ದಿನದ ಸುದ್ದಿ
ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖಾಂಶಗಳು
ಸುದ್ದಿದಿನ,ದೆಹಲಿ : ಸಾರ್ವಕಾಲಿಕ ಶ್ರೇಷ್ಟ ಪ್ರಣಾಳಿಕೆಯನ್ನ ಅಳೆದು ತೂಗಿ ರೂಪಿಸಿದ್ದೇವೆ. ನಾವು ಆಡಿರುವ ಮಾತಿಗೆ ಬದ್ದರಿದ್ದೇವೆ. ನುಡಿದಂತೆ ನಡೆಯುತ್ತೇವೆ ಎಂದು ಕಾಂಗ್ರಸ್ ಮಂಗಳವಾರ ದೆಹಲಿಯಲ್ಲಿ ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ.
ಪ್ರಣಾಳಿಕೆಯ ಪ್ರಮುಖಾಂಶಗಳು ಹೀಗಿವೆ
- ನ್ಯಾಯ್ ಯೋಜನೆಯಿಂದ ಬಡತನ ರೇಖೆಗಿಂತ ಕೆಳಗಿರುವ ಜನರನ್ನ ಆರ್ಥಿಕ ಸಮಾನತೆಯತ್ತ ಕೊಂಡೊಯ್ಯಲಾಗುವದು.
- ಮಹಿಳೆಯ ಆರ್ಥಿಕ ಸ್ವಾತಂತ್ರ್ಯ ಮೂಡಿಸುವ ನಿಟ್ಟಿನಲ್ಲಿ #ನ್ಯಾಯ್ ಯೋಜನೆಯಡಿ ನೀಡಲಿರುವ 72,000/- ಕುಟುಂಬದ ಮಹಿಳೆಯ ಖಾತೆಗೆ ಜಮಾ ಮಾಡಲಾಗುವದು.
- ಜಲ ಸಂರಕ್ಷಣೆ, ಖರಾಬು ಜಮೀನು ಸುಧಾರಣೆ ಮಿಶನ್ ಅಡಿಯಲ್ಲಿ 3ವರ್ಷದಲ್ಲಿ 1ಕೋಟಿ ಉದ್ಯೋಗ ಸೃಷ್ಟಿಸಲಾಗುವದು.
- ‘ಮೇಕ್ ಪಾರ್ ದಿ ವರ್ಲ್ಡ್’
ರಪ್ತು ಹೆಚ್ಚಾಗಿಸುವ ನಿಟ್ಟಿನಲ್ಲಿ ರೂಪಿಸಲಿರುವ ಯೋಜನೆ. - ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಸದ್ಯದ 100 ದಿನ ಉದ್ಯೋಗವನ್ನ 150 ದಿನಕ್ಕೆ ಏರಿಸಲಾಗುವದು.
- ರೈಲ್ವೇಗೆ ಇರುವಂತೆ ಕೃಷಿ ಮತ್ತು ರೈತರಿಗಾಗಿ ವಿಶೇಷ ಬಜೆಟ್ ಮಂಡಿಸಲಾಗುವದು.
- 2020 ಮಾರ್ಚ್ ಒಳಗೆ ಕೇಂದ್ರಸರ್ಕಾರದಲ್ಲಿರುವ 4ಲಕ್ಷ ಹುದ್ದೆ,ಸ್ಥಳೀಯ ಸಂಸ್ಥೆಗಳಲ್ಲಿರುವ 10 ಲಕ್ಷ ಹುದ್ದೆ ಭರಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ‘ಮನರೇಗಾ’ ವನ್ನ ಸಾರ್ವಜನಿಕ ಆಸ್ತಿಗಳಾದ ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲಾ ಕೊಠಡಿ ನಿರ್ಮಾಣಕ್ಕೆ ಬಳಸಲಾಗುವದು.
- ಮನರೇಗಾ 3.0, ಪ್ರಮುಖವಾಗಿ ರೈತರಿಗೆ ತಲೆನೋವಾಗಿರುವ ಜಲ ಸಂರಕ್ಷಣೆ, ಮಣ್ಣಿನ ಸಂರಕ್ಷಣೆಗಾಗಿ ಪರಿಚಯಿಸಲಾಗುವದು.
