Connect with us

ಲೈಫ್ ಸ್ಟೈಲ್

ನಾಡಿಗೆ ಬಂದ ಕಾಡುಕೋಣ..!

Published

on

ಸಾಂದರ್ಭಿಕ ಚಿತ್ರ
  • ಪಶುವೈದ್ಯರುಗಳ ಪೇಷಂಟುಗಳು ಬರೀ ದನ, ಎಮ್ಮೆ, ಕೋಳಿ,ಕುರಿ, ಆಡು, ನಾಯಿ, ಬೆಕ್ಕು, ಕೋಳಿ, ಹಂದಿ ಇತ್ಯಾದಿಗಳಿಗೆ ಸೀಮಿತವಾಗಿರದೆ ಮೊಲ, ಇಲಿ, ಕೋತಿ, ಆಮೆ, ಹುಲಿ, ಸಿಂಹ, ಒಂಟೆ, ಆನೆ, ಚಿರತೆ, ಹಾವು , ನರಿ, ಜಿಂಕೆ, ಕಡಿವೆ ಇತ್ಯಾದಿ ತರಹೇವಾರಿ ವನ್ಯಜೀವಿಗಳ ಚಿಕಿತ್ಸೆ ಮತ್ತು ಜೀವನ ಕ್ರಮದ ಬಗ್ಗೆಯೂ ತಿಳಿದುಕೋಂಡಿರಬೇಕಾಗುತ್ತದೆ. ಕೆಲವೊಮ್ಮೆ ಈ ಪ್ರಾಣಿಗಳನ್ನು ಚಿಕಿತ್ಸೆ ಮಾಡುವಾಗ ಸಾಕಷ್ಟು ಅಪಾಯವೂ ಕಾದಿರುತ್ತದೆ. ಗಾಯಗೊಂಡ ಕಾಡುಕೋಣವೊಂದರ ಚಿಕಿತ್ಸೆಯ ರೋಚಕ ಅನುಭವ.

ಡಾ. ಎನ್.ಬಿ.ಶ್ರೀಧರ

ನಿವಾರವೊಂದರ ಮಧ್ಯಾಹ್ನ 11 ಘಂಟೆಯಿರಬಹುದು. ಆ ದಿನ ತಾಳಗುಪ್ಪದಲ್ಲಿ ಸಂತೆ. ಆಸ್ಪತ್ರೆಯಲ್ಲಿ ಗಿಜಿಗುಟ್ಟುವಷ್ಟು ಜನ ಮತ್ತು ತರಹೆವಾರಿ ಕೇಸುಗಳು. ಹುಳವಾಗಿ ಗಬ್ಬು ನಾರುವ ಗಾಯದಿಂದ ಹಿಡಿದು ಸಂತಾನಹರಣ ಚಿಕಿತ್ಸೆಗೆಂದು ಕಾಯುತ್ತಿರುವ ಪಕ್ಕದ ತಾಲೂಕು ಸೊರಬದ ಶ್ವಾನಗಳ ಸವಾರಿ ಕ್ಯೂನಲ್ಲಿತ್ತು. ಒಳರೋಗಿಗಳಾಗಿ ಮಾಡಿಕೊಂಡ ಕೆಲವು “ಪೇಷಂಟು”ಗಳ ಚಿಕಿತ್ಸೆಯೂ ಕಾದಿತ್ತು. ನಾನೇ ಪ್ರಯೋಗಕ್ಕೆಂದು ತಂದು ಸಂಶಯಿತ ವಿಷಗಿಡಗಳನ್ನು ತಿನ್ನಿಸುಸುತ್ತಿರುವ ಕರುಗಳ ಗುಂಪಿತ್ತು. ಮನೆಗೆ ಚಿಕಿತ್ಸೆಗೆ ಕರೆದಿರುವ “ಟೂರಿಂಗ್ ಪೇಷಂಟು”ಗಳ ಪಟ್ಟಿಯೂ ಸಹ ಬೆಳೆಯುತ್ತಿತ್ತು.

ಅಷ್ಟರಲ್ಲೇ ನನ್ನ ಶಿಷ್ಯ “ಸಾರ್..ಡಿ ಎಪ್ ಓ ಅವರು ಲೈನಿನಲ್ಲಿದ್ದಾರೆ. ಗರಂ ಆಗಿದಾರೆ.. ನಿಮ್ಮ ಜೊತೆ ಮಾತಾಡಬೇಕಂತೆ “ ಎಂದ. ಯಾವುದೋ ಕಾಡು ಕೋಣವೋ ಅಥವಾ ಹುಲಿ ಸಿಂಹ, ಜಿಂಕೆ ಇತ್ಯಾದಿ ವನ್ಯೃಗಗಳು ಕಾಡಿನಲ್ಲಿ ಸತ್ತಿರಬೇಕು. ಮರಣೋತ್ತರ ಪರೀಕ್ಷೆ ಮಾಡಲು ಕರೆಯುತ್ತಿದ್ದಾರೆ. ಈ ದಿನ ಹಳ್ಳ ಹಿಡಿಯಿತು. ದೇಶದ ಆರ್ಥಿಕತೆಗೆ ನಮ್ಮ ಹಸು ಎಮ್ಮೆಗಳಂತೆ ಒಂದಿನಿತೂ ಕೊಡುಗೆ ನೀಡದ, ಕರದಾತರು ಕಷ್ಟಪಟ್ಟು ನೀಡಿದ ಹಣವನ್ನು ಜೀವವೈವಿಧ್ಯದ ಸಂರಕ್ಷಣೆಯ ಹೆಸರಿನಲ್ಲಿ ನುಂಗಿ ನೀರು ಕುಡಿಯುತ್ತಿರುವ ಅಧಿಕಾರಿಗಳ ಗುಂಪೊಂದರ ಪುನರ್ವಸತಿಯಾಗಿ ಕೇಂದ್ರವಾಗಿ ಮಾರ್ಪಟ್ಟ ಇಲಾಖೆಯೆಂದು ನನ್ನ ಮಿತ್ರ ಹೇಳುವ ಅರಣ್ಯ ಇಲಾಖೆಯ ಯಾವುದೋ ಕಾಡು ಪ್ರಾಣಿ ಸತ್ತರೆ ಎಲ್ಲ ಕೆಲಸ ಬದಿಗೊತ್ತಿ ಅದರ ಕೊಳೆತು ಹೋದ ಶವಪರೀಕ್ಷೆಗೆ ಇಲ್ಲಿಂದ ಹೋಗಬೇಕಾದ ಅನಿವಾರ್ಯತೆಯನ್ನು ಶಪಿಸುತ್ತಾ ಫೋನು ಎತ್ತಿದೆ. ಆಕಡೆಯಿಂದ “ ಡಾಕ್ಟ್ರೇನ್ರಿ.. ಎಷ್ಟೊತ್ರಿ ಬರೋದು? ನಾನು ಸಾಗರ ಡಿಎಪ್ಪೋ ಕಣ್ರೀ… ತುಮರಿ ಹತ್ರ ಕಾಡುಕೋಣ ಅಡಿಕೆ ತೋಟದಲ್ಲಿ ಮನೆ ಮಾಡಿ ಬಿಟ್ಟಿದೆ.. ಅದ್ಕೆ ಒಂದಿಷ್ಟು ಚಿಕಿತ್ಸೆ ಆಗ್ಬೇಕಿತ್ತು.. ತುಮರಿಗೆ ಬೇಗ ಬಂದ್ಬಿಡಿ.. ಈ ಪೇಪರ್ರಿನವರು ತಲೆ ತಿಂತಾ ಇದ್ದಾರೆ” ಎಂದು ಅವರ ಅಧಿಕಾರಿ ಗತ್ತಿನಲ್ಲೇ ಗಾರ್ಡು ಫಾರೆಸ್ಟರುಗಳಿಗೆ ನೀಡುವಂತೆ ಆದೇಶ ನೀಡಿದರು.

ಇದೊಳ್ಳೆ ಕಥೆಯಾಯ್ತಲ್ಲ !! ದನದ ಚಿಕಿತ್ಸೆ ಬಿಟ್ಟು ಈ ಕಾಡುಕೋಣದ ಚಿಕಿತ್ಸೆಗೆ ಹೋಗ್ಬೇಕಲ್ಲ ? ಎಲ್ಲೋದ್ರು ಈ ಕಾಡುಪ್ರಾಣಿ ಡಾಕ್ಟರುಗಳು? ಎಂದು ಪರಿಚಿತರಾದ ಅರಣ್ಯ ಇಲಾಖೆಯ ಸ್ನೇಹಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಫೋನಾಯಿಸಿದೆ. ಅದರ ಪ್ರವರ ತಿಳಿಯಿತು.

“ಅಡಿಕೆ ತೋಟದಲ್ಲಿ ಮನೆ ಮಾಡಿದ ಕಾಡುಕೋಣ” “ಕಾಡಿನಿಂದ ನಾಡು ಸೇರಿದ ಕಾಡುಕೋಣ” ಇತ್ಯಾದಿ ಶಿರ್ಷಿಕೆಯ ಸುದ್ಧಿಗಳು ದಿನಪತ್ರಿಕೆಗಳಲ್ಲಿ ಬರತೊಡಗಿದ ಮೇಲೆಯೇ ನಮಗೆ ಗೊತ್ತಾಗಿದ್ದು ಕಾಡುಕೋಣವೊಂದು ತುಮರಿ ಭಾಗದ ಹೆಗಡೆಯೊಬ್ಬರ ತೋಟ ಸೇರಿ ಅಲ್ಲಿಯೇ ಠಿಕಾಣಿ ಹೂಡಿದೆ ಎಂದು. ಸಾಮಾನ್ಯವಾಗಿ ನಮ್ಮ ಜಾನುವಾರುಗಳ ಜಂಜಾಟದಲ್ಲಿಯೇ ಮುಳುಗಿಹೋಗುವ ನಾವು ಆಗೆಲ್ಲ ಕಾಡುಪ್ರಾಣಿಗಳ ಚಿಕಿತ್ಸೆಗೆ ಹೋಗುವುದು ಕಡಿಮೆಯಾಗಿತ್ತು. ಅದಕ್ಕೆಂದೇ ಶಿವಮೊಗ್ಗದಲ್ಲಿ ಅರಣ್ಯ ಇಲಾಖೆಯಲ್ಲಿರುವ ಇರುವ “ಆನೆ ಡಾಕ್ಟರು” ಹುಲಿ ಸಿಂಹ” ಡಾಕ್ಟರುಗಳಾದ ವನ್ಯಜೀವಿ ಪಶುವೈದ್ಯರು ಬಂದು ಏನೇನು ಬೇಕೋ ಅದೆಲ್ಲಾ ಕ್ರಮ ತೆಗೆದುಕೊಳ್ಳುತ್ತಿದ್ದರು.

ಅದರೆ ಆಗ ವನ್ಯಜೀವಿ ತಜ್ಞ ಪಶುವೈದ್ಯರು ದೂರದೂರಿನಲ್ಲಿ ಪುಂಡ ಕಾಡಾನೆಗಳು ಊರು ನುಗ್ಗಿ ದಾಂಧಲೆ ಎಬ್ಬಿಸಿದ್ದರಿಂದ ಅವುಗಳ ತರಲೆ ನಿಲ್ಲಿಸಿ ಖೆಡ್ಡಾಕ್ಕೆ ಕೆಡವಲು ನಾಡಾನೆಗಳನ್ನು ತೆಗೆದುಕೊಂಡು ಹೋಗಿ ಕೊಡಗಿನ ಹತ್ತಿರ ಯಾವುದೇ ಹಳ್ಳಿಯಲ್ಲಿ ಕಳೆದು ೧೫ ದಿನಗಳಿಂದ ಬೀಡು ಬಿಟ್ಟಿದ್ದು ಅವರು ಬಂದು ಈ ಕಾಡು ಪ್ರಾಣಿಯ ಚಿಕಿತ್ಸೆ ಮಾಡುವವರೆಗೆ ದಿನನಿತ್ಯ ಕಾಟಕೊಡುವ ದಿನಪತ್ರಿಕೆಗಳಿಂದ ಬಚಾವಾಗಲು ಡಿಎಪ್ಪೋ ನನಗೆ ಫೋನಾಯಿಸಿದ್ದಾರೆಂದೂ, ಸಾಗರ ಪಶುವೈದ್ಯ ಆಸ್ಪತ್ರೆಯ ಪಶುವೈದ್ಯರೆಲ್ಲ ತುಮರಿ ಏರಿಯಾವು ನನ್ನ ವ್ಯಾಪ್ತಿಯಲ್ಲಿ ಬರುವುದರಿಂದ ನನಗೆ ತಿಳಿಸಲು ಸೂಚಿಸಿದ್ದಾರೆಂದೂ ತಿಳಿಯಿತು.

ಸರಿ ನಮ್ಮಾಸ್ಪತ್ರೆಯಿಂದ ಯಾವ ರೂಟಿನಲ್ಲೇ ಹೋದರು 60-70 ಕಿಲೋಮೀಟರು ಇರುವ ತುಮರಿಗೆ ಹೋಗಲು ಎಲ್ಲಾ ಚಿಕಿತ್ಸಾ ಪರಿಕರಗಳನ್ನು ಸಿದ್ಧ ಮಾಡಿಕೊಳ್ಳಲು ನನ್ನ ಶಿಷ್ಯನಿಗೆ ತಿಳಿಸಿದೆ. ಕಾಡು ಪ್ರಾಣಿಗಳಿಗೆ ಅರಿವಳಿಕೆ ನೀಡುವ ಡಾರ್ಟ್ ಗನ್ನು ಇಲ್ಲವೆಂದೂ, ಕಾಡೆಮ್ಮೆ (ಕಾಡು ಕೋಣ?), ಮೈಮೇಲೆ ಬಂದರೆ ಕಷ್ಟವಿದೆಯೆಂದೂ ಯಾವುದಕ್ಕೂ ಮನೆಗೆ ಹೋಗಿ ತಿಳಿಸಿ ಬರುವೆನೆಂದೂ ನನ್ನ ಶಿಷ್ಯ ಮನೆಗೆ ಹೊರಟ.

ತುಮರಿ, ಬ್ಯಾಕೋಡು, ಕಾರ್ಗಲ್ಲು, ಶಿರವಂತೆ, ಅರಳಗೋಡು, ಕೊಂಜವಳ್ಳಿ, ಸೈದೂರು ಇತ್ಯಾದಿ ಈಗ ಆಸ್ಪತ್ರೆಯಾಗಿರುವ ಸುಮಾರು 90ಕಿಲೋಮೀಟರ್ ವ್ಯಾಪ್ತಿಯ ವಿಸ್ತಾರ ಪ್ರದೇಶಗಳಿಗೆ ಏಕೈಕ ತಜ್ಞ ಪಶುವೈದ್ಯನಾದ ನಾನು ಈ ಭಾಗದಲ್ಲಿ ಯಾವುದೇ ನಾಡು ಅಥವಾ ಕಾಡು ಪ್ರಾಣಿಗಳಿಗೆ ತೊಂದರೆಯಾದರೂ ಮರಣೋತ್ತರ ಪರೀಕ್ಷೆ ಅಥವಾ ಚಿಕಿತ್ಸೆ ನೀಡುವ ಮಹತ್ತರ ಜವಾಬ್ದಾರಿ ಹೊತ್ತು ಕೊಂಡಿದ್ದೆ.

ಎಂದಿನಂತೆ ನನ್ನ ಸುಜ಼ುಕಿ ಸವಾರಿ ನನ್ನ ಶಿಷ್ಯನ ಜೊತೆ ತುಮರಿ ಕಡೆ ಹೊರಟಿತು. ಸಾಗರ ಸೇರಿ ಸಾಗರದಿಂದ ಹೊಳೆಬಾಗಿಲಿನ ಬಾರ್ಜು ದಾಟಿ ಇನ್ನೂ 25 ಕಿಮಿ ಅಂಕು ಡೊಂಕಾದ ರಸ್ತೆಗಳಲ್ಲಿ ಸಾಗಿ ಕಾಡುಕೋಣದ ವಿಷಯ ಕೇಳುತ್ತಾ ಸಾಗಿದೆವು. ಗಮನದ ಹಳ್ಳಿ ತಲುಪಿ ಅಲ್ಲಿ ಹೆಗ್ಡೇರ ತೋಟದಲ್ಲಿ ಗಮಯದ ಜಾಡು ಹಿಡಿದು ಸಾಗಿದೆವು. ಬೈಕಿನಲ್ಲಿ ಸಾಗಿ ಸಾಗಿ ಬೇಸರ ಎಷ್ಟೊತ್ತಿಗಪ್ಪಾ ಈ ಊರು ಬರುತ್ತೆ ಎನ್ನುವಷ್ಟರಲ್ಲಿ ಗಮಯದ ಉಗಮ ಸ್ಥಾನ ಬಂತು.

ಗಮಯದ ಸುತ್ತ ಜನವೋ ಜನ. ಕೆಲವು ಅರಣ್ಯ ಇಲಾಖೆ ಸಿಬ್ಬಂದಿ ಜಮೆಯಾಗಿ ಅವರ ಅಮೂಲ್ಯ ವಸ್ತುವಿನ ರಕ್ಷಣೆ ಮಾಡುತ್ತಿದ್ದರು. ಒಂದೆರಡು ಪೋಲೀಸ್ ಸಿಬ್ಬಂದಿಯೂ ಸಹ ಜನರ ಬೀಡು ಕಡಿಮೆ ಮಾಡಲು ಹರ ಸಾಹಸ ಪಡುತ್ತಿದ್ದರು. ಹೋಯ್.. ಹೋಯ್… ಡಾಕ್ಟ್ರು ಬಂದ್ರು .. ದಾರಿ ಬಿಡಿ” ಎನ್ನುವ ಆಜ್ಞೆ ಪೋಲೀಸರಿಂದ ಬಂದು ಎಲ್ಲಾ ಜನರಿಂದ ನಾನೇ ಫ಼ೋಕಸ್ಸಾದೆ. ಕಾಡು ಕೋಣವನ್ನು ಸುಮಾರು ೧೫ ಅಡಿ ದೂರದಿಂದ ನೋಡಿದೆ. ಬಿಳಿಯ ಪಟ್ಟಿಯ ಕುತ್ತಿಗೆ, ಕಟ್ಟು ಮಸ್ತಾದ ದೇಹ, ರಾಜಗಾಂಭೀರ್ಯದಲ್ಲಿ ಇರಬೇಕಾದ ಕಾಡುಕೋಣ ಲಾಚಾರ್ ಎದ್ದು ಬಡ್ಕಾಟೆ ಹೆಣದಂತೆ ಹಿಂಡಿ ನೀಡದೇ ಇರುವ ಏಳಲು ಸಾಧ್ಯವಾಗದ ಮುದಿ ಎಮ್ಮೆಯಾಗಿ ಹೋಗಿತ್ತು. ಆದರೂ ಅದರ ಸ್ಥಿತಿ ಗಮನಿಸಲು ಸ್ವಲ್ಪ ಹತ್ತಿರ ಹೋದರೆ ಬುಸ್ ಎಂದು ಶಬ್ಧ ಮಾಡುತ್ತಾ ಏರಿ ಬಂತು.

ಸರಿಯಾಗಿ ಗಮನಿಸಿದಾಗ ಮುಂದಿನ ಬಲಗಾಲಿನ ಮೇಲ್ಬಾಗ ಉಬ್ಬಿದಂತೆ ಕಂಡು ಬಂತು. ಇದರ ಚಿಕಿತ್ಸೆ ಮಾಡದೇ ಇದ್ದರೆ ಸತ್ತು ಹೋಗುವುದು ಗ್ಯಾರಂಟಿ ಅನ್ನಿಸಿತು. ಅರಣ್ಯ ಇಲಾಖೆಯವರಿಗೆ “ ಈ ಕೋಣನ್ನ ಹೇಗಾದ್ರೂ ಹಿಡಿದು ಕೊಟ್ರೆ, ಅದಕ್ಕೆ ಅರಿವಳಿಕೆ ಚುಚ್ಚುಮದ್ದು ನೀಡಿ ಏನಾದರೂ ಮಾಡಬಹುದು. ನಮ್ಮ ಹತ್ತಿರ ಅರಿವಳಿಕೆಯನ್ನು ದೂರದಿಂದಲೇ ನೀಡುವ “ಡಾರ್ಟ್ ಗನ್” ಇರದೇ ಇರುವುದರಿಂದ ಯಾವುದೇ ಕ್ಷಣದಲ್ಲಿ ಕಾಡು ಕೋಣ ನುಗ್ಗಿದರೆನಾಮಾವಶೇಷವಾಗುವ ಸಾಧ್ಯತೆ ಇತ್ತು. ಅದು ಕೃಷವಾಗಿರುವುದನ್ನು ಗಮನಿಸಿದರೆ ಅದಕ್ಕೆ ಗಂಭೀರವಾದ ಕಾಯಿಲೆ ಇರುವುದು ಗ್ಯಾರಂಟಿಯಾಗಿತ್ತು. ಚಿಕಿತ್ಸೆ ಮಾಡದೇ ಇದ್ದರೆ ಸತ್ತು ಯಮಪುರಿ ಸೇರಿ ಖಾಯಂ ಆಗಿ ಯಮನ ವಾಹನ ಆಗುವ ಸಾಧ್ಯತೆ ಇತ್ತು.

ನನ್ನ ಶಿಷ್ಯ ಖಾಯಂ ಎಮ್ಮೆಗಳನ್ನು ಕೆಡಗಿ ಅಭ್ಯಾಸ ಇದ್ದಾತ. ಆತ “ ಸಾರ್.. ಒಂದು ಕೈ ನೋಡಿಯೇ ಬಿಡ್ಲಾ ಸಾರ್.. ಕಾಡುಕೋಣ ಹ್ಯಾಂಗಿದ್ರೂ ಬಡಕಲಾಗಿದೆ. ನಮ್ಮ ಎಮ್ಮೆಗಳಷ್ಟೇ ತಾಕತ್ತು ಇರ್ಬಹುದು, ಹಗ್ಗ ಹಾಕಿ ಕೆಡವಿ ಬಿಡ್ತೀನಿ “ ಎಂದು ಹುಂಬ ಧೈರ್ಯ ತೋರಿದ. ನಾನು ಮಾತ್ರ ಈ ರಿಸ್ಕ್ ತೆಗೆದುಕೊಳ್ಳಲು ಸುತರಾಂ ಸಿದ್ದವಿರಲಿಲ್ಲ. ಎಲ್ಲಾದರೂ ನಮ್ಮ ಅಂದಾಜು ತಪ್ಪಿ ಈ ಕಾಡುಕೋಣ ನುಗ್ಗಿ ಯಾರನ್ನಾದರೂ ಕೆಡಗಿ ಕೊಂದರೆ ಯಾರು ಜವಾಬ್ದಾರರರು? ಎಂದು “ ಈ ಕಾಡು ಪ್ರಾಣಿ ಸಹವಾಸ ಸಾಕಪ್ಪಾ.. ಅದರ ಡಾಕ್ಟರುಗಳು ಬಂದು ಏನಾದರೂ ಮಾಡ್ಲಿ. ನಮ್ಮಿಂದ ದನ ಆರಾಮವಾದ್ರೆ ಸಾಕು” ಎಂದು ರಾಗ ಎಳೆದೆ. ಆದರೂ ವೃತ್ತಿಯ ತುಡಿತ ಇದೆಯಲ್ಲ.. ಏನಾದರೂ ಮಾಡಲೇ ಬೇಕು. ಸುತ್ತ ಮುತ್ತ ಸೇರಿದ ಜನ ಎಲ್ಲಾ ತರಹೇವಾರಿ ಕಾಮೆಂಟು ಪಾಸು ಮಾಡಲಿಕ್ಕೆ ಪ್ರಾರಂಭಿಸಿದರು.

ಅವರೊಲ್ಲಬ್ಬ “ಇವರು ದನಕ್ಕೆ ಮಾತ್ರ ಡಾಕ್ಟರು. ಎಮ್ಮೆ ಮುಕಳಿ ಒಳಗೆ ಕೈ ಹಾಕಿ ಇನ್ಸೆಮಿನೇಷನ್ ಮಾಡೋದು ಮಾತ್ರ ಇವರಿಗೆ ಕಲ್ಸಿರ್ತಾರೆ. ಈ ಕಾಡುಕೋಣದ ಟ್ರೀಟ್ಮೆಂಟಿಗೆಲ್ಲಾ ಮೈಸೂರಿನಿಂದ ಎಕ್ಸ್ಪರ್ಟ್ಸ್ ಬರ್ಬೇಕು. ಸುಮ್ನೇ ಟೈಮ್ ಪಾಸಿಗೆ ಬಂದಿದ್ದಾರೆ. ಅದ್ರ ಜೊತೆ ಈ ಫ಼ಾರೆಸ್ಟ್ ಖಾತೆ ಜನಾ ಬೇರೆ ದಂಡ” ಎಂದು ನನ್ನ ವೃತ್ತಿಯ ಘನತೆಯನ್ನು ಮೂರುಕಾಸಿಗಿಳಿಸಿ ನಿವಾಳಿಸಿ ಬಿಸಾಡಿದ ಹಾಗೂ ಫ಼ಾರೆಸ್ಟು ಇಲಾಖೆಯವರು ಕಳ್ಳ ನಾಟಾ ಮಾಡುತ್ತಿದ್ದ ಕೆಲ ಹಳ್ಳಿಯ ಜನರನ್ನು ಕುಂಡೆಯ ಮೇಲೆ ಹಾಕಿ ಕಟಕಟೆ ಒಳಗೆ ಹಾಕಿದ ಹಳೆ ಸೇಡು ತೀರಿಸಿಕೊಂಡ. ಹಳ್ಳಿಯಲ್ಲಿ ರಾತ್ರಿ ,10 ಘಂಟೆಗೆ ಕರು ಅಡ್ಡ ಸಿಕ್ಕಿಹಾಕಿಕೊಂಡಾಗ ಎಣ್ಣೆಯ ಮತ್ತನ್ನು ಏರಿಸಿಕೊಂಡವರಿಂದ ಈ ತರಹದ ಮಾತು ಕೇಳಿ ಅಭ್ಯಾಸವಾಗಿ ಹೋದ ನಾನು ಇದನ್ನು ಸೀರಿಯಸ್ ಆಗಿ ತೆಗೆದುಕೊಳ್ಳಲೇ ಇಲ್ಲ. ಆದರೆ ನನ್ನ ಶಿಷ್ಯನಿಗೆ ಮಾತ್ರ ನಖಶಿಖಾಂತ ಕೋಪ ಬಂದಿತ್ತು.

ಆತ “ಸಾರ್. ಏನೂ ತೊಂದರೆ ಇಲ್ಲದಂತೆ ಅದನ್ನು ಕೆಡಗಿ ಕೊಡ್ತೀನಿ ಸಾರ್. ಇಂಜೆಕ್ಷನ್ ಹಾಕಿ ಅನೇಸ್ಠೇಸಿಯಾ ಕೊಟ್ಟು ಕೆಲಸ ಮಾಡಿ.. ಫ಼ಾರೆಸ್ಟ್ ಡಿಪಾರ್ಟ್ಮೇಂಟಿನವರೂ ಸಹಾಯ ಮಾಡ್ತಾರೆ” ಅಂದ. ಅಷ್ಟು ಹೊತ್ತು ನಮ್ಮ ಪರಿಪಾಟಲು ನೋಡಿ ಮಜಾ ತಗಳ್ತಿದ್ದ ಅರಣ್ಯ ಇಲಾಖೆಯ ಗಾರ್ಡು ಫ಼ಾರೆಸ್ಟರುಗಳೂ ಜನರ ಮಾತಿನಿಂದ ರೇಗಿ ಏನಾದರೂ ಮಾಡಲೇಬೇಕೆಂಬ ತೀರ್ಮಾನಕ್ಕೆ ಬಂದಾಗಿತ್ತು, ಅವರು ನಾಟಾ ಸಾಗಿಸಲು ಕಳ್ಳ ಸಾಗಣೆಗೆ ಉಪಯೋಗಿಸುತ್ತಿದ್ದ ಸೀಜ಼್ ಮಾಡಿದ ದಪ್ಪನೇ ಹಗ್ಗ ತಂದರು.

ಅದನ್ನು ಎಂಟತ್ತು ಅಡಿಕೆ ಮರದ ಸುತ್ತ ಕಟ್ಟಿ ಕಾಡು ಕೋಣ ಹಗ್ಗದ ಕೋಟೆ ಒಳಗೆ ಭದ್ರವಾಗುವಂತೆ ದಿಗ್ಭಂಧನ ಹಾಕಿದರು. ಕಾಡುಕೋಣ ಇರುವ ಜಾಗದ ಸುತ್ತ ಗೂಟದ ಬೇಲಿ ರೆಡಿಯಾಗಿ ಅಕ್ಷರಷ: ಕೊರೋನಾ ಪೀಡಿತರನ್ನು ಕ್ವಾರಂಟೈನಿನೊಳಗೆ ಹಾಕಿದ ಹಾಗೇ ಲಾಕ್ ಮಾಡಿದರು. ಆದರೆ ಕೋಣಕ್ಕೆ ಅನೇಶ್ಥೆಸಿಯಾ ಇಂಜೆಕ್ಷನ್ ಚುಚ್ಚಬೇಕಲ್ಲ. “ಯಾರಾದ್ರೂ ಬಂದು ಇದನ್ನು ಮಾಂಸದಲ್ಲಿ ತೂರಿಸ್ರೋ” ಎಂದು ಸಿರಿಂಜಿನಲ್ಲಿ ತಕ್ಕ ಪ್ರಮಾಣದ ಅನೇಸ್ಥೆಸಿಯಾ ಚುಚ್ಚುಮದ್ದು ಲೋಡ್ ಮಾಡಿ ನೀಡಲು ಹೋದೆ. ಯಾರೂ ಮುಂದೆ ಬರಲಿಲ್ಲ.

ಒಂದು ಉಪಾಯ ಹೊಳೆಯಿತು. ನಾವು ನಿರ್ಮಿಸಿದ ಕೋಟೆಯೊಳಗೆ ಒಂದಿಷ್ಟು ಮುರುಗಲು ಮತ್ತು ಕೋಕೋ ಗಿಡಗಳಿದ್ದವು. ಅವುಗಳ ಮೇಲೆ ಹತ್ತಿ ಕುಳಿತರೆ ಮತ್ತು ಕಾಡುಕೋಣವನ್ನು ಅಲ್ಲಿಗೆ ನಿಧಾನವಾಗಿ ಚಲನೆಯಾಗುವಂತೆ ನೋಡಿಕೊಂಡರೆ ಅದಕ್ಕೆ ಕಚಕ್ ಎಂದು ಇಂಜೆಕ್ಷನ್ ಚುಚ್ಚಿಬಿಡುವ ಎಂದುಕೊಂಡೆ. ಆದರೆ ಇಲ್ಲಿ ತುಂಬಾ ರಿಸ್ಕ್ ಇತ್ತು. ಆದರೆ ಮೊದಲೇ ಗಾಯಾಳು ಕೋಣ, ಖಂಡಿತಾ ರೋಷ ಭರಿತವಾಗಿರುತ್ತದೆ. ಏನಾದರೂ ಹೆಚ್ಚುಕಮ್ಮಿ ಆಗಿ ಆಯ ತಪ್ಪಿದರೆ ಅದರ ಮೇಲೆಯೇ ಬೀಳುವ ಸಾಧ್ಯತೆ ಇತ್ತು. ಬಿದ್ದರೆ ತುಳಿದು ಖಂಡಿತಾ ತುಳಿದು ಯಮಪುರಿಗೆ ಕಳಿಸುತ್ತಿತ್ತು.

ಯಾರಿಗಾದರೂ ಮರ ಹತ್ತಿ ಅದು ಕೆಳಗೆ ಬಂದೊಡೆ ಇಂಜೆಕ್ಷನ್ ಚುಚ್ಚಿ ಎಮ್ದರೆ ಎಲ್ಲರೂ ಹೆದರು ಪುಕ್ಕಲರೆ. ಮತ್ತೆ ಕೆಲವರು ಹೊಟ್ಟೆ ಹೊತ್ತ ದಡೂತಿಗಳು. ಅಲ್ಲಿ ಇರುವವರಲ್ಲಿ ನಾನೇ ತೆಳ್ಳಗಿರುವವ. ಏನಾದರಾಗಲಿ ಎಂದು ಅನಸ್ಥೆಸಿಯಾವನ್ನು ತುಂಬಿಸಿದ ಸಿರಿಂಜ್ ಕೈಲಿ ಹಿಡಿದು ಅದು ನೇರವಾಗಿ ಕೆಳಗೆ ಬರಬಹುದಾದ ಕೋಕೋ ಗಿಡದ ಮೇಲೆ ಏರಿದೆ. ಕಾಡುಕೋಣವನ್ನು ಮರದ ಕೆಳಗೆ ಬಂದು ನಿಲ್ಲುವಂತೆ ಬೆದರಿಸಲು ಸೂಚಿಸಿದೆ.

ಹಲವು ರೌಂಡ್ ಕಾರ್ಯಾಚರಣೆಯ ನಂತರ ಯಾವುದೋ ಗಳಿಗೆಯಲ್ಲಿ ಕಾಡು ಕೋಣ ನಾನು ಮೇಲೆ ಇದ್ದ ಕೊಂಬೆಯ ಕೆಳಗೆ ಬಂದು ನಿಂತಿತು. ಇದೇ ಅವಕಾಶವೆಂದು ಅದರ ಹಿಂಬಾಗದ ಪ್ರಷ್ಠದ ಮೇಲೆ ಸೂಜಿಯ ಸಮೇತ ಸಿರಿಂಜ್ ಚುಚ್ಚಿ ಸರಕ್ಕನೇ ಔಷಧಿ ಸೇರಿಸಿದೆ. ಆಯ ತಪ್ಪಿ ಕೆಳಗೆ ಬಿದ್ದ ಹೊಡೆತಕ್ಕೆ ಕಾಡುಕೋಣದ ಎದುರು ಅಂಗಾತ ಬಿದ್ದೆ. ಇನ್ನೇನು ಕಾಡುಕೋಣ ನನ್ನನ್ನು ತಿವಿಯಬೇಕು.. ನೋಡ್ತೀನಿ .. ಏನೂ ಶಬ್ಧ ಇಲ್ಲ.

ನಾನು ಕೊಟ್ಟ ಅರಿವಳಿಕೆಯ ಪ್ರಭಾವದಿಂದ ಕಾಡುಕೋಣ ಧರಾಶಾಯಿಯಾಗಿತ್ತು.
ಕೂಡಲೇ ನನ್ನ ಶಿಷ್ಯ ಮತ್ತು ಅರಣ್ಯ ಇಲಾಖೆಯವರು ಕಾಡುಕೋಣವನ್ನು ನಾಡುಕೋಣ ಕಟ್ಟಿದಂತೆ ಹಗ್ಗದಿಂದ ಏಳದಂತೆ ಕ್ಷಣಮಾತ್ರದಲ್ಲಿ ಬಂಧಿಸಿದರು. ಕಾಡುಕೋಣದ ಮುಂಗಾಲಿನ ಮೇಲ್ಬಾಗದಲ್ಲಿ ಕೀವಿನಿಂದ ಕೂಡಿದ ಗಡ್ಡೆಯಿತ್ತು. ಸಾವಧಾನವಾಗಿ ಅದನ್ನು ಓಪನ್ ಮಾಡಿದಾಗ ಟಕ್ ಎಂದು ಅದರೊಳಗಿದ್ದ ಬುಲೆಟ್ ಹೊರಬಂತು. ಯಾರೋ ದುರುಳರು ಮಾಂಸದಾಸೆಗೆ ಕಾಡುಕೋಣಕ್ಕೆ ಗುಂಡು ಹೊಡೆದಾಗ ಅದು ಮಾಂಸದಲ್ಲಿ ಕಚ್ಚಿಕೊಂಡು ಅಲ್ಲಿ ಕೀವುಂಟುಮಾಡಿದೆ ಎಂದು ತಿಳಿಯಿತು.

ಕೀವು ಬಸಿದು ಹೋಗುವ ಹಾಗೇ ಮಾಡಿ ಅದರೊಳಗೆ ಟಿಂಚರ್ ಆಯೋಡಿನ್ ಯುಕ್ತ ಭಟ್ಟೆಯನ್ನಿರಿಸಿ ಸುತ್ತಲೂ ಮುಲಾಮು ಹಚ್ಚಿದೆ. ಅವಶ್ಯಕ ನಂಜುನಿವಾರಕಗಳು, ನೋವು ನಿವಾರಕಗಳು ಹಾಗೂ ಜೀವನಿರೋಧಕದ ಚುಚ್ಚುಮದ್ದು ನೀಡಿದೆ. ಕಾಡುಕೋಣ ಬಹಳ ಬಡಕಲುಗೊಂಡಿತ್ತು. ಬಹುಶ: ಕೀವಿನ ನೋವಿನ ಬಾಧೆಯಿಂದ ಇರಬಹುದೇನೋ? ಕಾಡು ಕೋಣ ನಾಡಿಗೆ ಆಶ್ರಯಕ್ಕೆ ಬಂದಿದೆ.ತೋಟದಲ್ಲಿ ಸುಲಭವಾಗಿ ಸಿಗುವ ಹಲಸಿನ ಹಣ್ಣು ಇತ್ಯಾದಿ ತಿಂದು ಸೆಟ್ಲ್ ಆಗಿದೆ ಎಂದು ಗೊತ್ತಾಯ್ತು. ಎಲ್ಲ ಕೆಲಸ ಮುಗಿಸಿ, ಅದರ ತಿಲಕಾಷ್ಠ ಮಹಿಷ ಬಂಧನ ಬಿಡಿಸಿ ದೂರ ಬಂದೆವು. ಕೋಟೆಯಂತೆ ಮಾಡಿದ ಹಗ್ಗದ ಬಿಗಿತವನ್ನೂ ಸಡಿಲ ಗೊಳಿಸಿದೆವು. ಸುಮಾರು ಮುಕ್ಕಾಲು ಘಂಟೆಗೆ ಕಾಡುಕೋಣಕ್ಕೆ ಪ್ರಜ್ಞೆ ಬಂತು. ಓಲಾಡುತ್ತಾ ಏಳಲು ಪ್ರಯತ್ನಿಸಿತು. ಸ್ವಲ್ಪ ಹೊತ್ತಿಗೆ ಎದ್ದು ನಿಂಟು ಮೈಕೊಡವಿಕೊಂಡಿತು. ದುಡುಕ್ಕನೆ ಪಕ್ಕಳದ ಹಳ್ಳದ ಮೇಲೆ ಏರಿ ನಿಂತಿತು. ನಮ್ಮೆಡೆ ಒಂತರಾ ಕೃತಜ್ಞತೆಯ ನೋಟ ಬೀರಿ ಕಾಡಿನಲ್ಲಿ ಜಿಗಿದು ಮಾಯವಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Published

on

  • ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ

90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು.

ಜನಸಾಮಾನ್ಯರ ಅರಿವಿನ-ಪರಿಧಿ ತಿಳಿಗೊಳ್ಳುವುದರ ಮೊದಲೇ ಊಹಿಸಲಾರದಷ್ಟು ಮಟ್ಟಿಗೆ ಇಂದು, ಸ್ವಚ್ಛಂದ ಹಳ್ಳಿ-ಸೊಬಗಿನ ಕೂಡು-ಕುಟುಂಬದ, ಮೈ-ಮನಸ್ಸು ತುಂಬಿದ, ಪರಿಶುದ್ಧ ಜೀವನ ಪ್ರೀತಿ, ಉತ್ಸಾಹ, ಮಮತೆಯನ್ನು ಇನ್ನಿಲ್ಲವಾಗಿಸಿದೆ ಎನಿಸುತ್ತದೆಯಲ್ಲವೆ?

ಹೇಗೆಂದರೆ, ಕಲ್ಪಿಸಿಕೊಂಡರೂ ಕಣ್ಣೆದುರಿಗೆ ತೆರೆದಿಡುವ ಅಮೂಲ್ಯ ಬದುಕು, ಅದೆಷ್ಟು ಬೇಗ ದಿಕ್ಕು-ದೆಸೆಯಿಲ್ಲದೆ ಕಣ್ಣು-ಕಟ್ಟಿದ ಸ್ಪರ್ಧೆಗಿಳಿದ ಕುದುರೆಯಂತೆ ಅಲೆಯುವಂತಾಗಿದೆ! ಅರೆಕ್ಷಣ, ಮೈಮನ ಕಸಿವಿಸಿಗೊಳ್ಳುತ್ತೆ! ಜೀವ ಮರುಗುತ್ತೆ. ಮತ್ತೆ ಮತ್ತೆ ಆ ಬಾಲ್ಯ, ಹಳ್ಳಿ ಬದುಕನ್ನ ಅರಸಿ ಬಯಸುತ್ತೆ! ಜನತೆ, ಹಳ್ಳಿಯಲ್ಲಿನ ಗಿಡ-ಮರ, ಪಶು-ಪಕ್ಷಿ, ಹಳ್ಳ-ಕೊಳ್ಳ, ಬೆಟ್ಟ-ಗುಡ್ಡ ಮುಂತಾದ ಪರಿಸರದ ಸಕಲ ಜೀವಿಗಳೊಂದಿಗೆ ಒಂದಾಗಿ ನಲ್ಮೆಯಿಂದ ಪರಿಶುದ್ಧ ಮನದಿ, ಭೂ ತಾಯಿ, ತಿಳಿ-ನೀಲಿ ಆಗಸ, ಮಳೆ, ಗಾಳಿ, ಬೆಳಕನ್ನ ಇನ್ನಿಲ್ಲದೆ ಅಪ್ಪಿ, ಅತ್ಯಂತ ಸಂತಸ-ಖುಷಿಯಿಂದ, ಇರುವ ಪರಿಸ್ಥಿತಿಗೆ ಒಗ್ಗಿ , ಬದುಕು ರೂಪಿಸಿಕೊಂಡು ಜೀವನೋತ್ಸಾಹ ತಳೆಯುತ್ತಿದ್ದರು.

ನಿಜ ಹೇಳಬೇಕೆಂದರೆ, ಪರಿಸರವೇ ಪಾಠ; ಭೂ ತಾಯಿಯೇ ಹಾಸಿಗೆ; ಆಗಸವೇ ಹೊದಿಕೆಯಾಗಿ, ದುಡಿದ, ದಣಿವರಿದ ಮನದಿ, ಕಣ್ತುಂಬಿ ನೆಮ್ಮದಿಯ ನಿಟ್ಟುಸಿರುಗೈವ ಕ್ಷಣಗಳು ಅದಾಗಿತ್ತು!

ಹಳ್ಳಿಯಲ್ಲಿನ ಆಟೋಟಗಳು, ತಮಾಷೆಯ ಕ್ಷಣಗಳು, ಆಟಿಕೆಗಳು, ಸಾಮಾನುಗಳು, ಹಬ್ಬ-ಹರಿದಿನಗಳು, ಜಾತ್ರೆ-ಸಂತೆಗಳು, ಒಕ್ಕಲು ಸಮಯದ ಸುಗ್ಗಿಯ ಮಧುರ ಕ್ಷಣಗಳು ಇತ್ಯಾದಿ ಜನತೆಯ ಮುಗ್ಧ -ಮನಸ್ಸು ಮತ್ತು ಹೊಳೆವ ಮುಖದಲ್ಲಿ, ನಿಷ್ಕಲ್ಮಶ ಮಂದಹಾಸ ಮೂಡಿಸಿ, ಬೆಲೆ ಕಟ್ಟಲಾಗದ ಖುಷಿಯ ಕ್ಷಣಗಳನ್ನು ಸದಾ ಅವರಲ್ಲಿ ಕಂಗೊಳಿಸುತ್ತಿದ್ದವು.

ಎಲ್ಲರೂ ದುಡಿವವರು; ಎಲ್ಲರೂ ಭಾಗಿಯಾಗುವವರು; ಎಲ್ಲರೊಳಗೊಂದಾಗಿ ಬಾಳುವವರು; ಎಲ್ಲರಲ್ಲೂ ಧನ್ಯತಾ ಭಾವ; ಆದರಣೀಯತೆ, ಪೂಜ್ಯತಾ-ಭಾವ ತುಂಬಿತ್ತು! ಅಂತಃಕರಣೆ, ಕರುಣೆ, ಪ್ರೀತಿ-ವಿಶ್ವಾಸ, ತಕ್ಕಮಟ್ಟಿಗೆ ಮಾನವೀಯತೆ ಬದುಕ-ಪ್ರೀತಿ ಹೆಚ್ಚಿಸಿತ್ತು!

ಈಗಾಗಲೇ, ನಾವು ಯಾವ ಸ್ಥಿತಿ ತಲುಪಿದ್ದೇವೆಂದರೆ: ಶಾಲಾ ರಜೆಯ ದಿನಗಳಲ್ಲಿ, ಈಗಿನ ಮಕ್ಕಳಿಗೆ ಆ ಕಾಲದ ಹಳ್ಳಿಗಳ ಜೀವನ ಪರಿಚಯಿಸಲು ಗೊಟಗೋಡಿಯ ರಾಕ್ ಗಾರ್ಡನ್ – ಹಾವೇರಿ, ಹೆರಿಟೇಜ್ ವಿಲೇಜ್ – ಮಣಿಪಾಲ, ಅಲ್ಲಲ್ಲಿ ಸಾರ್ವಜನಿಕ ಉದ್ಯಾನವನ, ಹಾಗೂ ಇತರೆ ಕೆಲವು ಮ್ಯೂಸಿಯಮ್ ಗಳತ್ತ ಮುಖ ಮಾಡಿಬೇಕೆ ಹೊರತು ನೈಜ ಚಿತ್ರಣ ಪ್ರಸ್ತುತ ಹಳ್ಳಿಗಾಡಿನಲ್ಲೂ ಕಾಣಸಿಗದು! ಸ್ವತಃ ಹಳ್ಳಿಗರೇ ಪರಿತಪಿಸುವ ಸ್ಥಿತಿ.

ಕಾರಣ ಇಷ್ಟೆ: ತಂತ್ರಜ್ಞಾನದ ಆವಿಷ್ಕಾರ ಮತ್ತು ಎಲ್ಲ ಕ್ಷೇತ್ರಗಳಲ್ಲೂ ಹೊಕ್ಕಿರುವ ಅದರ ಗಾಢವಾದ ಛಾಯೆ. ಇಡೀ ‘ಪ್ರಪಂಚವೇ ಒಂದು ಹಳ್ಳಿ’ (Global Village) ಯಾಗಿ ಮಾರ್ಪಟ್ಟಿರುವ ಭಾವನೆ. ವಿಶೇಷವಾಗಿ, ದೂರವಾಣಿ, ಇಂಟರ್ನೆಟ್, ಯುಟ್ಯೂಬ್, ನೇರ ಮೆದುಳಿಗೆ ಕೈ ಹಾಕಿರುವ ಸಾಮಾಜಿಕ ಜಾಲತಾಣಗಳ ಡ್ರಗ್ಸ್ ರೀತಿಯ ಮಾನಸಿಕ ಮೋಹ ಬೆಂಬಿಡದೆ ಇಂದಿನ ಆಧುನಿಕ ಜನತೆಯ ಚಿಂತನಾರ್ಹ ಯೋಚನಾ ಶಕ್ತಿ, ಆರೋಗ್ಯ , ಕೌಟುಂಬಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಒಟ್ಟಾರೆ ಜೀವನ ಶೈಲಿಯನ್ನೇ ಅಕ್ಷರಸಃ ನುಂಗಿಹಾಕಿವೆ! ಅಲ್ಲದೆ, ಇದು ಇಂದಿನ ಅನಿವಾರ್ಯವೆಂಬಂತೆ ಕಠೋರ ಸನ್ನಿವೇಶ ಹುಟ್ಟುಹಾಕಿವೆ.

ಒಂದೆಡೆ, ‘ಅತೀಯಾದ ಅಮೃತವೂ ವಿಷ’ವೆನ್ನುವಂತೆ, ಹಾಗೂ ಊಟದಲ್ಲಿ ‘ರುಚಿಗೆ ತಕ್ಕಷ್ಟು ಉಪ್ಪಿ’ರುವಂತೆ ಹಲವು ಒಳಿತು-ಕೆಡುಕಗಳ ನಡುವೆ ಎಲ್ಲವೂ ಹಿತಮಿತವಾಗಿ ಬಳಕೆಯಲ್ಲಿದ್ದರೆ ಚೆನ್ನ. ಅಲ್ವೇ? ಮೈ ಮನ ಆರೋಗ್ಯಕರವಾಗಿರುತ್ತೆ; ಜೀವನ ಉತ್ಸಾಹದಿಂದ ಕೂಡಿರುತ್ತೆ.
ಜೊತೆಗೆ, ಇತ್ತೀಚೆಗೆ ಜಗತ್ತಿನೆಲ್ಲೆಡೆ ಭಾರೀ ಸಂಚಲನ ಸೃಷ್ಟಿಸಿರುವ ‘ಕೃತಕ ಬುದ್ಧಿಮತ್ತೆ’ (Artificial Intelligence – AI) ಹಾಗೂ ‘ಬಯೋಚಿಪ್’ ತಂತ್ರಜ್ಞಾನಗಳು. ಈ ಎರಡೂ ತಂತ್ರಜ್ಞಾನಗಳು ಬಹುತೇಕ ಮನುಷ್ಯನನ್ನ ಸಹ ಒಂದು ಸರಕಾಗಿ ನೋಡುವ ದೂರದೃಷ್ಟಿ ಹೊಂದಿವೆ ಎಂದರೆ ತಪ್ಪಾಗಲಿಕ್ಕಿಲ್ಲ! ತೀರ ಇತ್ತೀಚೆಗೆ, ತಂತ್ರಜ್ಞಾನ ಜಗತ್ತಿನ ಹೆಸರಾಂತ ಉದ್ಯಮಿ: ಎಲಾನ್ ಮಸ್ಕ್ ತಮ್ಮ ‘ನ್ಯೂರಾಲಿಂಕ್’ (Neuralink) ಸಂಸ್ಥೆಯ ಮೂಲಕ ಪ್ರಪಂಚದ ಮೊಟ್ಟ ಮೊದಲ ಪ್ರಯತ್ನವಾಗಿ ಆರೋಗ್ಯವಂತ ವ್ಯಕ್ತಿಯೊಬ್ಬರ ಮೆದುಳಿನಲ್ಲಿ ಪ್ರಾಯೋಗಿಕ – ‘ಮೊದಲ ಬಯೋಚಿಪ್’ ಅಳವಡಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ! ಇದುವರೆಗೂ, ಮೊಬೈಲ್ ನಲ್ಲಿ ಕೇವಲ ‘ಮೆಮೊರಿ ಕಾರ್ಡ್’ ಬಳಸಿ, ಅದರಲ್ಲಿ ಸಂಗ್ರಹಿಸಿದ ಮಾಹಿತಿ ಬೇಕೆಂದಾಗ ಆಲಿಸುವ, ನೋಡುವ ಪರಿಪಾಠದ ಪರಿಚಯವಿದ್ದ ನಮಗೆ, AI ಹಾಗೂ Biochip ತಂತ್ರಜ್ಞಾನಗಳ ಅವತಾರಗಳು ಊಹೆಗೂ ಮೀರಿದ್ದು ಅನ್ಸುತ್ತೆ ಕೂಡ.

ಆಗ, ಜಗತ್ತು ಹೇಗಿರಬೇಡ? ತಂತ್ರಜ್ಞಾನ ತೊರೆದು ಮನುಷ್ಯ, ಜೀವನ ಕಲ್ಪಿಸಿಕೊಳ್ಳಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು, ಕೇವಲ ಮನುಷ್ಯನ ಅವಶ್ಯಕತೆಗಳಿಗೆ ಪೂರಕವಾಗಿರಬೇಕೆ ಹೊರತು; ಆತನನ್ನ ಆಳುವ ಸ್ಥಿತಿ ತಲುಪಬಾರದು! ಮುಂದಿನ ದಿನಗಳಲ್ಲಿ, ಮನುಷ್ಯ ಎದುರಿಸಬಹುದಾದ ಭಯಾನಕ ತಂತ್ರಜ್ಞಾನ ಸಂಕೋಲೆಗಳನ್ನು ಕುರಿತು ಚರ್ಚಿಸುವ ಅಗತ್ಯ ಇಂದಿನ ತುರ್ತು ಅನಿವಾರ್ಯ. ಆದರೆ, ಎಲ್ಲವೂ ಸಲೀಸಾಗಿ ಕೈಗೆಟುಕುವ ಇಂದಿನ ದಿನಗಳಲಿ, ಅತಿಯಾಗಿ ಮಿತಿಮೀರಿರುವ ಅನುಕೂಲಗಳು ಅಮೂಲ್ಯ ಖುಷಿಯ ಕ್ಷಣಗಳನ್ನು ಎಂದಿಗೂ ನೀಡಲಾರವು.

ಬದಲಿಗೆ, ಪ್ರತಿಷ್ಠೆಯ ಹೆಮ್ಮರಗಳಾಗಿ, ಜನತೆ ನಾಲ್ಕು ದಿನದ ಈ ಬಾಳಲಿ ಏನೋ ಬಹುದೊಡ್ಡ ಸಾಧನೆಗೈದವರಂತೆ, ಯಂತ್ರಮಾನವರಂತೆ ಬೀಗುವವರೆ!!? ಮೂಲಭೂತವಾಗಿ, ಮಾನವ ಸಹಿತ ಸಕಲ ಜೀವ-ಸಂಕುಲವೂ ವಾಸಯೋಗ್ಯ ಸ್ವಚ್ಛಂದ ಭೂಮಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಭೂಮಿಯಲ್ಲಿ, ಮಣ್ಣಿನ ಫಲವತ್ತತೆ ಹಾಗೂ ನೀರು ಸಂರಕ್ಷಿಸದೆ; ಗಿಡ-ಮರ ಬೆಳೆಸದೆ; ಹಸಿರು ಹೆಚ್ಚಿಸದೆ, ಮತ್ತು ಪರಿಸರ ಸಮತೋಲನ ಕಾಪಾಡದೆ; ಕೇವಲ ತಂತ್ರಜ್ಞಾನ ತಲೆಯಲಿ ಹೊತ್ತು, ಮನುಷ್ಯ ಉತ್ತಮ ಆಹಾರ, ಆರೋಗ್ಯ ಮತ್ತು ಜೀವನ ಕಟ್ಟಿಕೊಳ್ಳಲು ಎಂದಿಗೂ ಸಾಧ್ಯವಿಲ್ಲ. ಸಮರೋಪಾದಿಯಲ್ಲಿ, ಜನತೆ ಸ್ವ ಇಚ್ಛೆಯಿಂದ ಹಳ್ಳಿ-ಹಳ್ಳಿಗಳಿಂದ, ನಗರಗಳು, ಬೆಟ್ಟ-ಗುಡ್ಡಗಳಲ್ಲೆಡೆ ಬೃಹತ್ ಸಂಖ್ಯೆಯಲ್ಲಿ ಸಸಿಗಳನ್ನ ನೆಟ್ಟು, ಪಾಲನೆ-ಪೋಷಣೆಗೈಯ್ಯುವ ಚಳುವಳಿ ರೂಪದ ಆಂದೋಲನ ದೇಶಾದ್ಯಂತ ಅತ್ಯಂತ ತ್ವರಿತವಾಗಿ ಕೈಗೂಡಬೇಕು. ಈ ನಿಟ್ಟಿನಲ್ಲಿ, ಎಲ್ಲರೂ ಕೈಜೋಡಿಸಬೇಕು.

