Connect with us

ದಿನದ ಸುದ್ದಿ

ಶ್ವಾನಗಳ ಕೌಶಲ್ಯದಿಂದ ಕೋವಿಡ್-19 ರೋಗಿಯ ಪತ್ತೆ : ನಡೆಯುತ್ತಿದೆ ಸಂಶೋಧನೆ

Published

on

  • ಡಾ. ಕಮಲೇಶ್ ಕುಮಾರ್ ಕೆ ಎಸ್, ಪಶುವೈದ್ಯಾಧಿಕಾರಿಗಳು, ಶಿವಮೊಗ್ಗ

ಮ್ಮ ಸಂಚರಣೆಗೆ ನಾವು ದೃಷ್ಟಿಯ ಮೇಲೆ ಹೇಗೆ ಅವಲಂಬಿತರಾಗಿರುತ್ತೇವೆಯೋ ಹಾಗೆಯೇ ಶ್ವಾನಗಳು ದೃಷ್ಟಿಯ ಜೊತೆಗೆ ಮುಖ್ಯವಾಗಿ ಅವುಗಳ ಮೂಗಿನ ಗ್ರಾಹಕಗಳ (receptors) ಮೇಲೆ ಹೆಚ್ಚು ಅವಲಂಬಿತವಾಗಿರುತ್ತವೆ. ಪ್ರಸ್ತುತ ಪ್ರಪಂಚದಾದ್ಯಂತ ಇರುವ ಸಾಕು ನಾಯಿಗಳು ತೋಳದಿಂದ ಉಗಮಗೊಂಡಿವೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.

ಕಾಡು ಪ್ರಾಣಿಗಳಾದ ತೋಳಗಳು ಸಾಮಾನ್ಯವಾಗಿ ತಮ್ಮ ನೈಸರ್ಗಿಕ ವಾಸನೆ ಗ್ರಹಿಕೆ (natural scent detection) ಕೌಶಲ್ಯದಿಂದ ಇನ್ನೊಂದು ಪ್ರಾಣಿಯನ್ನು, ತಮ್ಮ ಪ್ರದೇಶವನ್ನು ಅಥವ ಬೇಟೆಯನ್ನು ಹುಡುಕುತ್ತ ಜೀವನ ಸಾಗಿಸುತ್ತವೆ. ಇದೇ ಸಾಮರ್ಥ್ಯವು ಶ್ವಾನಗಳಿಗು ತಳೀಯವಾಗಿ (genetically) ಬಂದಿದೆ ಹಾಗೂ ನಮ್ಮ ಹಿರಿಯರು ಇದನ್ನೇ ಬಳಸಿಕೊಂಡು ತಮ್ಮ ಸಂರಕ್ಷಣೆ, ಪ್ರಾಣಿ ಬೇಟೆ ಮತ್ತು ಕುರಿಹಿಂಡು ಕಾಯುವ ಕಾವಲಿಗಾಗಿ ಬಳಸಿದ್ದಾರೆ.

ಸಾಮಾನ್ಯವಾಗಿ ಸಾಕುಪ್ರಾಣಿಯನ್ನಾಗಿ ಸಾಕುವ ಶ್ವಾನಗಳು ಬುದ್ಧಿವಂತಿಕೆ, ನೆನಪಿನ ಶಕ್ತಿ, ವಿಧೇಯತೆ, ಆಟವಾಡುವ, ಗಮನಿಸುವ ಹಾಗೂ ಪ್ರೇರಣೆ ನೀಡುವ ನೈಪುಣ್ಯತೆಯನ್ನು ಹೊಂದಿರುವುದು ನಮ್ಮೆಲ್ಲರಿಗು ತಿಳಿದಿರುವ ಸಂಗತಿ. ಇದೆಲ್ಲದಕ್ಕೂ ಮಿಗಿಲಾಗಿ ಶ್ವಾನಗಳಿಗೆ ವಾಸನೆ ಗ್ರಹಿಸುವ ಶಕ್ತಿ ಅತ್ಯಧಿಕವಾಗಿ ಇರುತ್ತದೆ. ಅವು ಮಾನವನಿಗಿಂತ ಸುಮಾರು 10,000 ದಿಂದ 1,00,000 ಪಟ್ಟು ಹೆಚ್ಚು ವಾಸನೆಯನ್ನು ಗ್ರಹಿಸುವ ಶಕ್ತಿ ಹೊಂದಿರುತ್ತವೆ ಎಂದು ವಿಜ್ಞಾನಿಗಳು ನಿರೂಪಿಸಿದ್ದಾರೆ.

