Connect with us

ಸಿನಿ ಸುದ್ದಿ

ಕೊಡಗು ಸಂತ್ರಸ್ತರಿಗೆ ನೆರವಾಗೋಣ: ಕ್ರೇಜಿಸ್ಟಾರ್ ರವಿಚಂದ್ರನ್

Published

on

ಸುದ್ದಿದಿನ ಡೆಸ್ಕ್: ಸಿನಿಮಾ ನಟರ ಅಭಿಮಾನಿಗಳ ಸಂಘಟನೆಗಳು ರಾಜ್ಯದಲ್ಲಿ ನೂರಾರಿವೆ. ಅವುಗಳು ಕೇವಲ ಸಿನಿಮಾ ಪ್ರಚಾರಕ್ಕೆ ಮಾತ್ರ ಸೀಮಿತವಾಗದೆ ಅತಿವೃಷ್ಠಿ ಅನಾವೃಷ್ಟಿ, ಬರಗಾಲದಿಂದ ತತ್ತರಿಸಿದ ಪ್ರದೇಶಗಳ ದತ್ತು ಪಡೆದು ಸೇವಾ ಕಾರ್ಯ ಮಾಡಬೇಕು ಎಂದು ಅಖಿಲ ಕರ್ನಾಟಕ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿಮಾನಿಗಳ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ದಾವಣಗೆರೆ ಜಿಲ್ಲಾಧ್ಯಕ್ಷ ಎಂ.ಮನು ಹೇಳಿದರು.

ಚಿತ್ರದುರ್ಗ ನಗರದ ದುರ್ಗದ ಸಿರಿ ಹೋಟೆಲ್‍ನಲ್ಲಿ ಹಮ್ಮಿಕೊಂಡಿದ್ದ ಅಖಿಲ ಕರ್ನಾಟಕ ಕ್ರೇಜಿಸ್ಟಾರ್ ಅಭಿಮಾನಿಗಳ ಸಂಘದ ಸಭೆಯಲ್ಲಿ ಮಾತನಾಡಿ ಕೊಡಗು ಜಿಲ್ಲೆ ಜಲಪ್ರಳಯಕ್ಕೆ ಸಿಲುಕಿದಾಗ ರವಿಚಂದ್ರನ್ ಅಭಿಮಾನಿಗಳು ತೆರಳಿ ಅವರಿಗೆ ಬೇಕಾದ ಮೂಲಸೌಲಭ್ಯಗಳನ್ನು ನೀಡಿದ್ದೆವು. ಅದು ನಮ್ಮ ಸಂಘಟನೆ ಹೆಮ್ಮೆ. ನಾವು ಕೇವಲ ಖುಷಿಯನ್ನಷ್ಟೇ ಅನುಭವಿಸದೆ ಕಷ್ಟದಲ್ಲಿರುವವರನ್ನು ಕೈ ಹಿಡಿಯಬೇಕಾದುದು ನಮ್ಮ ಕರ್ತವ್ಯ ಎಂದರು.

ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಒಂದೆಡೆ ಹಿರಿಯ ನಟರಾಗಿದ್ದರೇ ಇನ್ನೊಂದೆಡೆ ಸದಾ ಪರಿಸರ ಜಾಗೃತಿ ಮೂಡಿಸುವ ಆಲೋಚನೆ ಹೊಂದಿದ್ಧಾರೆ, ಪ್ರಾಣಿ ಪಕ್ಷಿಗಳ ಬಗ್ಗೆ ಪ್ರೀತಿ ಹೊಂದಿದ್ದು ಅವರ ಆಶಯದಂತೆ ನಾವು ನಡೆಯೋಣ. ನಮ್ಮ ಸಂಘಟನೆಗಳ ಮೂಲದ ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಅದು ಸಾಮಾಜಿಕವಾಗಿ ಬೆಳೆಯಬೇಕು ಎಂದರು.

ಚಿತ್ರದುರ್ಗ ಜಿಲ್ಲಾಧ್ಯಕ್ಷ ಜೆ.ಎಸ್. ಶಂಭು ಮಾತನಾಡಿ ಚಿತ್ರದುರ್ಗ ಕೋಟೆ ಐತಿಹಾಸಿಕವಾಗಿದ್ದು ಇಲ್ಲಿ ಅನೇಕ ಸಿನಿಮಾಗಳು ಚಿತ್ರೀಕರಣವಾಗಿವೆ ರವಿಚಂದ್ರನ್ ಸಾರಥ್ಯದಲ್ಲಿ ಪಡ್ಡೆಹುಲಿ ಸಿನಿಮಾ ಚಿತ್ರಿಕರಣವಾಗತ್ತಿದ್ದು ಮತ್ತು ಇದಕ್ಕಾಗಿ ಕೋಟೆಯನ್ನು ಕನ್ನಡದ ಬಾವುಟಗಳಿಂದ ಸಿಂಗಾರ ಮಾಡಿದ್ದು ಈ ಮೂಲಕ ಚಿತ್ರದುರ್ಗದ ಕೋಟೆ ನಾಡಿನ ಜನ ನೋಡುವಂತಾಗುತ್ತಿದೆ ಎಂದರು.

ಕರ್ನಾಟಕ ಯುವ ಪರಿಷತ್ತು ಅಧ್ಯಕ್ಷ ಮಾಲತೇಶ್ ಅರಸ್ ಮಾತನಾಡಿ ಇಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಇಲ್ಲದೆ ಬರ ಎದ್ದು ಕಾಣುತ್ತಿದೆ, ರೈತರು ಬೆಳೆ ಇಲ್ಲದೆ ಕಂಗಾಲಾಗಿದ್ದಾರೆ. 4 ತಾಲೂಕುಗಳನ್ನ ಮಾತ್ರ ಬರಕ್ಕೆ ಸೇರ್ಪಡೆ ಮಾಡಿದ್ದು ಇಂತಹ ವೇಳೆ ಜಿಲ್ಲೆಯ ಎಲ್ಲಾ ಸಂಘಟನೆಗಳು ಅದರಲ್ಲೂ ಸಿನಿಮಾ ನಟರ ಅಭಿಮಾನಿ ಸಂಘಟನೆಗಳು ಚಿತ್ರದುರ್ಗ ಜಿಲ್ಲೆಯನ್ನು ಪೂರ್ಣ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಲು ಸರಕಾರದ ಮೇಲೆ ಒತ್ತಡ ಹಾಕ ಬೇಕಿದೆ ಎಂದರು.

ಈ ಸಂದರ್ಭದಲ್ಲಿ ಖ್ಯಾತನಟ ರವಿಚಂದ್ರನ್ ಅವರನ್ನು ಇದೇ ವೇಳೆ ಚಿತ್ರದುರ್ಗ ಜಿಲ್ಲಾ ಘಟಕದಿಂದ ಸನ್ಮಾನಿಸಲಾಯಿತು. ಪಡ್ಡೆಹುಲಿ ಸಿನಿಮಾ ನಿರ್ಮಾಪಕ ಕೆ.ಮಂಜು, ಚಿತ್ರದುರ್ಗ ಸದಸ್ಯರಾದ ಸಂದೀಪ್, ಕುಮಾರ್, ದಾವಣಗೆರೆ ಮಾಲಾ ಹನುಮಂತಪ್ಪ, ಮಂಜುಳ, ಗೀತಾ, ಕರ್ನಾಟಕ ಯುವ ಪರಿಷತ್ತು ಪಧಾದಿಕಾರಿಗಳು ಅಖಿಲ ಕರ್ನಾಟಕ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿಮಾನಿಗಳ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪೊಟೋ: ಖ್ಯಾತನಟ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರನ್ನು ಚಿತ್ರದುರ್ಗ ಜಿಲ್ಲಾ ಘಟಕದಿಂದ ಸನ್ಮಾನಿಸಲಾಯಿತು. ಪಡ್ಡೆಹುಲಿ ಸಿನಿಮಾ ನಿರ್ಮಾಪಕ ಕೆ.ಮಂಜು, ದಾವಣಗೆರೆ ಜಿಲ್ಲಾಧ್ಯಕ್ಷ ಮನು, ಚಿತ್ರದುರ್ಗ ಜಿಲ್ಲಾಧ್ಯಕ್ಷ ಜೆ.ಎಸ್. ಶಂಭು, ಕರ್ನಾಟಕ ಯುವ ಪರಿಷತ್ತು ಅಧ್ಯಕ್ಷ ಮಾಲತೇಶ್ ಅರಸ್ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರದ ಟಿಕೆಟ್‍ ಮೇಲೆ ಶೆ.20ರಷ್ಟು ಕಡಿತ

Published

on

ಸುದ್ದಿದಿನ ಡೆಸ್ಕ್ : ರಕ್ಷಿತ್‍ ಶೆಟ್ಟಿ ಮತ್ತು ರುಕ್ಷಿಣಿ ವಸಂತ್‍ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್‍ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್‍ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್‍, ಅಚ್ಯುತ್‍ ಕುಮಾರ್‍, ರಮೇಶ್‍ ಅರವಿಂದ್‍ ಮುಂತಾದವರು ನಟಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ‌ ಪ್ರೇಕ್ಷಕ ದರ್ಶನ್

Published

on

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್‍ ಅಂಬರೀಶ್‍ ಅಭಿನಯಿಸಿರುವ ‘ಬ್ಯಾಡ್‍ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್‍ ಮತ್ತು ಸುಮಲತಾ ಅಂಬರೀಷ್‍ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್‍, ಅಭಿ ಬೆನ್ನಿಗೆ ‘ನಿಮ್ಮ‌ಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.

“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್‍ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್‍ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending