ಸಿನಿ ಸುದ್ದಿ
ಹಿಟ್ಲರನ ಸರ್ವಾಧಿಕಾರದ ವಿರುದ್ಧ ‘ಚಾರ್ಲಿ ಚಾಪ್ಲಿನ್’ ಭಾಷಣ
“ಕ್ಷಮಿಸಿ! ನಾನು ಸರ್ವಾಧಿಕಾರಿಯಾಗಲು ಬಯಸಲಾರೆ, ಅದು ನನ್ನ ಕೆಲಸವೂ ಅಲ್ಲ. ನಾನು ಯಾರನ್ನೂ ಕೂಡಾ ಗೆಲ್ಲಲು ಅಥವಾ ಆಳಲು ಬಯಸುವುದಿಲ್ಲ. ಸಾಧ್ಯವಾದರೆ ನಾವು ಯಹೂದಿ, ನಾಝಿ, ಕರಿಯರು, ಬಿಳಿಯರು ಹೀಗೆ ಎಲ್ಲರಿಗೂ ಸಹಾಯ ಮಾಡುವಂತಾಗಬೇಕು. ಎಲ್ಲರೂ ಪರಸ್ಪರ ಸಹಾಯ ಮಾಡಿಕೊಳ್ಳಬೇಕು. ಮನುಷ್ಯರೆಂದರೆ ಹಾಗೆ. ನಾವು ಪರಸ್ಪರ ಸಂತೋಷದಿಂದ ಬದುಕಬೇಕೇ ಹೊರತು ಇತರರ ದುಃಖಕ್ಕಾಗಿ ಅಲ್ಲ. ಯಾರನ್ನೂ ದ್ವೇಷಿಸಲೇ ಕೂಡದು. ಈ ಭೂಮಿಯಲ್ಲಿ ಎಲ್ಲರಿಗೂ ಜಾಗವಿದೆ. ಮತ್ತೆ ಈ ಭೂಮಿಯು ಎಲ್ಲರ ಅಗತ್ಯಗಳನ್ನೂ ಪೂರೈಸುವಷ್ಟು ಸಮೃದ್ಧವಾಗಿದೆ. ಜೀವನದ ಹಾದಿ ಸುಂದರವೂ ಮುಕ್ತವೂ ಆಗಿರಲು ಸಾಧ್ಯ. ಆದರೆ ನಾವು ಆ ಹಾದಿಯನ್ನೇ ಕಳೆದುಕೊಂಡಿದ್ದೇವೆ.
ಸ್ವಾರ್ಥವು ಮನುಷ್ಯನ ಆತ್ಮವನ್ನೇ ಕಲುಷಿತಗೊಳಿಸಿದೆ, ಜಗತ್ತನ್ನು ದ್ವೇಷವೆಂಬ ಬೇಲಿಯಿಂದ ಬಂಧಿಸಿದೆ, ದುಃಖ ಮತ್ತು ರಕ್ತಪಾತದೆಡೆಗೆ ಸಾಗಿಸುತ್ತಿದೆ. ನಾವು ವೇಗವನ್ನು ಅಭಿವೃದ್ಧಿಪಡಿಸಿದ್ದೇವೆ. ಆದರೆ ನಮ್ಮನ್ನು ನಾವು ಬಂಧಿಸಿದ್ದೇವೆ. ನಮ್ಮನ್ನು ಮುಕ್ತಗೊಳಿಸಿರುವ ಯಂತ್ರಗಳು ನಮ್ಮನ್ನು ಆಸೆಯ ಕೂಪದಲ್ಲಿರಿಸಿವೆ. ಜ್ಞಾನವು ನಮ್ಮನ್ನು ಸಿನಿಕರನ್ನಾಗಿಸಿದೆ. ನಮ್ಮ ಜಾಣ್ಮೆಯು ಕಠಿಣವೂ ನಿರ್ದಯಿಯೂ ಆಗಿದೆ. ನಾವು ತುಂಬಾ ಯೋಚಿಸುತ್ತೇವೆ ಆದರೆ ಕಡಿಮೆ ಪ್ರೀತಿಸುತ್ತೇವೆ.
ಯಂತ್ರಗಳಿಗಿಂತ ನಮಗೆ ಹೆಚ್ಚು ಮಾನವೀಯತೆಯ ಅಗತ್ಯವಿದೆ. ಜಾಣ್ಮೆಗಿಂತ ಹೆಚ್ಚು ದಯೆ , ಸಭ್ಯತೆಯ ಅವಶ್ಯಕತೆಯಿದೆ. ಈ ಗುಣಗಳಿಲ್ಲದೆ ಹೋದರೆ, ಬದುಕು ಹಿಂಸಾಮಯವಾಗುವುದು ಮತ್ತು ವಿನಾಶವಾಗುವುದು.
ವಿಮಾನ ಮತ್ತು ರೇಡಿಯೋಗಳು ನಮ್ಮನ್ನು ಹತ್ತಿರಕ್ಕೆ ತಂದಿವೆ. ಈ ಸಂಶೋಧನೆಗಳ ತಥ್ಯವೇ ಮನುಷ್ಯನ ಒಳ್ಳೆಯತನವನ್ನು ಕೂಗಿ ಹೇಳುತ್ತಿವೆ, ನಮ್ಮೆಲ್ಲರ ಸಹೋದರೆತೆಗಾಗಿ, ಒಗ್ಗಟ್ಟಿಗಾಗಿ ಮೊರೆಯಿಡುತ್ತಿದೆ. ಈಗಲೂ ಸಹ ನನ್ನ ಧ್ವನಿಯು ಮಿಲಿಯಗಟ್ಟಲೆ ಜನರನ್ನು ತಲುಪುತ್ತಿದೆ. ನಿರ್ಗತಿಕ ಗಂಡಸರು, ಹೆಂಗಸರು, ಪುಟ್ಟ ಪುಟ್ಟ ಮಕ್ಕಳು – ವ್ಯವಸ್ಥೆಯ ಬಲಿ ಪಶುಗಳು, ಮುಗ್ಧ ಜನರನ್ನು ಚಿತ್ರಹಿಂಸೆ ನೀಡಿ ಬಂಧನದಲ್ಲಿರಿಸುವ ವ್ಯವಸ್ಥೆ!
ಯಾರಿಗೆ ನನ್ನ ಮಾತುಗಳು ಕೇಳಿಸುತ್ತಿವೆಯೋ
ಕೇಳಿರಿ. ಧೃತಿಗೆಡದಿರಿ
ನಮ್ಮ ಮೇಲಿರುವ ಈ ವಿಷಾದ ಸ್ವಾರ್ಥ ಸಾಗುತ್ತಿರುವ ಈ ಹೊತ್ತು
ಮಾನವ ಪ್ರಗತಿಯ ಬಗ್ಗೆ ಭಯ ಪಟ್ಟ ಮನುಷ್ಯರ ಕಹಿ ಭಾವನೆಗಳಿವು
ಮಾನವ ದ್ವೇಷವು ಕೊನೆಗೊಳ್ಳಲಿದೆ.
ಸರ್ವಾಧಿಕಾರಿಯ ಅಂತ್ಯವಾಗಲಿದೆ
ಜನರ ಕೈಗಳಿಂದ ಕಿತ್ತುಕೊಂಡ ಅಧಿಕಾರವು
ಮರಳಿ ಜನರ ಕೈಗಳಿಗೆ ಮರಳಲಿದೆ
ಎಲ್ಲಿಯವರೆಗೆ ಮನುಷ್ಯರು ಸಾಯುತ್ತಿರುವರೋ
ಸ್ವಾತಂತ್ರ್ಯವೆಂದೂ ನಾಶವಾಗದು…
ಸೈನಿಕರೇ! ನಿಮ್ಮತನವನ್ನು ದುಷ್ಟರಿಗೆ ಬಿಟ್ಟು ಕೊಡದಿರಿ. ನಿಮ್ಮನ್ನು ಶೋಷಿಸುವವರಿಗೆ
ನಿಮ್ಮನ್ನು ದಾಸ್ಯಕ್ಕೆ ದೂಡಿದವರಿಗೆ
ನಿಮ್ಮ ಬದುಕುಗಳನ್ನು ನಿಯಂತ್ರಿಸುವವರಿಗೆ
ನೀವು ಯಾವುದನ್ನು ಯೋಚಿಸಬೇಕು
ಯಾವುದನ್ನು ಪ್ರೀತಿಸಬೇಕು
ನಿಮ್ಮನ್ನು ದುಡಿಸಿದವರಿಗೆ
ನಿಮ್ಮನ್ನು ಪಶುಗಳಂತೆ ನಡೆಸಿಕೊಂಡವರಿಗೆ
ನಿಮ್ಮನ್ನು ಫಿರಂಗಿಗಳ ಮದ್ದಾಗಿ ಬಳಸಿದವರಿಗೆ
ಮನುಷ್ಯರಲ್ಲದವರಿಗೆ
ನಿಮ್ಮತನವನ್ನು ಬಿಟ್ಟು ಕೊಡದಿರಿ
ಯಾಂತ್ರಿಕ ಮನುಷ್ಯರಿಗೆ
ಯಾಂತ್ರಿಕ ಮನಸ್ಸುಗಳಿಗೆ
ಯಾಂತ್ರಿಕ ಹೃದಯಗಳಿಗೆ
ನೀವು ಯಂತ್ರಗಳಲ್ಲ!
ನೀವು ದನಗಳಲ್ಲ!!
ನೀವು ಮನುಷ್ಯರು!!
ನಿಮ್ಮ ಹೃದಯದಲ್ಲಿ ಮಾನವತೆಯ ಪ್ರೇಮವಿದೆ!
ನೀವು ದ್ವೇಷಿಸಲಾರಿರಿ!
ಕೇವಲ ಪ್ರೀತಿಸಲ್ಪಡವನು ಮಾತ್ರ ದ್ವೇಷಿಸುತ್ತಾನೆ.
ಪ್ರೀತಿಸಲ್ಪಡದ ಅಸಹಜ ವ್ಯಕ್ತಿ!!
ಸೈನಿಕರೆ! ದಾಸ್ಯಕ್ಕಾಗಿ ಹೋರಾಡಬೇಡಿ!
ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ!
ಸಂತ ಲೂಕ ನ 17 ನೆಯ ಅಧ್ಯಾಯದಲ್ಲಿ ಹೀಗಿದೆ
” ದೇವರ ಸಾಮ್ರಾಜ್ಯವು ಮಾನವನ ಹೃದಯದಲ್ಲಿದೆ”
ಒಬ್ಬನ ಹೃದಯದಲ್ಲಲ್ಲ
ಯಾವುದೋ ಗುಂಪಿನ ಹೃದಯದಲ್ಲಲ್ಲ
ಎಲ್ಲರ ಹೃದಯದಲ್ಲಿಯೂ..
ನಿಮ್ಮ ಹೃದಯದಲ್ಲಿಯೂ
ನಿಮ್ಮಲ್ಲಿ ಶಕ್ತಿಯಿದೆ
ಯಂತ್ರಗಳನ್ನು ತಯಾರಿಸುವ ಶಕ್ತಿ
ಸಂತೋಷಗಳನ್ನು ತಯಾರಿಸುವ ಶಕ್ತಿ
ಈ ಬದುಕನ್ನು ಮುಕ್ತವೂ ಸುಂದರವೂ ಆಗಿಸುವ ಶಕ್ತಿ ನಿಮಗಿದೆ.
ಈ ಬದುಕನ್ನೊಂದು ಅದ್ಭುತ ಸಾಹಸವನ್ನಾಗಿಸಿ.
ಆಮೇಲೆ – ಪ್ರಜಾ ಪ್ರಭುತ್ವದ ಹೆಸರಿನಲ್ಲಿ
ಆ ಶಕ್ತಿಯನ್ನು ಬಳಸೋಣ
ಒಗ್ಗಟ್ಟಾಗೋಣ
ಹೊಸ ವಿಶ್ವಕ್ಕಾಗಿ ಹೋರಾಡೋಣ.
ಸಭ್ಯ ಜಗತ್ತಿಗಾಗಿ…
ಎಲ್ಲಾ ಜನರಿಗೆ ಉದ್ಯೋಗ ನೀಡುವ
ಯುವ ಜನರಿಗೆ ಭವಿಷ್ಯವನ್ನೂ
ವೃದ್ಧರಿಗೆ ರಕ್ಷಣೆಯನ್ನೂ ನೀಡುವ ಆ ಜಗತ್ತಿಗೋಸ್ಕರ!
ಈ ಸುಳ್ಳು ಆಶ್ವಾಸನೆಗಳ ಮೂಲಕವೇ ಭೃಷ್ಟರು ಅಧಿಕಾರಕ್ಕೆ ಬಂದಿದ್ದಾರೆ. ಅದು ಸುಳ್ಳು! ಅವರು ಆ ಆಶ್ವಾಸನೆಗಳನ್ನು ಈಡೇರಿಸಲಾರರು. ಎಂದೆಂದಿಗೂ!!
ಸರ್ವಾಧಿಕಾರಿಯು ತನ್ನನ್ನು ತಾನು ಮುಕ್ತಗೊಳಿಸಿ ಜನರನ್ನು ಗುಲಾಮರನ್ನಾಗಿಸುತ್ತಾನೆ. ನಾವು ಆ ಆಶ್ವಾಸನೆಗಳಿಗೋಸ್ಕರ ಹೋರಾಡೋಣ.
ಮುಕ್ತ ಜಗತ್ತಿಗೋಸ್ಕರ!
ರಾಷ್ಟ್ರಬಂಧಗಳ ವಿಮುಕ್ತಿಗೋಸ್ಕರ!!
ಸ್ವಾರ್ಥ, ದ್ವೇಷ, ಅಸಹನೆಗಳ ಅಳಿವಿಗೋಸ್ಕರ!!
ವೈಚಾರಿಕ ಜಗತ್ತಿಗಾಗಿ ಹೋರಾಡೋಣ
ಎಲ್ಲಿ ವಿಜ್ಞಾನ ಮತ್ತು ಅಭಿವೃದ್ಧಿಯು ಎಲ್ಲಾ ಮನುಷ್ಯರ ಸಂತೋಷದೆಡೆಗೆ ಸಾಗಿಸುವುದೋ ಆ ಜಗತ್ತಿಗಾಗಿ
ಸಂಗಾತಿಗಳೇ ! ಪ್ರಜಾಪ್ರಭುತ್ವದ ಹೆಸರಿನಲ್ಲಿ ! ನಾವೆಲ್ಲರೂ ಒಂದಾಗೋಣ!
ಚಾರ್ಲಿ ಚಾಪ್ಲಿನ್ ನಟಿಸಿದ ‘ದ ಗ್ರೇಟ್ ಡಿಕ್ಟೇಟರ್’ ನ ಭಾಷಣ
-ಅನುವಾದ: ಪುನೀತ್ ಅಪ್ಪು
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
ಮದ್ಯಾಹ್ನದ ಸುದ್ದಿಮುಖ್ಯಾಂಶಗಳು
- ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
- ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
- ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್ನಲ್ಲಿರುವ ಡಾಲ್ಬಿ ಥಿಯೇಟರ್ನಲ್ಲಿ ಹಾಲಿವುಡ್ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
- ಐಸಿಸಿ ವಿಶ್ವ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
- ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ
ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್
ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243