ಅದರಲ್ಲೂ ಬೇಟೆಯಾಡುವ ಜಾತಿಗೆ ಸೇರಿದ ಶ್ವಾನಗಳು ಹೆಚ್ಚು ವಾಸನೆಯನ್ನು ಗ್ರಹಿಸುತ್ತವೆ. ಮನುಷ್ಯರಿಗೆ ಹೋಲಿಸಿದರೆ, ನಮಲ್ಲಿ 6 ಮಿಲಿಯನ್ ನಷ್ಟು ಇರುವ ವಾಸನೆ ಕಂಡು ಹಿಡಿಯುವ ಗ್ರಾಹಕಗಳು ಶ್ವಾನಗಳಲ್ಲಿ 300 ಮಿಲಿಯನ್ ನಷ್ಟು ಇರುತ್ತವೆ. ಅವುಗಳ ಮೂಗಿನ ಹಾಗು ಮೆದುಳಿನ (hemispheric specific brain) ರಚನೆಯು ಬಹಳಷ್ಟು ವಿಶೇಷ ಹಾಗು ವೈವಿಧ್ಯವಾಗಿರುತ್ತದೆ.

ಪ್ರಪಂಚದಾದ್ಯಂತ ಅತ್ಯುತ್ತಮವಾದ ವಾಸನೆ ಗ್ರಹಿಕೆ ಕೌಶಲ್ಯ ಹೊಂದಿರುವ ಹತ್ತು ತಳಿಯ ಶ್ವಾನಗಳು ಹೀಗಿವೆ.

  1. ಬ್ಲಡ್ ಹೌನ್ಡ್ (Blood hound)
  2. ಬಾಸೆಟ್ ಹೌನ್ಡ್ (Basset hound)
  3. ಬೀಗಲ್ (Beagle)
  4. ಜರ್ಮನ್ ಶಫರ್ಡ್ (German Shephered)
  5. ಲ್ಯಾಬ್ರೆಡರ್ ರಿಟ್ರೆವರ್ (Labrador Retriever
  6. ಬೆಲ್ಜಿಯನ್ ಮಲಿನೋಯ್ಸ್ (Belgian Malinois)
  7. ಬ್ಲ್ಯೂಟಿಕ್ ಕೂನ್ ಹೌನ್ಡ್ (Blue tick Coonhound)
  8. ಬ್ಲಾಕ್ ಅಂಡ್ ಟಾನ್ ಕೂನ್ ಹೌನ್ಡ್ (Black & tan coonhound)
  9. ಗೋಲ್ಡನ್ ರಿಟ್ರೆವರ್ (Golden Retriever)
  10. ಡಾಶ್ ಹೌನ್ಡ್ (Dachshund)

ಈ ಬೇಟೆ ತಳಿಗಳೆಲ್ಲವು ನುರಿತ ತರಬೇತುದಾರರಿಂದ ತರಬೇತಿ ಪಡೆದ ನಂತರ ಸೈನ್ಯ, ಪೊಲೀಸ್ ಇಲಾಖೆ ಹಾಗು ಬಾಂಬ್ ನಿಷ್ಕ್ರಿಯ ದಳ ಹಾಗೂ ವಿವಿಧ ಇತ್ಯಾದಿ ಕ್ಷೇತ್ರಗಳಲ್ಲಿ ತಮ್ಮ ಇರುವಿಕೆಯನ್ನು ಸಾವಿರಾರು ಉದಾಹರಣೆಗಳಿಂದ ತೋರಿಸಿವೆ. ಆದರೂ ಇದಕ್ಕೆ ಮಿಗಿಲಾಗಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗ ಪತ್ತೆ ಹಚ್ಚುವಲ್ಲಿ ನೆರವು ನೀಡುವಲ್ಲಿ ಶ್ವಾನಗಳ ಪಾಲು ಅಪಾರ.

