ದಿನದ ಸುದ್ದಿ
ದೇಶ ಸುತ್ತೋರಿಗೆ ರೈಲ್ವೆ ಇಲಾಖೆಯ ಭರ್ಜರಿ ಆಫರ್..!
ಸುದ್ದಿದಿನ ಡೆಸ್ಕ್ : ದೇಶ ಸುತ್ತು ಕೋಶ ಓದು ಎಂಬುದು ಜನಪದರ ನುಡಿಯಂತೆ ಕೋಶ ಓದಿಯಾದರೂ ಸರಿ, ದೇಶ ಸುತ್ತಿಯಾದರೂ ಜ್ಞಾನ ಗಳಿಸಬೇಕು. ಓದೋರಿಗಿಂತ ದೇಶ ಸುತ್ತೋರೇ ಹೆಚ್ಚು ಜನ. ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗಾಗಿಯೇ ರೈಲ್ವೆ ಇಲಾಖೆಯು ಕೈಗೆಟುಕುವ ದರದಲ್ಲಿ ಆಕರ್ಷಕ ಪ್ರವಾಸದ ಪ್ಯಾಕೇಜ್ ನೀಡಿದೆ.
ರೈಲು ದೇಶದ ಪ್ರಮುಖ ಪ್ರವಾಸಿ, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ. ಪ್ರವಾಸಿಗರ ಬಜೆಟ್ ಗೆ ತಕ್ಕಂತೆ ತಮಗಿಷ್ಟದ ಸ್ಥಳಗಳುಳ್ಳ ಪ್ಯಾಕೇಜ್ ಆಯ್ಕೆ ಮಾಡಿಕೊಂಡು ಪ್ರಕಾರ ವಾಸ ಕೈಗೊಳ್ಳಬಹುದು. ಐಆರ್ಟಿಸಿಟಿಸಿ ಟೂರಿಸಂ ವೆಬ್ಸೈಟ್ ಗೆ ಹೋಗಿ ಪ್ಯಾಕೇಜ್ ಆಯ್ಕೆ ಮಾಡಿಕೊಳ್ಳಬಹುದು. ಈ ಪ್ಯಾಕೇಜ್ ನ ಟಿಕೆಟ್ ಗಳನ್ನು ಆನ್ಲೈನ್ ಇಲ್ಲವೇ ರೈಲ್ವೆ ಇಲಾಖೆಯ ಕಚೇರಿಯಲ್ಲಿ ಟಿಕೆಟ್ ಬುಕ್ ಮಾಡಬಹುದು.
ಈ ಪ್ರವಾಸ ಕೈಗೊಳ್ಳುವ ರೈಲಿನಲ್ಲಿ ಬೋರ್ಡಿಂಗ್ ವ್ಯವಸ್ಥೆಯೂ ಲಭ್ಯವಿದೆ. ವಿವಿಧ ನಗರಗಳಲ್ಲಿ ರಾತ್ರಿ ಉಳಿದುಕೊಳ್ಳುವ ಪ್ರವಾಸಿಗರಿಗೆ ಅಕಾಮಡೆಷನ್ ಲಭ್ಯವಿದೆ. ಪ್ರವಾಸಿಗರ ಸುರಕ್ಷತೆಗಾಗಿ ಸ್ಥಳದಲ್ಲಿ ಭದ್ರತಾ ಪಡೆ ನಿಯೋಜಿಸಲಾಗಿರುತ್ತದೆ. ರೈಲಿನಲ್ಲಿ ಬಹುತೇಕ ಸ್ವೀಪರ್ ಕೋಚ್ ಇದೆ. ಪ್ರವಾಸಿಗರು ಬೇಡಿಕೆಯಿಟ್ಟರೆ ಎಸಿ ಕೋಚ್ ವ್ಯವಸ್ಥಯನ್ನು ಮಾಡಲಾಗುತ್ತದೆ.
ಭಾರತ್ ದರ್ಶನ್ ರೈಲಿನ ಪ್ಯಾಕೇಜ್ ಇಲ್ಲಿದೆ
01. ಶ್ರಾವಣ ಸ್ಪೆಷಲ್ ಜ್ಯೋತಿರ್ಲಿಂಗ ಯಾತ್ರೆ ಪ್ಲಸ್ ನೇಪಾಲ್ (WZBD235)
ಇದು 20 ಹಗಲು/ 19 ರಾತ್ರಿಯ ಟ್ರಿಪ್ ಆಗಿದ್ದು, ಇದು ಧಾರ್ಮಿಕ ಸ್ಥಳಗಳ ಪ್ರವಾಸವಾಗಿದೆ. ಆಸ್ತಿಕರಿಗೆ ಇಷ್ಟವಾಗುವಂಥ ಟ್ರಿಪ್ ಆಗಲಿದೆ. *ಎಲ್ಲೆಲ್ಲಿ:* ಪುಣೆ, ನಾಸಿಕ್, ದ್ವಾರಕ, ಸೋಮನಾಥ, ಉಜ್ಜಯಿನಿ, ಅಲಹಾಬಾದ್, ವಾರಾಣಸಿ, ಪಶುಪತಿನಾಥ ( ನೇಪಾಳ), ಪೋಕರ್, ಔರಂಗಾಬಾದ್, ಪರ್ಭಾನಿ, ಪರ್ಲಿ, ಕರ್ನೂಲ್ ಟೌನ್ ಪ್ಯಾಕೇಜ್ ನ ಸ್ಥಳಗಳಾಗಿವೆ.
ನೀವು ಆಯ್ದುಕೊಳ್ಳುವ ಸ್ಥಳಗಳಲ್ಲಿ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ ವ್ಯವಸ್ಥೆ ಇದೆ. ಸ್ವೀಪರ್ ಮತ್ತು tier-3 AC ಕ್ಲಾಸ್ ಕೋಚ್ ವ್ಯವಸ್ಥೆ ಇದೆ. ಬೆಳಗ್ಗೆ ಟಿಫಿನ್, ಮಧ್ಯಾಹ್ನ, ರಾತ್ರಿ ಊಟ ಒದಗಿಸಲಾಗುತ್ತದೆ. ಸ್ಟ್ಯಾಂಡರ್ಡ್ ಪ್ಯಾಕೇಜ್ ಗೆ ₹ 18,900 ಹಾಗೂ ಕಂಫರ್ಟ್ (tier-3 AC) ಪ್ಯಾಕೇಜ್ ಗೆ ₹ 23,100 ದರ ನಿಗದಿ ಮಾಡಲಾಗಿದೆ. ಉಳಿದ ಸೌಲಭ್ಯಗಳು ಎರಡಕ್ಕೂ ಅನ್ವಯವಾಗಲಿವೆ.
O2. ಭಾರತ್ ದರ್ಶನ್ (WZBD234R)
ಇದು 10ಹಗಲು/ 9ರಾತ್ರಿಯ ರಾಜ್ ಕೋಟ್ ನಿಂದ ರತ್ಲಂ ವರೆಗಿನ ಪ್ರವಾಸವಾಗಿದೆ. ಪುರಿ, ಆನಂದ, ವಡೋದರ, ಗೋಧ್ರಾ, ರತ್ಲಂ ಪ್ರವಾಸಿ ಸ್ಥಳಗಳನ್ನೊಳಗೊಂಡಿದೆ. ಇದು ಕಡಿಮೆ ದರದ ಪ್ರವಾಸವಾಗಿದ್ದು, ಯಾತ್ರಾರ್ಥಿಗಳಿಗೆ ಹೇಳಿ ಮಾಡಿಸಿದ ಪ್ರವಾಸವಾಗಿದೆ. ಈ ರೈಲು ಸ್ವೀಪರ್ ಕೋಚ್ ಮಾತ್ರ ಸೌಲಭ್ಯ ಹೊಂದಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಉಪಹಾರ ಮತ್ತು ಊಟದ ವ್ಯವಸ್ಥೆ ಇದೆ. ಒಬ್ಬರಿಗೆ ₹ 9,450 ದರ ನಿಗದಿ ಮಾಡಲಾಗಿದೆ.
03. ದಕ್ಷಿಣ್ ಭಾರತ್ ಯಾತ್ರಾ (NZBD225)
ದಕ್ಷಿಣ ಭಾರತದ ಪ್ರಸಿದ್ಧ ಪ್ರವಾಸ ಸ್ಥಳಗಳ ಟ್ರಿಪ್ ಮಾಡೋರಿಗೆ ಇದು ಬೆಸ್ಟ್ ಪ್ಯಾಕೇಜ್. ಚಂಡೀಗಡ, ಅಂಬಾಲ, ಕುರುಕ್ಷೇತ್ರ, ಕರ್ನಲ್, ಪಾಣಿಪತ್, ದೆಹಲಿ ಕಾಂಟಿನೆಂಟಲ್, ರೆವರಿ, ಅಲ್ವರ್, ಜೈಪುರದೊಂದಿಗೆ ರಾಮೇಶ್ವರ, ಮಧುರೈ, ಕೋವಲಂ, ತಿರುಪತಿ ಸ್ಥಳಗಳನ್ನು ದರ್ಶನ ಮಾಡಬಹುದಾಗಿದೆ. ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ ವ್ಯವಸ್ಥೆ ಇದೆ. ಹರ್ಯಾಣ, ಪಂಜಾಬ್, ದೆಹಲಿ, ರಾಜಸ್ಥಾನ ರಾಜ್ಯಗಳ ಜನರಿಗೆ ದಕ್ಷಿಣ ಭಾರತದ ಪ್ರವಾಸದ ಪ್ಯಾಕೇಜ್ ಇಷ್ಟವಾಗಬಹುದು. 12ಹಗಲು, 11 ರಾತ್ರಿಯ ಪ್ರವಾಸದ ಪ್ಯಾಕೇಜ್ ಆಗಿದೆ. ಒಬ್ಬರಿಗೆ ₹ 11,340 ದರ ನಿಗದಿ ಮಾಡಲಾಗಿದೆ.
04. ಆಸ್ತ ಸ್ಪೆಷನ್ (SZBD332)
ಇದು 7 ಹಗಲು, 6 ರಾತ್ರಿಗಳುಳ್ಳ ಯಾತ್ರೆಯ ಪ್ಯಾಕೇಜ್ ಆಗಿದ್ದು, ಕೃಷ್ಣನ ಜನ್ಮಸ್ಥಳ ಹಾಗೂ ಉತ್ತರ ಪ್ರದೇಶ, ಬಿಹಾರ ರಾಜ್ಯದಲ್ಲಿರುವ ಧಾರ್ಮಿಕ ಸ್ಥಳಗಳನ್ನು ದರ್ಶನ ಮಾಡುವ ಆಸಕ್ತಿಯುಳ್ಳವರಿಗೆ ಬೆಸ್ಟ್ ಪ್ಯಾಕೇಜ್ ಆಗಿದೆ. ದೆಹಲಿ, ಅಮೃತಸರ, ಹರಿದ್ವಾರ, ಮತುರಾ, ಅಲಹಾಬಾದ್, ವಾರಾಣಸಿ, ಗಯಾ ಸ್ಥಳಗಳನ್ನು ದರ್ಶನ ಮಾಡಬಹುದು. ಒಬ್ಬರಿಗೆ ₹ 12,325 ದರ ನಿಗದಿ ಮಾಡಲಾಗಿದೆ. ಮದುರೈನಿಂದ ಪ್ರವಾಸ ಆರಂಭವಾಗಲಿದೆ.
05. ಶಿರಡಿ ಸ್ಪೆಷಲ್ (SZBD321)
ಈ ಪ್ಯಾಕೇಜ್ ನ ಹೆಸರೇ ಸೂಚಿಸುವಂತೆ ಇದು ಶಿರಡಿ ಸಾಯಿಬಾಬಾ ದರ್ಶನ ಮಾಡುವ ಆಸಕ್ತರಿಗಾಗಿಯೇ ರೆಡಿ ಮಾಡಿದ ಪ್ಯಾಕೇಜ್ ಆಗಿದೆ. 7ಹಗಲು, 6ರಾತ್ರಿಗಳುಳ್ಳ ಪ್ಯಾಕೇಜ್. ಮದುರೈನಿಂದ ಆರಂಭವಾಗುವ ಪ್ರವಾಸವು, ದಿಂಡಿಗಲ್, ಕರೂರ್, ಎರೋಡ್, ಸೇಲಂ, ಜೋಲರ್ಪೆಟ್ಟಯ್, ಕಾಟಪಡಿ, ಚೆನ್ನೈ ಸ್ಥಳಗಳನ್ನೊಳಗೊಂಡಿದೆ. ಒಬ್ಬರಿಗೆ ₹ 6,615 ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243