ದಿನದ ಸುದ್ದಿ
ವಾಪಸು ಮನೆಗೆ ಮರಳಿ ಕೃಷಿ ಮಾಡಬೇಕು : ಐಪಿಎಸ್ ಅಧಿಕಾರಿ ಅಣ್ಣಾಮಲೈ ಭಾವನಾತ್ಮಕ ಪತ್ರ, ಮಿಸ್ ಮಾಡ್ದೆ ಓದಿ
ಸ್ನೇಹಿತರೇ ಮತ್ತು ನನ್ನ ಹಿತೈಷಿಗಳೇ,
ಎಲ್ಲರಿಗೂ ನಮಸ್ಕಾರ. ನನ್ನ ರಾಜೀನಾಮೆ ಕುರಿತು ಪ್ರಕಟವಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಕೆಲವೊಂದು ವಿಜಯಗಳನ್ನು ನಿಮ್ಮ ಗಮನಕ್ಕೆ ತರ ಬಯಸುತ್ತೇನೆ.
ಇಂದು, ಮೇ 28, 2019 ರಂದು ನಾನು ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದೇನೆ. ಇದರ ಆಡಳಿತಾತ್ಮಕ ಪ್ರಕ್ರಿಯೆ ಮುಗಿಯಲು ಕೆಲ ಸಮಯ ತಗಲಬಹುದು. ಈ ಕುರಿತು ಚರ್ಚೆಯಾಗುತ್ತಿರುವ ಎಲ್ಲಾ ಊಹಾಪೋಹಗಳಿಗೆ ಪೂರ್ಣವಿರಾಮವಿಡಲು ನಾನೇ ಖುದ್ದು ಇದನ್ನು ಬರೆಯುತ್ತಿದ್ದೇನೆ.
6 ತಿಂಗಳ ಸುದೀರ್ಘವಾದ ಗಹನ ಚಿಂತನೆಯ ಬಳಿಕ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಕಳೆದ 9 ವರ್ಷಗಳಿಂದ ನಾನು ಈ ಸೇವೆಯಲ್ಲಿದ್ದು, ಪ್ರತಿ ಕ್ಷಣಗಳನ್ನು ‘ಖಾಕಿ’ ತತ್ವಕ್ಕೆ ಬದ್ಧವಾಗಿ ನಡೆದುಕೊಂಡು ಬಂದಿದ್ದೇನೆ. ಈ ಖಾಕಿಯಲ್ಲಿ ಸಿಗುವ ಹೆಮ್ಮೆಯ ಕ್ಷಣ ಹಾಗೂ ಸಹೋದ್ಯೋಗಿಗಳೊಂದಿಗೆ ಕಳೆದ ಕ್ಷಣಗಳು ಅವಿಸ್ಮರಣಿಯ. ಒಂದರ್ಥದಲ್ಲಿ ಪೊಲೀಸ್ ಸೇವೆಯೆಂದರೆ ದೇವರಿಗೆ ಅತೀ ಇಷ್ಟವಾದುದು ಎಂದು ನಾನು ನಂಬಿದ್ದೇನೆ. ಅತೀ ಒತ್ತಡದಲ್ಲಿ ನಿರ್ವಹಿಸುವ ಈ ಕೆಲಸದಲ್ಲಿ ಕುಂದು ಕೊರತೆಗಳು ಸಾಮಾನ್ಯ. ಅದೆಷ್ಟೋ ಕಾರ್ಯಕ್ರಮಗಳನ್ನು ನಾನು ಮಿಸ್ ಮಾಡಿದ್ದೇನೆ; ಹಲವು ಬಾರಿ ನನ್ನ ಕಷ್ಟಕಾಲದಲ್ಲಿ ನಿಂತವರ ಜೊತೆ ನನಗೆ ನಿಲ್ಲಲಿಕ್ಕಾಗಲಿಲ್ಲ, ಹಲವೊಮ್ಮೆ ಅಸಹಾಯಕತನ ಅನುಭವಿಸದ್ದೇನೆ; ಕೆಲವೊಮ್ಮೆ, ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ವಹಿಸಿದ್ದೇನೆ.
