ಸಿನಿ ಸುದ್ದಿ
ಹಿಟ್ಲರನ ಸರ್ವಾಧಿಕಾರದ ವಿರುದ್ಧ ‘ಚಾರ್ಲಿ ಚಾಪ್ಲಿನ್’ ಭಾಷಣ

“ಕ್ಷಮಿಸಿ! ನಾನು ಸರ್ವಾಧಿಕಾರಿಯಾಗಲು ಬಯಸಲಾರೆ, ಅದು ನನ್ನ ಕೆಲಸವೂ ಅಲ್ಲ. ನಾನು ಯಾರನ್ನೂ ಕೂಡಾ ಗೆಲ್ಲಲು ಅಥವಾ ಆಳಲು ಬಯಸುವುದಿಲ್ಲ. ಸಾಧ್ಯವಾದರೆ ನಾವು ಯಹೂದಿ, ನಾಝಿ, ಕರಿಯರು, ಬಿಳಿಯರು ಹೀಗೆ ಎಲ್ಲರಿಗೂ ಸಹಾಯ ಮಾಡುವಂತಾಗಬೇಕು. ಎಲ್ಲರೂ ಪರಸ್ಪರ ಸಹಾಯ ಮಾಡಿಕೊಳ್ಳಬೇಕು. ಮನುಷ್ಯರೆಂದರೆ ಹಾಗೆ. ನಾವು ಪರಸ್ಪರ ಸಂತೋಷದಿಂದ ಬದುಕಬೇಕೇ ಹೊರತು ಇತರರ ದುಃಖಕ್ಕಾಗಿ ಅಲ್ಲ. ಯಾರನ್ನೂ ದ್ವೇಷಿಸಲೇ ಕೂಡದು. ಈ ಭೂಮಿಯಲ್ಲಿ ಎಲ್ಲರಿಗೂ ಜಾಗವಿದೆ. ಮತ್ತೆ ಈ ಭೂಮಿಯು ಎಲ್ಲರ ಅಗತ್ಯಗಳನ್ನೂ ಪೂರೈಸುವಷ್ಟು ಸಮೃದ್ಧವಾಗಿದೆ. ಜೀವನದ ಹಾದಿ ಸುಂದರವೂ ಮುಕ್ತವೂ ಆಗಿರಲು ಸಾಧ್ಯ. ಆದರೆ ನಾವು ಆ ಹಾದಿಯನ್ನೇ ಕಳೆದುಕೊಂಡಿದ್ದೇವೆ.
ಸ್ವಾರ್ಥವು ಮನುಷ್ಯನ ಆತ್ಮವನ್ನೇ ಕಲುಷಿತಗೊಳಿಸಿದೆ, ಜಗತ್ತನ್ನು ದ್ವೇಷವೆಂಬ ಬೇಲಿಯಿಂದ ಬಂಧಿಸಿದೆ, ದುಃಖ ಮತ್ತು ರಕ್ತಪಾತದೆಡೆಗೆ ಸಾಗಿಸುತ್ತಿದೆ. ನಾವು ವೇಗವನ್ನು ಅಭಿವೃದ್ಧಿಪಡಿಸಿದ್ದೇವೆ. ಆದರೆ ನಮ್ಮನ್ನು ನಾವು ಬಂಧಿಸಿದ್ದೇವೆ. ನಮ್ಮನ್ನು ಮುಕ್ತಗೊಳಿಸಿರುವ ಯಂತ್ರಗಳು ನಮ್ಮನ್ನು ಆಸೆಯ ಕೂಪದಲ್ಲಿರಿಸಿವೆ. ಜ್ಞಾನವು ನಮ್ಮನ್ನು ಸಿನಿಕರನ್ನಾಗಿಸಿದೆ. ನಮ್ಮ ಜಾಣ್ಮೆಯು ಕಠಿಣವೂ ನಿರ್ದಯಿಯೂ ಆಗಿದೆ. ನಾವು ತುಂಬಾ ಯೋಚಿಸುತ್ತೇವೆ ಆದರೆ ಕಡಿಮೆ ಪ್ರೀತಿಸುತ್ತೇವೆ.
