ದಿನದ ಸುದ್ದಿ
ಮನು ರವಿಚಂದ್ರನ್ ‘ಚಿಲ್ಲಂ’ ಮತ್ತೆ ಶುರು..!
ಸಿನೆಮಾ ಸುುದ್ದಿ: ‘ಪ್ರಾರಂಭ’ ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿರುವ ನಟ ಮನು ರವಿಚಂದ್ರನ್ ಮುಗಿಲ್ಪೇಟೆಯ ಚಿತ್ರೀಕರಣ ಪುನರಾರಂಭಿಸಲು ಕಾಯುತ್ತಿದ್ದಾರೆ. ಇದರ ಜೊತೆಗೆ ಇದೇ ವರ್ಷದಲ್ಲಿ ಚಿಲ್ಲಂ ಚಿತ್ರದ ಕೆಲಸವನ್ನೂ ಪ್ರಾರಂಭಿಸಲಿದ್ದಾರೆ. ಚಂದ್ರಕಲಾ ನಿರ್ದೇಶನದ ಚಿಲ್ಲಂ 2018ರಲ್ಲಿ ಪ್ರಾರಂಭವಾಗಿ 10 ದಿನಗಳ ಚಿತ್ರೀಕರಣದ ನಂತರ ಮೊಟಕುಗೊಂಡಿತ್ತು.
ಚಿಲ್ಲಂ ಒಂದು ಆಸಕ್ತಿದಾಯಕ ವಿಷಯವಾಗಿದೆ. ಇದು ದೊಡ್ಡ ಕ್ಯಾನ್ವಾಸ್ನಲ್ಲಿ ಮಾಡಿದ ನಾಯಕನ ಚಿತ್ರವಾಗಿದೆ. ಅದರಲ್ಲಿ ನನ್ನನ್ನು ಕೆಟ್ಟ ಹುಡುಗ ಅವತಾರದಲ್ಲಿ ಚಿತ್ರಿಸಲಾಗುವುದು. ಇದು ನಾನು ಅನ್ವೇಷಿಸಲು ಬಯಸುವ ಒಂದು ವಿಶಿಷ್ಟ ಪಾತ್ರವಾಗಿರುತ್ತದೆ, ಮತ್ತು ಬದಲಾವಣೆ ಆಸಕ್ತಿದಾಯಕವಾಗಿದೆ. ಹೀಗಾಗಿ ನಾನು ಈ ಚಿತ್ರವನ್ನು ಬಿಡುವುದಿಲ್ಲ ಎಂದು ಮನು ರವಿಚಂದ್ರನ್ ಹೇಳಿದ್ದಾರೆ.
ಚಿಲ್ಲಂ ಚಿತ್ರಕ್ಕೂ ಮುನ್ನ ಚಿತ್ರಕ್ಕಾಗಿ ನಾನು ಸಾಕಷ್ಟು ಶ್ರಮ ವಹಿಸಿದ್ದೆ. ಆದರೆ ಅಂದುಕೊಂಡತೆ ಚಿತ್ರೀಕರಣ ಮುಂದುವರೆಯಲಿಲ್ಲ. ಒಂದು ವಾರವಷ್ಟೆ ಚಿತ್ರೀಕರಣ ನಡೆದಿತ್ತು. ಚಿತ್ರಕ್ಕೆ ಹೆಚ್ಚಿನ ಬಂಡವಾಳ ಬೇಕಿತ್ತು. ಆದರೆ ಭಾರೀ ಬಜೆಟ್ ಗೆ ನಿರ್ಬಂಧವಿತ್ತು. ಈ ವಿಷಯದಲ್ಲಿ ನಾವು ರಾಜಿ ಮಾಡಿಕೊಳ್ಳಲು ಬಯಸುವುದಿಲ್ಲ. ನನಗೆ ಹೊಸ ನಿರ್ಮಾಪಕರು ಸಿಕ್ಕಿದ್ದಾರೆ. ಅವರೊಂದಿಗೆ ನಾನು ದೂರವಾಣಿ ಚರ್ಚೆ ನಡೆಸಿದ್ದೇನೆ. ನಿರ್ದೇಶಕರನ್ನು ಶೀಘ್ರದಲ್ಲೇ ಭೇಟಿಯಾಗುತ್ತೇನೆ ಮತ್ತು ಚಿಲ್ಲಂಗಾಗಿ ಶೆಡ್ಯೂಲ್ ರೂಪಿಸುತ್ತೇನೆ ಎಂದು ಮನು ವಿವರಿಸಿದ್ದಾರೆ. ಜೊತೆಗೆ ಚಿಲ್ಲಮ್ಗೆ ಕನಿಷ್ಠ 120 ದಿನಗಳ ಶೂಟಿಂಗ್ ವೇಳಾಪಟ್ಟಿ ಬೇಕಾಗುತ್ತದೆ ಎಂದರು.
ಕೃಪೆ : ಸಿನೆತಾರಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243