ಕಳೆದ ವರ್ಷ ಕೈಲಾಶ ಮಾನಸಸರೋವರಕ್ಕೆ ನೀಡಿದ ಭೇಟಿ ನನ್ನ ಕಣ್ಣನ್ನು ತೆರೆಸಿದೆ. ಅದು, ಜೀವನದಲ್ಲಿ ಆದ್ಯತೆಯ ವಿಷಯಗಳನ್ನು ನನಗೆ ತಿಳಿಸಿಕೊಟ್ಟಿದೆ. ಮಧುಕರ್ ಶೆಟ್ಟಿ ಸರ್ ನಿಧನವು ಜೀವನದೊಳಗೆ ಮತ್ತೊಮ್ಮೆ ಆತ್ಮಾವಲೋಕನ ಮಾಡಲು ಪ್ರೇರೇಪಿಸಿದೆ.
ಎಲ್ಲಾ ಒಳ್ಳೆ ಕೆಲಸಗಳು ಒಂದು ದಿನ ಕೊನೆಯಾಗಲೇ ಬೇಕು, ಹಾಗೇಯೇ ನನ್ನ ಖಾಕಿ ದಿನಗಳೂ.. ಈ ನಿಟ್ಟಿನಲ್ಲಿ, ಹಿಂದೆನೇ ನಿರ್ಧಾರ ತೆಗೆದುಕೊಂಡಿದ್ದೆಯಾದರೂ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜೀನಾಮೆ ನೀಡಿ ಸರ್ಕಾರಕ್ಕೆ ಸಮಸ್ಯೆ ಉಂಟುಮಾಡುವುದು ಸರಿ ಎನಿಸಲಿಲ್ಲ. ನನ್ನ ರಾಜೀನಾಮೆಯಿಂದ ನಿಮಗೆ ನೋವಾಗಿದ್ದರೆ, ನಾನು ಕ್ಷಮೆ ಯಾಚಿಸುತ್ತೇನೆ. ಪ್ರಾಮಾಣಿಕವಾಗಿ ಹೇಳೋದಾದರೆ, ನಾನಿದನ್ನು ಈಗ ಮಾಡಲೇಬೇಕು. ಈ ಕಠಿಣವಾದ ನಿರ್ಧಾರವನ್ನು ತೆಗೆದುಕೊಳ್ಳುವಲ್ಲಿ ನನ್ನ ಜೊತೆ ನಿಂತ ನನ್ನ ಆಪ್ತ ಸ್ನೇಹಿತೆ, ನನ್ನ ಮಡದಿಗೆ ಇದು ಬಹಳ ಭಾವನಾತ್ಮಕ ಸನ್ನಿವೇಶ.
ಮುಂದೇನು?
ನನ್ನ ಮುಂದಿನ ನಡೆಯೇನು ಎಂದು ತಿಳಿಯಲು ಬಯಸುವವರಿಗೆ ಹೇಳೋದಾದರೆ, ಬಹಳ ದೊಡ್ಡ ಕನಸುಗಳನ್ನು ಕಟ್ಟಿಕೊಳ್ಳಲು, ನಾನೊಬ್ಬ ಸಣ್ಣ ಮನುಷ್ಯ. ನಾನು ಜೀವನದಲ್ಲಿ ಕಳೆದುಕೊಂಡಿರುವ ಸಣ್ಣ ಪುಟ್ಟ ಸಂತೋಷಗಳನ್ನು ಮತ್ತೆ ಪಡೆಯಲು ಸಮಯ ಕಳೆಯಬೇಕು. ಬೆಳೆಯುತ್ತಿರುವ ನನ್ನ ಮಗನಿಗೆ ಒಳ್ಳೆ ತಂದೆಯಾಗಬೇಕು. ಆತನಿಗೆ ನನ್ನ ಅಗತ್ಯವಿದೆ.