ಯಂತ್ರಗಳಿಗಿಂತ ನಮಗೆ ಹೆಚ್ಚು ಮಾನವೀಯತೆಯ ಅಗತ್ಯವಿದೆ. ಜಾಣ್ಮೆಗಿಂತ ಹೆಚ್ಚು ದಯೆ , ಸಭ್ಯತೆಯ ಅವಶ್ಯಕತೆಯಿದೆ. ಈ ಗುಣಗಳಿಲ್ಲದೆ ಹೋದರೆ, ಬದುಕು ಹಿಂಸಾಮಯವಾಗುವುದು ಮತ್ತು ವಿನಾಶವಾಗುವುದು.
ವಿಮಾನ ಮತ್ತು ರೇಡಿಯೋಗಳು ನಮ್ಮನ್ನು ಹತ್ತಿರಕ್ಕೆ ತಂದಿವೆ. ಈ ಸಂಶೋಧನೆಗಳ ತಥ್ಯವೇ ಮನುಷ್ಯನ ಒಳ್ಳೆಯತನವನ್ನು ಕೂಗಿ ಹೇಳುತ್ತಿವೆ, ನಮ್ಮೆಲ್ಲರ ಸಹೋದರೆತೆಗಾಗಿ, ಒಗ್ಗಟ್ಟಿಗಾಗಿ ಮೊರೆಯಿಡುತ್ತಿದೆ. ಈಗಲೂ ಸಹ ನನ್ನ ಧ್ವನಿಯು ಮಿಲಿಯಗಟ್ಟಲೆ ಜನರನ್ನು ತಲುಪುತ್ತಿದೆ. ನಿರ್ಗತಿಕ ಗಂಡಸರು, ಹೆಂಗಸರು, ಪುಟ್ಟ ಪುಟ್ಟ ಮಕ್ಕಳು – ವ್ಯವಸ್ಥೆಯ ಬಲಿ ಪಶುಗಳು, ಮುಗ್ಧ ಜನರನ್ನು ಚಿತ್ರಹಿಂಸೆ ನೀಡಿ ಬಂಧನದಲ್ಲಿರಿಸುವ ವ್ಯವಸ್ಥೆ!
ಯಾರಿಗೆ ನನ್ನ ಮಾತುಗಳು ಕೇಳಿಸುತ್ತಿವೆಯೋ
ಕೇಳಿರಿ. ಧೃತಿಗೆಡದಿರಿ
ನಮ್ಮ ಮೇಲಿರುವ ಈ ವಿಷಾದ ಸ್ವಾರ್ಥ ಸಾಗುತ್ತಿರುವ ಈ ಹೊತ್ತು
ಮಾನವ ಪ್ರಗತಿಯ ಬಗ್ಗೆ ಭಯ ಪಟ್ಟ ಮನುಷ್ಯರ ಕಹಿ ಭಾವನೆಗಳಿವು
ಮಾನವ ದ್ವೇಷವು ಕೊನೆಗೊಳ್ಳಲಿದೆ.
ಸರ್ವಾಧಿಕಾರಿಯ ಅಂತ್ಯವಾಗಲಿದೆ
ಜನರ ಕೈಗಳಿಂದ ಕಿತ್ತುಕೊಂಡ ಅಧಿಕಾರವು
ಮರಳಿ ಜನರ ಕೈಗಳಿಗೆ ಮರಳಲಿದೆ
ಎಲ್ಲಿಯವರೆಗೆ ಮನುಷ್ಯರು ಸಾಯುತ್ತಿರುವರೋ
ಸ್ವಾತಂತ್ರ್ಯವೆಂದೂ ನಾಶವಾಗದು…
ಸೈನಿಕರೇ! ನಿಮ್ಮತನವನ್ನು ದುಷ್ಟರಿಗೆ ಬಿಟ್ಟು ಕೊಡದಿರಿ. ನಿಮ್ಮನ್ನು ಶೋಷಿಸುವವರಿಗೆ
ನಿಮ್ಮನ್ನು ದಾಸ್ಯಕ್ಕೆ ದೂಡಿದವರಿಗೆ
ನಿಮ್ಮ ಬದುಕುಗಳನ್ನು ನಿಯಂತ್ರಿಸುವವರಿಗೆ
ನೀವು ಯಾವುದನ್ನು ಯೋಚಿಸಬೇಕು
ಯಾವುದನ್ನು ಪ್ರೀತಿಸಬೇಕು
ನಿಮ್ಮನ್ನು ದುಡಿಸಿದವರಿಗೆ
ನಿಮ್ಮನ್ನು ಪಶುಗಳಂತೆ ನಡೆಸಿಕೊಂಡವರಿಗೆ
ನಿಮ್ಮನ್ನು ಫಿರಂಗಿಗಳ ಮದ್ದಾಗಿ ಬಳಸಿದವರಿಗೆ
ಮನುಷ್ಯರಲ್ಲದವರಿಗೆ
ನಿಮ್ಮತನವನ್ನು ಬಿಟ್ಟು ಕೊಡದಿರಿ
ಯಾಂತ್ರಿಕ ಮನುಷ್ಯರಿಗೆ
ಯಾಂತ್ರಿಕ ಮನಸ್ಸುಗಳಿಗೆ
ಯಾಂತ್ರಿಕ ಹೃದಯಗಳಿಗೆ
ನೀವು ಯಂತ್ರಗಳಲ್ಲ!
ನೀವು ದನಗಳಲ್ಲ!!
ನೀವು ಮನುಷ್ಯರು!!
ನಿಮ್ಮ ಹೃದಯದಲ್ಲಿ ಮಾನವತೆಯ ಪ್ರೇಮವಿದೆ!
ನೀವು ದ್ವೇಷಿಸಲಾರಿರಿ!
ಕೇವಲ ಪ್ರೀತಿಸಲ್ಪಡವನು ಮಾತ್ರ ದ್ವೇಷಿಸುತ್ತಾನೆ.
ಪ್ರೀತಿಸಲ್ಪಡದ ಅಸಹಜ ವ್ಯಕ್ತಿ!!
ಸೈನಿಕರೆ! ದಾಸ್ಯಕ್ಕಾಗಿ ಹೋರಾಡಬೇಡಿ!
ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ!
ಸಂತ ಲೂಕ ನ 17 ನೆಯ ಅಧ್ಯಾಯದಲ್ಲಿ ಹೀಗಿದೆ
” ದೇವರ ಸಾಮ್ರಾಜ್ಯವು ಮಾನವನ ಹೃದಯದಲ್ಲಿದೆ”
ಒಬ್ಬನ ಹೃದಯದಲ್ಲಲ್ಲ
ಯಾವುದೋ ಗುಂಪಿನ ಹೃದಯದಲ್ಲಲ್ಲ
ಎಲ್ಲರ ಹೃದಯದಲ್ಲಿಯೂ..
ನಿಮ್ಮ ಹೃದಯದಲ್ಲಿಯೂ
ನಿಮ್ಮಲ್ಲಿ ಶಕ್ತಿಯಿದೆ
ಯಂತ್ರಗಳನ್ನು ತಯಾರಿಸುವ ಶಕ್ತಿ
ಸಂತೋಷಗಳನ್ನು ತಯಾರಿಸುವ ಶಕ್ತಿ
ಈ ಬದುಕನ್ನು ಮುಕ್ತವೂ ಸುಂದರವೂ ಆಗಿಸುವ ಶಕ್ತಿ ನಿಮಗಿದೆ.
ಈ ಬದುಕನ್ನೊಂದು ಅದ್ಭುತ ಸಾಹಸವನ್ನಾಗಿಸಿ.
ಆಮೇಲೆ – ಪ್ರಜಾ ಪ್ರಭುತ್ವದ ಹೆಸರಿನಲ್ಲಿ
ಆ ಶಕ್ತಿಯನ್ನು ಬಳಸೋಣ
ಒಗ್ಗಟ್ಟಾಗೋಣ
ಹೊಸ ವಿಶ್ವಕ್ಕಾಗಿ ಹೋರಾಡೋಣ.
ಸಭ್ಯ ಜಗತ್ತಿಗಾಗಿ…
ಎಲ್ಲಾ ಜನರಿಗೆ ಉದ್ಯೋಗ ನೀಡುವ
ಯುವ ಜನರಿಗೆ ಭವಿಷ್ಯವನ್ನೂ
ವೃದ್ಧರಿಗೆ ರಕ್ಷಣೆಯನ್ನೂ ನೀಡುವ ಆ ಜಗತ್ತಿಗೋಸ್ಕರ!
ಈ ಸುಳ್ಳು ಆಶ್ವಾಸನೆಗಳ ಮೂಲಕವೇ ಭೃಷ್ಟರು ಅಧಿಕಾರಕ್ಕೆ ಬಂದಿದ್ದಾರೆ. ಅದು ಸುಳ್ಳು! ಅವರು ಆ ಆಶ್ವಾಸನೆಗಳನ್ನು ಈಡೇರಿಸಲಾರರು. ಎಂದೆಂದಿಗೂ!!
ಸರ್ವಾಧಿಕಾರಿಯು ತನ್ನನ್ನು ತಾನು ಮುಕ್ತಗೊಳಿಸಿ ಜನರನ್ನು ಗುಲಾಮರನ್ನಾಗಿಸುತ್ತಾನೆ. ನಾವು ಆ ಆಶ್ವಾಸನೆಗಳಿಗೋಸ್ಕರ ಹೋರಾಡೋಣ.
ಮುಕ್ತ ಜಗತ್ತಿಗೋಸ್ಕರ!
ರಾಷ್ಟ್ರಬಂಧಗಳ ವಿಮುಕ್ತಿಗೋಸ್ಕರ!!
ಸ್ವಾರ್ಥ, ದ್ವೇಷ, ಅಸಹನೆಗಳ ಅಳಿವಿಗೋಸ್ಕರ!!
ವೈಚಾರಿಕ ಜಗತ್ತಿಗಾಗಿ ಹೋರಾಡೋಣ
ಎಲ್ಲಿ ವಿಜ್ಞಾನ ಮತ್ತು ಅಭಿವೃದ್ಧಿಯು ಎಲ್ಲಾ ಮನುಷ್ಯರ ಸಂತೋಷದೆಡೆಗೆ ಸಾಗಿಸುವುದೋ ಆ ಜಗತ್ತಿಗಾಗಿ
ಸಂಗಾತಿಗಳೇ ! ಪ್ರಜಾಪ್ರಭುತ್ವದ ಹೆಸರಿನಲ್ಲಿ ! ನಾವೆಲ್ಲರೂ ಒಂದಾಗೋಣ!
ಚಾರ್ಲಿ ಚಾಪ್ಲಿನ್ ನಟಿಸಿದ ‘ದ ಗ್ರೇಟ್ ಡಿಕ್ಟೇಟರ್’ ನ ಭಾಷಣ
-ಅನುವಾದ: ಪುನೀತ್ ಅಪ್ಪು
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸಿನಿ ಸುದ್ದಿ
ನಟನಾಗಲು ಭಿಕ್ಷುಕರಂತೆ ಅಲೆದಾಡಿದ್ದ ಜಗ್ಗೇಶ್ : 38 ವರ್ಷದ ಹಿಂದಿನ ಕಥೆ ಇಲ್ಲಿದೆ..!

ಎಲ್ಲರಂತೆ ಜಗ್ಗೇಶ್ ಸಹ ನಟರಾಗಬೇಕೆಂದು ಆಸೆ, ಕನಸನ್ನು ಹೊತ್ತುಕೊಂಡು ಚಿತ್ರರಂಗಕ್ಕೆ ಬಂದವರು. ಇಂದು ಚಿತ್ರರಂಗದಲ್ಲಿ ನಟರಾಗಿ, ನಿರ್ದೇಶಕ, ನಿರ್ಮಾಪಕ, ವಿತರಕರಾಗಿ ಜನಪ್ರಿಯರಾಗಿರುವ ಅವರು ಸರಿಯಾಗಿ 38 ವರ್ಷಗಳ ಹಿಂದೆ ಚಿತ್ರರಂಗಕ್ಕೆ ಬರಲು ಭಿಕ್ಷುಕನಂತೆ ಅಲೆದಾಡಿದ್ದರು.
ಮೊನ್ನೆ ದಿನಾಂಕ 17ಕ್ಕೆ ಜಗ್ಗೇಶ್ ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 38 ವರ್ಷ ಕಂಪ್ಲೀಟ್ ಆಯ್ತು. ಆರಂಭದಲ್ಲಿ ಪೋಷಕ ಪಾತ್ರಗಳನ್ನು ಮಾಡುತ್ತ, ಖಳನಾಗಿ, ಹೀರೋ ಆಗಿ ಮಿಂಚಿದ್ದ ಅವರು ನಂತರ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡರು.
ಸದ್ಯ ಚಿತ್ರರಂಗದಲ್ಲಿ 38 ವರ್ಷ ಪೂರೈಸಿದ ಸಂದರ್ಭದಲ್ಲಿ ಜಗ್ಗೇಶ್ ತಮ್ಮ ಹಳೆಯ ನೆನಪುಗಳನ್ನು ಹಾಗೂ ಅಮ್ಮನ ಪ್ರೋತ್ಸಾಹವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
‘1980 Nov 17 ‘ಮಾಯಸಂದ್ರ’ ಪಕ್ಕದ ಪುಟ್ಟ ಹಳ್ಳಿ ‘ಆನಡಗು’ ಗ್ರಾಮದ ನಂಜೇಗೌಡರ ಮೊಮ್ಮಗ ಶಿವಲಿಂಗೇಗೌಡರ ಮಗ ಈಶ್ವರಗೌಡನನ್ನು ಒಬ್ಬ BE ಪದವೀಧರನನ್ನಾಗಿ ಮಾಡಬೇಕು ಎಂದು ಬಯಸಿದ್ದರು..! ಆದರೆ ವಿಧಿಲಿಖಿತ ಬೇರೆ ಆಗಿತ್ತು..!
ನನ್ನ ಇವನ ಬೇಟಿಯಾದದ್ದು 1988ರಲ್ಲಿ..ನಂತರ ನಾವಿಬ್ಬರು ಪ್ರತಿ shooting ನಲ್ಲಿ roommate's.. ನಾನು ಇವನಂತೆ ಹೆಚ್ಚು ಸಂಭಾವನೆ
ಪಡೆಯುವ ನಟನಾಗಿ ಇವನಂತೆ dance ಮಾಡಬೇಕೆಂದು ರಾಯರಲ್ಲಿ
ಪ್ರಾರ್ಥಿಸುತ್ತಿದ್ದೆ..ನಮ್ಮ ಕಾಲದ ಚಂದದ ಹೀರೋ ಇವನಾಗಿದ್ದ
ವಯಸ್ಸಲ್ಲಿ ನನಗಿಂತ ಕಿರಿಯ..
ಹುಟ್ಟುಹಬ್ಬದ ಶುಭಾಷಯಗಳು ಮಿತ್ರ..God bless… https://t.co/yIlWpJB7gL— ನವರಸನಾಯಕ ಜಗ್ಗೇಶ್ (@Jaggesh2) December 2, 2019
ಸಿನಿ ಸುದ್ದಿ
ವಿಡಿಯೋ | ‘ಒಡೆಯ’ ನ ಖಡಕ್ ಟ್ರೈಲರ್ ರಿಲೀಸ್ : ಮಿಸ್ ಮಾಡ್ದೆ ನೋಡಿ

ಸುದ್ದಿದಿನ ಡೆಸ್ಕ್ : ಸಂದೇಶ್ ಕಂಬೈನ್ಸ್ ಬ್ಯಾನರ್ ಅಲ್ಲಿ ಮೂಡಿಬಂದಿರುವ ‘ಒಡೆಯ’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಬಹುನಿರೀಕ್ಷಿತ ಈ ಸಿನೆಮಾ ಟ್ರೇಲರ್ ಭರ್ಜರಿಯಾಗಿದ್ದು, ಹಳ್ಳಿಸೊಗಡಿನ ಸಿನೆಮಾವಾಗಿದೆ.
