ದಿನದ ಸುದ್ದಿ
ವಿಡಿಯೋ : ಯುವತಿಯಿಂದ ಸಂಸದ ಪ್ರತಾಪ್ ಸಿಂಹನ ಮೇಲೆ ‘ಲೈಂಗಿಕ ಕಿರುಕುಳ’ ಆರೋಪ..!
ಸುದ್ದಿದಿನ,ಮೈಸೂರು : ಅದೇನೋ ಬಿಜೆಪಿ ಪಕ್ಷದ ನಾಯಕರಿಗೂ ಹಾಗೂ ಲೈಂಗಿಕ ಕಿರುಕುಳದ ಆರೋಪಗಳಿಗೂ ಬಿಡದ ನಂಟು. ಹೊನ್ನಾಳಿ ಶಾಸಕ ರೇಣುಕಾಚಾರ್ಯ, ಹರತಾಳು ಹಾಲಪ್ಪ, ರಾಮದಾಸ್, ತೇಜಸ್ವಿ ಸೂರ್ಯ, ಇವರುಗಳು ಲೈಂಗಿಕ ಕಿರುಕುಳದ ಆರೋಪ ಹೊತ್ತು ಜನತೆಯಿಂದ ಛೀಮಾರಿ ಹಾಕಿಸಿಕೊಂಡದ್ದಾಯಿತು. ಈಗ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಸರದಿ.
ಮಂಡ್ಯದ, ಚಾಮುಂಡೇಶ್ವರಿ ನಗರದ ‘ಶೃತಿ’ ಎಂಬ ಪತ್ರಿಕೋದ್ಯಮ ವಿದ್ಯಾರ್ಥಿನಿ ಸಂಸದ ಪ್ರತಾಪ್ ಸಿಂಹ ಅವರಿಂದಾದ ಲೈಂಗಿಕ ಕಿರುಕುಳದ ಬಗ್ಗೆ ಸುಧೀರ್ಘವಾದ ಪತ್ರವೊಂದನ್ನು ಬರೆದಿದ್ದಾರೆ.
ಇದೀಗ ಈ ಪತ್ರವು ಹಾಗೂ ಯುವತಿಯೊಂದಿಗೆ ಅಶ್ಲೀಲವಾಗಿ ಮಾತನಾಡಿರು ಆಡಿಯೋವೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಶೃತಿ ಎಂಬುವರೊಂದಿಗೆ ಸ್ನೇಹ ಬೆಳೆಸಿದ್ದ ಪ್ರತಾಪ್ ಸಿಂಹ ಆಕೆಗೆ ದಿನನಿತ್ಯ ಅಶ್ಲೀಲ ಸಂಭಾಷಣೆಯಲ್ಲಿ ಸಂಭೋದಿಸುತ್ತ, ಲೈಂಗಿಕ ಕ್ರಿಯೆಗೆ ಆಹ್ವಾನಿಸುತ್ತಿದ್ದರ ಬಗ್ಗೆ ನೊಂದು ಯುವತಿ ಮಾಧ್ಯಮಗಳ ಮೊರೆಹೋಗಿದ್ದಾರೆ.
ಈ ಸಂಬಂಧ ಮೈಸೂರಿನ ಹಿರಿಯ ಪತ್ರಕರ್ತ ದೀಪಕ್ ಅವರು ‘ಮತಭಾರತ‘ ಎಂಬ ಸರಣಿ ವಿಡಿಯೋದಲ್ಲಿ ಪ್ರತಾಪ್ ಸಿಂಹ ಅವರ ಲೈಂಗಿಕ ಕಿರುಕುಳದ ಬಗ್ಗೆ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಯುವತಿಯೊಬ್ಬರು ಪ್ರತಾಪ್ ಸಿಂಹ ಅವರ ಬಗ್ಗೆ ಆರೋಪಿಸಿರುವ ವಿಡಿಯೋದ ತುಣುಕು ಕೂಡ ಇದೆ. ಈ ಅರೋಪಕ್ಕೆ ಸಂಬಂಧಿಸಿದಂತೆ ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ, ಪ್ರಜಾಪತಿನಿಧಿಯಾಗಿರುವ ಸಂಸದ ಪ್ರತಾಪ್ ಸಿಂಹ ಅವರು ಇನ್ನೂ ಪ್ರತಿಕ್ರಿಯೆ ನೀಡಿಲ್ಲ.
ವಿಡಿಯೋ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ
https://m.facebook.com/story.php?story_fbid=660814254369266&id=100013220922255
ಯುವತಿಯ ಪತ್ರ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243