Connect with us

ರಾಜಕೀಯ

ಬಲಪಂಥೀಯ ದಾಳಿಯ ಕ್ರೋಡೀಕರಣಕ್ಕೆ ಎದುರಾಗಿ ವರ್ಗಪರ್ಯಾಯವನ್ನು ಆಧರಿಸಿದ ಎಡಪಂಥೀಯ ಪ್ರತಿಧಾಳಿ –ಇದೀಗ ದೇಶದಲ್ಲಿನ ಹೊಸಧ್ರುವೀಕರಣ : ಸೀತಾರಾಂಯೆಚುರಿ

Published

on

17ನೇ ಲೋಕಸಭಾ ಚುನಾವಣೆಗಳಲ್ಲಿ ಬಲಪಂಥೀಯರಿಗೆ ಒಂದು ದೊಡ್ಡ ವಿಜಯಸಿಕ್ಕಿದೆ, ಇದು ಕಳೆದ ಐದು ವರ್ಷಗಳಲ್ಲಿ ನಡೆಸಿದ ಬಲಪಂಥೀಯದಾಳಿಗಳ ಕ್ರೋಡೀಕರಣ, ಎಡಶಕ್ತಿಗಳು ದೊಡ್ಡ ಹಿನ್ನಡೆ ಅನುಭವಿಸಿವೆ, ಆದರೆ ಎಡಪಂಥೀಯರು, ಕೆಲವರು ಹೇಳುವ ಹಾಗೆ ನಿಶ್ಶಸ್ತ್ರರಾಗಿಲ್ಲ, ಅಥವ ನಿರ್ಮೂಲಗೊಂಡಿಲ್ಲ., ನೆನಪಿಟ್ಟುಕೊಳ್ಳಿ, ಬಲಪಂಥೀಯ ರಾಜಕೀಯ ದಾಳಿಯನ್ನು ಎಡಪಂಥೀಯ ರಾಜಕೀಯ ಪ್ರತಿಧಾಳಿ ಮಾತ್ರವೇ ಎದುರಿಸಬಲ್ಲದು. ಈ ಪ್ರತಿದಾಳಿ ಒಂದು ವರ್ಗ ಪರ್ಯಾಯವನ್ನು, ವರ್ಗರಾಜಕೀಯವನ್ನು ಆಧರಿಸಿದೆ. ಕೇಂದ್ರಸಮಿತಿಯಲ್ಲಿಸಿಪಿಐ(ಎಂ) ಈಗಇದನ್ನೇಮಾಡಲುನಿರ್ಧರಿಸಿದೆ” ಎಂದುಸೀತಾರಾಮ್‍ ಯೆಚುರಿ, ಸಿಪಿಐ(ಎಂ) ಪ್ರಧಾನಕಾರ್ಯದರ್ಶಿ ಹೇಳಿದ್ದಾರೆ.

ಅವರು ಜೂನ್‍ 7ರಿಂದ 9 ರವರೆಗೆ ನಡೆದ ಸಿಪಿಐ(ಎಂ)ನ ಕೇಂದ್ರ ಸಮಿತಿಯ ಚರ್ಚೆಗಳು, ನಿರ್ಧಾರಗಳ ಬಗ್ಗೆ ಪತ್ರಿಕಾ ಸಮ್ಮೇಳನವನ್ನು ಉದ್ದೇಶಿಸಿ ಮಾತಾಡುತ್ತಿದ್ದರು. ಎಡಶಕ್ತಿಗಳು ಹಿಮ್ಮೆಟ್ಟುತ್ತಿಲ್ಲ, ಪ್ರತಿದಾಳಿ ನಡೆಸುತ್ತವೆ. ಇದೀಗ ಎಡಶಕ್ತಿಗಳು ಸೆಟೆದುನಿಲ್ಲುವ ಸಮಯ, ಆಧುನಿಕ ಭಾರತದ ಮೌಲ್ಯಗಳನ್ನು ಎತ್ತಿಹಿಡಿಯಲು, ನಮ್ಮ ಸಂವಿಧಾನದ ಆಶ್ವಾಸನೆಗಳನ್ನು ರಕ್ಷಿಸಿಕೊಳ್ಳಲು ಮತ್ತು ಜನಗಳ ಪ್ರಜಾಪ್ರಭುತ್ವ ಹಕ್ಕುಗಳು ಹಾಗೂ ನಾಗರಿಕ ಸ್ವಾತಂತ್ರ್ಯಗಳನ್ನು ರಕ್ಷಿಸಿಕೊಳ್ಳಲು ಸೆಟೆದುನಿಲ್ಲುವ ಸಮಯ. ಬಲಪಂಥಬಲಗೊಂಡಾಗ, ಎಡಪಂಥವೂ ಶಕ್ತಿಶಾಲಿಯಾಗಬೇಕಾಗುತ್ತದೆ. ಇದೀಗ ದೇಶದಲ್ಲಿನ ಹೊಸಧ್ರುವೀಕರಣ, ಮೆದುಹಿಂದುತ್ವವು ಕಟ್ಟಾಹಿಂದುತ್ವಕ್ಕೆ ಉತ್ತರವಾಗದು, ಎಡಪಂಥಮಾತ್ರವೇ ಏಕೈಕ ಆಯ್ಕೆ ಎಂದು ಯೆಚುರಿ ಹೇಳಿದರು.

