Connect with us

ಸಿನಿ ಸುದ್ದಿ

ದುನಿಯಾ ವಿಜಿ ‘ಖೈದಿ ನಂಬರ್ 9035’..!: ಈ ದಿನದ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ ಓದಿ

Published

on

ಸುದ್ದಿದಿನ, ಬೆಂಗಳೂರು : ಪರಪ್ಪನ ಆಗ್ರಹಾರ ಜೈಲಿನಲ್ಲಿ ದುನಿಯಾ ವಿಜಿಗೆ ನಂಬರ್ ಖೈದಿ ನಂಬರ್ ಕೊಡಲಾಗಿದೆ. ಜೈಲು ಅಧಿಕಾರಿಗಳಿಂದ ವಿಜಿಗೆ ವಿಚಾರಣಾಧೀನ ಖೈದಿ ಸಂಖ್ಯೆ ಮಂಜೂರು ಮಾಡಿದ್ದಾರೆ. ದುನಿಯಾ ವಿಜಿಗೆ 9035, ಪ್ರಸಾದ್ 9036, ಮಣಿ 9037, ಪ್ರಸಾದ್ 9038. ನಾಲ್ವರು ಆರೋಪಿಗಳಿಗೆ UTP (ಯು.ಟಿ.ಪಿ : ಅಂಡರ್ ಟ್ರಯಲ್ ಪ್ರಿಸನರ್) ಸಂಖ್ಯೆ ನೀಡಿದ ಜೈಲು ಆಧಿಕಾರಿಗಳು.

ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ದುನಿಯಾ ವಿಜಯ್ ಕೋರ್ಟ್ ಮೊರೆ ಹೋಗುದ್ದಾರೆ. 8ನೇ ACMM ಕೋರ್ಟ್ಗೆ ಜಾಮೀನು ಕೋರಿ ಅರ್ಜಿ‌ಸಲ್ಲಿಸಿದ್ದಾರೆ. A1 ಪ್ರಸಾದ್, A2 ದುನಿಯಾ ವಿಜಯ್, A3 ಮಣಿ ಇಂದ ಅರ್ಜಿ ಸಲ್ಲಿಸಲಾಗಿದ್ದು, ಮೂವರು ಆರೋಪಿಗಳ ಪರ ವಕೀಲ ಶಿವಕುಮಾರ್ ವಕಾಲತ್ತು ನಡೆಸಲಿದ್ದಾರೆ. ನ್ಯಾ.ಮಹೇಶ್ ಬಾಬು ರಿಂದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದಾರೆ‌. ವಿಚಾರಣೆಗೆ ಬಂದ 3 ಆರೋಪಿಗಳಿಗೆ ಜಾಮೀನು ಅರ್ಜಿ
ನೀಡದಂತೆ ವಾದ ಮಂಡಿಸಲಾಯ್ತು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಿರುವ ಸರ್ಕಾರಿ ಅಭಿಯೋಜಕರು.

ದುನಿಯಾ ವಿಜಯ್ ಪತ್ನಿಯರ ಬಡಿದಾಟ ಪ್ರಕರಣ

ಇಬ್ಬರು ಪತ್ನಿಯರ ಹೇಳಿಕೆ ದಾಖಲಿಸಿರುವ ಪೊಲೀಸರು, ಕೀರ್ತಿ ಮನೆಯಲ್ಲಿ ನೆನ್ನೆ ನಡೆದಿದ್ದ ಪತ್ನಿಯರಿಬ್ಬರ ಬಡಿದಾಟ, ಪರಸ್ಪರ ತಳ್ಳಾಡಿ, ಬಡಿದಾಡಿಕೊಂಡು,ಕೈ ಗಳಿಂದ ಹಲ್ಲೆ ಮಾಡಿಕೊಂಡು ಜಗಳ. ದುನಿಯಾ ವಿಜಯ್ ತಂದೆ-ತಾಯಿ ಇಬ್ಬರಿಂದಲೂ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು. ಕೀರ್ತಿ ಮತ್ತು ನಾಗರತ್ನ ಗಲಾಟೆಗೆ ಕಾರಣವೇನು ಎಂಬ ಅಂಶಗಳ ಕುರಿತ ಪೊಲೀಸರಿಗೆ ವಿವರಣೆ ಪಡೆಯಲಾಗಿದೆ. ಘಟನೆ ಸಂಪೂರ್ಣ ಚಿತ್ರಣ ಪೊಲೀಸರಿಗೆ ವಿವರಿಸಿರುವ ವಿಜಯ್ ಪೋಷಕರು. ವಿಜಯ್ ಮಕ್ಕಳ ಹೇಳಿಕೆ ದಾಖಲಿಸಲು ಪೊಲೀಸರ ನಿರ್ಧಾರ ಮಾಡಿದ್ದಾರೆ.
ಘಟನೆ ನಡೆದ ವೇಳೆ ಮನೆಯಲ್ಲಿ ಪ್ರತ್ಯಕ್ಷ ದರ್ಶಿಗಳಾಗಿದ್ದ ಮೂವರು ಮಕ್ಕಳ ಹೇಳಿಕೆಯನ್ನು ಸಂಜೆ ದಾಖಲಿಸಲು ನಿರ್ಧರಿಸಿರುವ ಗಿರಿನಗರ ಪೊಲೀಸರು.

ಪರಂ ಮೊರೆ ಹೋದ ಪಾನಿಪೂರಿ‌ಕಿಟ್ಟಿ

ಗೃಹಸಚಿವ ಜಿ. ಪರಮೇಶ್ವರ್ ಮೊರೆ ಹೋದ ಪಾನಿಪುರಿ ಕಿಟ್ಟಿಯು ದುನಿಯಾ ವಿಜಿ ಪ್ರಕರಣವನ್ನು ಸರ್ಕಾರಿ ವಿಶೇಷ ಅಭಿಯೋಜ ಕಾರಗಿ ಶ್ಯಾಂಮ್ ಸುಂದರ್ ಅವರನ್ನು ನೇಮಿಸುವಂತೆ ಮನವಿ ಮಾಡಿದ್ದಾರೆ. ಶ್ಯಾಂಮ್ ಸುಂದರ್ ವಿದ್ವತ್ ಪ್ರಕರಣವನ್ನು ತುಂಬಾ ಚೆನ್ನಾಗಿ ಹ್ಯಾಂಡಲ್ ಮಾಡಿದ್ರು,ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುವಂತೆ ನೋಡಿಕೊಂಡಿದ್ರು, ಹೀಗಾಗಿ ಅವರನ್ನೆ ನೇಮಕ ಮಾಡಬೇಕೆಂದು ಗೃಹಸಚಿವರ ಬಳಿ ಮನವಿ ಮಾಡಿದ್ದಾರೆ ಕಿಟ್ಟಿ.

ವಿಜಿ ಪತ್ನಿ ನಾಗರತ್ನ ಹೀಗಂದ್ರು

ಪಾನಿಪುರಿ ಕಿಟ್ಟಿ ಒಳ್ಳೆ ಮನುಷ್ಯ. ವಿಜಯ್ ಜೊತೆ ತುಂಬಾ ಚೆನ್ನಾಗೆ ಇದ್ರು. ಪಾನಿಪುರಿ ಕಿಟ್ಟಿ ಅವರ ಮನೆಯಿಂದ ಊಟ ತಂದು ವಿಜಯ್ ಗೆ ಕೊಟ್ತೀದ್ರು. ನನ್ನ ಗಂಡನ ಜೊತೆ ತುಂಬಾ ಚೆನ್ನಾಗಿದ್ರು. ನಮ್ಮ ಮನೆಗೆ ಬಂದು ಹೋಗುತ್ತಿದ್ದರು. ಯಾಕೆ ಗಲಾಟೆ ಆಯಿತು ಅನ್ನೋದು ಗೊತ್ತಿಲ್ಲ ವಿಜಿ ಪತ್ನಿ ನಾಗರತ್ನ ಹೇಳಿಕೆ ನೀಡಿದ್ದಾರೆ. ದುನಿಯಾ ವಿಜಯ್ ತಂದೆ ಅವರೇ ನನ್ನ ಬಗ್ಗೆ ತಪ್ಪು ಮಾಹಿತಿ ನೀಡ್ತೀದ್ದಾರೆ. ನಾಗರತ್ನಗೆ ಆಸ್ತಿ ಕೊಟ್ಟಿದೇವೆ ಅಂತಾ ಹೇಳಿಕೊಂಡು ಓಡಾಡ್ತೀದ್ದಾರೆ. ಅವರೇ ಹಾದಿ ತಪ್ಪಿಸುತ್ತಿದ್ದಾರೆ‌ ಎಂದಿದ್ದಾರೆ. ವಿಜಿ ಎರಡನೇ ಹೆಂಡ್ತಿ ಮೇಲೆ ದೂರು ನೀಡಿದ್ದ ನಾಗರತ್ನ . ನಿನ್ನೆ ದುನಿಯಾ ವಿಜಯ್ ಗಲಾಟೆ ವಿಚಾರ ಟಿವಿಯಲ್ಲಿ ನೋಡ್ದೆ. ಮಗಾ ಸಾಮ್ರಾಟ್ ಕೂಡಾ ವಿಜಯ್ ಜೊತೆ ಇದ್ರು ಅಂತಾ ನೋಡ್ದೆ. ಅದ್ಕೆ ಗಾಬರಿಯಾಗಿ ಕೀರ್ತಿ ಗೌಡ ಮನೆಗೆ ಹೋದೆ.‌ಯಾಕೆ ನನ್ನ ಮಗನನ್ನ ಅಷ್ಟೋತ್ತಿಗೆ ಕಳುಹಿಸಿದ್ರೆ ಅಂತಾ ಕೇಳ್ದೆ. ಆಗ ನಮ್ಮ ಮಾವಾ,ಅತ್ತೆ ಕೀರ್ತಿ ಗೌಡಗೆ ಸರ್ಫೋರ್ಟ್ ಮಾಡಿದ್ರು. ನಂತ್ರ ಮಾತಿಗೆ ಮಾತು ಬೆಳೆದು ಗಲಾಟೆ ಆಯಿತು, ಹೊಡೆದಾಟ ಆಯಿತು. ನಂತ್ರ ಪೊಲೀಸ್ ಠಾಣೆಗೆ ಕಂಪ್ಲೇಟ್ ಕೊಟ್ಟೆ.

ದುನಿಯಾ ವಿಜಯ್ ಗೆ ಬುದ್ಧಿ ಹೇಳೋರು ಯಾರು ಇಲ್ಲ

ಕಳೆದ ಎರಡು ವರ್ಷದಿಂದ ವಿಜಿ ಜೈಲು,ಪೊಲೀಸ್ ಠಾಣೆಗೆ ಹೋಗ್ತಾನೆ ಇದ್ದಾರೆ. ನಾನ್ ಬುದ್ಧಿ ಹೇಳೋಕೆ ಹೋದೆ ನನ್ನನ್ನ ದೂರ ಮಾಡಿದ್ರು. ಈಗ ಅವರು ದುಡ್ಡಿಗಾಗಿ ಬಂದವಳ ಜೊತೆ ಇದ್ದಾರೆ. ಅವ್ಳು ಸ್ವಲ್ಪ ದಿನ ಇರ್ತಾಳೆ ಆಮೇಲೆ ಹೋಗ್ತಾಳೆ. ಅವ್ರೆಲ್ಲ ದುಡ್ಡಿಗೆ ಬರೋರು. ಈಗ ಇವ್ರು ಜೈಲಿಗೆ ಹೋಗಿದ್ದಾರೆ, ನನ್ನ ಮಕ್ಕಳ ಗತಿ ಏನು. ಕೀರ್ತಿ ಗೌಡದು ದಾರಿದ್ರ ಕಾಲು.‌ಅವಳು ಕಾಲು ಇಟ್ಟಿದೆ ತಡ ವಿಜಯ್ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ನಾನ್ ಇದಿದ್ರೆ ಸುಮ್ಮನೆ ಇರ್ತಿದ್ನಾ..? ಈಗ ವಿಜಯ್ ಜೈಲಿಗೆ ಹೋಗೋಕ್ಕೆ ಕೀರ್ತಿ ಗೌಡನೇ ಕಾರಣ.

ಪಾನಿಪುರಿ ಕಿಟ್ಟಿ ಹೇಳಿಕೆ

ಮಾರುತಿ ಗೌಡ ಆರೋಗ್ಯ ಇನ್ನು ಚೇತರಿಕೆಯಾಗಿಲ್ಲ. ಎರಡಗಡೆ ಕಣ್ಣು ಸರಿಯಾಗಿ ಕಾಣುತ್ತಿಲ್ಲ ಎನ್ನುತ್ತಿದ್ದಾನೆ ಮಾರುತಿ ಗೌಡ. ರಾತ್ರಿಯೆಲ್ಲಾ ಕತ್ತು ತುಂಬಾ ನೋವು ಎನ್ನುತ್ತಿದ್ದ. ಏನು ತಿಂದರು ಮಾರುತಿ ಗೌಡ ವಾಂತಿ ಮಾಡಿಕೊಳ್ಳುತ್ತಿದ್ದಾನೆ. ಬಾಯಿಗೆ 14 ಹೊಲಿಗೆ ಹಾಕಿದ್ರು ಊತ ಕಡಿಮೆಯಾಗಿಲ್ಲ. ಮಾರುತಿ ಬಾಯಿ ಹಾಗೂ ತುಟಿ ಮತ್ತಷ್ಟು ಊತುಕೊಂಡಂತಿದೆ. ಸಿಟಿ ಸ್ಕ್ಯಾನ್ ರಿಪೋರ್ಟ್ ಗಾಗಿ ಕಾಯುತ್ತಿದ್ದೇವೆ. 9 ಗಂಟೆಗೆ ಸಿಟಿ ಸ್ಕ್ಯಾನ್ ರಿಪೋರ್ಟ್ ಬಂದಿರಬೇಕು.ನಾವು ಡಿಸಿಎಂ ಭೇಟಿ ಗೆ ಬಂದಿದ್ದೇವೆ.‌ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಮಾರುತಿಗೌಡ ಎಂದು ಪಾನಿಪುರಿ ಕಿಟ್ಟಿ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ6 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending