ಲೈಫ್ ಸ್ಟೈಲ್
[ ಬೇವಿನ ಉಪಯೋಗ] ಕಹಿ ಬೇವು ಗುಣದಲ್ಲಿ ಅಮೃತ !
ಬಹು ಉಪಯೋಗಿ ಬೇವಿನ ಗುಣ ಹಾಗೂ ಉಪಯೋಗದ ಕುರಿತು ನೀವು ಅರಿತರೆ ಅಚ್ಚರಿಪಡುತ್ತೀರಿ ! ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಪಾರಮಾರ್ಥಿಕ ವಿಷಯಗಳ ಸಧಾರಣೆಯಲ್ಲಿ ಬೇವು ಆದ್ಯ ಪಾತ್ರ ವಹಿಸುತ್ತದೆ ಎಂದರೆ ನಂಬಲೇಬೇಕು.

ಆರೋಗ್ಯ ರಕ್ಷಣೆಯಂತೆ ಪರಿಸರ ಸಂರಕ್ಷಣೆ ಇಂದು ದೊಡ್ಡ ಸವಾಲಾಗಿ ಪರಿಣಿಮಿಸಿದೆ. ಮನುಷ್ಯನ ಪರಿಸರ ವಿರೋಧಿ ಚಂತನೆ ಇದಕ್ಕೆ ಮುಖ್ಯ ಕಾರಣ. ಈಗ ಸವಾಲು ಎದುರಿಸಲು ನಮಗಿರುವ ಏಕೈಕ ಮಾರ್ಗವೆಂದರೆ ಪರಸರಿ ಸಂಪತ್ತಿನ ರಕ್ಷಣೆ ಮಾಡುವುದು. ಪರಿಸರ ಮಾಲಿನ್ಯದ ತಡೆ ಜೊತೆಗೆ ಆರೋಗ್ಯಯುವ ಬದುಕು ಕಲ್ಪಿಸುವ ವೃಕ್ಷಗಳಲ್ಲಿ ಬೇವಿಗೆ (ಬೇವು-neem) ಮೊದಲ ಹೆಸರು. [ ಬೇವಿನ ಉಪಯೋಗ] (health benefits of neem in kannada)
# ಬೇವಿನ ಉಪಯೋಗ 1). ಗುಣದಿಂದ ಬೇವು ಕಲ್ಪವೃಕ್ಷ !
ಬಹು ಉಪಯೋಗಿ ಬೇವಿನ ಗುಣ ಹಾಗೂ ಉಪಯೋಗದ ಕುರಿತು ನೀವು ಅರಿತರೆ ಅಚ್ಚರಿಪಡುತ್ತೀರಿ ! ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಪಾರಮಾರ್ಥಿಕ ವಿಷಯಗಳ ಸಧಾರಣೆಯಲ್ಲಿ ಬೇವು ಆದ್ಯ ಪಾತ್ರ ವಹಿಸುತ್ತದೆ ಎಂದರೆ ನಂಬಲೇಬೇಕು. ದೈವಿಕ ಕಾರ್ಯಗಳೇ ಆಗಲಿ, ವೈದ್ಯಕೀಯ ಕಾರ್ಯಗಳೇ ಬೇವು ಮುಂದಿರುತ್ತದೆ.
ವೇದ ಸಾಹಿತ್ಯದಲ್ಲಿ ಬಹುವಾಗಿ ಉಲ್ಲೇಕಿತವಾಗಿರುವ ಬೇವಿನ ಮರದ ಪ್ರತಿ ಭಾಗಕೂಡ ಉಪಯೋಗಕಾರಿ. ಬೇವು ಪರಿಸರವನ್ನು ನಿರ್ಮಲವಾಗಿಟ್ಟು ಶುದ್ಧ ಗಾಳಿಯನ್ನು ಕಲ್ಪಿಸುತ್ತದೆ. ಬೇವು ಕಹಿಯಾದದರೂ ಉಪಯೋಗದ ಕಾರಣದಿಂದ ಕಲ್ಪವೃಕ್ಷವೇ ಸರಿ.
# ಬೇವಿನ ಉಪಯೋಗ 2). ಹಲವು ರೋಗಗಳಿಗೆ ಮದ್ದು ಬೇವು
ಯುಗಾದಿಯಿಂದ ಆರಂಭವಾಗಿ ಚೈತ್ರ ಮಾಸವಿಡೀ ಮುಂಜಾನೆ ಬೇವಿನ ಎಲೆಗಳನ್ನು ಪ್ರತದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಇಡೀ ವರ್ಷ ರೋಗ ರುಜಿನಗಳು ಬರವುದಿಲ್ಲ ಎಂಬುದು ಹಿರಿಯರ ಮಾತು.
ಹಾನಿಕಾರಕ ಅಣುಜೀವಿಗಳಿಂದ ಹರಡುವ ಸೋಂಕುಗಳ ತಡೆಗೆ ಬೇವು ಉತ್ತಮ ಮದ್ದು. ಬೇವಿನ ಸೊಪ್ಪನಲ್ಲಿ ಮತ್ತು ಎಣ್ಣೆಯಲ್ಲಿ ಕಿಮಿನಾಶಕ ಗುಣವಿದೆ. ಎಳೆಯ ಬೇವಿನಕಡ್ಡಿಯನ್ನು ಕುಂಚದಂತೆ ಮಾಡಿ ಹಲ್ಲು ಉಜ್ಜುವುದರಿಂದ ಹಲ್ಲಿನ ಸಮಸ್ಯೆ ಬರುವುದಿಲ್ಲ.
ಕಡಿಮೆ ಮಳೆ ಬೀಲುವ ಮತ್ತು ಬಿಸಿಲಿನ ತಾಪ ಅಧಿವಾಗಿರುವ ಪ್ರದೇಶದಲ್ಲಿ ಬೇವಿನ ಮರ ಹುಸುಸಾಗಿ ಬೆಳೆಯುತ್ತವೆ. ಇಂದು ಪ್ರಕೃತಿ ವಿಶೇಷ. ಬೇವಿನ ಮರಗಳ ಮೇಲಿಂದ ಬೀಸುವಗಾಳಿಯು ಬಿಸಿಲಿನ ತಾಪಂದಿಂದ ಬಳಲಿದ ದೇಹಕ್ಕೆ ತಂಪು ನೀಡುತ್ತದೆ. ಇದು ಆರೋಗ್ಯಕರ ಕೂಡ ಹೌದು.
ಇದನ್ನು ಓದಿ: ನಿಯಮಿತ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ !
# ಬೇವಿನ ಉಪಯೋಗ 3). ಬೇವಿನಿಂದ ಮಲೇರಿಯಾ ದೂರ !
ಬೇವಿನ ಸೊಪ್ಪು, ಬೇವಿನ ಹೋವು, ಬೇವಿನ ಎಣ್ಣೆ, ಬೇವಿನ ತೊಗಟೆಯಲ್ಲಿ ಹಲವು ರೋಗ ನಿವಾರಕ ಅಂಶಗಳಿದ್ದು, ಇವುಗಳಿಂದ ಔಷಧ ತಯಾರಿಸಲಾಗುತ್ತದೆ. ಚರ್ಮ ರೋಗನಿವಾರಣೆಗೆ ಬೇವು ಸಿದ್ಧ ಔಷಧ. ಬೇವಿನ ತಾಜಾ ಸೊಪ್ಪನ್ನು ಹಿಂಡಿ ಸೇವಿಸಿದರೆ ಶಾರೀರಿಕ ದೋಷ ಕೂಡ ನಿವಾರಣೆ ಆಗುತ್ತವೆ ಎಂಬುದು ತಜ್ಞರ ಅಂಬೋಣ.
ಬೇವಿನ ಮರದ ಬುಡದಲ್ಲಿನ ತೊಗಟೆಯನ್ನು ಕೆತ್ತಿ ತೆಗೆದು ಅದರಲ್ಲಿ ಕಷಾಯ ತಯಾರಿಸಿ ಸೇವಿಸುವುದರಿಂದ ಕುಷ್ಟ ರೋಗಾದಿ ಚರ್ಮ ರೋಗಗಳು ನಿವಾರಣೆಯಾಗುವುವು. ಮಧುಮೇಹ, ನಿಶ್ಯಕ್ತಿ, ವಾಕರಿಕೆ, ಬಾಯಾರಿಕೆ, ಗಡುವಿನ ಜ್ವರ ಸೇರಿದಂತೆ ಅನೇಕ ದೋಷಗಳಿಗೆ ಬೇವು ರಾಮಬಾಣ.
ಮಲೇರಿಯಾ ಜ್ವರದಲ್ಲಿ 2 ಅಥವಾ 3 ಗ್ರಾಂ ಬೇವಿನ ಎಲೆಗಳ ಚೂರ್ಣವನ್ನಾಗಲೀ, ತೊಗಟೆಯ ಚೂರ್ಣವನ್ನಾಗಲಿ ಬಿಸಿ ನೀರಿನೊಂದಿಗೆ ಸೇವಿಸುವುದರಿಂದ ಆರೋಗ್ಯ ವೃಧ್ಧಿಸುತ್ತದೆ.