ಸಿಪಿಐ(ಎಂ) ಕೇಂದ್ರಸಮಿತಿ ಈ ಮೂರು ದಿನಗಳ ಸಭೆಯಲ್ಲಿ 17ನೇ ಲೋಕಸಭಾ ಚುನಾವಣೆಗಳ ಫಲಿತಾಂಶದ ಪ್ರಾಥಮಿಕ ವಿಮರ್ಶೆ ನಡೆಸಿದೆ. ಬಿಜೆಪಿ ಕಳೆದ ಐದುವರ್ಷಗಳಲ್ಲಿ ಹರಿಯಬಿಟ್ಟಿರುವ ಬಲಪಂಥೀಯ ದಾಳಿ ಈ ಜನಾದೇಶದೊಂದಿಗೆ ಕ್ರೋಡೀಕರಣಗೊಂಡಿದೆ ಎಂದು ವಿಶ್ಲೇಷಿಸಿರುವ ಕೇಂದ್ರಸಮಿತಿ, ಪ್ರತಿಪಕ್ಷಗಳ ವಿಫಲತೆ, ಎಡಶಕ್ತಿಗಳ ತೀವ್ರಪರಾಭವದ ಪ್ರಾಥಮಿಕ ವಿಮರ್ಶೆಯನ್ನು ನಡೆಸಿತು.

ಪಕ್ಷದ ಸ್ವತಂತ್ರಶಕ್ತಿ ಮತ್ತು ರಾಜಕೀಯ ಮಧ್ಯಪ್ರವೇಶದ ಸಾಮರ್ಥ್ಯಗಳು ದುರ್ಬಲಗೊಳ್ಳುತ್ತಲೇ ಇವೆ ಎಂದು ಗಮನಿಸಿದ ಸಿಪಿಐ(ಎಂ) ಕೇಂದ್ರಸಮಿತಿ ಇಂತಹ ಒಂದು ಪ್ರವೃತ್ತಿ ಆಳಗೊಳ್ಳಲು ಕಾರಣವಾಗಿರುವ ವಿವಿಧ ಅಂಶಗಳನ್ನು ಚರ್ಚಿಸಿತು. ಮತ್ತು ಈ ಅವನತಿಯನ್ನು ತಡೆಯಲು ಹಾಗೂ ತಿರುಗುಮುರುಗುಗೊಳಿಸಲು ಪಕ್ಷವು ಕೈಗೊಳ್ಳುವ ತಕ್ಷಣದ ಸಂಘಟನಾತ್ಮಕ ಮತ್ತು ರಾಜಕೀಯ ಕ್ರಮಗಳನ್ನು ರೂಪಿಸಿತು.

