕಂಟೈನ್ಮೆಂಟ್ ವಲಯವನ್ನು ನಿಯಮಾನುಸಾರ ಡಿನೋಟಿಫೈ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಮತದಾನ ದಿನ ಕರ್ತವ್ಯ ನಿರತ ಮತದಾರರಿಗೆ ಅಂಚೆ ಮತದಾನಕ್ಕೆ ಅವಕಾಶ
ಸುದ್ದಿದಿನ,ದಾವಣಗೆರೆ : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಮೇ 7 ರಂದು ಮತದಾನ ದಿನದಂದು ಕರ್ತವ್ಯ ನಿರತ ಮತದಾರರಿಗೆ ಮೇ 4 ರಿಂದ 6 ರ ವರೆಗೆ ಸ್ಮಾರ್ಟ್ ಸಿಟಿ ಬಿಲ್ಡಿಂಗ್ನಲ್ಲಿ ಸ್ಥಾಪಿಸಲಾಗಿರುವ ಅಂಚೆ ಮತ ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹೊಸ ಕಟ್ಟಡಕ್ಕೆ ಸ್ಥಳಾಂತರ
ಸುದ್ದಿದಿನ,ದಾವಣಗೆರೆ : ಹೈಸ್ಕೂಲ್ ಮೈದಾನದಲ್ಲಿ ಮೇ 4 ರಂದು ಚುನಾವಣಾ ರ್ಯಾಲಿಯಲ್ಲಿ ಎಐಸಿಸಿ, ಕಾರ್ಯದರ್ಶಿಯವರಾದ ಪ್ರಿಯಾಂಕ ಗಾಂಧಿ ವಾದ್ರ, ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹೈಸ್ಕೂಲ್ ಮೈದಾನದಲ್ಲಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಒಂದು ದಿನ ಮಾತ್ರ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಕರಾದ ಶ್ರೀನಿವಾಸ್ಮೂರ್ತಿ ಸಿ.ಇ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ; ಸಕಲ ಸಿದ್ಧತೆ
ಸುದ್ದಿದಿನ,ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 8 ಗಂಟೆಯಿಂದ ತೋಳಹುಣಸೆಯಲ್ಲಿನ ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ನಡೆಯಲಿದ್ದು ಇವಿಎಂ ಭದ್ರತಾ ಕೊಠಡಿ ಮತ್ತು ಎಣಿಕೆ ಕೇಂದ್ರದ ಸಿದ್ದತೆಯನ್ನು ಏಪ್ರಿಲ್ 29 ರಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಪರಿಶೀಲಿಸಿದರು.
ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಹರಪನಹಳ್ಳಿ ಸೇರಿದಂತೆ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಬರಲಿದೆ. ಎಲ್ಲಾ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಶಿವಗಂಗೋತ್ರಿಯಲ್ಲಿ ನಡೆಯಲಿದೆ. ಇಲ್ಲಿನ ಕಾಮರ್ಸ್ ಬ್ಲಾಕ್ ನೆಲಮಹಡಿಯಲ್ಲಿ 4 ಕ್ಷೇತ್ರ ಮತ್ತು ರಾಜ್ಯಶಾಸ್ತ್ರ ಬ್ಲಾಕ್ನ ಮೊದಲ ಮಹಡಿಯಲ್ಲಿ 4 ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಮೇ 7 ರಂದು ಮತದಾನ ನಡೆಯುವುದರಿಂದ ಮತದಾನ ನಂತರ ಇವಿಎಂಗಳನ್ನು ಡಿಮಸ್ಟರಿಂಗ್ ಕೇಂದ್ರದಿಂದ ಭದ್ರತೆಯೊಂದಿಗೆ ಎಣಿಕೆ ಕೇಂದ್ರಕ್ಕೆ ತಂದು ಭದ್ರತಾ ಕೊಠಡಿಯಲ್ಲಿ ಮತಪೆಟ್ಟಿಗೆಯನ್ನು ಕಾಯ್ದಿರಿಸಲಾಗುತ್ತದೆ. ಮೇ 8 ರಿಂದ ಎಣಿಕೆ ನಡೆಯುವವರೆಗೆ ಅರೆ ಸೇನಾಪಡೆಯ ಭದ್ರತೆಯೊಂದಿಗೆ ಜೂನ್ 4 ರಂದು ನಡೆಯುವ ಎಣಿಕೆವರೆಗೆ ಸಂಪೂರ್ಣ ಸರ್ಪಗಾವಲಿನ ಭದ್ರತಾ ವ್ಯವಸ್ಥೆ ಮಾಡಲಾಗಿರುತ್ತದೆ. ಮತದಾನದ ನಂತರ ಇವಿಎಂ ಭದ್ರತಾ ಕೊಠಡಿಯಲ್ಲಿ ಸಂಗ್ರಹಿಸುವುದರಿಂದ ಎಣಿಕೆ ಸಿದ್ದತೆಯನ್ನು ಈಗಲೇ ಮಾಡಿಕೊಳ್ಳಬೇಕಾಗಿದ್ದು ಸಿದ್ದತೆಯನ್ನು ಪರಿಶೀಲಿಸಲಾಯಿತು.
ಎಣಿಕೆ ಪೂರ್ವ ಇವಿಎಂ ಭದ್ರತೆಗೆ ಟುಟೈರ್ ಪದ್ದತಿ
ಮತದಾನ ನಂತರ ಇವಿಎಂ ಸಂಗ್ರಹಿಸಲಾದ ಎಣಿಕೆ ಕೇಂದ್ರದಲ್ಲಿ ಸಿಸಿಟಿವಿ ಕಣ್ಗಾವಲು ಜೊತೆಗೆ 100 ಮೀಟರ್ ವ್ಯಾಪ್ತಿಯೊಳಗೆ ಸಿಎಪಿಎಫ್ ಕೇಂದ್ರ ಸಶಸ್ತ್ರ ಪೊಲೀಸ್ ಫೋರ್ಸ್ ಭದ್ರತೆಯನ್ನು ನೀಡಲಾಗುತ್ತದೆ. ಮತ್ತು ನಂತರ ರಾಜ್ಯ ಸಶಸ್ತ್ರ ಮೀಸಲು ಪಡೆಯ ಭದ್ರತೆ ಒದಗಿಸಲಾಗಿರುತ್ತದೆ. ಚುನಾವಣಾಧಿಕಾರಿಗಳು ಪ್ರತಿದಿನ ಎರಡು ಭಾರಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸುವರು.
ಇವಿಎಂ ಭದ್ರತಾ ಕೊಠಡಿ ಪರಿಶೀಲನೆಗೆ ಅಭ್ಯರ್ಥಿಗಳಿಗೂ ಅವಕಾಶ; ಮೇ 7 ರಂದು ನಡೆಯುವ ಮತದಾನ ನಂತರ 1946 ಮತಗಟ್ಟೆಗಳಲ್ಲಿನ ಮತಪೆಟ್ಟಿಗೆಗಳನ್ನು ಎಣಿಕೆ ಕೇಂದ್ರದಲ್ಲಿನ ಭದ್ರತಾ ಕೊಠಡಿಗಳಲ್ಲಿ ಕ್ಷೇತ್ರವಾರು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತದೆ. ಎಲ್ಲಾ ಭದ್ರತಾ ಕೊಠಡಿಗಳ ಸುತ್ತಲೂ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಎಲ್ಲಾ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಸೀಲ್ ಮಾಡಲಾಗಿರುತ್ತದೆ. ಮತ್ತು ಪ್ರತಿ ಭದ್ರತಾ ಕೊಠಡಿಗೂ ಕೇಂದ್ರ ಸಶಸ್ತ್ರ ಪೊಲೀಸ್ ಫೋರ್ಸ್ ಕಾವಲಿರುತ್ತದೆ. ಭದ್ರತಾ ವ್ಯವಸ್ಥೆ ಪರಿಶೀಲಿಸಲು ಸಿಸಿಟಿವಿ ಅಳವಡಿಸಲಾಗಿದ್ದು ಇದೆಲ್ಲವನ್ನು ನಿಯಂತ್ರಣಕ್ಕಾಗಿ ಕಂಟ್ರೋಲ್ ರೂಂ ಸ್ಥಾಪಿಸಲಾಗುತ್ತದೆ. ಇಲ್ಲಿ ಎಲ್ಲಾ ಕಡೆಯ ಸಿಸಿಟಿವಿಗಳ ಪ್ರದರ್ಶನ ಇರಲಿದೆ.
ಅಭ್ಯರ್ಥಿಗಳು ಕಂಟ್ರೋಲ್ ರೂಂಗೆ ಬಂದು ಪರಿಶೀಲಿಸಬಹುದಾಗಿದೆ. ಆದರೆ ಆಗಮಿಸುವ ಬಗ್ಗೆ 24 ಗಂಟೆ ಮುಂಚಿತವಾಗಿ ಮಾಹಿತಿ ನೀಡಿ ಬರಬೇಕಾಗುತ್ತದೆ. ಅವರು ಅಲ್ಲಿಯೇ ಇದ್ದು ನೋಡಲು ಸಹ ಅವಕಾಶ ಇರುತ್ತದೆ.
ಪರಿಶೀಲನೆ ವೇಳೆ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ರಾಜ್ಯದಲ್ಲಿ ಗುರುವಾರ ಭಾರೀ ಬಿಸಿಗಾಳಿ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ
-
ದಿನದ ಸುದ್ದಿ3 days ago
ಲೋಕಸಭಾ ಚುನಾವಣೆ | ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ; ಸಕಲ ಸಿದ್ಧತೆ
-
ದಿನದ ಸುದ್ದಿ3 days ago
ಲೋಕಸಭಾ ಚುನಾವಣೆ ದಾವಣಗೆರೆ : ಮತದಾನ ಸಿಬ್ಬಂದಿಗಳಿಗೆ ಎರಡನೇ ಹಂತದ ತರಬೇತಿಯಲ್ಲಿ ನಡೆದಿದ್ದೇನು.!?
-
ದಿನದ ಸುದ್ದಿ17 hours ago
ದಾವಣಗೆರೆ | ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣ ಹೊಸ ಕಟ್ಟಡಕ್ಕೆ ಸ್ಥಳಾಂತರ
-
ದಿನದ ಸುದ್ದಿ7 hours ago
ಲೋಕಸಭಾ ಚುನಾವಣೆ | ಮತದಾನ ದಿನ ಕರ್ತವ್ಯ ನಿರತ ಮತದಾರರಿಗೆ ಅಂಚೆ ಮತದಾನಕ್ಕೆ ಅವಕಾಶ