ಸೀಮೆಎಣ್ಣೆಯೊಂದಿಗೆ ಬೇವಿನ ಎಣ್ಣೆ ಬೆರೆಸಿ ದೀಪ ಉರಿಸುವುದರಿಂದ ಸೊಳ್ಳೆಗಳ ಕಾಟ ತಪ್ಪಿಸ ಬಹುವುದು. ದ್ವಿಶತಾಂಶ ಬೇವಿನ ಎಣ್ಣೆಯೊಂದಿಗೆ ಕೊಬ್ಬರಿ ಎಣ್ಣೆಯನ್ನು ಮಿಶ್ರಣ ಮಾಡಿ ದೇಹಕ್ಕೆ ಲೇಪಿಸಿದರೆ ಸೊಳ್ಳೆಗಳು ಹತ್ತಿರಕ್ಕೆ ಬರುವುದಿಲ್ಲ.
ಬೇವಿನ ಎಲೆಗಳ ರಸವನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ಆಮಾತಿಸಾರ (dysentery) ಮತ್ತು ಅತಿಸಾರ (diarrhoea) ದಿಂದ ಗುಣಮುಖವಾಗಬಹುದು. ಪ್ರತಿದಿನ ಬೆಳಗ್ಗೆ 10-12 ಬೇವಿನ ಎಲೆಗಳನ್ನು ಬಾಯಿಗೆ ಹಾಕಿಕೊಂಡು ಚನ್ನಾಗಿ ಅಗೆದು ಒಂದು ಬಟ್ಟಲು ನೀರು ಕುಡಿದರೆ ಕ್ಯಾನ್ಸರ್ ಸಂಬಂಧಿ ರೋಗಗಳು ದೂರವಾಗುತ್ತವೆ ಎಂಬುದು ಹಿರಿಯರ ಅಭಿಪ್ರಾಯ.
ಇದನ್ನು ಓದಿ: ಒಂದು ಚಿಕ್ಕ ಬೆಳ್ಳುಳ್ಳಿ ಶಕ್ತಿ ಎಂತದ್ದು ಗೊತ್ತಾ ?
# ಬೇವಿನ ಉಪಯೋಗ 4). ಕಹಿ ಬೇವು ಗುಣದಲ್ಲಿ ಅಮೃತ !
ಒಟ್ಟಾರೆ ಬೇವು ಗುಣದಲ್ಲಿ ಕಹಿ ಎನಿಸಿದರೂ ಅದರ ಉಪಯೋಗದಲ್ಲಿ ಮಾತ್ರ ಅಮೃತ. ಬೇವು ಅಂದಕೂಡಲೇ ನಾವು ಮುಖ ಸಿಂಡರಸಿಕೊಳ್ಳುತ್ತೆವೆ. ಆದರೆ ಬೇವಿನ ಉಪಯೋಗ ಅರಿತು ಅದನ್ನು ನಿಯಮಿತವಾಗಿ ಬಳಕೆ ಮಾಡಿದರೆ ಆರೋಗ್ಯಯುತ ಜೀವನ ನಡೆಸಬಹುದು ಎಂಬುದು ನಮ್ಮ ಪೂರ್ವಜರ ಸಲಹೆ.
-ಸಂಗ್ರಹ
ಆರೋಗ್ಯ, ಆಹಾರ, ಜೀವನಶೈಲಿ ಕುರಿತು suddidina.com ಗೆ ನೀವು ಕೂಡ ಲೇಖನ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ suddidina@gmail.com ಗೆ ಸಂಪರ್ಕಿಸಿ.
#ಆರೋಗ್ಯ #ಆಹಾರ #ಜೀವನಶೈಲಿ #kannadatips #kannadahealthtips #healthtips
ಲೈಫ್ ಸ್ಟೈಲ್
‘ನಾಗಾರ್ಜುನ ಆಯುರ್ವೇದ’ ಕಂಪನಿಯ ಹೊಸ ಉತ್ಪನ್ನ ಮಾರುಕಟ್ಟೆಗೆ

ಸುದ್ದಿದಿನ,ಬೆಂಗಳೂರು : ಕೇರಳ ಮೂಲದ ಪ್ರತಿಷ್ಟಿತ ‘ನಾಗಾರ್ಜುನ ಆಯುರ್ವೇದ ಕಂಪನಿ’ಯ ‘ಹರ್ಬಲ್ ಕಾನ್ಸ್’ನ್’ಟ್ರೇಟ್ ಲಿಮಿಟೆಡ್ (ಎನ್ಎಚ್ಸಿಎಲ್) ಹೊಸ ಗಿಡಮೂಲಿಕೆ ಆಧಾರಿತ ಉತ್ಪನ್ನಗಳನ್ನು ಪರಿಚಯಿಸುವುದರೊಂದಿಗೆ ಕರ್ನಾಟಕದಲ್ಲಿಯೂ ತನ್ನ ವ್ಯಾಪಾರ ವಹಿವಾಟು ಗಳನ್ನು ವಿಸ್ತರಿಸುವ ಯೋಜನೆಗಳನ್ನು ಕೈಗೊಂಡಿದೆ.