ಈ ನಿರ್ಣಾಯಕ ಬಿಜೆಪಿ ವಿಜಯವು ಖಂಡಿತವಾಗಿಯೂ ಒಡ್ಡಲಿರುವ ಸವಾಲುಗಳನ್ನು ಎದುರಿಸಲು ದೇಶ ಮತ್ತು ಜನತೆ ಸಿದ್ಧರಾಗಬೇಕಾಗಿದೆ ಎಂಬ ತೀರ್ಮಾನಕ್ಕೆ ಕೇಂದ್ರಸಮಿತಿ ಬಂದಿದೆ. ಅದು ಇಂತಹ ನಾಲ್ಕು ಮುಖ್ಯಸವಾಲುಗಳನ್ನು ಗಮನಿಸಿ, ಅವನ್ನು ಎದುರಿಸುವ ಬಗೆಗಳನ್ನೂ ಗುರುತಿಸಿದೆ.

ಪಕ್ಷಕ್ಕೆ ಆಗಿರುವ ಹಿನ್ನಡೆಯಿಂದಾಗಿ ಉಂಟಾಗಿರುವ ಗಂಭೀರ ಸನ್ನಿವೇಶವನ್ನು ಎದುರಿಸಲು ಕೇಂದ್ರಸಮಿತಿ, ಪಕ್ಷದ ಕೊಲ್ಕತಾಪ್ಲೀನಂನ ಮಹತ್ವದ ನಿರ್ಣಯಗಳ ಜಾರಿಯ ವಿಮರ್ಶೆಯೂ ಸೇರಿದಂತೆ ಹಲವಾರು ಕ್ರಮಗಳನ್ನು ಮತ್ತು ಕಾರ್ಯಭಾರಗಳನ್ನು ಅಂಗೀಕರಿಸಿದೆ.

ಕೇಂದ್ರಸಮಿತಿಯ ಸಭೆ ಚುನಾಣಾ ಸುಧಾರಣೆಗಳ, ಅದರಲ್ಲೂ ಚುನಾವಣಾ ಆಯೋಗದ ಸುಧಾರಣೆಗಳ ಅಗತ್ಯ ಮತ್ತು ಇಲೆಕ್ಟ್ರಾನಿಕ್ಮತಯಂತ್ರಗಳ ಬಗ್ಗೆ ಎದ್ದಿರುವ ಸಂದೇಹಗಳನ್ನೂ ಚರ್ಚಿಸಿತು.

ಚುನಾವಣೆಗಳ ನಂತರ ಮುಂಬಯಿಯಲ್ಲಿ ಖ್ಯಾತ ಜಾತ್ಯತೀತಚಿಂತಕ ಡಾ. ರಾಮ್‍ ಪುನಿಯಾನಿಯವರಿಗೆ ಬೆದರಿಕೆಗಳು ಬರುತ್ತಿರುವುದನ್ನು ಕೇಂದ್ರಸಮಿತಿ ಖಂಡಿಸಿದೆ, ಹಾಗೂ ಚುನಾವಣಾ ಫಲಿತಾಂಶಗಳು ಪ್ರಕಟವಾಗುವ ಹಿಂದಿನ ದಿನವೇ ಜಾತಿಕಿರುಕುಳ-ದ್ವೇ಼ಷ ಪ್ರಚಾರಕ್ಕೆ ಬಲಿಯಾದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ. ಪಾಯಲ್ ‍ ತಡ್ವಿ ಆತ್ಮಹತ್ಯೆಯ ಬಗ್ಗೆ ದುಃಖ ವ್ಯಕ್ತಪಡಿಸಿದೆ.

ಈ ಸಭೆಯನಂತರ ಪ್ರಕಟಿಸಿರುವ ಸಿಪಿಐ(ಎಂ) ಕೇಂದ್ರಸಮಿತಿಯ ಹೇಳಿಕೆಯ ಪೂರ್ಣಪಾಟವನ್ನು ಈ ಮುಂದೆಕೊಡಲಾಗಿದೆ.

