ಸಿನಿ ಸುದ್ದಿ
ಇವರೇ ರೆಬಲ್ ಸ್ಟಾರ್..!
ಕನ್ನಡ ಚಿತ್ರರಂಗ ಹಾಗೂ ದಕ್ಷಿಣ ಭಾರತದ ಮೇರು ನಟ ರೆಬೆಲ್ ಸ್ಟಾರ್ ಅಂಬರೀಶ್ ಮೂಲತಃ ಮಂಡ್ಯ ಜಿಲ್ಲೆ ದೊಡ್ಡರಸನಕೆರೆ ಗ್ರಾಮದವರು. ಹುಚ್ಚೇಗೌಡ ಹಾಗೂ ಪದ್ಮಮ್ಮ ದಂಪತಿಯವರ ಪುತ್ರರಾಗಿ ಅಂಬರೀಶ್ 1952 ಮೇ 29ರಂದು ಜನಿಸಿದರು. ಅಂಬರೀಶ್ ಅವರ ಮೂಲ ಹೆಸರು ಮಳವಳ್ಳಿ ಹುಚ್ಚೇಗೌಡ ಅಮರನಾಥ್. ಖ್ಯಾತ ಪಿಟೀಲು ವಿದ್ವಾನ್ ಟಿ. ಚೌಡಯ್ಯ ಇವರ ಅಜ್ಜ. 1972ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಸಿನಿಮಾದ ಜಲೀಲ ಪಾತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಂಬರೀಶ್ ಸುಮಾರು 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ಮಳವಳ್ಳಿ ಹುಚ್ಚೇಗೌಡ ಅಮರನಾಥ್ (ಅಂಬರೀಶ್) ಅವರು ಭಾರತೀಯ ಚಿತ್ರರಂಗದ ನಟರು ಹಾಗೂ ರಾಜಕಾರಣಿಯಾಗಿದ್ದರು ಇವರು ಜನಿಸಿದ್ದು 29 ಮೇ 1952 ಮಂಡ್ಯ ಜಿಲ್ಲೆಯ ದೊಡ್ದರೆಸಿಕೆರೆ ಗ್ರಾಮದಲ್ಲಿ. ತಂದೆ ಹುಚ್ಚೇಗೌಡ ತಾಯಿ ಪದ್ಮಮ್ಮ. ಇವರ ಬಾಲ್ಯ ವಿದ್ಯಾಬ್ಯಾಸ ಮುಗಿಸಿದ್ದು ಮಂಡ್ಯದಲ್ಲಿ. ಪದವಿ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದುಕೊಂಡಿದ್ದಾರೆ. ಅಂಬರೀಶ್ ಅವರು 1991 ರಲ್ಲಿ ಕನ್ನಡದಖ್ಯಾತ ನಟಿ ಸುಮಲತಾ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದ್ದರು.
1972 ರಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಲ್ ಅವರು ಅಂಬರೀಶ್ ಅವರನ್ನು ಗುರುತಿಸಿ ಕನ್ನಡ ಚಿತ್ರ ರಂಗಕ್ಕೆ ಕರೆತಂದರು. ಇವರು ಮೊಟ್ಟ ಮೊದಲ ಚಿತ್ರವಾದ “ನಾಗರಾಹಾವು” ಸಿನಿಮಾದಲ್ಲಿ ಖಳ ನಾಯಕನ ಪಾತ್ರದಲ್ಲಿ ಅಭಿನಯಿಸಿದ ಮೊದಲ ಚಿತ್ರವಾಗಿತ್ತು.
ಪಡುವಾರಳ್ಳಿ ಪಾಂಡವರು, ಮಸಣದ ಹೂವು, ಶುಭಮಂಗಳ, ರಂಗನಾಯಕಿ ಹೀಗೆ ಪ್ರಸಿದ್ದ ಕನ್ನಡ ಚಿತ್ರಗಳಲ್ಲಿ ನಾಯಕನ ಪಾತ್ರದಲ್ಲಿ ನಟಿಸಿ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಕನ್ನಡ ಚಿತ್ರ ರಂಗದ ರೆಬೆಲ್ ಸ್ಟಾರ್ ಆಗಿ ಹೊರ ಹೊಮ್ಮಿರುವ ಅಂಬರೀಶ ಅವರಿಗೆ ಮಂಡ್ಯದ ಗಂಡು, ಕಲಿಯುಗದ ಕರ್ಣ, ಹೀಗೆ ಹಲವು ಬಿರುದುಗಳನ್ನು ಪಡೆದ ಕನ್ನಡ ಚಿತ್ರ ರಂಗದ ಹೆಸರಾಂತ ಹಿರಿಯ ನಟರಾಗಿದ್ದರು.
ಕನ್ನಡ ಸಿನಿಮಾರಂಗದಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿ ಸಾಧನೆ ಮಾಡಿರುವ ಅಂಬರೀಶ್ ಅವರಿಗೆ 2013 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.
ಅಂಬರೀಶ್ ಅವರ ರಾಜಕೀಯ ಕ್ಷೇತ್ರ
ಕನ್ನಡ ಚಿತ್ರರಂಗದಲ್ಲಿ ಹಲವು ಪಾತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿರುವ ರೆಬೆಲ್ ಸ್ಟಾರ್ ಅಂಬರೀಶ್ ಅವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡು ರಾಜಕೀಯ ರಂಗವನ್ನು ಪ್ರವೇಶ ಮಾಡಿದರು. ಇವರು ಸಿನಿಮಾ ಕ್ಷೇತ್ರದಲ್ಲಿ ಗಳಿಸಿದ್ದ ಅಭಿಮಾನಿಗಳನ್ನು ರಾಜಕೀಯ ಕ್ಷೇತ್ರದಲ್ಲೂ ಸಹ ಅಭಿಮಾನಿಗಳನ್ನು ಹೊಂದಿದ್ದಾರೆ. ಅಂಬರೀಸ್ ಅವರು ಸಂಸದರು, ರಾಜ್ಯ ಸಚಿವರಾಗಿ ಆಯ್ಕೆ ಆಗಿದ್ದರು.
- 1998-99: 12ನೇ ಲೋಕಸಭಾ ಸದಸ್ಯರು.
- 1999-04: 13ನೇ ಲೋಕಸಭಾ ಸದಸ್ಯರು.
- 2004-09: 14ನೇ ಲೋಕಸಭಾ ಸದಸ್ಯರು.
- 2006-08: ಕರ್ನಾಟಕ ರಾಜ್ಯ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರು.
- 2008 ರಲ್ಲಿ ಕಾವೇರಿ ನೀರಿನ ವಿವಾದದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
- 2012: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು.
- 2013 ರ ಚುನಾವಣೆಯಲ್ಲಿ ಗೆದ್ದು ಕರ್ನಾಟಕ ರಾಜ್ಯ ವಸತಿ ಸಚಿವರು.
ಇವರಿಗೆ ಲಭಿಸಿದ ಪ್ರಶಸ್ತಿಗಳು
- ಕರ್ನಾಟಕ ರಾಜ್ಯ ಪ್ರಶಸ್ತಿ – ಅತ್ಯುತ್ತಮ ನಟ – 1982.
- ಕರ್ನಾಟಕ ರಾಜ್ಯ ಪ್ರಶಸ್ತಿ – ಅತ್ಯುತ್ತಮ ಸಹಾಯ ನಟ – ಮಸಣದ ಹೂವು(1985-86)
- ಫಿಲ್ಮ್ ಫೇರ್ ಪ್ರಶಸ್ತಿ – ಅತ್ಯುತ್ತಮ ನಟ – ಒಲವಿನ ಉಡುಗೊರೆ.
- ಎನ್.ಟಿ.ಆರ್ ನ್ಯಾಷನಲ್ ಪ್ರಶಸ್ತಿ – 2005.
- ಜೀವಮಾನ ಫಿಲ್ಮ್ ಫೇರ್ ಪ್ರಶಸ್ತಿ – 2009.
- ನಂದಿ ಪ್ರಶಸ್ತಿ( ಆಂದ್ರಸರ್ಕಾರ) – 2009.
- ಟಿವಿ9 ಸ್ಯಾಂಡಲ್ ವುಡ್ ಸ್ಟಾರ್ ಪ್ರಶಸ್ತಿ – 2012.
- ವಿಷ್ಣುವರ್ದನ್ ಪ್ರಶಸ್ತಿ (ಕರ್ನಾಟಕ ಸರ್ಕಾರ) – 2011.
- ಗೌರವ ಡಾಕ್ಟರೇಟ್ ಕರ್ನಾಟಕ ವಿವಿ) – 2013.
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ
ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243