Connect with us

ದಿನದ ಸುದ್ದಿ

ವಿಶ್ವ ಪಶುವೈದ್ಯ ದಿನ | ಪಶುವೈದ್ಯ ವೃತ್ತಿಯ ಸುತ್ತ ಒಂದು ಪಕ್ಷಿ ನೋಟ

Published

on

  • ಡಾ. ಕಮಲೇಶ್ ಕುಮಾರ್ ಕೆ ಎಸ್,ಪಶುವೈದ್ಯಾಧಿಕಾರಿಗಳು,ಪಶುಚಿಕಿತ್ಸಾಲಯ, ಮತ್ತೂರು,ಶಿವಮೊಗ್ಗ

ಲ್ಲಾ ವರ್ಷದ ಏಪ್ರಿಲ್ ಕಡೆಯ ಶನಿವಾರ ವಿಶ್ವ ಪಶುವೈದ್ಯ ದಿನಾಚರಣೆ ಆಚರಿಸುವ ವಿಶ್ವದ ಪಶುವೈದ್ಯರು ಇಡೀ ವಿಶ್ವವೇ ಕರೋನದಿಂದ ತತ್ತರಿಸಿ ಹೋಗಿರುವ ಈ ಸಂದರ್ಭದಲ್ಲಿ ಈ ಬಾರಿ ಒಂದು ಉತ್ತಮ ಗುರಿಯಾದ “ಪರಿಸರ ಸಂರಕ್ಷಣೆಯಿಂದ ಪ್ರಾಣಿ ಹಾಗು ಮನುಷ್ಯರ ಆರೋಗ್ಯ ಸುಧಾರಣೆ” (“Environmental protection for improving animal and human health”) ಎಂಬ ವಿಷಯವನ್ನು ಉತ್ತೇಜಿಸುತ್ತಿದ್ದಾರೆ. ಪರಿಸರ ಸಂರಕ್ಷಣೆಯಿಂದ ಆಗುವ ಮಾಲಿನ್ಯ ತಡೆ, ಕಡಿಮೆ ರೋಗ ಹರಡುವಿಕೆ ಹಾಗೂ ಹೆಚ್ಚುವ ರೋಗ ನಿರೋಧಕ ಶಕ್ತಿಯಿಂದ ಖಂಡಿತವಾಗಿಯೂ ಎಲ್ಲಾ ಜೀವಿಗಳ ಆರೋಗ್ಯ ಸುಧಾರಣೆ ಸಾಧ್ಯವಾಗುತ್ತದೆ.

ರೈತರ ಏಳಿಗೆಗಾಗಿ ಕರೋನಾದಲ್ಲೂ ಪಶುವೈದ್ಯರ ಹೋರಾಟ

ಕರೋನದಿಂದ ಆಗಿರುವ ಇಂಥಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಎಲ್ಲ ಉದ್ಯಮಗಳು ಸ್ಥಗಿತವಾಗಿ ದೇಶದ ಆರ್ಥಿಕತೆ ಕುಸಿಯುತ್ತಿದ್ದರು ಸಹ ಹೈನುಗಾರಿಕೆ ಬಡ ರೈತರ ಕೈ ಹಿಡಿದಿದೆ, ನೆಮ್ಮದಿಯಾಗಿ ಜೀವನ ನಡೆಸಿ ನಿಟ್ಟುಸಿರು ಬಿಡಲು ಸಹಾಯ ಹಸ್ತ ನೀಡಿದೆ, ಇದಕ್ಕೆ ಪಶುವೈದ್ಯರು ಎಗ್ಗಿಲ್ಲದೆ ನೀಡುತ್ತಿರುವ ಅಗತ್ಯ ಸೇವೆಯು ಬೆನ್ನೆಲುಬಾಗಿದೆ.

ಪಶುವೈದ್ಯ ವೃತ್ತಿಯ ಇತಿಹಾಸ

ಇತಿಹಾಸದ ಪ್ರಕಾರ ಮೊಟ್ಟಮೊದಲು ಪಶು ವೈದ್ಯಕೀಯ ವಿಜ್ಞಾನದಲ್ಲಿ ಪಾಂಡಿತ್ಯವನ್ನು ಪಡೆದ ವ್ಯಕ್ತಿಯು ಭಾರತೀಯ, ಅವನು ಹಯಘೋಷ ಎಂಬ ಋಷಿಯ ಮಗನಾದ ಶಾಲಿಹೋತ್ರ (2350 BCE) ಎಂಬ ಉಲ್ಲೇಖವಿದೆ.