(ಲೇಖಕರು : ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್

Published

on

ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್‌ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.

ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್‌ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

ಹೇಳಿಕೆ


  • ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.

            | ಸಚಿವ ದಿನೇಶ್ ಗುಂಡೂರಾವ್


ಟ್ವೀಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಲೈಫ್ ಸ್ಟೈಲ್

ನೀಲಿ ಪರ್ವತಗಳ ನಾಡಿನಲ್ಲಿ ಕೀಚಕರ ಹಾವಳಿ

Published

on

Unidentified miscreants torch two houses belonging to a particular community to retaliate the killing of nine civilians by Kukis in Manipur. (Photo: PTI)
  • ಡಾ. ಸಿದ್ದಯ್ಯ ರೆಡ್ಡಿಹಳ್ಳಿ

ಗತ್ತಿನ ಪ್ರತಿ ಜನಾಂಗವು ತನ್ನ ಪೂರ್ವಜರ ಪ್ರತಿಭೆ ಹಾಗೂ ಹಿರಿಮೆಯನ್ನು ಹೇಳಿಕೊಳ್ಳಲು ಕಾತರಿಸುತ್ತದೆ. ಅದರಂತೆಯೇ ನಮ್ಮ ಭರತ ಖಂಡದ ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ವಾಸಿಸುವ ಮಣಿಪುರಿ ಜನರು ಕ್ರಿಸ್ತಪೂರ್ವದಲ್ಲಿಯೇ ಅತ್ಯಾಧುನಿಕ ಸಾಮ್ರಾಜ್ಯವನ್ನು ಕಟ್ಟಿದ್ದರಂತೆ ಎಂದು ಹೇಳಿಕೊಳ್ಳುತ್ತಾರೆ.

ನಿಜ ಮಣಿಪುರಿಗಳು ಬೆಟ್ಟಗಳ ನಡುವೆ ಬೆಚ್ಚನೆಯ ಜೀವನವನ್ನು ಸಾಗಿಸಿದವರು. ಆದರೆ ಅಲ್ಲಿ ಕೊಳ್ಳಿ ಇಡುವ ಕೆಲಸಗಳು ಬಹಳ ಹಿಂದಿನಿಂದಲೇ ಪ್ರಾರಂಭವಾಗಿರುವುದು ತಿಳಿದುಬರುತ್ತದೆ. ವಾಸ್ತವದಲ್ಲಿ ಹಲವು ಬುಡಕಟ್ಟುಗಳ ಸಂಮಿಶ್ರಣವೇ ಮಣಿಪುರವಾಗಿದೆ. ಆದರೆ ಮಣಿಪುರಿಗಳು ಮಾತ್ರ ಈ ನೆಲದ ಮೂಲ ನಿವಾಸಿಗಳು, ಅವರಿಗೆ ಮಾತ್ರ ಸಕಲ ಸೌಕರ್ಯಗಳು ಸಿಗಬೇಕು, ಉಳಿದವರು ರಾಜ್ಯ ಬಿಡಬೇಕು ಎಂದು ಉಯಿಲ್ಲೆಬ್ಬಿಸುತ್ತಿರುವವರು ಯಾರು? ಪ್ರತಿಯೊಂದು ಬುಡಕಟ್ಟು ಜನಾಂಗಕ್ಕೆ ಇರುವಂತೆ ಹೇರಳವಾದ ಜಾನಪದ ಕಥೆ, ಪುರಾಣ ಮತ್ತು ದಂತಕಥೆಗಳ ಸಂಪತ್ತು ಇಲ್ಲಿನ ಬುಡಕಟ್ಟು ಜನಾಂಗಗಳಿಗೂ ಇದೆ.

ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ವಾಸಿಸುತ್ತಿದ್ದ ಜನರನ್ನು ಮಿತೇಯಿ ಅಥವಾ ಮೈತೇಯಿ ಎಂದು ಕರೆಯಲಾಗುತ್ತಿತ್ತು. ಸ್ವಾತಂತ್ರ್ಯಪೂರ್ವದಲ್ಲಿ ಮಣಿಪುರವು ಬಾಂಗ್ಲಾದ ಗುಡ್ಡುಗಾಡು ಜಿಲ್ಲೆಗಳಲ್ಲಿ ಒಂದಾಗಿತ್ತು. ಭಾರತ ಸ್ವಾತಂತ್ರ್ಯಗೊಂಡು ಎರಡು ವರ್ಷ ಎರಡು ತಿಂಗಳು ಕಳೆದ ನಂತರ ಅಂದರೆ ಅಕ್ಟೋಬರ್ 15, 1949ರಂದು ಭಾರತದೊಂದಿಗೆ ಏಕೀಕೃತವಾಯಿತು.

ಮಣಿಪುರದಲ್ಲಿ ಅಂತರ-ಜನಾಂಗೀಯ ಹಿಂಸಾಚಾರವು ಇದೇ ಮೊದಲೇನಲ್ಲ, ಇದಕ್ಕೆ ಸುದೀರ್ಘವಾದ ಇತಿಹಾಸವಿದೆ. ಮಣಿಪುರಿಗಳ ಅತಿರೇಕ ಎಲ್ಲಿಯವರೆಗೆ ಹೋಗಿತ್ತು ಎಂದರೆ 1964ರಲ್ಲಿ ಭಾರತದಿಂದ ಬಿಡುಗಡೆ ಹೊಂದಿ, ಹೊಸ ದೇಶವನ್ನು ಸೃಷ್ಟಿಸಿಕೊಳ್ಳಬೇಕು ಎಂದು ದಂಗೆಯನ್ನು ಎಬ್ಬಿಸಲಾಗಿತ್ತು. ಇದರಲ್ಲಿ ಹಲವಾರು ಗುಂಪುಗಳು ಕೂಡಿಕೊಂಡಿದ್ದವು. ಅವರಿಗೆ ಅವರದೇ ಆದ ಗುರಿಗಳು ಇದ್ದುದರಿಂದ ಈ ದಂಗೆ ವಿಫಲವಾಯಿತು.

ಚೀನಾ ದೇಶದ ಕುಮ್ಮಕ್ಕಿನಿಂದಾಗಿ ‘ರೆವಲ್ಯೂಷನರಿ ಪಾರ್ಟಿ ಆಫ್ ಕಾಂಗ್ಲೀಪಾಕ್’ ಮತ್ತು ‘ಪೀಪಲ್ಸ್ ಲಿಬರೇಶನ್ ಆರ್ಮಿಗಳು’ ಹುಟ್ಟಿಕೊಂಡವು. ಇವರು ಶಸ್ತ್ರಾಸ್ತ್ರ ತರಬೇತಿಯನ್ನು ಹೊಂದಿ, ಬ್ಯಾಂಕ್ ದರೋಡೆಗಳನ್ನು ಮಾಡುವುದು, ಪೊಲೀಸ್ ಅಧಿಕಾರಿಗಳ ಮೇಲೆ ಮತ್ತು ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ಮಾಡುವುದು ಇಂತಹ ಕೃತ್ಯಗಳನ್ನು ಮಾಡತೊಡಗಿದರು. 1980 ರಿಂದ 2004ರವರೆಗೂ ಭಾರತ ಸರ್ಕಾರ ಮಣಿಪುರವನ್ನು ಪ್ರಕ್ಷÄಬ್ದ ಪ್ರದೇಶ ಎಂದು ಉಲ್ಲೇಖಿಸಿತ್ತು.

ಈ ಸಂದರ್ಭದಲ್ಲಿ ‘ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆ’ಯನ್ನು ಜಾರಿಗೆ ತರಲಾಯಿತು. ಈ ಕಾಯಿದೆಯ ಪ್ರಕಾರ ಖಾಸಗಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕೆಟ್ಟವರ್ತನೆಗಳನ್ನು ಮಾಡುತ್ತಿದ್ದರೆ, ಯಾವುದೇ ವಾರಂಟ್‌ಗಳಿಲ್ಲದೆ ಬಂಧಿಸಬಹುದಾಗಿತ್ತು. ಕಾನೂನುಗಳನ್ನು ಉಲ್ಲಂಘಿಸುವ, ಶಸ್ತ್ರಾಸ್ತ್ರಗಳನ್ನು ಹೊಂದಿರುವವರನ್ನು ಅಥವಾ ದೊಡ್ಡ ದೊಡ್ಡ ಗುಂಪುಗಳಲ್ಲಿ ಸೇರಿದ್ದವರನ್ನು ಗುಂಡಿಕ್ಕಿ ಕೊಲ್ಲುವ ಅವಕಾಶವನ್ನು ಮಿಲಿಟರಿಗೆ ಕೊಡಲಾಗಿತ್ತು. ಮಿಲಿಟರಿಯ ಪರವಾಗಿರುವ ಈ ಕಾನೂನು ಅನಿಯಂತ್ರಿತ ಹತ್ಯೆಗಳು, ಚಿತ್ರಹಿಂಸೆ, ಕ್ರೂರ ಅಮಾನವೀಯತೆ, ಅಪಹರಣದಂತಹ ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಯಿತು.

ಈ ಮಾನವ ವಿರೋದಿ ಮಿಲಿಟರಿ ಕಾನೂನಿನ ವಿರುದ್ಧ ಹಲವಾರು ಪ್ರತಿಭಟನೆಗಳು, ಹೋರಾಟಗಳು ಜರುಗಿದವು. ಇರೋಮ್ ಶರ್ಮಿಳಾ ಚಾನು ಎಂಬ ದಿಟ್ಟ ಮಹಿಳೆ ದೀರ್ಘಾವಧಿಯ ಉಪವಾಸ ಸತ್ಯಾಗ್ರಹವನ್ನು ಮಾಡಿದ್ದಳು. ಆದರೂ 2004ರಲ್ಲಿ ಸ್ಥಳೀಯ ಮಹಿಳೆಯರ ಮೇಲೆ ಹಿಂಸಾತ್ಮಕ ದಾಳಿಯನ್ನು ನಡೆಸಲಾಯಿತು. ಇದಕ್ಕೆ ಪ್ರತಿರೋಧವಾಗಿ ಪ್ರತಿಭಟನೆಗಳು ತೀವ್ರಮಟ್ಟಕ್ಕೆ ತಲುಪಿದಾಗ ಸರ್ಕಾರವು ಮಣಿಪುರದಲ್ಲಿದ್ದ ಗೊಂದಲದ ಸ್ಥಿತಿಯನ್ನು ತೆಗೆದುಹಾಕಿತು.