1980 ರಲ್ಲೇ ಕ್ಯಾನ್ಸರ್ ರೋಗವನ್ನು (ಶ್ವಾಶಕೋಶ ಹಾಗು ಸ್ಥನ ಕ್ಯಾನ್ಸರ್) 97% ನಷ್ಟು ನಿಖರತೆಯಿಂದ ಕಂಡುಹಿಡಿಯುವಲ್ಲಿ ಶ್ವಾನಗಳು ಯಶಸ್ವಿಯಾಗಿವೆ. ಮೆದುಳು ಮತ್ತು ನರಮಂಡಲಕ್ಕೆ ಸಂಬಂದಿಸಿದ ರೋಗವಾದ ಪಾರ್ಕಿನ್ಸನ್ (Parkinson) ರೋಗ, ಮಲೇರಿಯಾ (Malaria) ಹಾಗೂ ಇತರೆ ರೋಗಗಳನ್ನು ತಮ್ಮ ಚಾಣಾಕ್ಷತನದಿಂದ ಕಂಡುಹಿಡಿದಿವೆ. ಮುಖ್ಯವಾಗಿ ಶ್ವಾನಗಳು ಸೇವಿಸುವ ಆಹಾರ, ಹೊಟ್ಟೆ ಹಾಗೂ ಕರುಳಿನಲ್ಲಿನ ಸೂಕ್ಷ್ಮಾಣು ಜೀವಿಗಳು, ದೇಹದ ಸ್ಥಿತಿ ಹಾಗೂ ವೈದ್ಯಕೀಯ ಆರೈಕೆ ಅವುಗಳ ಈ ಕೌಶಲ್ಯದ ಮೇಲೆ ಪರಿಣಾಮ ಬೀರುತ್ತವೆ.

ಇಂಗ್ಲೆಂಡಿನಲ್ಲಿ ಈ ಕೌಶಲ್ಯಗಳುಳ್ಳ ಶ್ವಾನಗಳನ್ನು ಯಾವುದೇ ಲಕ್ಷಣಗಳಿಲ್ಲದ ಕೊರೊನ ವೈರಸ್ ಪೀಡಿತ ವ್ಯಕ್ತಿಯನ್ನು ಮೊದಲ ಹಂತದಲ್ಲಿ ಪತ್ತೆಹಚ್ಚುವಲ್ಲಿ ಬಳಸಲು ಸಂಶೋಧನೆ ನಡೆಯುತ್ತಿದೆ. ಉಸಿರಾಟ, ಉಗುಳು, ರಕ್ತ ಹಾಗೂ ಮೂತ್ರದಲ್ಲಿರುವ ಆವಿಯಾಗುವ ಸಾವಯವ ಸಂಯುಕ್ತಗಳನ್ನು (volatile organic compounds) ಬಳಸಿಕೊಂಡು ವಾಸನೆ ಮುದ್ರೆ (odour imprinting) ಮಾಡುತ್ತಿದ್ದಾರೆ. ಈ ರೀತಿ ಮುದ್ರೆಯಾದ ನಂತರ ಶ್ವಾನಗಳು ರೋಗ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಬಹುದು.

ಇನ್ಫಲೂಎಂಜಾ (Influenza) ರೋಗದಲ್ಲಿ ಉಸಿರಾಟದ ವಾಸನೆ ಇರುವ ರೀತಿಯಲ್ಲಿ ಕೊರೊನ ವೈರಸ್ ಪೀಡಿತರಿಗೂ ಇದ್ದಲ್ಲಿ ಅವರನ್ನು ಕಂಡುಹಿಡಿಯುವುದು ಸುಲಭವಾಗಬಹುದು ಎಂಬ ಅಭಿಪ್ರಾಯ ವಿಜ್ಞಾನಿಗಳದು. ಇಷ್ಟೆಲ್ಲಾ ಆದರೆ ಕೇವಲ ಆಸ್ಪತ್ರೆ ಅಲ್ಲದೆ ಸೂಕ್ಷ್ಮ ಪ್ರದೇಶಗಳಾದ ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಶ್ವಾನಗಳು ಕಾರ್ಯನಿರ್ವಹಿಸಬಹುದಾಗಿದೆ. ಇದು ಎಷ್ಟರಮಟ್ಟಿಗೆ ಉಪಯೋಗವಾಗುವುದೊ ಎಂದು ಕಾದು ನೋಡಬೇಕಿದೆ.

(ಡಾ. ಕಮಲೇಶ್ ಕುಮಾರ್ ಕೆ ಎಸ್,
ಪಶುವೈದ್ಯಾಧಿಕಾರಿಗಳು
ಪಶುಚಿಕಿತ್ಸಾಲಯ, ಮತ್ತೂರು,
ಶಿವಮೊಗ್ಗ
ಈ ಮೇಲ್ : kskamalesh93@gmail.com
ಫೋನ್ : 9164282969)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending