ದಿನದ ಸುದ್ದಿ
ಹಿಂದುತ್ವವನ್ನೂ ಹಿಂದಿಕ್ಕಿದ ಮೋದಿತ್ವ, ಹದಗೆಡುತ್ತಿರುವ ಮಾನವ ಸಂಬಂಧಗಳು
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರವಲ್ಲ ಎದುರೇ ಮಾತಾಡುವಾಗಲೂ ಅಸಹನೆಯ ಮಾತುಗಳು ವ್ಯಂಗ್ಯ ಕುಹಕ ಎಲ್ಲೆ ಮೀರುತ್ತದೆ. ಮೊನ್ನೆ ಚುನಾವಣೆಯದಿನ ನಮ್ಮ ಗ್ರಾಮದ ಬೂತ್ ಪಕ್ಕದಲ್ಲೇ ಇದ್ದ ಬಿಜೆಪಿಯ ಜಿಲ್ಲಾ ಕಾರ್ಯ ದರ್ಶಿಗಳಿಗೆ (ನಮ್ಮೂರಿನವರೇ) ತಮಾಷೆಯಾಗಿ ನಮಗೂ ಒಂದಷ್ಟು ಓಟು ಬಿಡಿ ಸಾರ್ ಖಾಲಿ ದಬ್ಬ ಮಾಡ್ಬೇಡಿ ಎಂದೆ. ಅದಕ್ಕವರು ನೀವು ಈಗೆ ಹೇಳಿಯೇ ನಮ್ಮಲ್ಲಿ ಖಾಲಿ ಮಾಡ್ತೀರಿ ಮಾರ್ರೆ ಏನೋ ಈಸಾರಿ ಕಷ್ಟಪಟ್ಟು ನಿಮ್ಮನ್ನ ಹಿಂದೆ ಹಾಕ್ತೀವಿ ಎಂದರು. ಇಬ್ಬರೂ ನಗುತ್ತ ಅಲ್ಲಿಂದ ಹೊರಟೆವು. ಅಷ್ಟರಲ್ಲಿ ಅಲ್ಲೇ ಪಕ್ಕದಲ್ಲಿದ್ದ ಯುವಕನೊಬ್ಬ ಬೇರೆ ಕಡೆ ತಿರುಗಿ ನನಗೆ ಕೇಳುವಂತೆ (ಮೋದಿ ಚಿತ್ರದ ಬಟ್ಟೆಯನ್ನೂ ಹಿಡಿದಿದ್ದ) “ಈ ಸಲ ಇವರದ್ದೆಲ್ಲ ಮುಕುಳಿ ಬಾಯಿ ಬಂದ್ ಮಾಡ್ತೀವಿ” ಅಂದ. ಪಾಪ ಬಿಜೆಪಿ ನಾಯಕರೂ ಮುಖ ಸಣ್ಣಗೆ ಮಾಡಿಕೊಂಡರು.
ಇದು ಒಂದು ಉದಾಹರಣೆ ಅಷ್ಟೆ. ಸಾಮಾಜಿಕ ತಾಣಗಳಲ್ಲಿ ಇತ್ತೀಚಗೆ ನಾನೊಂದು ಸ್ಟೇಟಸ್ ಹಾಕಿದ್ದೆ ಅದು ನನ್ನ ಗೆಳಯರೊಬ್ಬರು ಕಳುಹಿಸಿದ್ದು ಅದು ಅವರಿಗೂ ಯಾರೋ ಕಳುಹಿಸಿದ್ದು ಅದರ ಬಗ್ಗೆ ನನಗೂ ಆಗ ಅರ್ಧಂಬರ್ಧ ತಿಳಿದಿತ್ತಷ್ಟೆ ಅದರಲ್ಲಿ ಏನು ಇತ್ತೋ ಅದೇ ಪದಗಳನ್ನು ನಾನು ಕನ್ನಡಕ್ಕೆ ಭಾಷಾಂತರಿಸಿ “ಓದಿದ್ದು” ಎಂದು ಟಿಪ್ಪಣಿ ಹಾಕಿದ್ದೆ. ಇದರ ಬಗ್ಗೆ ಚರ್ಚೆ ಆಗಲಿ ಎನ್ನುವುದು ನನ್ನ ಉದ್ದೇಶವಿತ್ತು. ಆದರೆ ಆದದ್ದೇ ಬೇರೆ ಕೆಲವರು ನಿಜವಾಗಿಯೂ ಆ ಬಗ್ಗೆ ನನಗೆ ವಿವರಿಸಲು ಪ್ರಯತ್ನ ಪಟ್ಟರು. ಆದರೆ ಅದಲ್ಲ ಕೂಡಲೇ ಮೋದಿ ಭಕ್ತರ ಕಾಟ ಶುರುವಾಯಿತು.
ಇದು ಸುಳ್ಳು ಎನ್ನುವವರು. ವ್ಯಂಗ್ಯ ಮಾಡುವವರು ಕುಹಕವಾಡುವವರು ನನ್ನವಾಲ್ ಗೇ ಬಂದು ನೇರವಾಗಿ ಬೈಯುವವರು ಪರೋಕ್ಷವಾಗಿ ಬೇರೆ ಕಡೆಗಳಲ್ಲಿಯೂ ಏನೇನೋ ಹೇಳುವವರು ಹುಟ್ಟಿಕೊಂಡರು. ಆದರೆ ತಮ್ಮ ವಾದವನ್ನು ಮಂಡಿಸಲೇ ಇಲ್ಲ. ಆದರೆ ನಿಧಾನವಾಗಿ ಆ ವಿಷಯದ ಬಗ್ಗೆ ತಿಳಿಯುತ್ತ ಹೋದೆ. ನಾನು ಅನುವಾದ ಮಾಡಿದ ಬರಹದ ಭಾಷೆ ಮತ್ತು ತಾಂತ್ರಿಕವಾಗಿ ಮೂಲದಲ್ಲೇ ತಪ್ಪಿತ್ತೇ ವಿನಃ ವಿಷಯ ನಿಜವಾದದ್ದೇ ಆಗಿತ್ತು.
ಇರಲಿ ಆದರೆ ಅದನ್ನು ವಿಷಯಾಧಾರಿತವಾಗಿ ವಿರೋಧಿಸಿದವರು ಕಡಿಮೆ. ಮೋದಿಯಾಧಾರಿತವಾಗಿ ವಿರೋಧಿಸಿದವರೇ ಹೆಚ್ಚು ಅವರು ಯಾರೂ ಸಾಮಾನ್ಯ ಜನರಲ್ಲ. ಅವರಲ್ಲಿ ಕಲಾವಿದರು, ವಿದ್ಯಾವಂತರು. ಪತ್ರಿಕಾಸಂಪಾದಕರು ಮುಂತಾದವರಿದ್ದರು. ಇದು ನಾನು ಅನುವಾದಿಸಿದ ಬರಹ “ಓದಿದ್ದು” ಮೊದಲೇ ಹಾಕಿದ್ದೇನೆ ಎಂದರೆ ಅದಕ್ಕೂ “ಈಗ ಪಲಾಯನ ವಾದ” ಎಂದು ಜರಿದರು. ಇವರೆಲ್ಲರೂ ಹಲವರು ಅನೇಕ ವರ್ಷಗಳಿಂದ ನನ್ನನ್ನು ಬಲ್ಲವರೂ ಆಗಿದ್ದರು. ಅಂದರೆ ಅವರು ಮೋದಿಯನ್ನು ನಂಬಿದಷ್ಟು ಪರಿಚಿತ ನನ್ನನ್ನು ನಂಬಲು ತಯಾರಿರಲಿಲ್ಲ.
ಮೊನ್ನೆ ಕೆ.ಎಸ್ . ಭಗವಾನ್ ಆಸ್ಪತ್ರೆಯಲ್ಲಿದ್ದಾಗ “ಅವನು ನರಳಿ ನರಳಿ ಸತ್ತು ನರಕಕ್ಕೆ ಹೋಗಲಿ” ಎಂದವರಲ್ಲಿ ಸಾಹಿತ್ಯದಲ್ಲಿ ಎಂ.ಎ ಮಾಡಿದ ಮಹಿಳೆಯೊಬ್ಬರಿದ್ದರು.ಇತ್ತೀಚೆಗೆ ನನ್ನ ಕಣ್ಣಮುಂದೆ ಬೆಳೆದ ನಮ್ಮೂರಿನ ಹುಡುಗನೊಬ್ಬ (ಈತನ ತಂದೆ ನನ್ನ ಸ್ನೇಹಿತರು) ನಿಮ್ಮಲ್ಲಿಗೇ ಬಂದು ಬುದ್ಧಿಕಲಿಸುತ್ತೇನೆ ಎಂದಿದ್ದಾನೆ!. ಪುಣ್ಯಾತ್ಮ ಕೊನೆಗೆ ಓಟು ಹಾಕಲೂ ಬರಲಿಲ್ಲ.
ಅನೇಕರಿಗೆ ತಮ್ಮ ತಂದೆ ತಾಯಿಯರನ್ನು ಬೈದರೂ ಸುಮ್ಮಿದ್ದಾರು ಮೋದಿಯ ಸಣ್ಣ ಟೀಕೆಯನ್ನೂ ಸಹಿಸಲಾರರರು. ಕಳೆದ ಶತಮಾನದ ಜರ್ಮನಿ, ರಷ್ಯಾ, ಚೈನಾ ಗಳಂತಾಗಿದ್ದೇವೆಯೆ?
ನಮ್ಮ ಇಂದಿನ ಮೋದೀಕೃತ ಸಮಾಜದಲ್ಲಿ ಮಾನವ ಸಂಬಂಧಗಳಿಗಿಂತ ಮೋದಿ ಸಂಬಂಧವೇ ಮುಖ್ಯವಾಗುತ್ತದೆ. ಯಾಕೆಂದರೆ ಸಬ್ ಕಾ ಸಾಥ್ ಎಂದಿದ್ದ ಮೋದಿ ಈಗ ಸಬ್ ಕಾ ವಿಶ್ವಾಸ್ ಎಂದಿದ್ದಾರೆ. ಯಾಕೋ ಆ ವಿಶ್ವಾಸವನ್ನು ನೆನೆದು ಭಯವಾಗುತ್ತದೆ.
–ಪ್ರಸಾದ್ ರಾಕ್ಸಿಡಿ
(ಬರಹ ಕೃಪೆ – prasad Raxidi ಅವರ ಪೇಸ್ ಬುಕ್ ಪೇಜ್ ನಿಂದ)
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243