ವಾಪಸು ಮನೆಗೆ ಮರಳಿ ಕೃಷಿ ಮಾಡಬೇಕು. ನಾನೀಗ ಪೊಲೀಸ್ ಅಧಿಕಾರಿಯಲ್ಲ, ನಾನೇ ಸಾಕಿದ ಕುರಿಗಳೂ ನಾನು ಹೇಳಿದ ಮಾತನ್ನು ಕೇಳುತ್ತವೋ, ಇಲ್ಲ ಗೊತ್ತಿಲ್ಲ. ಸಿಕ್ಕಿರುವ ಅವಕಾಶಗಳ ಬಗ್ಗೆ ಮಾತನಾಡಲು ನನ್ನಂಥ ನಶ್ವರ ಮನುಷ್ಯನಿಗೆ, ಜೀವನವು ಸಿಕ್ಕಿರುವ ಒಂದು ಬಲುದೊಡ್ಡ ಅವಕಾಶ.
ನನ್ನ ವೃತ್ತಿ ಜೀವನದ ಪ್ರತಿ ಹೆಜ್ಜೆಯಲ್ಲೂ, ನ್ಯಾಯದ ಹೋರಾಟದಲ್ಲಿ ನನ್ನ ಜೊತೆ ನಿಂತ ಕಾರ್ಕಳ, ಉಡುಪಿ ಮತ್ತು ಬೆಂಗಳೂರಿನ ಜನರನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ. ಅಪೂರ್ಣವಾಗಿದ್ದ ನನ್ನನ್ನು ಪರಿಪೂರ್ಣ ಮನುಷ್ಯನಾಗಿ ರೂಪಿಸಿದ್ದು ಈ ಜನ. ನನಗೆ ವೃತ್ತಿಪಾಠವನ್ನು ಕಲಿಸಿದ ಹಿರಿಯ ಸಹದ್ಯೋಗಿಗಳ ಮಾರ್ಗದರ್ಶನ ಹಾಗೂ ವೃತ್ತಿನಿಷ್ಠರಾಗಿರುವ ಕಿರಿಯ ಸಹದ್ಯೋಗಿಗಳನ್ನು ನಾನು ಬಹಳ ಮಿಸ್ ಮಾಡುವೆ. ಹಿರಿಯ ಕಿರಿಯ ಪೇದೆಗಳನ್ನೂ ಅಷ್ಟೇ ಮಿಸ್ ಮಾಡುವೆ. ನಾನು ಅವರಿಗಾಗಿ ಜೀವಿಸಿದ್ದೇನೆ, ಅವರ ಹಕ್ಕು-ಉತ್ತಮ ಜೀವನ ಗುಣಮಟ್ಟ ಅವರಿಗೆ ಸಿಗುವಂತಾಗಲು ನಾನು ಪರಿಶ್ರಮ ಪಟ್ಟಿದ್ದೇನೆ.
ನಿಮ್ಮ ನಿರೀಕ್ಷೆಗಳಿಗೆ ತಕ್ಕಂತೆ ನಾನು ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ ಎಂಬ ನಂಬಿಕೆ ನನಗಿದೆ. ಒಂದು ವೇಳೆ ನನ್ನಿಂದ ಯಾವುದೇ ತಪ್ಪಾಗಿದ್ದರೂ, ನನ್ನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ನಾನೂ ನಿಮ್ಮಂತೆ ಒಬ್ಬ ಮನುಷ್ಯ.
ನಾನು ನಿಮ್ಮೆಲ್ಲರನ್ನು ಮಿಸ್ ಮಾಡ್ತೇನೆ, ವಿಶೇಷವಾಗಿ ನಿಮ್ಮಲ್ಲೆರ ಪ್ರೀತಿ ಹಾಗೂ ವಿಶ್ವಾಸವನ್ನು.
ನಿಮ್ಮ ಪ್ರೀತಿಯ
ಅಣ್ಣಾಮಲೈ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ4 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?