ದಿನದ ಸುದ್ದಿ
ಚಿತ್ರದುರ್ಗ : ‘ಭೂಮಿಯ ಹಕ್ಕು ಪತ್ರ’ಕ್ಕಾಗಿ ಇಂದಿನಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ
ಸುದ್ದಿದಿನ ಡೆಸ್ಕ್ : ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಭೂಹೀನ ದಲಿತರು, ಬುಡಕಟ್ಟು ಜನರು, ಹಿಂದುಳಿದಿರುವ, ಆರ್ಥಿಕವಾಗಿ ದುರ್ಬಲ ಸಮುದಾಯಗಳು ತಾವು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕುಪತ್ರಕ್ಕಾಗಿ ನಾಲ್ಕು ದಶಕದಿಂದಲೂ ಹೋರಾಡುತ್ತಿದ್ದಾರೆ.
ರಾಜಕಾರಣಿಗಳಿಂದ ಚುನಾವಣೆಯ ಸಂದರ್ಭದಲ್ಲಿ ಜನರಿಗೆ ಭರವಸೆ ಮಾತುಗಳು ಬಿಟ್ಟರೆ ಬೇರೆ ಏನೂ ಸಿಕ್ಕಿಲ್ಲ. ಬಡವರಿಗೆ ಈ ಜಿಲ್ಲೆಯಲ್ಲಿ ಭೂಮಿ ಮರಿಚಿಕೆಯಾಗಿಯೇ ಉಳಿದಿದೆ. ದುರಂಕಾರದಿಂದ ಮೆರೆಯುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ನಿರ್ಲಕ್ಷ್ಯ ದ ಕಂದಾಯ ಅಧಿಕಾರಿಗಳು ಇವರ ನಡುವೆ ಸಿಲುಕಿರುವ ಜನರ ಬದುಕುಗಳು ತತ್ತರಿಸಿ ಹೋಗುತ್ತಿವೆ.
ಭೂಮಿಗಾಗಿ ಜೀವನವನ್ನೇ ಸವೆಸುತ್ತಿದ್ದರೂ ಇದನ್ನು ಕಂಡೂ ಕಾಣದಂತೆ ಇರುವ ರಾಜಕಾರಣಿಗಳ ಹೃದಯ ಅದೆಷ್ಟು ಕಟುಕತನದ್ದೆಂದು ಅರ್ಥವಾಗುತ್ತಿದೆ. ಜನರು ಹೋರಾಟ, ಜೈಲುಪಾಲು, ಅಧಿಕಾರಿಗಳೊಂದಿಗೆ ಜಗಳದಲ್ಲೇ ಬದುಕಿಗಾಗಿನ ಭೂಮಿಯು ನಮ್ಮ ಈ ತಲೆಮಾರಿಗೆ ದೊರಕೀತೆ? ಎಂದು ಯೋಚಿಸುತ್ತಲೇ ಇದ್ದಾರೆ. ನಿರಂತರವಾಗಿ ನೂರಾರು ಹೋರಾಟ, ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಅದರೂ ಜನರ ಭೂಮಿಯ ಕನಸಿಗೆ ತಣ್ಣೀರೆರಚುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ.
ಬೇಡಿಕೆಗಳು
- ಸರ್ಕಾರದ ವಿವಿಧ ಹೆಸರಿನಲ್ಲಿರು ಭೂಮಿಯಲ್ಲಿ
ಸಾಗುವಳಿ ಮಾಡುತ್ತಿದ್ದು ಫಾರಂ.ನಂ. 50,53ರಲ್ಲಿ ಅರ್ಜಿ ಸಲ್ಲಿರುವ ಭೂಹೀನರಿಗೆ ಹಕ್ಕುಪತ್ರ ಕೊಡಬೇಕು, - ಅರಣ್ಯ ಹಕ್ಕುಕಾಯ್ದೆಯನ್ವಯ ಅರ್ಜಿ ಸಲ್ಲಿಸಿದ ಎಲ್ಲರಿಗೂ ಹಕ್ಕುಪತ್ರ ನೀಡಬೇಕು.
- ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದು ಅರ್ಜಿ ಸಲ್ಲಿಸದೇ ಇರುವವರಿಗೆ ಅರಣ್ಯ ಹಕ್ಕು ಕಾಯ್ದೆ ಅನ್ವಯ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಬೇಕು.
- 94ಸಿ, 94ಸಿಸಿ. ಅರ್ಜಿಸಲ್ಲಿಸಿದ ಎಲ್ಲರಿಗೂ ಜಾಗದ ಹಕ್ಕುಪತ್ರ ವಿತರಿಸಬೇಕು.
- ಕಂದಾಯ-ಅರಣ್ಯ ಭೂಮಿಯ ಜಂಟಿಸರ್ವೆ ನಡೆಸಿ ಗೊಂದಲವನ್ನು ನಿವಾರಿಸಬೇಕು.
- ಬಲಾಡ್ಯರ ವಶದಲ್ಲಿರುವ ಸರ್ಕಾರಿ ಗೋಮಾಳ ಇನ್ನಿತರೆ ಭೂಮಿಯನ್ನು ವಶಪಡಿಸಿಕೊಂಡು ಭೂಹೀನರಿಗೆ ಹಂಚಿಕೆ ಮಾಡಬೇಕು.
- ಜಿಲ್ಲೆಯ ಭೂಮಿ-ವಸತಿ ಸಮಸ್ಯೆಗಳನ್ನು ಕಾಲಕಾಲಕ್ಕೆ ಬಗೆ ಹರಿಸಲು ಜಿಲ್ಲಾಧಿಕಾರಿಗಳ ಅದ್ಯಕ್ಷತೆಯಲ್ಲಿ ಹೋರಾದ ಪ್ರತಿನಿಧಿಗಳನ್ನೊಳಗೊಂಡ ಜಿಲ್ಲಾ ಸಮಿತಿಯನ್ನು ರಚಿಸಬೇಕು.
ಈ ಮೇಲಿನ ಬೇಡಿಕೆಗಳನ್ನು ಇಟ್ಟುಕೊಂಡು ಸೋಮವಾರದಿಂದ (ಇಂದಿನಿಂದ) ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಆರಂಭಿಸಲಾಗುತ್ತಿದೆ. ಬಡವರ ನ್ಯಾಯಯುತವಾದ ಈ ಹೋರಾಟಕ್ಕೆ ನಾಡಿನ ಎಲ್ಲಾ ಪ್ರಜ್ಞಾವಂತರು ಸಹಕರಿಸಿ ಹೋರಾಟದ ಬೆಂಬಲಕ್ಕೆ ನಿಲ್ಲಬೇಕೆಂದು ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಮನವಿ ಮಾಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243