ದಿನದ ಸುದ್ದಿ
ಈ ದಿನದ ರಾಶಿಗಳ ಶುಭಾಶುಭಫಲ : ಇಂದೇ ಕರೆಮಾಡಿ
ಶ್ರೀ ಗಣಪತಿ ದೇವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945410150
ಮೇಷ ರಾಶಿ
ನಿಮ್ಮ ಮುಖದಲ್ಲಿ ಈದಿನ ನಿರಂತರವಾದ ನಗುವನ್ನು ಕಾಣಬಹುದು ಏಕಪಕ್ಷೀಯ ವ್ಯಾಮೋಹ ಇಂದು ಹಾನಿಕರ ಎಂದು ಸಾಬೀತಾಗುತ್ತದೆ ನಿಮ್ಮ ವೈವಾಹಿಕ ಜೀವನದ ದೈನಂದಿನ ಅಗತ್ಯಗಳ ನೆರವೇರಿಸಿ ಕೊರತೆಯಿಂದಾಗಿ ಒತ್ತಡಕ್ಕೆ ಒಳಗಾಗಬಹುದು ಉದ್ಯೋಗಸ್ಥರು ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹ ಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಣಕಾಸಿನಲ್ಲಿ ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಬೇಕು ವಿವಾಹದ ವ್ಯಾಮೋಹ ಕಾಣಿಸಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಷಭ ರಾಶಿ
ಈ ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ತಂದುಕೊಡುತ್ತದೆ ನಿಮ್ಮ ಧೈರ್ಯ ಪ್ರೀತಿಯನ್ನು ಗೆಲ್ಲಬಹುದು ಸಾಮಾನ್ಯ ಜನರಲ್ಲಿ ವಿಚಾರಗೋಷ್ಠಿಗಳು ಮಾಡುವುದರಿಂದ ಹೊಸ ಜ್ಞಾನ ಹೊಸ ಸಂಪರ್ಕಗಳು ಉಂಟಾಗುತ್ತವೆ ಧನಲಾಭ ಕಾಣಿಸತೊಡಗುತ್ತದೆ ವ್ಯಾಪಾರ ವ್ಯವಹಾರ ಅನಿರೀಕ್ಷಿತವಾಗಿ ಕುಸಿಯಬಹುದು ಅನಾರೋಗ್ಯಕ್ಕೆ ಒಳ್ಳೆಯ ಚಿಕಿತ್ಸೆಯನ್ನು ನೀಡುವುದು ಫಲಕಾರಿಯಾಗುತ್ತದೆ ದೈವಬಲ ನಿಮ್ಮಲ್ಲಿ ಅದೃಷ್ಟವನ್ನು ಉಂಟುಮಾಡುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಿಥುನ ರಾಶಿ
ನಿಮ್ಮ ಕುಟುಂಬಕ್ಕೆ ಸೂಕ್ತ ಸಮಯವನ್ನು ನೀಡಬೇಕು ನೀವು ಅವರ ಸಲುವಾಗಿ ಕಾಳಜಿ ವಹಿಸುತ್ತಾರೆ ಎಂದು ಅವರಿಗೆ ಅರ್ಥವಾಗಲಿ ನೀವು ದಿನನಿತ್ಯ ಮಾಡುವ ವ್ಯಾಯಾಮವನ್ನು ಕೈಬಿಡಬೇಡಿ ಮತ್ತೆ ಕೀಲುನೋವು ಹೆಚ್ಚಾಗುತ್ತದೆ ಮದುವೆ ಕಾರ್ಯಗಳಿಗೆ ಸಿದ್ಧತೆ ನಡೆಯುತ್ತದೆ ನೀವು ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವುದು ಸೂಕ್ತ ದಾಂಪತ್ಯದಲ್ಲಿ ಹೆಚ್ಚು ಕಾಳಜಿಯನ್ನು ವಹಿಸಬೇಕು ಹಣಕಾಸಿನ ಅವಶ್ಯಕತೆ ಹೆಚ್ಚಾಗಿ ಕಂಡುಬರುತ್ತದೆ ಅಸಾಮಾನ್ಯವಾದ ಕೆಲಸಗಳನ್ನು ಈ ದಿನ ಮಾಡುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕರ್ಕಾಟಕ ರಾಶಿ
ಸ್ವಲ್ಪ ಹೆಚ್ಚು ಹಣವನ್ನು ಸಂಪಾದನೆ ಮಾಡಲು ನಿಮ್ಮ ಹೊಸ ಕಲ್ಪನೆಗಳು ಸಹಾಯಕ್ಕೆ ಬರಬಹುದು ದಂಪತಿಗಳಲ್ಲಿ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಬೇಕು ಇಲ್ಲವಾದರೆ ವಾದ-ವಿವಾದ ನಡೆಯುತ್ತದೆ ಅನಿರೀಕ್ಷಿತ ಪ್ರಯಾಣ ಒತ್ತಡ ತರಿಸುತ್ತದೆ ನಿಮಗೆ ಅಪಖ್ಯಾತಿ ಉಂಟಾಗುವ ಸಾಧ್ಯತೆಗಳು ಹೆಚ್ಚಿರುತ್ತವೆ ಕೆಲಸದ ಕಚೇರಿಗಳಿಗೆ ಭೇಟಿ ಮಾಡುವುದರಿಂದ ನಿಮ್ಮ ಕಾರ್ಯಗಳು ನಡೆಯುತ್ತವೆ ಗುರು ಬಲದಿಂದ ವಿಶೇಷ ಮದುವೆ ಆಹ್ವಾನಗಳು ಬರಬಹುದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಸಿಂಹ ರಾಶಿ
ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸು ಪೂರ್ತಿಯಾಗಿ ಆವರಿಸಿಕೊಳ್ಳುತ್ತದೆ ಒತ್ತಡಗಳನ್ನು ಮುಕ್ತವಾಗಿ ನಿಭಾಯಿಸಲು ಪ್ರಯತ್ನಿಸಬೇಕು ಮನೆಯ ಮೂಲಗಳಿಂದ ಹಣವನ್ನು ಕಂಡು ದಿನವನ್ನು ಬೆಳಗಿಸುತ್ತದೆ ಕುಟುಂಬದಲ್ಲಿ ರಹಸ್ಯ ಸುದ್ದಿಗಳು ನೀವು ಕಂಡು ಅಚ್ಚರಿ ಕೊಳ್ಳಬಹುದು ಒಳ್ಳೆಯ ಆರೋಗ್ಯಕ್ಕೆ ಮಾನಸಿಕತೆಯನ್ನು ದೂರಮಾಡಬೇಕು ಪ್ರೀತಿಪಾತ್ರರೊಂದಿಗೆ ವಿವಾಹ ನಡೆಯುವುದು ಕೆಲಸದಲ್ಲಿ ಎಲ್ಲವೂ ನಿಮ್ಮ ಪರವಾಗಿ ಕಾಣಿಸುತ್ತದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕನ್ಯಾ ರಾಶಿ
ಕೆಲಸ ಕಾರ್ಯದ ಕೌಶಲ್ಯಗಳು ಪರಿಣಾಮಕಾರಿಯಾಗಿ ಕಂಡುಬರುತ್ತವೆ ವ್ಯಾಪಾರದಲ್ಲಿ ಹೇಳಿಕೊಳ್ಳುವಷ್ಟು ಲಾಭದ ಪ್ರಮಾಣ ಬರುವುದಿಲ್ಲ ನಿಮ್ಮ ಪ್ರೇಮ ಸಂಗಾತಿಯು ಸಕ್ಕರೆಗಿಂತ ಸಿಹಿ ಎಂದು ತಿಳಿದುಬರುತ್ತದೆ ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ ನೆಚ್ಚಿನ ನೆರೆಹೊರೆ ಯಿಂದ ಸ್ವಲ್ಪ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಮದುವೆ ವಿಚಾರ ಬೇಗನೆ ಕೈಗೂಡುವುದಿಲ್ಲ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ತುಲಾ ರಾಶಿ
ಆರೋಗ್ಯದಲ್ಲಿ ಅಗತ್ಯ ಮುತುವರ್ಜಿವಹಿಸಿ. ಕೆಲಸಗಳಲ್ಲಿ ಶ್ರದ್ದೆ ಮತ್ತು ಪ್ರಾಮಾಣಿಕತೆ ಮುಖ್ಯವಾಗಿರುತ್ತದೆ. ನಿಮ್ಮ ಕಾರ್ಯಶೈಲಿ ಮೆಚ್ಚುಗೆ ಪಡೆದು ಮೇಲಾಧಿಕಾರಿಗಳು ನಿಮ್ಮನ್ನು ಆಯ್ಕೆ ಮಾಡಲಿದ್ದಾರೆ. ಪ್ರಯಾಣದ ಸಂದರ್ಭದಲ್ಲಿ ಅಗತ್ಯ ವಸ್ತುಗಳನ್ನು ಮರೆಯದೆ ಇಟ್ಟುಕೊಳ್ಳುವುದು ಕ್ಷೇಮ. ಪಶುಸಂಗೋಪನೆ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಆರ್ಥಿಕ ಬೆಳವಣಿಗೆ ಕಾಣಬಹುದಾದ ದಿನವಿದು.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ವೃಶ್ಚಿಕ ರಾಶಿ
ನಿರೀಕ್ಷಿತ ಆದಾಯಗಳು ವಿಳಂಬವಾಗುವ ಸಾಧ್ಯತೆ ಕಂಡು ಬರಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಆಪಾದನೆಗಳು ಎದುರಾಗಬಹುದು. ಯೋಜನೆಗಳನ್ನು ಸೂಕ್ಷ್ಮವಾಗಿ ಅರ್ಥೈಸಿಕೊಂಡು ಮುಂದೆ ಸಾಗುವುದು ಒಳಿತು. ಬರುವ ಸಮಸ್ಯೆಯನ್ನು ದೃಢಮನಸ್ಸಿನಿಂದ ಎದುರಿಸಲು ಸಜ್ಜಾಗಿ. ಲಾಭಗಳಿಕೆಗೆ ಹಲವು ಅವಕಾಶಗಳು ಕಾಣಬರುತ್ತದೆ, ಅದನ್ನು ವ್ಯವಸ್ಥಿತ ಕಾರ್ಯಗಳಿಂದ ಪಡೆದುಕೊಳ್ಳುವುದು ಮುಖ್ಯ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಧನಸ್ಸು ರಾಶಿ
ಆಕಸ್ಮಿಕವಾಗಿ ನೀವು ಮಾತನಾಡುವ ಮಾತುಗಳು ಪ್ರಮಾದಕ್ಕೆ ಎಡೆಮಾಡಿಕೊಡಬಹುದು ಎಚ್ಚರವಿರಲಿ. ಆರ್ಥಿಕ ಸಹಾಯಕ್ಕಾಗಿ ಬಂಧುಮಿತ್ರರ ಬಳಿ ಕೇಳುವ ಸಾಧ್ಯತೆ ಕಾಣಬಹುದು. ಸಂಜೆಯ ವೇಳೆಗೆ ನಿಮ್ಮ ವೈಯಕ್ತಿಕ ಸಮಸ್ಯೆ ದೂರವಾಗಲಿದೆ. ಶಕ್ತಿ ದೇವತಾ ದರ್ಶನಕ್ಕೆ ಇಂದು ಹೋಗುವ ಸಾಧ್ಯತೆ ಕಾಣಬಹುದು. ಸಂಗಾತಿಯೊಡನೆ ಸಮಾರಂಭಗಳಿಗೆ ಭೇಟಿನೀಡುವ ಮನಸ್ಥಿತಿಯಲ್ಲಿರುವಿರಿ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮಕರ ರಾಶಿ
ಕೆಲಸದಲ್ಲಿ ಕುಶಲತೆ ಉತ್ತಮವಾಗಿರುತ್ತದೆ. ನಿಮ್ಮ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಸಿಗುವುದು ನಿಶ್ಚಿತ. ವಿದೇಶ ಪ್ರಯಾಣದ ಚಿಂತನೆಗೆ ಮೂರ್ತಸ್ವರೂಪ ದೊರೆಯಲಿದೆ. ಅಪರಿಚಿತ ವ್ಯಕ್ತಿಗಳೊಡನೆ ವ್ಯವಹಾರ ಮಾಡುವಾಗ ಎಚ್ಚರಿಕೆ ಇರಲಿ. ಆಕಸ್ಮಿಕ ಧನಲಾಭ ವಾಗುವ ಸಾಧ್ಯತೆ ಕಂಡು ಬರಲಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕುಂಭ ರಾಶಿ
ಸ್ವಯಂ ಪ್ರೇರಣೆಯಿಂದ ಸಾಮಾಜಿಕ ಕಾರ್ಯಗಳಿಗೆ ನೀವು ದುಡಿಯುವಿರಿ. ನಿಮ್ಮ ಕೆಲವು ಆಲೋಚನೆಗಳು ಸೂಕ್ತ ಮನ್ನಣೆ ಸಿಗಲಿದೆ. ಭೋಜನದ ವ್ಯವಸ್ಥೆ ಅತ್ಯುತ್ತಮವಾಗಿ ಇರಲಿದೆ. ಮನೆಗೆ ಬರುವ ನೆಂಟರಿಂದ ಸಂತಸದ ವಾತಾವರಣ ಪ್ರಾಪ್ತಿಯಾಗುತ್ತದೆ. ನಿರೀಕ್ಷಿತ ಆದಾಯಗಳು ಸಮಯದ ಗತಿಯಲ್ಲಿ ಕೈಸೇರುವುದು ನಿಶ್ಚಿತ. ಮನರಂಜನೆಗೆ ಅವಕಾಶಗಳು ಸಿಗುವ ಸಾಧ್ಯತೆಯಿದೆ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಮೀನ ರಾಶಿ
ಸಂಕೋಚದ ಸ್ವಭಾವದಿಂದ ವರ್ತಿಸುವುದು ನಿಮ್ಮ ಕೆಲಸಗಳಿಗೆ ಹಿನ್ನಡೆ ಯಾಗಲು ಕಾರಣವಾಗಬಹುದು. ನೇರವಾದ ಮಾತು ಮತ್ತು ನಿಮ್ಮಲ್ಲಿ ಹೊಳೆಯುವ ಆಲೋಚನೆಗಳನ್ನು ಪ್ರಸ್ತುತಪಡಿಸಿ. ಆರ್ಥಿಕ ಸ್ಥಿತಿ ಸಾಧಾರಣವಾಗಿ ಇರಲಿದೆ. ಮುಂದಿನ ದಿನಗಳ ಅವಶ್ಯಕತೆಗಾಗಿ ಹಣಕಾಸನ್ನು ಕೊಡಿಡಬೇಕಾಗಿದೆ, ದುಂದುವೆಚ್ಚ ಮಾಡುವುದು ಒಳಿತಲ್ಲ. ಹಿರಿಯರ ಮಾತುಗಳನ್ನು ಆದಷ್ಟು ಪಾಲನೆ ಮಾಡುವುದು ಸೂಕ್ತ.
ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ
ಇಂದೇ ಕರೆ ಮಾಡಿ: 9945410150
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243