- ಸ್ವಂತ ಮನೆ ಹಕ್ಕಿನಡಿ ನಗರ ವಾಸಿ ಬಡವರ ಮೇಲೆ ನಡೆವ ಸ್ವೆಚ್ಚಾಚಾರದ ತೆರವುಗೊಳಿಸುವಿಕೆ ನಿಲ್ಲಿಸಲಾಗುವದು.
- ಸ್ಲಮ್ ಸುಧಾರಣೆ ಯೋಜನೆಯಡಿ ಶುದ್ದ ನೀರು, ವಿದ್ಯುತ್, ನೈರ್ಮಲ್ಯಕ್ಕೆ, ಪಕ್ಕಾ ಮನೆ ನಿರ್ಮಿಸಲಾಗುವದು.
- ಸ್ಥಳೀಯ ಸಂಸ್ಥೆಗಳ ಮೇಯರ್ ಮತ್ತು ಪ್ರತಿನಿಧಿಗಳಿಗೆ ಅಧಿಕಾರ ನೀಡುವ ಮೂಲಕ ನಗರಗಳ ಮೂಲಭೂತ ಸೌಕರ್ಯ ಸುಧಾರಣೆ.
- ಪ್ರಸ್ತುತ ಖಾಲಿ ಬಿದ್ದಿರುವ 22 ಲಕ್ಷ ಸರಕಾರಿ ಹುದ್ದೆಗಳನ್ನ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲಿ ತುಂಬಲಿದ್ದೇವೆ.
ಕಾಂಗ್ರೇಸ್ ಕೈ ಬಲಪಡಿಸಿ. - ಅಸಂಘಟಿತ ವಲಯದ ಕಾರ್ಮಿಕರಿಗೂ ಕನಿಷ್ಟ ವೇತನ ಸಿಗುವಂತೆ ನಿಯಮ ರೂಪಿಸಲಾಗುವದು.
- ‘ಸಣ್ಣ ಹಿಡಯವಳಿದಾರರು&ಕೃಷಿ ಕಾರ್ಮಿಕರ ಆಯೋಗ’ವನ್ನ ಸಂಪ್ರದಾಯಿಕ ಕೃಷಿಯೇತರ ಚಟುವಟಿಕೆದಾರರಿಗೆ ಅನುಕೂಲವಾಗುವಂತೆ ರೂಪಿಸಲಾಗುವದು.
- ‘ರಾಷ್ಟ್ರೀಯ ಕೃಷಿ ಬೆಳವಣಿಗೆ ಮತ್ತು ಯೋಜನಾ ಆಯೋಗ’ ವನ್ನು ರೈತರಿಗೆ ನೆರವಾಗಲು ರೂಪಿಸಲಾಗುವದು.
- ಕಾಂಗ್ರೇಸ್ ಅಧಿಕಾರಕ್ಕೆ ಏರುತ್ತಿದ್ದಂತೆ ರೈತರ ಸಾಲ ಮನ್ನಾ ಮಾಡಲಾಗುವದು.
- 3 ತಿಂಗಳಲ್ಲಿ ಹೂಡಿಕೆಗೆ ಅಡೆತಡೆಯಾಗಿರುವ ಎಲ್ಲ ಕಾಯಿದೆಗಳನ್ನು ತೆಗೆದಾಕಿ, ಹೂಡಿಕೆದಾರ ಸ್ನೇಹಿ ನೀತಿ ರೂಪಿಸಲಾಗುವದು.
- ವಿಮಾ ಕಂಪನಿಗಳನ್ನ ಬೆಳೆಸಿದ ಬಿಜೆಪಿಯ ‘ಫಸಲ್ ವಿಮಾ ಯೋಜನೆ’ಯನ್ನ, ತಿದ್ದುಪಡಿ ಮಾಡಿ ರೈತರಿಗೆ ಸಹಾಯ ಆಗುವಂತೆ ರೂಪಿಸಲಾಗುವದು.
- ಸಾಲದಿಂದ ಮುಕ್ತಿ’ ಯೋಜನೆಯಡಿಯಲ್ಲಿ ಅನ್ನದಾತನಿಗೆ ಉಳುಮೆಗೆ ಕಾಲಾನುಸಾರ ಬೇಕಾಗುವ ಅವಶ್ಯಕತೆ ನೀಡಲಾಗುವದು.
- 2500 ಕ್ಕೂ ಜನಸಂಖ್ಯೆ ಇರುವ ಗ್ರಾಮಗಳಿಗೆ ಕಡ್ಡಾಯವಾಗಿ ಆಶಾ ಕಾರ್ಯಕರ್ತೆಯರನ್ನ ನೇಮಿಸಲಾಗುವದು.
- ಎಲ್ಲ ಸರಕಾರಿ ಹುದ್ದೆಗಳ ಆಯ್ಕೆ ಪರೀಕ್ಷೆಗೆ ಇರುವ ಶುಲ್ಕವನ್ನು ಸಂಪೂರ್ಣವಾಗಿ ತೆಗೆಯಲಾಗುವದು
- ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಕಾರ್ಯಕರ್ತರ ಬಾಕಿ ಇರುವ ಸಂಬಳವನ್ನ ಅಧಿಕಾರಕ್ಕೆ ಬರುತ್ತಿದ್ದಂತೆ ನೀಡಲಾಗುವದು.
- ಜಿ ಎಸ್ ಟಿ 2.0- ಸರಳ ಸುಲಭ ಹೊರೆಯಾಗದಂತೆ ತೆರಿಗೆ ಪದ್ದತಿ ರೂಪಿಸಲಾಗುವದು.
- ಜಿ ಎಸ್ ಟಿ 2.0-ಅಡಿಯಲ್ಲಿ ಪೆಟ್ರೋಲ್ ಡೀಸೆಲ್, ತಂಬಾಕು ಉತ್ಪನ್ನ, ಸರಾಯಿ, ರಿಯಲ್ ಎಸ್ಟೇಟ್ ಗಳನ್ನ ತರಲಾಗುವದು.
- ರಫ್ತಾಗುವ ವಸ್ತು ತಯಾರಿಕೆ ಘಟಕಗಳಿಕೆ ತೆರಿಗೆ ವಿನಾಯ್ತಿ ಮೂಲಕ ಸರಕಾರದಿಂದ ನೆರವು.
- ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣಕ್ಕೆ ಪ್ರತ್ಯೇಕ ಸಚಿವರನ್ನ ನೇಮಿಸಲಾಗುವದು.
- ಜಿ ಡಿ ಪಿಯ 2% ನ್ನು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ವಿನಿಯೋಗಿಸಲಾಗುವದು.
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ರಫಾಲೆ ಡೀಲ್ ತನಿಖೆ, ಮತ್ತು 5 ವರ್ಷದಲ್ಲಿ ಬಿಜೆಪಿಯವರು ಮಾಡಿರುವ ಭ್ರಷ್ಟಾಚಾರದ ತನಿಖೆ ಮಾಡಲಾಗುವದು
- ನೊಂದಾಯಿತವಲ್ಲದ ಉದ್ಯಮಗಳ ಉತ್ಪನ್ನಗಳಿಗೆ ಖರೀದಿದಾರರ ತೆರಿಗೆ ಹಾಕಿದ್ದನ್ನು ತೆಗೆದು ಹಾಕಲಾಗುವದು.
- ಲೋಕಪಾಲ್ ನೇಮಕ ಮಾಡಲಾಗುವದು.
- ಐಪಿಸಿ ಸೆಕ್ಷನ್ 499ನ್ನು ತೆಗೆದು ಹಾಕಿ, ಮಾನನಷ್ಟ ಮೊಕದ್ದಮೆಯನ್ನು ಸಿವಿಲ್ ಅಪಕೃತ್ಯ ಎಂದು ಮಾಡಲಾಗುವದು.