ಫ್ರಾನ್ಸನ ಜಾನುವಾರುಗಳಲ್ಲಿ ಏಕಾಏಕಿ ಪಿಡುಗು ರೋಗ ಕಾಣಿಸಿಕೊಂಡಾಗ, ಅದಕ್ಕೆ ಪರಿಹಾರ ಕಂಡುಹಿಡಿಯಲೆಂದೇ ಕ್ಲಡ್ ಬೊರ್ಗಲಟ್ (Claude Bourgelat) ಎಂಬಾತನು ಮೊಟ್ಟಮೊದಲ ಪಶು ವೈದ್ಯಕೀಯ ಮಹಾವಿದ್ಯಾಲಯವನ್ನು ಪ್ರಾರಂಭಿಸಿದರು ತದ ನಂತರ ಇನ್ನುಳಿದ ದೇಶಗಳಲ್ಲಿ ಪ್ರಾರಂಭವಾದವು. ಹೀಗೆ ಪಶುವೈದ್ಯ ವಿಜ್ಞಾನವು ಬೆಳೆಯತೊಡಗಿತು.

ಪಶುವೈದ್ಯರು ಹೀಗೆ ಉತ್ತಮರು

ಜಾನುವಾರುಗಳೇ ದೇವರು ಎಂದು ಕಲ್ಪಿಸಿಕೊಂಡಿರುವ ನಮ್ಮ ದೇಶದಲ್ಲಿ, ಕೇವಲ ಪೂಜೆಯ ವಸ್ತುವೆಂದು ನೋಡದೆ ಜಾನುವಾರುಗಳಿಂದ ಆರ್ಥಿಕವಾಗಿ ಸದೃಢತೆ ಹೊಂದಿದ ಸಾಕಷ್ಟು ರೈತರು ನಮ್ಮ ಸುತ್ತಲೂ ಇರುವುದನ್ನು ನಾವೆಲ್ಲರೂ ಗಮನಿಸಿಯೇ ಇರುತೇವೆ. ಅದೆಷ್ಟೋ ಸಣ್ಣ ಹಾಗೂ ಅತೀ ಸಣ್ಣ ರೈತರು ತಮ್ಮಲ್ಲಿರುವ ಬೆರಳೆಣಿಕೆಯಷ್ಟು ಕೋಳಿ, ಕುರಿ, ಮೇಕೆ, ಹಸುಗಳನ್ನು ಕಟ್ಟಿಕೊಂಡು ಉತ್ತಮ ರೀತಿಯಲ್ಲಿ ಜೀವನ ಸಾಗಿಸುತಿರುವುದಕ್ಕೆ ಲೆಕ್ಕವಿಲ್ಲದಷ್ಟು ಉದಾಹರಣೆ ನಮ್ಮ ಬಳಿ ಇವೆ. ಪಶುವೈದ್ಯರು ಜಾನುವಾರು ಸಾಗಾಣಿಕೆ ಹಾಗೂ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರ ಏಳಿಗೆಗೆ ನೀಡುತ್ತಿರುವ ಸಹಕಾರ ಬಹಳಷ್ಟು.

ಪಶುವೈದ್ಯರಾಗಲು ಇರಲೇಬೇಕಾದ ಗುಣಗಳು

ನಟ ವಿಲ್ ರೋಜರ್ಸ್ಸ ಎಂಬಾತನ “Best doctor in the world is a veterinarian. He can’t ask his patients what’s the matter. He’s just got to know.” ಹೇಳಿಕೆಯಂತೆ ನಮಗೆಲ್ಲ ತಿಳಿದಿರುವ ಹಾಗೆ ಸಾಮಾನ್ಯವಾಗಿ ಪ್ರಾಣಿಗಳು ರೋಗದ ಲಕ್ಷಣಗಳನ್ನು ತೋರಿಸುವುದಿಲ್ಲ, ಪ್ರಾಣಿಯ ವಾರಸುದಾರರ ಹೇಳಿಕೆಯ ಮೇಲೆ ಅವಲಂಬಿತವಾಗಿಯೋ ಇಲ್ಲವಾದಲ್ಲಿ ತಾವಾಗಿಯೇ ಪರೀಕ್ಷಿಸಿ ಅದನ್ನು ಕಂಡು ಹಿಡಿಯ ಬೇಕಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಹಳೆಯ ಚಿಕಿತ್ಸೆಯ ಅನುಭವ, ಜಾಣ್ಮೆ, ತಾಳ್ಮೆ, ಉತ್ತಮ ದೃಷ್ಟಿ, ಸ್ಪರ್ಶ ಸಂವೇದನೆ ಹಾಗು ಪ್ರಾಣಿಗಳ ಮೇಲಿನ ಪ್ರೀತಿ ಸಾಕಷ್ಟು ಇರಬೇಕಾಗುತ್ತದೆ.

ಪಶುವೈದ್ಯರು ಕೇವಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವುದಲ್ಲದೆ ಸಾಕಷ್ಟು ಬಾರಿ ಜಾನುವಾರು ಮಾಲೀಕರ ಮನೆಯ ಬಾಗಿಲಿಗೆ ಹೋಗಿ ಚಿಕಿತ್ಸೆಯನ್ನು ನೀಡಬೇಕಾಗಿರುತ್ತದೆ ಆದ್ದರಿಂದ
ಕೇವಲ ಮಾನಸಿಕರೀತಿಯಿಂದ ಅಲ್ಲದೆ ದೈಹಿಕವಾಗಿಯೂ ಸದೃಢವಾಗಿರಬೇಕಾಗಿರುತ್ತದೆ.

ಪಶುವೈದ್ಯರ ಶ್ರೇಷ್ಠತೆ ಹಾಗು ವೈವಿಧ್ಯತೆ

ವೈದ್ಯರೆಂದರೆ ಅವರ ಜೀವನಾದ್ಯಂತ ಕಲಿಕೆಯು ಅವರ ಜೊತೆಗೂಡಿರುತ್ತದೆ, ಅದೇ ರೀತಿ ಮನುಷ್ಯನನ್ನು ಬಿಟ್ಟು ಬೇರೆಲ್ಲಾ ಜೀವಿಗಳ ಎಲ್ಲ ರೀತಿಯ ರೋಗಗಳಿಗೂ ಚಿಕಿತ್ಸೆ ನೀಡಬಲ್ಲ ಪಶುವೈದ್ಯರು ದಿನನಿತ್ಯವೂ ಸಾಕಷ್ಟು ಕಲಿಯುತ್ತಿರಬೇಕಾಗಿರುತ್ತದೆ. ಹೇಳಬೇಕೆಂದರೆ ಸಾಕಷ್ಟು ಪಶುವೈದ್ಯರು ಸಾಮಾನ್ಯ ಜ್ವರದ ಚಿಕಿತ್ಸೆಯಿಂದ ಹಿಡಿದು ಎಂತಹ ಅರವಳಿಕೆಯಿಂದ ಕೂಡಿದ ಶಾಸ್ತ್ರಚಿಕಿತ್ಸೆಯನ್ನು ಕೂಡ ಮಾಡಬಲ್ಲರು ಹಾಗೂ ತಮ್ಮ ಕಾರ್ಯ ವ್ಯಾಪ್ತಿಯ ಸ್ಥಳದಲ್ಲಿ ಕಂಡು ಬರುವ ರೋಗಗಳನ್ನು ಚಾಣಾಕ್ಷ ರೀತಿಯಿಂದ ಕಂಡು ಹಿಡಿದು ಅದಕ್ಕೆ ಸೂಕ್ತ ರೀತಿಯ ಚಿಕಿತ್ಸೆಯನ್ನು ನೀಡಬಲ್ಲರು.

ವಿಶ್ವದಲ್ಲಿ ಪಶು ವೈದ್ಯಕೀಯ ವಿಜ್ಞಾನವು ಸಾಕಷ್ಟು ಮುಂದುವರೆದಿದೆ ಆದರೂ ಭಾರತವು ಅದರಲ್ಲೇನು ಮಿಗಿಲಿಲ್ಲ. ಆದರೆ ವಾಸ್ತವ ಸ್ಥಿತಿ ಗಮನಿಸಿದರೆ ಇಂದಿಗೂ ಭಾರತದಲ್ಲಿ ಸುಸಜ್ಜಿತವಾದ ಸಲಕರಣೆಗಳನ್ನು ಹೊಂದಿರುವ ಪಶು ಆಸ್ಪತ್ರೆ ಬೆರಳೆಣಿಕೆಯಷ್ಟು ಮಾತ್ರ. ಪ್ರಾಥಮಿಕ ಚಿಕಿತ್ಸೆಯಿಂದ ಹಿಡಿದು ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಯನ್ನು ಕೂಡ ಒಬ್ಬ ಪಶುವೈದ್ಯನೇ ನೀಡಬೇಕಾಗಿರುತ್ತದೆ. ಇಂತಹ ಸಂದರ್ಭದಲ್ಲೂ ಕೂಡ ನಮ್ಮ ಪಶುವೈದ್ಯರು ದೃತಿಗೆಡದೆ ಸಾಕಷ್ಟು ಮೇಲುಗೈ ಸಾಧಿಸಿದ್ದಾರೆ.

ಜನರಿಗೆ ಸೇವೆಯನ್ನು ಒದಗಿಸುವ ಅಧಿಕಾರಿಗಳಲ್ಲಿ ಸಾಕಷ್ಟು ಹತ್ತಿರವಾಗಿರುವ ಪಶುವೈದ್ಯರು ರೈತರ ಏಳಿಗೆಗೆ ಸಾಕಷ್ಟು ಮಾಹಿತಿಯನ್ನು ನೀಡಬಲ್ಲರು ಹಾಗೂ ಅವರ ದಿನನಿತ್ಯ ಜೀವನದಲ್ಲಿ ವೈಜ್ಞಾನಿಕ ಜೀವನವನ್ನು ಅಳವಡಿಸಿಕೊಳ್ಳಲು ಉಪಕಾರಿಯಾಗಿದ್ದಾರೆ. ಪಶುವೈದ್ಯರು ಕೇವಲ ವೈದ್ಯಕೀಯ ಸೇವೆ ಅಲ್ಲದೆ ಇನ್ನಿತರ ಸೇವೆಯನ್ನು ಒಡಗಿಸುತ್ತಿದ್ದಾರೆ.

  • ಪ್ರಾಣಿಗಳಿಂದ ಮಾನವನಿಗೆ ಬರುವ ರೋಗ ತಡೆಗಟ್ಟುವಿಕೆ ಹಾಗೂ ಅದರ ಕುರಿತು ಸಂಶೋಧನೆ (ಉದಾ: ರೇಬಿಸ್, ಹಕ್ಕಿ ಜ್ವರ, ಬ್ರುಸೆಲೋಸಿಸ್)
  • ಎಲ್ಲಾ ತರಹದ ಪ್ರಾಣಿ, ಕಾಡು ಪ್ರಾಣಿಗಳ ರಕ್ಷಣೆ, ಚಿಕಿತ್ಸೆ ಹಾಗೂ ರೋಗ ತಡೆಗಟ್ಟುವಿಕೆ.
  • ಸಸಾರ ಜನಕ ಆಹಾರ ಪದಾರ್ಥಗಳಾದ ಹಾಲು, ಮಾಂಸ ಹಾಗೂ ಮೊಟ್ಟೆಗಳ (ಪ್ರೊಟೀನ್) ಉತ್ಪಾದನೆಯಿಂದ ಪೌಷ್ಟಿಕ ಆಹಾರ ಉತ್ಪಾದನೆ.
  • ಮನುಷ್ಯರ ಔಷಧ ಉತ್ಪಾದನೆ.
  • ಜಾನುವಾರುಗಳ ಔಷಧ ಉತ್ಪಾದನೆ.
  • ಯಾವುದೇ ರೀತಿಯ ಹೊಸ ಸಂಶೋಧನೆಯು ಮೊದಲು ಪ್ರಾಣಿಗಳೇ ಮೇಲೆ ಪ್ರಯೋಗಿಸಿ ಉತ್ತಮ ಫಲಿತಾಂಶ ಇದ್ದಲ್ಲಿ ನಂತರ ಮಾನವರ ಉಪಯೋಗಕ್ಕೆ ಬಳಕೆ. (ಉದಾ: ಬಾಡಿಗೆ ತಾಯಿಯಿಂದ ಮಗುವಿನ ಜನನ)
  • ಸತ್ತ ಜಾನುವಾರುಗಳಿಂದ ವ್ಯವಸಾಯಕ್ಕಾಗಿ ಉತ್ತಮವಾದ ರಾಸಾಯನಿಕ ಉತ್ಪಾದನೆ.
  • ಗೊಬ್ಬರ ಉತ್ಪಾದನೆ.
  • ಗೋಮೂತ್ರದ ಔಷಧೀಯ ಉಪಯೋಗದ ಕುರಿತು ಸಂಶೋಧನೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending