ದಿನದ ಸುದ್ದಿ
ಕೇರಳದಲ್ಲಿ ದಲಿತರಿಂದ ಊಟ ನಿರಾಕರಿಸಿದ ‘ಸುದ್ದಿ ಸತ್ಯ’ : ಇದು ‘ಸುದ್ದಿದಿನ’ ರಿಯಾಲಿಟಿ ಚೆಕ್..!
ಸುದ್ದಿದಿನ ಡೆಸ್ಕ್ | ದಲಿತರ ಧ್ವನಿ ಅಡಗಿಸಲಾಗುತ್ತಿದೆ, ಮಾಧ್ಯಮಗಳು ದಲಿತರಿಗೆ ಅನ್ಯಾಯವಾದ ಸುದ್ದಿಗಳನ್ನು ಪ್ರಕಟಿಸುತ್ತಿಲ್ಲ ಎಂಬ ಒಂದು ಆರೋಪವಿದೆ. ಇದನ್ನು ದಿಟ್ಟವಾಗಿ ಎದುರಿಸಿದ ಸುದ್ದಿದಿನಕ್ಕೆ ತುಳಿತಕ್ಕೊಳಗಾದವರ ನೋವನ್ನು ಪ್ರಪಂಚಕ್ಕೆ ಮುಟ್ಟಿಸುವುದು ಹೇಗೆಂಬ ಆತಂಕ ಎದುರಾಗಿದೆ.
ಭಾನುವಾರ ಬೆಳ್ಳಂಬೆಳಗ್ಗೆ ಇಂಡಿಯಾ ಟುಡೆ ವೆಬ್ ಪೋರ್ಟಲ್ ಕೇರಳದ ಅಲಪ್ಪುಳ ಜಿಲ್ಲೆಯ ನಿರಾಶ್ರಿತರ ಕೇಂದ್ರದಲ್ಲಿ ದಲಿತರು ಮಾಡಿದ ಅಡುಗೆಯನ್ನು ಮೇಲ್ಜಾತಿಯವರು ತಿನ್ನುತ್ತಿಲ್ಲ. ಸವರ್ಣೀಯರು ಪ್ರತ್ಯೇಕ ಕ್ಯಾಂಪ್ ಮಾಡಿಕೊಂಡು ಪರಿಹಾರವಾಗಿ ಬಂದ ಅರ್ಧಕ್ಕೂ ಹೆಚ್ಚು ದಿನಸಿಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯನ್ನು ಭಾವಾನುವಾದ ಮಾಡಿ ಕನ್ನಡಿಗರಿಗೆ ತಲುಪಿಸಲಾಗಿತ್ತು.
ಈ ಸುದ್ದಿ ಬರೆದ ಕೆಲವೇ ನಿಮಿಷಗಳಲ್ಲಿ ಫೇಸ್ಬುಕ್ ಪೇಜ್ನಲ್ಲಿ ಶೇರ್ ಮಾಡಿದ್ದೆವು. ಹಾಗೆಯೇ ನಮ್ಮ ಪೋರ್ಟಲ್ನ ಸಿಬ್ಬಂದಿಯೂ ಅದನ್ನು ತಮ್ಮ ಖಾತೆಗಳ ಮೂಲಕ ಶೇರ್ ಮಾಡಿದ್ದರು. ಬರಹ ಹೆಸರಿನ ಖಾತೆಯಿಂದ ಗಂಟೆಗಳಲ್ಲಿ ಸಾವಿರಾರು ಮಂದಿ ತಲುಪಿದ ಪೋಸ್ಟ್ ವೈರಲ್ ಆಗಿತ್ತು. ಸದ್ಯ ಧಮನಿತರ ಧ್ವನಿ ಎಲ್ಲರಿಗೂ ತಲುಪಿತಲ್ಲ ಎಂದು ನಿರಾತಂಕವಾದೆವು. ಆದರೆ, ನಮ್ಮ ನಿರೀಕ್ಷೆ ಕೆಲವೇ ನಿಮಿಷಗಳಲ್ಲಿ ಸುಳ್ಳಾಯಿತು.
ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ದಲಿತ ವಿರೋಧಿಗಳು ಈ ಸುದ್ದಿಯನ್ನು ಫೇಕ್ ಎಂದು ಕಮೆಂಟ್ ಮಾಡಿದರು. ಇನ್ನೂ ಒಂದು ಹೆಜ್ಜೆ ಮುಂದೆ ಇಟ್ಟು ರಿಪೋರ್ಟ್ ಮಾಡಿದರು. ಪರಿಣಾಮವಾಗಿ ಈ ಖಾತೆಯು ಬ್ಲಾಕ್ ಆಯಿತು. ಅಷ್ಟಕ್ಕೂ ನಾವು ಬರೆದ ಸುದ್ದಿ ಸುಳ್ಳಾಗಿರಲಿಲ್ಲ. ಇಂಡಿಯಾ ಟುಡೆ ಪೋರ್ಟಲ್ನಲ್ಲಿ ಬಂದ ಇದೇ ಸುದ್ದಿಯು ಟೈಮ್ಸ್ ಆಫ್ ಇಂಡಿಯಾ ಕೂಡ ಅಪ್ಲೋಡ್ ಮಾಡಿತ್ತು.
ಈ ಎರಡೂ ಪೋರ್ಟಲ್ನಲ್ಲಿ ಬಂದ ಸುದ್ದಿಯನ್ನು ಆಧಾರವಾಗಿಟ್ಟುಕೊಂಡು ಸುದ್ದಿ ಬರೆದಿದ್ದರೂ ನಾವೇ ಎಡವಿದೆವಾ ಎಂಬ ಅನುಮಾನದಿಂದ ಸುದ್ದಿಯನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಿದೆವು. ಇದಕ್ಕಾಗಿ ಕೇರಳದ ಅಲಪ್ಪುಳ ಜಿಲ್ಲೆಯ ಜಿಲ್ಲಾಧಿಕಾರಿ ಸುಹಾಸ್ ಅವರನ್ನು ಸುದ್ದಿದಿನ ತಂಡ ಸಂಪರ್ಕಿಸಿತು. ಈ ವಿಷಯವನ್ನು ಅವರು ಖಚಿತಪಡಿಸಿದರೂ, ಹೆಚ್ಚು ಹೈಲೈಟ್ ಮಾಡದಂತೆ ಸುಹಾಸ್ ಸಲಹೆ ನೀಡಿದರೆ. ನಾವು ಅದನ್ನು ಗೌರವಿಸುತ್ತೇವೆ. ಆದರೆ, ಪ್ರವಾಹದಂಥ ಭೀಕರ ಪರಿಸ್ಥಿತಿಯಲ್ಲೂ ದಲಿತರನ್ನು ತುಳಿಯುವ ಮನೋಭಾವನೆಗೆ ನಮ್ಮ ವಿರೋಧವಿದೆ. ಖಾತೆ ಬ್ಲಾಕ್ ಆದರೆ, ಅದನ್ನು ಮತ್ತೆ ಪಡೆಯಬಹುದು. ನಮ್ಮನ್ನು ಫೇಸ್ಬುಕ್ನಿಂದ ಹೊರಗೆ ತಳ್ಳಿ ಸತ್ಯವನ್ನು ಬಚ್ಚಿಡುವ ಯತ್ನಕ್ಕೆ ನಾವು ಹೆದರುವುದಿಲ್ಲ. ಸಮಾಜದ ಮೂರನೇ ವರ್ಗದವರಿಗೂ ಧನಿಯಾಗುವುದು ಪತ್ರಿಕೋದ್ಯಮದ ಮೂಲ ಉದ್ದೇಶ. ಅದಕ್ಕೆ ಸುದ್ದಿದಿನ ಸದಾ ಬೆಂಬಲಿಸುತ್ತದೆ.
-ಸುದ್ದಿದಿನ
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ6 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
-
ದಿನದ ಸುದ್ದಿ2 days ago
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