- ಹಳಿ ತಪ್ಪಿಸಿರುವ ಗೊಂದಲಮಯ ‘ನೀತಿ ಆಯೋಗ’ ವನ್ನು ಕಿತ್ತೆಸೆದು ಹೊಸದಾದ ಯೋಜನಾ ಆಯೋಗವನ್ನ ರೂಪಿಸಲಾಗುವದು
- ಲೋಕಸಭೆ ಮತ್ತು ವಿಧಾನ ಸಭೆಗಳಲ್ಲಿ ಮಹಿಳಾ ಪ್ರಾತಿನಿದ್ಯ ಹೆಚ್ಚಿಸಲು ಮಹಿಳೆಯರಿಗೆ 33% ಮೀಸಲಾತಿಯನ್ನ ಮೊದಲ ಸಭೆಯಲ್ಲಿ ಮಂಡಿಸಲಾಗುವದು.
- ಕೇಂದ್ರ ಸರಕಾರದ ಹುದ್ದೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲಾಗುವದು.
- ಪ.ಜಾ ಪ.ಪಂ & ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧಿಸಿದಂತೆ ‘ಸಮಾನ ಅವಕಾಶಗಳ ಆಯೋಗ’ವನ್ನ ರಚಿಸಲಾಗುವದು.
- ಪ.ಜಾ ಪ.ಪಂ ಮತ್ತು ಹಿಂದುಳಿದ ವರ್ಗಗಳಿಗೆ ಖಾಸಗಿ ವಿದ್ಯಾ ಸಂಸ್ಥೆಗಳಲ್ಲು ಮೀಸಲಾತಿಯನ್ನ ಕಲ್ಪಿಸಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಸರಕಾರಿ ಟೆಂಡರುಗಳಲ್ಲಿ ಪ.ಜಾ ಪ.ಪಂ&ಹಿಂದುಳಿದವರಿಗೆ ನ್ಯಾಯಯುತ ಭಾಗ ನೀಡಲಾಗುವದು.
- ಅಲಿಗರ್, ಜಾಮಿಯಾ ಇಸ್ಲಮಿಯಾ ವಿಶ್ವವಿದ್ಯಾಲಯಗಳ ಮೂಲ ಉದ್ದೇಶವನ್ನ ರಕ್ಷಿಸಲಾಗುವದು.
- ವಕ್ಪ್ ಮಸೂದೆ 2014 ನ್ನು ಮತ್ತೊಮ್ಮೆ ಪರಿಚಯಿಸಿ, ವಕ್ಪ್ ಆಸ್ತಿಯನ್ನ ನ್ಯಾಯಯುತ ಟ್ರಸ್ಟಿಗಳಿಗೆ ನೀಡಲಾಗುವದು.
- ಮಾಬ್ ಲಿಂಚಿಂಗ್ ಮತ್ತು ಹೇಟ್ ಕ್ರೈಮ್ ತಡಗಟ್ಟಲು ಮೊದಲ ಸಭೆಯಲ್ಲಿಯೆ ಕಾಯಿದೆ ರೂಪಿಸಲಾಗುವದು.
Delhi: Congress party releases their election manifesto for #LokSabhaElections2019 pic.twitter.com/fccNKOuSqZ
— ANI (@ANI) April 2, 2019
Rahul Gandhi at Congress' election manifesto release: When we started this process about a year back, I spoke to Mr Chidamabaram, Mr Gowda & gave 2 instructions. I said this is not a manifesto to be made in closed rooms but this should reflect the wishes of the people of India. pic.twitter.com/gXII8TSHmx
— ANI (@ANI) April 2, 2019
Rahul Gandhi at Congress' election manifesto release: I also said that whatever is going to be in this manifesto has to be truthful, I do not want a single thing in this manifesto that is a lie because we have been hearing large number of lies spoken everyday by our PM. https://t.co/qpK73RZNal
— ANI (@ANI) April 2, 2019
Congress President Rahul Gandhi: PM had spoken about MGNREGA. He mocked and said it is a bogus and useless scheme. Today everyone knows how much it helped the country. So now we want to guarantee jobs for 150 days, instead of 100 days, under the scheme. pic.twitter.com/dgzAekiJ3y
— ANI (@ANI) April 2, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