ಸಂಸ್ಥೆಯ ಉಪಾಧ್ಯಕ್ಷ ‘ಆರ್.ರಮೇಶ್ ಚಂದ್ರ’ ಮಾತನಾಡುತ್ತಾ ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಆರೋಗ್ಯವೃದ್ಧಿ ಉತ್ಪನ್ನಗಳ ಮಾರುಕಟ್ಟೆ ಗಮನಾರ್ಹ ಪ್ರಮಾಣದಲ್ಲಿ ಬೆಳೆಯುತ್ತಿದೆ, ಗಿಡಮೂಲಿಕೆ ಮತ್ತು ಆಯುರ್ವೇದ ಉತ್ಪನ್ನಗಳ ಬಗೆಗೆ ಗ್ರಾಹಕರಲ್ಲಿ ಹೆಚ್ಚು ಜಾಗೃತಿ ಇದ್ದು ಈ ಉತ್ಪನ್ನಗಳಿಗೆ ಭಾರಿ ಬೇಡಿಕೆ ಇದೆ ಹಾಗಾಗಿ ನಾವು ಮನೆಯಲ್ಲೇ ಅಭಿವೃದ್ಧಿಪಡಿಸಿದ ಹೊಸ ಉತ್ಪನ್ನಗಳನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮ ಜರುಗಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಲೈಫ್ ಸ್ಟೈಲ್
ನೀಲಿ ನಾಲಿಗೆ ರೋಗ ಮತ್ತು ಚಿಕಿತ್ಸಾ ವಿಧಾನ

ಸುದ್ದಿದಿನ ಡೆಸ್ಕ್ : ಕರ್ನಾಟಕದಲ್ಲಿ ನೀಲಿ ನಾಲಿಗೆ ರೋಗಕ್ಕೆ ಸಾವಿರಾರು ಆಡು, ಕುರಿಗಳು ಬಲಿಯಾಗುತ್ತಿದ್ದು, ವರ್ಷವೊಂದಕ್ಕೆ ಸುಮಾರು 18,600 ಆಡು, ಕುರಿಗಳು ಈ ಮಾರಣಾಂತಿಕ ಖಾಯಿಲೆಗೆ ತುತ್ತಾಗಿ ಸಾವನ್ನಪುತ್ತಿವೆ.
ಕುದುರೆನೊಣ ಮತ್ತು ಉಣ್ಣೆಹುಳ ಆಡು, ಕುರಿಗಳಿಗೆ ಕಚ್ಚುವುದರಿಂದ ನೀಲಿ ನಾಲಿಗೆ ರೋಗ ಹಬ್ಬುತ್ತದೆ. ನೀಲಿ ರೋಗದ ವೈರಾಣುವಿನಲ್ಲಿ 24 ಪ್ರಬೇಧಗಳಿದ್ದು, ನಮ್ಮ ರಾಜ್ಯದಲ್ಲಿ 6 ಪ್ರಬೇಧಗಳು ಈಗಾಗಲೇ ಪರಿಚಲನೆಯಲ್ಲಿವೆ.
ಆಡು, ಕುರಿಗಳನ್ನು ಕೊಲ್ಲುವ ಈ ನೀಲಿ ನಾಲಿಗೆ ರೋಗ 1904 ರಲ್ಲಿ ಮೊದಲು ಆಫ್ರಿಕಾದಲ್ಲಿ ಪತ್ತೆಯಾಯಿತು. ಭಾರತದಲ್ಲಿ ಇಷ್ಟೊಂದು ವ್ಯಾಪಕವಾಗಿ ಹರಡಿದ್ದು, ಕರ್ನಾಟಕದಲ್ಲಿ 15 ವರ್ಷಗಳಲ್ಲಿ ಸಾವಿರಾರು ಆಡು, ಕುರಿಗಳು ಸಾವನ್ನಪ್ಪಿವೆ.
ಸಾಮಾನ್ಯವಾಗಿ ಆಗಸ್ಟ್ನಿಂದ ಫೆಬ್ರವರಿವರೆಗೆ ವ್ಯಾಪಕವಾಗಿ ಕಂಡುಬರುವ ಈ ನೀಲಿ ನಾಲಿಗೆ ರೋಗ ಮಳೆ ನಿಂತ ಎರಡು ಮೂರು ವಾರಗಳ ನಂತರ ವ್ಯಾಪಕವಾಗಿ ಹರಡಲು ಶುರುಮಾಡುತ್ತದೆ. ಕುದುರೆನೊಣ ಮತ್ತು ಉಣ್ಣೆಹುಳ ಆಡು, ಕುರಿಗಳಿಗೆ ಕಚ್ಚುವುದರಿಂದ ನೀಲಿ ನಾಲಿಗೆ ರೋಗ ಹಬ್ಬುತ್ತದೆ. ತಗ್ಗು ಪ್ರದೇಶ, ನಿಂತ ನೀರು ಮತ್ತು ಜಾಗು ಪ್ರದೇಶಗಳು ಈ ಕುದುರೆ ನೊಣಗಳ ಆವಾಸ ಸ್ಥಾನ. ಮಳೆಗಾಲ ಮತ್ತು ಚಳಿಗಾಲಗಳಲ್ಲಿ ಇವುಗಳು ಹೆಚ್ಚಿನ ಪ್ರಮಾಣದಲ್ಲಿ ಮೊಟ್ಟೆ ಇಡುವ ಮೂಲಕ ಸಂತಾನೋತ್ಪತ್ತಿ ವೃದ್ದಿಸಿಕೊಳ್ಳುತ್ತದೆ. ಇಂಥ ಸ್ಥಳಗಳಲ್ಲಿ ಕುರಿ ಮೇಯಿಸುವುದು ನೀಲಿ ನಾಲಿಗೆ ರೋಗಕ್ಕೆ ಆಹ್ವಾನ ನೀಡಿದಂತಾಗುತ್ತದೆ.
ನೀಲಿ ರೋಗದ ಲಕ್ಷಣಗಳು
ಕುರಿ ಇಲ್ಲವೇ ಮೇಕೆಗಳಿಗೆ ಮೊದಲು ತೀವ್ರವಾದ ಜ್ವರ ಬರುವುದು. ನಂತರ ಬಾಯಿಯಲ್ಲಿ ಜೊಲ್ಲು ಸುರಿಯುವುದು ಹಾಗೂ ಮೂಗಿನಲ್ಲಿ ಹಳದಿ ಮಿಶ್ರಿತ ಗೊಣ್ಣೆ ಕಾಣಿಸಿಕೊಳ್ಳುವುದು. ಕೆಲವೊಮ್ಮೆ ನಾಲಗೆಯು ಹಳದಿ ಬಣ್ಣಕ್ಕೆ ತಿರುಗುವುದು. ಬಾಯಿ, ಮೂಗು, ಮುಖ ಮತ್ತು ತಲೆಗಳಲ್ಲಿ ಬಾವು ಕಂಡುಬರುತ್ತದೆ. ಮೂಗಿನ ಒಳಪದರಗಳೆಲ್ಲಾ ಕೆಂಪಾಗಿ ತುಟಿ, ಒಸಡು ಮತ್ತು ನಾಲಿಗೆಯು ಊದಿಕೊಂಡಿರುತ್ತದೆ. ಒಸಡಿನ ಮೇಲ್ಬಾಗದಲ್ಲಿ ಹುಣ್ಣು ಕಾಣಿಸಿಕೊಳ್ಳುವುದು ಈ ರೋಗದ ಲಕ್ಷಣವಾಗಿರುತ್ತದೆ.
ಈ ಕಾರಣಗಳಿಂದಾಗಿ ಆಡು, ಕುರಿಗಳು ಮೇವು ತಿನ್ನಲಾಗದೆ ನಿಶಕ್ತಿಗೆ ಒಳಗಾಗುತ್ತವೆ. ನಂತರದ ದಿನಗಳಲ್ಲಿ ಕುಂಟಲು ಪ್ರಾರಂಭಿಸುತ್ತವೆ. ಕಾಲಿನ ಚರ್ಮ, ಗೊರಸು ಮತ್ತು ಸಂಧುಗಳಲ್ಲಿ ನೀಲಿ ಬಣ್ಣದ ಪಟ್ಟಿ ಕಾಣಿಸುತ್ತದೆ. ಕೆಲವು ಆಡು ಕುರಿಗಳು ಭೇಧಿ ಕಾಣಿಸಿಕೊಂಡು ನಿತ್ರಾಣಗೊಂಡು ಕತ್ತನ್ನು ಪಕ್ಕಕ್ಕೆ ವಾಲಿಸುತ್ತವೆ. ಸೂಕ್ತ ಸಮಯದಲ್ಲಿ ಆರೈಕೆ, ಆಹಾರ ಮತ್ತು ಚಿಕಿತ್ಸೆ ಸಿಗದಿದ್ದರೆ ಬಳಲಿಕೆಯಿಂದಾಗಿ ಸಾವನ್ನಪ್ಪಬಹುದು.
ನೀಲಿ ರೋಗ ಕಂಡುಬಂದಾಗ ಚಿಕಿತ್ಸೆ ಮಾಡುವ ವಿಧಾನ
ವೈರಾಣುವಿನಿಂದ ಹರಡುವ ಈ ಖಾಯಿಲೆಗೆ ಚಿಕಿತ್ಸೆ ನೀಡುವ ನಿರ್ದಿಷ್ಟ ಚಿಕಿತ್ಸೆ ಇರುವುದಿಲ್ಲ. ಆದಾಗ್ಯೂ ಜ್ವರ, ನೋವು, ನಂಜು ನಿವಾರಣೆಗಾಗಿ ಚಿಕಿತ್ಸೆಯನ್ನು ನೀಡಬಹುದು. ರೋಗ ಹರಡುವ ಮುನ್ನವೇ ಲಸಿಕೆ ಹಾಕಿಸುವುದು ಅಗತ್ಯ.
ಮೂಗು ಒಸಡು ಮತ್ತು ಬಾಯಿಯನ್ನು ನಂಜು ನಿರೋಧಕ ದ್ರಾವಣ/ಅಡುಗೆ ಸೋಡಾದಿಂದ ಶುಚಿಗೊಳಿಸಬೇಕು. ಬಾಯಿಗೆ ಜೇನುತುಪ್ಪ ಸವರುವುದರಿಂದ ರೋಗ ಉಲ್ಬಣವಾಗುವುದನ್ನು ತಡೆಯಬಹುದು. ರಾಗಿ, ಜೋಳದ ಗಂಜಿ ಮತ್ತು ಹೆಸರು ಬೇಳೆ ಹೂರಣವನ್ನು ಕೊಟ್ಟು ಶಕ್ತಿಯನ್ನು ಹೆಚ್ಚಿಸುವ ಆರೈಕೆ ಮಾಡಿದರೆ ರೋಗಪೀಡಿತ ಕುರಿ/ಮೆಕೆಗಳನ್ನು ಬದುಕಿಸಿಕೊಳ್ಳಬಹುದು.
ನಿಯಂತ್ರಣ ಕ್ರಮಗಳು
ಬೆಳಿಗ್ಗೆ ಮತ್ತು ಸಂಜೆ ಕುರಿಹಟ್ಟಿ ಸುತ್ತ ಬೇವಿನ ಸೊಪ್ಪಿನ ಹೊಗೆಯನ್ನು ಹಾಕಬೇಕು. ಸುತ್ತಮುತ್ತ ಕೀಟನಾಶಕ ದ್ರಾವಣ ಸಿಂಪಡಿಸಿ ನೀರು ನಿಲ್ಲದಂತೆ ಎಚ್ಚರ ವಹಿಸಿ ಸೊಳ್ಳೆಗಳು ವೃದ್ದಿಯಾಗದಂತೆ ನೋಡಿಕೊಳ್ಳಬೇಕು. ರೋಗಗ್ರಸ್ಥ ಕುರಿಯನ್ನು ಹೊರಗೆ ಮೇಯಿಸಲು ಕರೆದೊಯ್ಯದೇ ಹಟ್ಟಿಯಲ್ಲಿಯೇ ಮೆತ್ತನೆಯ ಆಹಾರ ಕೊಡಬೇಕು. ಒಣ ಹುಲ್ಲನ್ನು ಆಹಾರವಾಗಿ ನೀಡುವುದು ಸೂಕ್ತವಲ್ಲ. ಈ ಸಂದರ್ಭದಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸಬಾರದು ಉಣ್ಣೆ ಇರುವುದರಿಂದ ಸೊಳ್ಳೆ ಕಡಿತ ತಪ್ಪಿಸಬಹುದು. ಸಾಧ್ಯವಾದರೆ ಸೊಳ್ಳೆಪರದೆ ಉಪಯೋಗಿಸಬಹುದು.
ಕುರುಡು ನೊಣಗಳು ಬೆಳಿಗ್ಗೆ ಸೂರ್ಯ ಹುಟ್ಟಿದ ನಂತರದ ಒಂದು ಗಂಟೆ ಮತ್ತೆ ಸಂಜೆ ಸೂರ್ಯ ಮುಳುಗುವ ಒಂದು ಗಂಟೆ ಮುಂಚೆ ಬಹಳ ಚುರುಕಾಗಿರುತ್ತವೆ. ಹಾಗಾಗಿ 9 ಗಂಟೆ ನಂತರ ಹೊರಗಡೆ ಮೇಯಲು ಬಿಡಬಹುದು. ಹಾಗೂ 5 ಗಂಟೆಯ ಒಳಗೆ ಹಟ್ಟಿಗೆ ತರುವುದು ಸೂಕ್ತ. ತಗ್ಗು ಮತ್ತು ಜೌಗು ಪ್ರದೇಶಗಳಿಗಿಂತ ಎತ್ತರದ ಒಣ ಭೂಮಿಯಲ್ಲಿ ಮೇಯಿಸುವುದು ಸೂಕ್ತ.
ರೋಗ ಕಂಡ ಕೂಡಲೇ ಕುರಿಗಳಿಗೆ ಪಶುವೈದ್ಯರಿಂದ ಚಿಕಿತ್ಸೆ ಕೊಡಿಸುವುದು ಹಾಗೂ ಸೂಕ್ತ ಸಲಹೆ ಪಡೆಯುವುದು ಸೂಕ್ತ. ನಾಟಿ ಔಷಧ ಅಥವಾ ಪಶುವೈದ್ಯರ ಸಲಹೆ ಇಲ್ಲದೆ ನೇರವಾಗಿ ಔಷಧಿ ಅಂಗಡಿಗಳಿಂದ ಔಷಧಿಗಳನ್ನು ಪಡೆದು ಚಿಕಿತ್ಸೆ ನೀಡುವುದು ಕುರಿ/ಮೇಕೆಗಳ ಪ್ರಾಣಕ್ಕೆ ಕುತ್ತಾಗಬಹುದು. ಮತ್ತು ರೈತರಿಗೆ ಆರ್ಥಿಕ ನಷ್ಟವುಂಟಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಲೈಫ್ ಸ್ಟೈಲ್
ಮಾವು ಬೆಳೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ

ಸುದ್ದಿದಿನ,ಶಿವಮೊಗ್ಗ : ತೋಟಗಾರಿಕೆ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿನ ಮಾವು ಬೆಳೆಗೆ ಬೂದಿ ರೋಗ, ಮತ್ತು ಜಿಗಿ ಹುಳುಗಳ ಬಾಧೆ ಕಂಡುಬರುವ ಸಾಧ್ಯತೆಯಿರುವುದರಿಂದ ಕಾಯಿ ಕಚ್ಚುವಿಕೆ ಕಡಿಮೆಯಾಗಿ ಮಿಡಿಗಾತ್ರದ ಕಾಯಿಗಳು ಉದುರುವ ಸಾಧ್ಯತೆಗಳು ಇರುತ್ತವೆ, ಆದ್ದರಿಂದ ಮುಂಜಾಗ್ರತ ಕ್ರಮವಾಗಿ ಮಾವು ಬೆಳೆ ಕೃಷಿಕರು ಈ ಕೆಳಗೆ ಸೂಚಿಸಿರುವ ಔಷಧಿಗಳನ್ನು ಸಿಂಪಡಣೆ ಮಾಡುವುದರಿಂದ ಹತೋಟಿ ಮಾಡುವಂತೆ ಸೂಚನೆ ನೀಡಿದೆ.
ಬೂದಿ ರೋಗಕ್ಕೆ ತುತ್ತಾದ ಗಿಡದ ಎಲೆಗಳು, ಹೂಗೊಂಚಲುಗಳ ಮೇಲೆ ಬೂದಿಯಂತಹ ಬೆಳವಣಿಗೆ ಕಂಡು ಬಂದು ಹೂಗಳು ಉದುರುತ್ತವೆ ಹಾಗೂ ಎಲೆಗಳು ಮುರುಟಿ ನಂತರದ ದಿನಗಳಲ್ಲಿ ಎಳೆಯ ಕಾಯಿಗಳು ಉದುರುತ್ತವೆ. ಬೂದಿ ರೋಗದ ನಿರ್ವಹಣೆಗೆ ರೈತರು ತೆಗೆದುಕೊಳ್ಳಬೇಕಾದ ಕ್ರಮಗಳು ಈ ಕೆಳಗಿನಂತಿರುತ್ತದೆ.
ರೋಗಕ್ಕೆ ತುತ್ತದಾದ ಮರದ ಭಾಗಗಳನ್ನು ತೆಗೆದು ನಾಶಪಡಿಸುವುದು, ಮರಗಳ ತಳ ಭಾಗದಲ್ಲಿ ಉದುರಿದ ಒಣಗಿದ ಎಲೆ, ಹೂ ಗೊಂಚಲುಗಳು ಹಾಗೂ ಬಟಾಣಿ ಹೀಚುಗಳನ್ನು ಆರಿಸಿ ಸುಡುವುದು. ಪ್ರತಿ 200 ಲೀಟರ್ ನೀರಿಗೆ 500 ಗ್ರಾಂ ನೀರಿನಲ್ಲಿ ಕರಗುವ ಗಂಧಕ ಅಥವಾ 200 ಗ್ರಾಂ ಕಾರ್ಬನ್ಡೈಜಿಂ ಅಥವಾ 400 ಮಿ.ಲೀ. ಹೆಕ್ಸಾಕೋನಜೋಲ್ ಅನ್ನು ಸೂಕ್ತ ಅಂಟಿನೊಂದಿಗೆ ಮಿಶ್ರಮಾಡಿ ಗೊಂಚಲುಗಳಿಗೆ ಸಿಂಪಡಿಸುವುದು. 15 ರಿಂದ 20 ದಿವಸಗಳ ಅಂತರದಲ್ಲಿ 2 ಬಾರಿ ಸಿಂಪಡಿಸುವುದು ಸೂಕ್ತ.
ಜಿಗಿ ಹುಳು ಕೀಟದ ಹಾನಿಯ ಲಕ್ಷಣಗಳು
ಜಿಗಿಹುಳು ಕೀಟಗಳು ಅಂಟು ಪದಾರ್ಥವನ್ನು ಸ್ರವಿಸುವುದರಿಂದ ಹೂ ಗೊಂಚಲಿನಲ್ಲಿ ಕಪ್ಪು ಬೂಸ್ಟ್ ಬೆಳವಣಿಗೆಕಂಡುಬರುತ್ತದೆ. ಕೀಟದ ನಿರ್ವಹಣೆಗೆ ಅಝಾಡಿರೆಕ್ಟಿನ್ 7 ಮಿ.ಲೀ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಪ್ರತಿ 200 ಲೀಟರ್ ನೀರಿಗೆ 500 ಗ್ರಾಂ ನೀರಿನಲ್ಲಿ ಕರಗುವ ಗಂಧಕ ಅಥವಾ 200 ಗ್ರಾಂ ಕಾರ್ಬನ್ಡೈಜಿಂ ಜೊತೆಗೆ ಪ್ರತಿ 200 ಲೀಟರ್ ನೀರಿಗೆ 400 ಮಿ.ಲೀ. ಮೆಲಾಥಿಯಾನ್ 50 ಇ.ಸಿ. ಅಥವಾ 100 ಮಿ.ಲೀ.ಇಮಿಡಾಕ್ಲೋಪಿಡ್ ಅನ್ನು ಸೂಕ್ತ ಅಂಟಿನೊಂದಿಗೆ ಮಿಶ್ರಮಾಡಿ ಗೊಂಚಲುಗಳಿಗೆ ಸಿಂಪಡಿಸುವಂತೆ ತೋಟಗಾರಿಕೆ ಇಲಾಖೆಯು ಮಾವು ಬೆಳೆಗಾರರಿಗೆ ಸಲಹೆ ಸೂಚನೆ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ಗಂಡನನ್ನೇ ಕಿಡ್ನಾಪ್ ಮಾಡಿಸಿದ ಖತರ್ನಾಕ್ ಪತ್ನಿ
-
ಭಾವ ಭೈರಾಗಿ5 days ago
ಕವಿತೆ | ನೀ ಎಂಥ ಮಕ್ಳಿಗೆ ಜನ್ಮ ಕೊಟ್ಟೆ ನನ್ನವ್ವ..?
-
ದಿನದ ಸುದ್ದಿ6 days ago
ವಿಡಿಯೋ | ವಿಶ್ವ ಪ್ರಸಿದ್ಧ ‘ಬುದ್ಧ ಮಲಗಿದ ದೃಶ್ಯತಾಣ’ದ ಅಭಿವೃದ್ಧಿ ಕಾರ್ಯದಲ್ಲಿ ಪ್ರವಾಸೋದ್ಯಮ ಇಲಾಖೆ ಗೋಲ್ ಮಾಲ್..!
-
ರಾಜಕೀಯ3 days ago
ಮಹಾರಾಷ್ಟ್ರದ ಹೀನಾಯ ಸೋಲಿನಲ್ಲಿ ಬಟ್ಟಬಯಲಾದ ಬಿಜೆಪಿ-ಆರೆಸ್ಸೆಸ್
-
ಲೈಫ್ ಸ್ಟೈಲ್4 days ago
ನೀಲಿ ನಾಲಿಗೆ ರೋಗ ಮತ್ತು ಚಿಕಿತ್ಸಾ ವಿಧಾನ
-
ಬಹಿರಂಗ2 days ago
ಕಾಮಾಟಿಪುರದ ದಲಿತ ಮಹಿಳೆಯರನ್ನುದ್ದೇಶಿಸಿ ಅಂಬೇಡ್ಕರ್
-
ಲೈಫ್ ಸ್ಟೈಲ್6 days ago
ಮಾವು ಬೆಳೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ
-
ಸಿನಿ ಸುದ್ದಿ5 days ago
ವಿಡಿಯೋ | ‘ಒಡೆಯ’ ನ ಖಡಕ್ ಟ್ರೈಲರ್ ರಿಲೀಸ್ : ಮಿಸ್ ಮಾಡ್ದೆ ನೋಡಿ