ಟ್ರೇಲರ್ ಬಿಡುಗಡೆಯ ನಿರೀಕ್ಷೆಯಲ್ಲಿದ್ದ ಡಿ ಬಾಸ್ ಅಭಿಮಾನಿಗಳಿಗೆ ಟ್ರೈಲರ್ ನಿರಾಸೆಯಂತೂ ಮೂಡಿಸಿಲ್ಲ. ಅರ್ಜುನ್ ಜನ್ಯ ಸಿನೆಮಾಗೆ ಸಂಗೀತ ನೀಡಿದ್ದು, ಎಂ.ಡಿ.ಶ್ರೀಧರ್ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಸಿನೆಮಾದ ತಾರಾಬಳಗದಲ್ಲಿ ಸಾಧುಕೂಕಿಲ, ದೇವರಾಜ್, ಚಿಕ್ಕಣ್ಣ, ಕಾಮಿಡಿ ಕಿಲಾಡಿ ನಯನ ಇತರರು ಅಭಿನಯಿಸಿದ್ದಾರೆ.
ಟ್ರೈಲರ್ ನೋಡಿ
ನಮ್ಮ ಸಂದೇಶ್ ಕಂಬೈನ್ಸ್ ಬ್ಯಾನರ್ ಅಲ್ಲಿ ಮೂಡಿಬಂದಿರುವ ‘ಒಡೆಯ’ ಚಿತ್ರದ ಟ್ರೈಲರ್ ನಿಮ್ಮ ಮಡಿಲಿಗೆ ಅರ್ಪಿಸಿದ್ದೇವೆ 😊
ನೋಡಿ ಹರಸಿ. ನಿಮ್ಮ ಪ್ರೀತಿ-ವಿಶ್ವಾಸಕ್ಕೆ ಸದಾ ಆಭಾರಿ
– ನಿಮ್ಮ ದಾಸ ದರ್ಶನ್ https://t.co/Nah4buljGI#Odeya pic.twitter.com/5CzrwxkFBa— Darshan Thoogudeepa (@dasadarshan) December 1, 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಸಿನಿ ಸುದ್ದಿ
‘ಜೂನಿಯರ್ ರಾಜ್ ಕುಮಾರ್’ ಜಯಕುಮಾರ್ ಆಸ್ಪತ್ರೆ ಖರ್ಚಿಗೆ ನೆರವಾಗಿ ; ಪತ್ನಿ ಪದ್ಮಾವತಿ ಅಳಲು

ಅವರೊಬ್ಬ ರಂಗಭೂಮಿಯ ಅಭಿಜಾತ ಕಲಾವಿದ. ಅವರೊಳಗೆ ವರನಟ ಡಾ. ರಾಜಕುಮಾರ್ ಅವರ ಪರಕಾಯ ಪ್ರವೇಶ. ಮತ್ತೆ ಮತ್ತೆ ರಾಜಕುಮಾರ್ ನಮ್ಮೆದುರು ಪ್ರತ್ಯಕ್ಷವಾಗಿಸುವ ಅಭಿನಯ ಚತುರತೆ ಅವರದು. ನಾಟಕ ಯಾವುದೇ ಇರಲಿ ಈ ಕಲಾವಿದನಿಗೆ ಹೀರೋ ಪಾತ್ರ ಮುಡಿಪು. ಅಲ್ಲಿ ಡಾ. ರಾಜ್ ಛಾಪು. ನೋಡಲು ವರನಟನ ತದ್ರೂಪು. ಹಾಗೆಂದು ಅನುಕರಣೀಯ ಪ್ರತಿಭೆ ಮಾತ್ರವಲ್ಲ, ಅವರೊಬ್ಬ ಅಪ್ರತಿಮನಟ. ಹೆಸರು ಜಯಕುಮಾರ್, ಊರು ಕೊಡಗನೂರು.
ಗುಬ್ಬಿ ಕಂಪನಿ ಸೇರಿದಂತೆ ಗುಡಗೇರಿ, ಕುಮಾರಸ್ವಾಮಿ, ಚಿಂದೋಡಿ… ಹೀಗೆ ಇಪ್ಪತ್ತಕ್ಕೂ ಹೆಚ್ಚು ನಾಟಕ ಕಂಪನಿಗಳಲ್ಲಿ ಕಳೆದ ಐವತ್ತು ವರ್ಷಗಳ ಕಾಲ ವೃತ್ತಿ ರಂಗಭೂಮಿಯ ನಿರಂತರ ರಂಗಸೇವೆ. ಈಗ್ಗೆ ತಿಂಗಳ ಹಿಂದೆಯಷ್ಟೇ ಕಲಬುರ್ಗಿಯಲ್ಲಿ ಖಾಯಂ ಮೊಕ್ಕಾಂ ಮಾಡಿರುವ ನಾಟಕ ಕಂಪನಿಯೊಂದರಲ್ಲಿ ಅಭಿನಯಿಸುತ್ತಿರುವಾಗ ಲಘು ಹೃದಯಾಘಾತ. ಸಕ್ಕರೆ ಕಾಯಿಲೆ ಆತನನ್ನು ಯಾಮಾರಿಸಿದೆ. ಎರಡನೇ ಬಾರಿಗೆ ಆದಾಗ, ಸೂಕ್ಷ್ಮವಾಗಿ ತಿಳಿದು ದಾವಣಗೆರೆಗೆ ಧಾವಿಸಿ ತಜ್ಞ ವೈದ್ಯಕೀಯ ಚಿಕಿತ್ಸೆ ಪಡೆದು ಹೃದಯ ನಾಳಗಳಿಗೆ ಎರಡು ಸ್ಟಂಟ್ ಅಳವಡಿಕೆ. ಆ ಸಂದರ್ಭದಲ್ಲಿ ಶಿವಸಂಚಾರದ ಶ್ರೀ ಪಂಡಿತಾರಾಧ್ಯಶ್ರೀಗಳು ಸಂಬಂಧಿಸಿದ ವೈದ್ಯರಿಗೆ ಫೋನ್ ಮೂಲಕ ಹೇಳಿ ನೆರವಾದರು. ಇನ್ನೇನು ಮನೆಗೆ ಕಳಿಸಬೇಕೆನ್ನುವಾಗ ಎರಡೂ ಕಿಡ್ನಿಗಳು ಕೈ ಕೊಡುವ ಸೂಚನೆಗಳು ಎದುರಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರೋಗಿಯ ಸ್ಥಳಾಂತರ.
ಕಳೆದ ಹದಿನೈದು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಣಮುಖ ಆಗುವ ಎಲ್ಲ ಲಕ್ಷಣಗಳಿವೆ ಎಂದು ತಜ್ಞ ವೈದ್ಯರ ಅಂಬೋಣ. ಹೆಲ್ತ್ ಕಾರ್ಡಿನ ಸೌಲಭ್ಯಗಳು ಹೃದಯದ ರಕ್ತನಾಳಗಳಿಗೆ ಅಳವಡಿಸಿದ ಸ್ಟಂಟಗಳಿಗೆ ಕೊನೆಗೊಂಡಿತು. ಈಗ ಮಣಿಪಾಲ್ ಆಸ್ಪತ್ರೆಯಲ್ಲಿ ದೊರಕುವ ಎಲ್ಲ ಚಿಕಿತ್ಸೆಗೂ ಹಣ ಕಟ್ಟಲೇ ಬೇಕಿದೆ. ಒಂದು ಲಕ್ಷ ರುಪಾಯಿ ಮಿಕ್ಕ ಖರ್ಚು. ಕಲಾವಿದ ಜಯಕುಮಾರರ ಬಳಿ ಇರುವ ಹಣವೆಲ್ಲ ಖರ್ಚಾಗಿದೆ. ಆಸ್ಪತ್ರೆಯಲ್ಲಿರುವ ಜಯಕುಮಾರರ ಜತೆ ಅವರ ಪತ್ನಿ ಪದ್ಮಾವತಿ ಮಗ ಮಾರುತಿ ಇದ್ದಾರೆ.
ಶಿವಣ್ಣನ ಜನುಮದ ಜೋಡಿ ಸೇರಿದಂತೆ, ಅಂಬರೀಶ್, ವಿಷ್ಣುವರ್ಧನ್, ದೇವರಾಜ್, ದರ್ಶನ್ ಅಂತಹ ಹೆಸರಾಂತ ನಟರ ಜತೆ, (ಬರಗೂರರ ನಾಕೈದು ಚಿತ್ರ ) ನೂರೈವತ್ತಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಜಯಕುಮಾರ ನಟಿಸಿದ್ದಾರೆ. ಆತ ಅಭಿನಯಿಸಿದ ಕಿರುತೆರೆ ದಾರಾವಾಹಿಗಳು ಲೆಕ್ಕವಿಲ್ಲದಷ್ಟು. ಅಷ್ಟೇ ಪ್ರಮಾಣದ ವೃತ್ತಿ ರಂಗನಾಟಕಗಳು. ಹೀಗೆ ಅವಿರತವಾಗಿ ದುಡಿದ ಬಣ್ಣದಜೀವ ಹಾಸಿಗೆ ಹಿಡಿದಿದೆ. ಈಗ ಅಕ್ಷರಶಃ ಸಂಕಷ್ಟದಲ್ಲಿರುವ ಕೊಡಗನೂರು ಜಯಕುಮಾರರ ನೆರವಿಗಾಗಿ ಅವರ ಪತ್ನಿ ಶ್ರೀಮತಿ ಪದ್ಮಾವತಿ ಹಾಗೂ ಅವರ ಮಗ ಮಾರುತಿ ಮನವಿ ಮಾಡಿಕೊಂಡಿದ್ದಾರೆ.
ಜಯಕುಮಾರ್ ಅವರ ಬ್ಯಾಂಕ್ ಖಾತೆ ವಿವರ ಹೀಗಿದೆ
ಸಿಂಡಿಕೇಟ್ ಬ್ಯಾಂಕ್
ಮಲ್ಲೇಶ್ವರಮ್
ಕೆ.ಸಿ. ಜನರಲ್ ಆಸ್ಪತ್ರೆ ಶಾಖೆ :ಬೆಂ.
A/C : 04492010022368
IFSC code : SYNB 0000449
ಕಲಾವಿದನ ನೆರವಿನ ನಿರೀಕ್ಷೆ ಯಲ್ಲಿ
ಪದ್ಮಾವತಿ w/o ಜಯಕುಮಾರ
ಮಣಿಪಾಲ್ ಆಸ್ಪತ್ರೆ, ಮಣಿಪಾಲ್
ಮೊ: 99023 89044
-
ದಿನದ ಸುದ್ದಿ5 days ago
ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ : ಎನ್ಕೌಂಟರ್ ಆದ ಆರೋಪಿಯ ಪತ್ನಿ
-
ಬಹಿರಂಗ5 days ago
ಜಾತಿಯಲ್ಲಿ ಕರಗಿಹೋದ ಮತ್ತೊಬ್ಬಳು ‘ಪ್ರಿಯಾಂಕ’
-
ಅಂತರಂಗ4 days ago
ತನ್ನಿಮಿತ್ತ : ಪುಸ್ತಕಗಳ ಮಧ್ಯೆ ಪ್ರಾಣ ಬಿಟ್ಟ ಅಂಬೇಡ್ಕರ್
-
ಭಾವ ಭೈರಾಗಿ5 days ago
ಕಾಳಾರಾಮ ದೇವಾಲಯ ಪ್ರವೇಶ ಮತ್ತು ಕುವೆಂಪು ‘ಜಲಗಾರ’ ನಾಟಕ : 90 ವರ್ಷಾಚರಣೆಯ ಹೊತ್ತಿನಲ್ಲಿ
-
ಬಹಿರಂಗ5 days ago
ಬಾಬಾಸಾಹೇಬ್ ಅಂಬೇಡ್ಕರರ ಸಾವು ಸಹಜವೋ ಅಥವಾ ಅಸಹಜವೋ?: ಹೀಗೊಂದು ವಿಷಾದದ ಪ್ರಶ್ನೆ
-
ದಿನದ ಸುದ್ದಿ5 days ago
ಪಶುವೈದ್ಯೆ ಅತ್ಯಾಚಾರ, ಕೊಲೆ : ನಾಲ್ವರು ಆರೋಪಿಗಳ ಎನ್ ಕೌಂಟರ್ | ಪ್ರತಿಕ್ರಿಯೆಗಳು
-
ಭಾವ ಭೈರಾಗಿ4 days ago
ಕವಿತೆ | ಗರ್ಭದೊಳಗೆ
-
ಕ್ರೀಡೆ4 days ago
ದಾವಣಗೆರೆ | ವಾರ್ಷಿಕ ಪೊಲೀಸ್ ಕ್ರೀಡಾಕೂಟ-2019