ಮಣಿಪುರವು ನೀಲಿ ಪರ್ವತಗಳಿಂದ ಸುತ್ತುವರೆದಿರುವ ನಾಡಾಗಿದೆ. ಈ ಪರ್ವತ ಶ್ರೇಣಿಗಳು ತಣ್ಣನೆಯ ಗಾಳಿಯನ್ನು ಮಣಿಪುರಿಗಳಿಗೆ ತಲುಪದಂತೆ ತಡೆಯುತ್ತವೆ. ಆದರೆ ಮಣಿಪುರಿಗಳಲ್ಲಿಯೇ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಅವುಗಳಿಗೆ ಸಾಧ್ಯವೇ!? ಅವುಗಳು ಚಂಡಮಾರುತದ ಬಿರುಗಾಳಿಗಳನ್ನು ತಡೆಯಬಹುದು, ಆದರೆ ಅವರಲ್ಲಿರುವ ಮೌಢ್ಯವನ್ನು ತೊಡೆದುಹಾಕಲು ಸಾಧ್ಯವೇ?!
ಮಣಿಪುರ ರಾಜ್ಯವು ಉತ್ತರಕ್ಕೆ ನಾಗಾಲ್ಯಾಂಡ್, ದಕ್ಷಿಣಕ್ಕೆ ಮಿಜೋರಾಂ, ಪಶ್ಚಿಮಕ್ಕೆ ಅಸ್ಸಾಂ ಮತ್ತು ಪೂರ್ವಕ್ಕೆ ಮಯನ್ಮಾರ್ ದೇಶದ ಗಡಿಯನ್ನು ಹೊಂದಿದೆ.

ಮಣಿಪುರದಲ್ಲಿ ಮಳೆಗೆ, ನೀರಿಗೆ ಕೊರತೆಯಿಲ್ಲ. ಇದರ ಪಶ್ಚಿಮಕ್ಕೆ ಬರಾಕ್ ನದಿಯ ಜಲಾನಯನ ಪ್ರದೇಶ, ಪೂರ್ವದಲ್ಲಿ ಯು ನದಿಯ ಜಲಾನಯನ ಪ್ರದೇಶ, ಉತ್ತರದಲ್ಲಿ ಲಾನ್ಯೆ ನದಿಯ ಜಲಾನಯನ ಪ್ರದೇಶ, ಮಧ್ಯದಲ್ಲಿ ಮಣಿಪುರ ನದಿಯ ಜಲಾನಯನ ಪ್ರದೇಶವನ್ನು ಹೊಂದಿ ಸಮೃದ್ಧವಾಗಿರುವಂತೆ, ಅಲ್ಲಿನ ಮಹಿಳೆಯರು ಧಾರಾಕಾರವಾಗಿ ಕಣ್ಣೀರನ್ನು ಸುರಿಸುತ್ತಿದ್ದಾರೆ. ಇಲ್ಲಿನ ಮಹಿಳೆಯರ ಕಣ್ಣೀರಿಗೆ ಮೊದಲನ್ನು ಗುರುತಿಸುವುದಕ್ಕೆ, ಕೊನೆಯನ್ನು ಗ್ರಹಿಸುವುದಕ್ಕೆ ಸಾಧ್ಯವಾಗುತ್ತಿಲ್ಲ.

ಮಣಿಪುರದ ಅತಿದೊಡ್ಡ ನದಿ ಬರಾಕ್. ಇದು ಇರಾಂಗ್, ಮಕು ಮತ್ತು ತುವೈ ಉಪನದಿಗಳನ್ನು ಹೊಂದಿ ಅಸ್ಸಾಂ ರಾಜ್ಯವನ್ನು ಪ್ರವೇಶಿಸುತ್ತದೆ. ಮಣಿಪುರ ನದಿಯ ಜಲಾನಯನ ಪ್ರದೇಶವು ಮಣಿಪುರ, ಇಂಫಾಲ್, ಇರಿಲ್, ನಂಬುಲ್, ಸೆಕ್ಮೆಂ, ಚಕ್ಪಿ, ತೌಬಲ್ ಮತ್ತು ಖುಗಾ ಎಂಬಂತಹ ಎಂಟು ನದಿಗಳನ್ನು ಹೊಂದಿದೆ. ಈ ಎಲ್ಲಾ ನದಿಗಳು ಸುತ್ತಮುತ್ತಲಿನ ಬೆಟ್ಟಗಳಿಂದಲೇ ಹುಟ್ಟಿಕೊಂಡಿವೆ. ಈ ನದಿಗಳ ಒಳಹರಿವಿನ ಮರ್ಮ ನಮ್ಮ ರಾಜಕಾರಣಿಗಳ ಮರ್ಮದಂತೆ ಯಾರಿಗೂ ತಿಳಿಯದಂತಹ ಕಗ್ಗಂಟಾಗಿದೆ. ನದಿಯು ತಣ್ಣಗಿದ್ದು, ಒಂದೇ ಭಾರಿ ಬೋರ್ಗರೆದು ತಣ್ಣಗಾಗುವಂತೆ ನಮ್ಮ ಪ್ರಧಾನಮಂತ್ರಿಗಳು ಮೂರು ತಿಂಗಳ ಕಾಲ ದಿವ್ಯ ಮೌನವಾಗಿದ್ದು, ಜನರ ನಿತ್ಯ ಜೀವನವು ಅಲ್ಲೋಲ-ಕಲ್ಲೋಲ ಆದಮೇಲೆ ತಣ್ಣಗೆ ಮಾತನಾಡಿದ್ದಾರೆ.

ಆದರೆ ಅಲ್ಲಿಗೆ ಹೋಗುವ ಧೈರ್ಯವನ್ನು ಮಾಡಿಲ್ಲ. ಚುನಾವಣೆ ಇದ್ದರೆ ಹತ್ತು-ಹದಿನೈದು ಬಾರಿ ರೋಡ್-ಶೋ ಮಾಡುವ ಇವರು ಕಷ್ಟದ ಕಾಲದಲ್ಲಿ ಆ ಕಡೆ ತಿರುಗಿಯು ನೋಡದೇ ಇರುವುದು ಭಾರತೀಯರು ಪಶ್ಚಾತ್ತಾಪಪಡುವಂತೆ ಮಾಡಿದೆ.
ಮಣಿಪುರವನ್ನು ಭೌತಿಕ ಲಕ್ಷಣಗಳಲ್ಲಿ ವಿಭಿನ್ನವಾಗಿರುವ ಎರಡು ವಿಭಿನ್ನ ಭೌತಿಕ ಪ್ರದೇಶಗಳಾಗಿ ನಿರೂಪಿಸಬಹುದು. ಒಂದು ಒರಟಾದ ಬೆಟ್ಟಗಳು, ಕಿರಿದಾದ ಕಣಿವೆಗಳ ಹೊರ ಪ್ರದೇಶ ಮತ್ತೊಂದು ಸಮತಟ್ಟಾದ ಬಯಲಿನ ಒಳ ಪ್ರದೇಶ. ಇಲ್ಲಿನ ಕಣಿವೆ ಪ್ರದೇಶವು ಸಮತಟ್ಟಾದ ಮೇಲ್ಮೈ ಮೇಲೆ ಏರುತ್ತಿರುವ ಬೆಟ್ಟಗಳು ಮತ್ತು ದಿಬ್ಬಗಳಿಂದ ಕೂಡಿದೆ.

ಇಲ್ಲಿನ ಲೋಕ್ಟಾಕ್ ಸರೋವರವು ಕೇಂದ್ರ ಬಯಲಿನಿಂದ ನಾಗಾಲ್ಯಾಂಡ್‌ನ ಗಡಿಯವರೆಗೂ ತನ್ನ ವಿಸ್ತಾರವನ್ನು ಹರಡಿಕೊಂಡಿದೆ. ಇಲ್ಲಿನ ಮಣ್ಣಿನ ಹೊದಿಕೆಗೂ ಗಂಡು-ಹೆಣ್ಣಿನ ಸಂಬಂಧಕ್ಕೂ ನಿಕಟವಾದ ಹೋಲಿಕೆ ಇರುವಂತೆ ಕಂಡುಬರುತ್ತದೆ. ಬೆಟ್ಟದ ಪ್ರದೇಶದಲ್ಲಿ ಕೆಂಪು ಫೆರುಜಿನಸ್ ಮಣ್ಣು ಮತ್ತು ಕಣಿವೆಯಲ್ಲಿ ಮೆಕ್ಕಲು ಮಣ್ಣು ಇದೆ. ಕಣಿವೆಯ ಮಣ್ಣು ಇಲ್ಲಿನ ಗಂಡಿನ ರೀತಿಯಲ್ಲಿ ಕಠಿಣವಾಗಿದ್ದರೆ, ಕಡಿದಾದ ಇಳಿಜಾರುಗಳಲ್ಲಿರುವ ಮಣ್ಣು ಹೆಣ್ಣಿನಂತೆ ಹೆಚ್ಚಿನ ಸವೆತಕ್ಕೆ ಒಳಗಾಗಿದೆ, ಒಳಗಾಗುತ್ತಿದೆ. ಇದರ ಪರಿಣಾಮವಾಗಿ ಬಂಜರು ಬಂಡೆಗಳ ಇಳಿಜಾರುಗಳು ಸೃಷ್ಟಿಯಾಗುವಂತೆ ಅಲ್ಲಿನ ಪುರುಷರ ಮನಸ್ಸುಗಳು ಬಂಡೆಯಂತೆ ಆಗುತ್ತಿರುವುದು ಖೇದಕರವಾದ ಸಂಗತಿಯಾಗಿದೆ.

ಬೆಟ್ಟದ ತಪ್ಪಲಿನಲ್ಲಿ ರತ್ನಗಂಬಳಿಯನ್ನು ಹಾಸಿಹೊದಿಸಿರುವಂತೆ ಕಾಣುವ ಫ್ಲೋರಾ ಹೂವುಗಳು ಅಲ್ಲಿನ ಬುಡಕಟ್ಟು ಮಹಿಳೆಯರ ಸೌಂದರ್ಯವನ್ನು ಬಿತ್ತರಿಸಿದರೆ, ಬೆಟ್ಟಗಳು ಪುರುಷಾಂಕಾರದಂತೆ ಕಾಣುತ್ತವೆ. ಇಲ್ಲಿ ಏನಿಲ್ಲ ಹೇಳಿ, ನೈಸರ್ಗಿಕವಾದ ಸಸ್ಯವರ್ಗವಿದೆ. ನಾಲ್ಕು ರೀತಿಯ ವಿಶಾಲವಾಗಿ ಹರಡಿರುವ ಉಷ್ಣವಲಯದ ಅರೆ-ನಿತ್ಯಹರಿದ್ವರ್ಣ, ಒಣ ಸಮಶೀತೋಷ್ಣ ಅರಣ್ಯ, ಉಪ-ಉಷ್ಣವಲಯದ ಪೈನ್ ಕಾಡುಗಳು ಮತ್ತು ಉಷ್ಣವಲಯದ ತೇವಾಂಶವುಳ್ಳ ಅರಣ್ಯಗಳಿವೆ. ತೇಗ, ಪೈನ್, ಓಕ್, ಯುನಿಂಗ್ದೌ, ಲಿಹಾವೊ, ಬಿದಿರಿನ ಮರಗಳಿವೆ. ತಮ್ಮ ಕಷ್ಟಗಳ ನಡುವೆಯೂ ರಬ್ಬರ್, ಟೀ, ಕಾಫಿ, ಕಿತ್ತಳೆ, ಏಲಕ್ಕಿ ಬೆಳೆಯುತ್ತಾರೆ. ಆದರೆ ಅವರು ಹೆಚ್ಚು ಬೆಳೆಯುವ ಮತ್ತು ಇಷ್ಟಪಡುವ ಅಕ್ಕಿಯಂತೆ ಅಲ್ಲಿನ ಪುರುಷರ ಮನಸ್ಸುಗಳು ಬೇಗನೇ ಹಾಳಾಗುತ್ತಿರುವುದು ಜಾತಿ, ಧರ್ಮಗಳೆಂಬ ಕೀಟಗಳಿಂದ ಎಂಬುದನ್ನು ಅವರು ತಿಳಿಯದಿರುವುದು ದುರದೃಷ್ಟಕರ.

ಮಣಿಪುರ ಮತ್ತು ನಾಗಾಲ್ಯಾಂಡ್‌ಗಳ ಗಡಿಗಳ ನಡುವೆ ಇರುವ ಝುಕೊ ಎಂಬ ಕಣಿವೆಯು ಸಮಶೀತೋಷ್ಣ ಹವಾಮಾನವನ್ನು ಹೊಂದಿರುವಂತೆ, ಅಲ್ಲಿನ ಜನರಿಗೆ ಸಮಚಿತ್ತತೆಯನ್ನು ನೀಡಿದ್ದರೆ ಚೆನ್ನಾಗಿರುತ್ತಿತ್ತು. ಭಾರತದ ಈಶಾನ್ಯ ಮೂಲೆಯು ಸಾಮಾನ್ಯವಾಗಿ ಸೌಹಾರ್ದಯುತವಾದ ಹವಾಮಾನವನ್ನು ಹೊಂದಿದೆ. ಆದರೆ ಅಲ್ಲಿನ ಜನರು ಸೌಹಾರ್ದಯುತವಾದ ಮನೋಭಾವನೆಯನ್ನು ಹೊಂದಿಲ್ಲ. ಅಲ್ಲಿನ ವಾತಾವರಣದಂತೆ ಚಳಿಗಾಲದಲ್ಲಿ ಚಳಿ ಹೆಚ್ಚಾಗಿರುವಂತೆ, ಬೇಸಿಗೆಯಲ್ಲಿ ಬಿಸಿಲು ಗರಿಷ್ಠ ಮಟ್ಟಕ್ಕೆ ಹೋಗುವಂತೆ ಅಲ್ಲಿನ ಜನರು ಆವೇಶಕ್ಕೊಳಗಾಗುತ್ತಾರೆ.
ಇಂಫಾಲದ ಮೈತೇಯಿ ಜನರು ವಾರ್ಷಿಕ ಸರಾಸರಿ 933 ಮಿಲಿಮೀಟರ್ ಮಳೆಯನ್ನು ಪಡೆಯುತ್ತಾರೆ. ಆದರೂ ಕೂಡ ತಮ್ಮದೇ ನೆಲದಲ್ಲಿರುವ ಕುಕಿ ಜನಾಂಗದ ಮಹಿಳೆಯರು ಕಣ್ಣೀರು ಸುರಿಸುವಂತೆ ನಡೆದುಕೊಳ್ಳುತ್ತಾರೆ.

ನೈರುತ್ಯ ಮಾನ್ಸೂನ್ ಮಾರುತಗಳು ಬಂಗಾಳಕೊಲ್ಲಿಯಿAದ ತೇವಾಂಶವನ್ನು ಎತ್ತಿಕೊಂಡು ಪೂರ್ವ ಹಿಮಾಲಯ ಶ್ರೇಣಿಗಳ ಕಡೆಗೆ ಹೋಗುವಾಗ ಈ ಪ್ರದೇಶದಲ್ಲಿ ಮಳೆಯಾಗುವಂತೆ ಪ್ರಕೃತಿಯೇ ನೋಡಿಕೊಂಡರೂ ಮಹಿಳೆಯರ ಕಣ್ಣೀರು ಮಾತ್ರ ಧಾರಾಕಾರವಾಗಿ ಹರಿಯುವಂತೆ ತಮ್ಮ ಸ್ವಾರ್ಥಕ್ಕಾಗಿ ರಾಜಕಾರಣಿಗಳು ನೋಡಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಮಣಿಪುರದಲ್ಲಿ ಹವಾಮಾನದಲ್ಲಿ ಬದಲಾವಣೆ ಹೆಚ್ಚಾಗುತ್ತಿದೆ. ಉದಾಹರಣೆಗೆ ಮಳೆ ಮತ್ತು ತಾಪಮಾನದಲ್ಲಿ ತೀವ್ರ ಬದಲಾವಣೆಗಳು ಹೆಚ್ಚಾಗುತ್ತಿವೆ. ಆದರೆ ಅಲ್ಲಿನ ಜನಾಂಗಗಳ ನಡುವಿನ ಬಾಂಧವ್ಯದ ಬದ್ಧತೆಗಳು ಏರುಪೇರಾಗುತ್ತಿರುವುದು ಸಾಕಷ್ಟು ಹಿಂದಿನಿAದಲೇ ನಡೆಯುತ್ತಿರುವುದು ಮನುಷ್ಯ ಸಂಬಂಧಗಳ ನಡುವೆ ಬಿರುಕು ಮೂಡಿರುವುದರ ದ್ಯೋತಕವಾಗಿದೆ. ಕಣಿವೆ ಅಥವಾ ಬಯಲು ಪ್ರದೇಶಗಳಲ್ಲಿ ಮೈತೇಯಿ ಮಾತನಾಡುವ ಅಂದರೆ ಮಣಿಪುರಿ ಭಾಷಿಕರು ನೆಲೆಸಿದ್ದಾರೆ. ಬೆಟ್ಟಗಳಲ್ಲಿ ನಾಗಾಗಳು, ಕುಕಿಗಳು ಮೊದಲಾದ ಸಣ್ಣ ಬುಡಕಟ್ಟು ಜನರು ವಾಸಿಸುತ್ತಿದ್ದಾರೆ. ಇವರು ಬೆಟ್ಟಗಳ ಮೇಲ್ಮೈ ಮಣ್ಣಿನಂತೆ ಮೈತೇಯಿ ಜನರ ಹಾವಳಿಗೆ ಕೊಚ್ಚಿ ಹೋಗುತ್ತಿದ್ದಾರೆ. ಅಲ್ಲಿ ಮೈತೇಯಿ ಭಾಷೆಯು ಮಣಿಪುರಿ ಭಾಷೆಗೆ ಸಮಾನಾರ್ಥಕವಾಗಿ ಬಳಕೆಯಾಗುತ್ತಿರುವುದರಿಂದ ಇಲ್ಲಿನ ಬಹುಪಾಲು ಜನಸಂಖ್ಯೆ ಮೈತೇಯಿಯರೇ ಎಂದು ಕರೆಸಿಕೊಂಡಿದ್ದಾರೆ.

ಇವರು ಮಣಿಪುರದ ಮುಖ್ಯ ಜನಾಂಗ ಎಂಬುದೇನೋ ಸರಿ. ಆದರೆ ನಾಗಾ ಮತ್ತು ಕುಕಿ ಬುಡಕಟ್ಟು ಜನಾಂಗಗಳನ್ನು ಹಲವಾರು ಬುಡಕಟ್ಟು ಜನಾಂಗಗಳಾಗಿ ವಿಂಗಡಿಸಲಾಗಿದೆ. ಇವರೆಲ್ಲರೂ ಒಗ್ಗಟ್ಟಾಗಿದ್ದರೆ ನಮ್ಮ ಬೇಳೆ ಬೇಯ್ಯುವುದಿಲ್ಲ ಎಂಬ ಸಾಂಸ್ಕೃತಿಕ ರಾಜಕಾರಣವು ವ್ಯವಸ್ಥಿತವಾಗಿ ಬಹಳ ಹಿಂದಿನಿAದಲೇ ಇವರನ್ನು ಹೊಡೆದು ಹೊಡೆದು ಹಾಳುತ್ತಿದೆ.
ಮಣಿಪುರದಲ್ಲಿ ಮೇ 4ರಂದು ಜರುಗಿದ ಇಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆಯು ಜುಲೈ 20ರಂದು ಹೊರ ಜಗತ್ತಿಗೆ ತಿಳಿಯಿತು. ಈ ಘಟನೆಯು ಪ್ರಪಂಚದ ಜನರನ್ನು ತಲ್ಲಣಗೊಳಿಸಿತು.

ಇಡೀ ಜಗತ್ತೇ ಈ ಕೃತ್ಯವನ್ನು ವಿರೋಧಿಸಿದರೂ ಕೂಡ, ಒಟ್ಟು ದೇಶವನ್ನೇ ತನ್ನ ಕುಟುಂಬ ಎಂದು ಕರೆದುಕೊಳ್ಳುವ ನಮ್ಮ ಪ್ರಧಾನಿಗಳು ಬೆಂಕಿ ಹೊತ್ತಿಕೊಂಡ ಮೂರು ತಿಂಗಳು ದಿವ್ಯ ಮೌನದಿಂದ ಇದ್ದರು ಎಂಬುದನ್ನು ಜಗತ್ತು ಮರೆಯುತ್ತದೆಯೇ? 140 ಕೋಟಿ ಜನರು ನನ್ನ ಕುಟುಂಬಸ್ಥರೇ ಎಂದು ಹೇಳಿಕೊಳ್ಳುವ ಪ್ರಧಾನಿಗಳು ಅದರಲ್ಲಿ ಮಹಿಳೆಯರೂ ಇದ್ದಾರೆ ಎಂಬುದನ್ನು ಮರೆತಿದ್ದಾರೆಯೇ!? ಒಟ್ಟಾರೆ ನಮ್ಮ ಪ್ರಧಾನಿಗಳ ಮೌನ, ಮೈತೇಯಿ ಮತಾಂಧರ ಆರ್ಭಟ ಕುಕಿ ಜನಾಂಗದ ಮಹಿಳೆಯರ ಬದುಕನ್ನು ಮೂರಾಬಟ್ಟೆ ಮಾಡಿರುವುದಂತೂ ಖಚಿತ.

(ಡಾ. ಸಿದ್ದಯ್ಯ ರೆಡ್ಡಿಹಳ್ಳಿ, 9449899520)

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ1 day ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ5 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ1 week ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending