ಸಿನಿ ಸುದ್ದಿ
ನೀನೆಂದೂ ನನ್ನ ಪುಟ್ಟ ‘ಅಮರ್’ ; ಟೀಸರ್ ಗಾಗಿಕಾಯ್ತಾ ಇದೀನಿ ಅಂದ್ರು ಯಶ್..!
ಸುದ್ದಿದಿನ ಡೆಸ್ಕ್ : ಗುರುವಾರ ಬೆಳಗ್ಗೆ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಭಿನಯದ ಬಹುನಿರೀಕ್ಷಿತ ಸಿನೆಮಾ ‘ಅಮರ್’ ಟೀಸರ್ ಬಿಡುಗಡೆಗೆ ಸಿದ್ದವಾಗಿದೆ.ಈ ಹಿನ್ನೆಲೆಯಲ್ಲಿ ಅಭಿಷೇಕ್ ಗೆ ಚಿತ್ರರಂಗದ ಹಲವು ಗಣ್ಯರು ಶುಭಕೋರಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಕೂಡ ಈ ರೀತಿಯಾಗಿ ಶುಭಕೋರಿದ್ದಾರೆ.
“ಪ್ರಿಯ ಅಭಿ….
ಟೀಸರ್ ಬಿಡುಗಡೆಯೊಂದಿಗೆ ಚಿತ್ರಯಾನದ ಮೊದಲ ಅಡಿಯಿಡುತ್ತಿರುವ ಈ ಶುಭ ಘಳಿಗೆ ಇದು. ಎಲ್ಲರಿಗಿಂತಲೂ ಹೆಚ್ಚಾಗಿ ನಾಳೆಯ ಟೀಸರ್ ಗಾಗಿ ಕೌತುಕದಿಂದ ಕಾಯ್ತಾ ಇದೀನಿ. ಪೋಸ್ಟರ್ ಗಳು ಸಖತ್ತಾಗಿವೆ. ನನ್ನ ಶುಭ ಹಾರೈಕೆಗಳು ‘ಎಂದೆಂದಿಗೂ-ನಿನ್ನೊಂದಿಗೆ’ ಇರುತ್ತವೆ. ನೀನೆಂದೂ ನನ್ನ ಪುಟ್ಟ ‘ಅಮರ್’.” ಎಂದು ಹಾರೈಸಿದ್ದಾರೆ ಯಶ್.
ಯಶ್ ಫೇಸ್ ಬುಕ್ ಪೇಜ್ ನಲ್ಲಿ ಶುಭ ಹಾರೈಕೆ
ಪ್ರಿಯ ಅಭಿ….ಟೀಸರ್ ಬಿಡುಗಡೆಯೊಂದಿಗೆ ಚಿತ್ರಯಾನದ ಮೊದಲ ಅಡಿಯಿಡುತ್ತಿರುವ ಈ ಶುಭ ಘಳಿಗೆ ಇದು. ಎಲ್ಲರಿಗಿಂತಲೂ ಹೆಚ್ಚಾಗಿ ನಾಳೆಯ ಟೀಸರ್…
Posted by Yash on Wednesday, 13 February 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ
ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243