ಲೋಕ ಸಭಾಚುನಾವಣೆಗಳ ಪ್ರಾಥಮಿಕ ಪರಾಮರ್ಶೆ

ಬಿಜೆಪಿ ವಿಜಯ

17ನೇ ಲೋಕಸಭಾಚುನಾವಣೆಗಳ ತೀರ್ಪು ಬಿಜೆಪಿ ನೇತೃತ್ವದ ಎನ್‍.ಡಿ.ಎ. ಗೆ 2014ರಲ್ಲಿ ಗೆದ್ದುದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಮತ್ತು ಹೆಚ್ಚಿನ ಮತಗಳಿಕೆಯನ್ನು ಕೊಟ್ಟಿದೆ. ಇದು ಅವರ ಪರವಾದ ಒಂದು ನಿರ್ಣಾಯಕ ಜನಾದೇಶವಾಗಿದೆ. ಬಿಜೆಪಿ ಕಳೆದ ಐದುವರ್ಷಗಳಲ್ಲಿ ಹರಿಯಬಿಟ್ಟಿರುವ ಬಲಪಂಥೀಯ ದಾಳಿ ಈ ಜನಾದೇಶದೊಂದಿಗೆ ಕ್ರೋಡೀಕರಣಗೊಂಡಿದೆ.

ಪುಲ್ವಾಮ ಮತ್ತು ಬಾಲಾಕೋಟ್‍ ನಂತರ ಜನಗಳ ನಡುವೆ ಕಥನವನ್ನು ಕಳೆದ ಐದುವರ್ಷಗಳಲ್ಲಿ ಎನ್.ಡಿ.ಎ. ಸರಕಾರ ಹೇರಿದ ಹತ್ತು-ಹಲವು ಜೀವನಾಧಾರದ ಪ್ರಶ್ನೆಗಳಿಂದ ಪಲ್ಲಟಗೊಳಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಸಂಕುಚಿತ ಕೋಮುವಾದಿ ರಾಷ್ಟ್ರವಾದಿ ಅಬ್ಬರದ ಹೊಸ ಕಥನಕ್ಕೆ ಹಲವಾರು ಅಂಶಗಳ ಮೂಲಕ ಮೋದಿಯ ವ್ಯಕ್ತಿತ್ವವನ್ನು ಕಟ್ಟಿದ್ದು ಇದಕ್ಕೆ ನೆರವಾಯಿತು. ಮಾಧ್ಯಮಗಳ ವಿಭಾಗಗಳು ಈ ಪ್ರಾಜೆಕ್ಟಿನಲ್ಲಿ ಪಾಲುದಾರರಾದವು. ಹಿಂದೆಂದೂ ಕಾಣದಂತಹ ಹಣಬಲದ ಬಳಕೆ ಈ ಚುನಾವಣೆಗಳಲ್ಲಿ ಕಂಡುಬಂತು. ಚುನಾವಣಾ ಬಾಂಡುಗಳ ಮೂಲಕ ಅಗಾಧ ಮೊತ್ತಗಳು ಬಿಜೆಪಿಗೆ ವರ್ಗಾಯಿಸಲ್ಪಟ್ಟವು. ಚುನಾವಣಾಆಯೋಗದ ಪಾತ್ರವೂತನ್ನಕೊಡುಗೆನೀಡಿತು.

ಪ್ರತಿಪಕ್ಷಗಳು

ಹೆಚ್ಚಿನ ಪ್ರತಿಪಕ್ಷಗಳು, ತಮಿಳುನಾಡು, ಆಂಧ್ರಪ್ರದೇಶ, ಇನ್ನು ಕೆಲವು ರಾಜ್ಯಗಳನ್ನು ಬಿಟ್ಟರೆ ಬೇರೆಡೆಗಳಲ್ಲಿ ದೊಡ್ಡ ನಷ್ಟವನ್ನು ಕಂಡಿವೆ. ಪ್ರತಿಪಕ್ಷಗಳು, ನಿರ್ದಿಷ್ಟವಾಗಿ ಕಾಂಗ್ರೆಸ್‍, ಚುನಾವಣೆಗಳ ಮೊದಲು ಮುಂದಿಟ್ಟ ಜಾತ್ಯತೀತ ಪ್ರತಿಪಕ್ಷಗಳ ಐಕ್ಯತೆಯನ್ನು ಪ್ರಸ್ತುತ ಪಡಿಸುವಲ್ಲಿ ವಿಫಲವಾದವು. ಕೋಮುವಾದಿದಾಳಿಗೆ ಎದುರಾಗಿ ಜಾತ್ಯತೀತತೆಯನ್ನು ರಕ್ಷಿಸಿಕೊಳ್ಳುವ ಒಂದು ಪ್ರಚಾರಾಂದೋಲನವನ್ನು ನಡೆಸಲಿಲ್ಲ. ಕಟ್ಟಾಹಿಂದುತ್ವಕ್ಕೆ ಮೆದುಹಿಂದುತ್ವ ಉತ್ತರವಲ್ಲ. ಹಿಂದುತ್ವ ಮತ್ತು ಜಾತ್ಯತೀತತೆಯ ನಡುವಿನ ಸೈದ್ಧಾಂತಿಕ ಸಮರವನ್ನು ಶಕ್ತಿಯುತವಾಗಿ ನಡೆಸಲಿಲ್ಲ.

ಸಿಪಿಐ(ಎಂ) ಮತ್ತು ಎಡಶಕ್ತಿಗಳಿಗೆ ತೀವ್ರಪರಾಭವ

ಸಿಪಿಐ(ಎಂ) ಮತ್ತು ಎಡಶಕ್ತಿಗಳು ಒಂದು ತೀವ್ರ ಹಿನ್ನಡೆಯನ್ನು, ವಿಶೇಷವಾಗಿ ಕೇರಳ, ಪಶ್ಚಿಮಬಂಗಾಲ ಮತ್ತು ತ್ರಿಪುರಾದಲ್ಲಿನ ತಮ್ಮ ಬಲಿಷ್ಟನೆಲೆಗಳಲ್ಲಿ, ಅನುಭವಿಸಿವೆ.ಪಶ್ಚಿಮಬಂಗಾಲ ಮತ್ತು ತ್ರಿಪುರಾ ಈ ಎರಡರಲ್ಲೂ ಚುನಾವಣೆಗಳು ತೀವ್ರಭಯೋತ್ಪಾದನೆ ಮತ್ತು ಹಿಂಸಾಚಾರದ ವಾತಾವರಣದಲ್ಲಿ ನಡೆದವು. ಇಂತಹ ಹಿಂಸಾಚಾರದಲ್ಲಿ ಪಶ್ಚಿಮಬಂಗಾಲದಲ್ಲಿ ಐವರು ಮತ್ತು ತ್ರಿಪುರಾದಲ್ಲಿ ಒಬ್ಬರು ಸಿಪಿಐ(ಎಂ) ಕಾರ್ಯಕರ್ತರು ಜೀವ ಕಳಕೊಂಡಿದ್ದಾರೆ.

ತ್ರಿಪುರಾ ಪಶ್ಚಿಮಕ್ಷೇತ್ರ ಮತ್ತು ಪಶ್ಚಿಮಬಂಗಾಲದ ಡೈಮಂಡ್‍ ಹಾರ್ಬರ್‍ ಕ್ಷೇತ್ರದಲ್ಲಿ ಬಹುಪಾಲು ಮತಗಟ್ಟೆಗಳಲ್ಲಿ ಚುನಾವಣಾ ಮೋಸನಡೆದಿದೆ, ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ದೂಷಿತಗೊಂಡಿದೆ. ಚುನಾವಣಾ ಆಯೋಗಕ್ಕೆ “ಮುಕ್ತ ಮತ್ತು ನ್ಯಾಯಯುತ ಮತದಾನ”ಗಳನ್ನು ನಡೆಸುವ ತನ್ನ ಆಶ್ವಾಸನೆಯನ್ನು ಜಾರಿಗೊಳಿಸಲು ಆಗಲಿಲ್ಲ.

ಈ ಮೂರು ರಾಜ್ಯಸಮಿತಿಗಳು ನಡೆಸಿರುವ ಪ್ರಾಥಮಿಕ ವಿಮರ್ಶೆಗಳನ್ನು ಕೇಂದ್ರಸಮಿತಿ ಚರ್ಚಿಸಿತು. ಒಂದು ವಿವರವಾದ ಮತಗಟ್ಟೆವಾರು ವಿಮರ್ಶೆ ನಡೆಯುತ್ತಿದ್ದು, ಅದರ ಆಧಾರದಲ್ಲಿ ಅಂತಿಮ ಅನುಭವಗಳ ಮೌಲ್ಯಮಾಪನ ಮಾಡಲಾಗುವುದು.

ಈ ಚುನಾವಣೆಗಳಲ್ಲಿ, ಬಿಜೆಪಿ ಮತ್ತು ಅದರ ಮಿತ್ರರನ್ನು ಸೋಲಿಸಬೇಕು, ಸಂಸತ್ತಿನಲ್ಲಿ ಎಡಪಕ್ಷಗಳ ಬಲವನ್ನು ಹೆಚ್ಚಿಸಬೇಕು ಮತ್ತು ಕೇಂದ್ರದಲ್ಲಿ ಒಂದು ಪರ್ಯಾಯ ಜಾತ್ಯತಿತ ಸರಕಾರವನ್ನು ಸ್ಥಾಪಿಸಲು ಅನುವುಮಾಡಿಕೊಡಬೇಕು ಎಂದು ಸಿಪಿಐ(ಎಂ) ಕರೆನೀಡಿತ್ತು. ಈ ಧ್ಯೇಯೋದ್ದೇಶಗಳನ್ನು ಈ ಜನಾದೇಶ ನಿರಾಕರಿಸಿದೆ.

ಕೇರಳದಲ್ಲಿ ಮತದಾರರು ಒಂದು ಪರ್ಯಾಯ ಜಾತ್ಯತೀತ ಸರಕಾರವನ್ನು ರಚಿಸುವಲ್ಲಿ ಕಾಂಗ್ರೆಸ್‍ ಗೇ ಸಾಧ್ಯತೆ ಹೆಚ್ಚು ಎಂದು ಭಾವಿಸಿದರು. ಇದರ ಫಲಿತಾಂಶವಾಗಿ ಜಾತ್ಯತೀತ ಒಲವಿನ ಜನಗಳು ಮತ್ತು ಅಲ್ಪಸಂಖ್ಯಾತರು ಅವರಿಗೆ ಮತ ನೀಡುವಂತಾಯಿತು. ಶಬರಿಮಲೆ ಕುರಿತ ಸುಪ್ರಿಂಕೋರ್ಟ್‍ ತೀರ್ಪನ್ನು ಜಾರಿಗೊಳಿಸಲು ಬದ್ಧವಾಗಿದ್ದ ಎಲ್‍.ಡಿ. ಎಫ್‍. ಸರಕಾರದ ಸರಿಯಾದ ನಿಲುವನ್ನು ಕುರಿತಂತೆ ಬಿಜೆಪಿ ಮತ್ತು ಯುಡಿಎಫ್ ಆಸ್ತಿಕ ಜನ ವಿಭಾಗಗಳಲ್ಲಿ ಹಲವರಲ್ಲಿ ತಪ್ಪುಕಲ್ಪನೆಗಳನ್ನು ಸೃಷ್ಟಿಸಿದವು. ಈ ವಿಭಾಗಗಳನ್ನು ಮತ್ತೆ ನಮ್ಮತೆಕ್ಕೆಗೆ ತರಲು ಪಕ್ಷವು ಸರ್ವಪ್ರಯತ್ನಗಳನ್ನು ನಡೆಸುತ್ತದೆ.

ಪಶ್ಚಿಮಬಂಗಾಲದಲ್ಲಿ ಚುನಾವಣೆಗಳು ಅತ್ಯಂತ ಧ್ರುವೀಕೃತ ವಾತಾವರಣದಲ್ಲಿ ನಡೆದಿವೆ. ಮಾಧ್ಯಮ ಒಂದು ಅವಳಿಕಥನವನ್ನು ಕಟ್ಟಿ ಟಿಎಂಸಿ ಮತ್ತು ಬಿಜೆಪಿ ನಡುವೆ ಇಂತಹ ಧ್ರುವೀಕರಣದಲ್ಲಿ ನೆರವಾಗುವಲ್ಲಿ ಒಂದು ದೊಡ್ಡಪಾತ್ರವನ್ನು ವಹಿಸಿತು. ಕೋಮುವಾದ ಪ್ರೇರಿತ ಪ್ರಚಾರವು ಮತದಾರರನ್ನು ಮತ್ತಷ್ಟು ಧ್ರುವೀಕರಿಸಿತು. ಟಿಎಂಸಿ ವಿರುದ್ಧ ಅಧಿಕಾರ ಸ್ಥ-ವಿರೋಧಿ ಭಾವನೆ ಬಹಳಗಟ್ಟಿಯಾಗಿತ್ತು. ಅದಕ್ಕೆ ಸಿಪಿಐ(ಎಂ) ಮತ್ತು ಎಡಶಕ್ತಿಗಳು ಪರ್ಯಾಯ ಎಂದು ಮತದಾರರು ಕಾಣಲಿಲ್ಲ, ಇದರಿಂದಾಗಿ ನಮ್ಮ ಪಾರಂಪರಿಕ ಬೆಂಬಲಿಗರಲ್ಲಿ ಒಂದು ವಿಭಾಗ ಪಲ್ಲಟಗೊಳ್ಳುವಂತಾಯಿತು. ಬಜೆಪಿ-ವಿರೋಧಿ, ಟಿಎಂಸಿ-ವಿರೋಧಿ ಮತಗಳನ್ನು ಗರಿಷ್ಟ ಪ್ರಮಾಣದಲ್ಲಿ ಕ್ರೋಡೀಕರಿಸುವ ಎಡಪಕ್ಷಗಳ ಪ್ರಸ್ತಾವವನ್ನು ಸ್ವೀಕರಿಸಲು ಕಾಂಗ್ರೆಸ್‍ ನಿರಾಕರಿಸಿದ್ದು ಈ ಅವಳಿ ಕಥನವನ್ನು ಗಟ್ಟಿಗೊಳಿಸಿತು.

ತ್ರಿಪುರಾದಲ್ಲಿ ಎರಡರಲ್ಲಿ ಒಂದು ಸ್ಥಾನದಲ್ಲಿ ಸುಮಾರಾಗಿ ಚುನಾವಣಾ ಮೋಸವೇ ನಡೆದಿದೆ. ಮೀಸಲು ಎಸ್‍.ಟಿ. ಕ್ಷೇತ್ರವನ್ನು ಬಿಜೆಪಿ ಗೆದ್ದಿದೆ, ಕಾಂಗ್ರೆಸ್‍ ಎರಡನೇ ಸ್ಥಾನಪಡೆದಿದೆ.

ಈ ಎರಡೂ ರಾಜ್ಯಗಳಲ್ಲಿ ಪಕ್ಷದಸಮಿತಿಗಳು ನಮ್ಮ ಪಾರಂಪರಿಕ ಬೆಂಬಲ ನೆಲೆಕುಗ್ಗುತ್ತಿರುವ ಬಗ್ಗೆ ಪ್ರಾಮಾಣಿಕ ಮೌಲ್ಯಮಾಪನ ನಡೆಸುತ್ತಿವೆ ಮತ್ತು ಈ ವಿಭಾಗಗಳನ್ನು ಮತ್ತೆ ನಮ್ಮತೆಕ್ಕೆಗೆ ತರಲು ತುರ್ತುಕ್ರಮಗಳನ್ನು ರೂಪಿಸಲಾಗುವುದು.

ಈ ಬಲಿಷ್ಟ ನೆಲೆಗಳ ಹೊರಗೆ, ಸಿಪಿಐ(ಎಂ) ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಚುನಾವಣಾ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿದ್ದ ಎರಡೂಸ್ಥಾನಗಳನ್ನು ಗೆದ್ದುಕೊಂಡಿದೆ. ಬೇರೆಲ್ಲ ರಾಜ್ಯಗಳಲ್ಲಿ ಸಿಪಿಐ(ಎಂ) ಸ್ವತಂತ್ರವಾಗಿ ಸ್ಪರ್ಧಿಸಿತ್ತು. ಈ ಸ್ಥಾನಗಳಲ್ಲಿ, ಮಹಾರಾಷ್ಟ್ರದ ದಿಂಡೋರಿ ಕ್ಷೇತ್ರದಲ್ಲಿ ಅತಿಹೆಚ್ಚು ಅಂದರೆ 1,09,570 ಮತಗಳನ್ನು ಪಡೆದಿದೆ. ಒಡಿಶಾ ವಿಧಾನಸಭೆಯ ಚುನಾವಣೆಗಳಲ್ಲಿ ಸಿಪಿಐ(ಎಂ) ತನ್ನ ಬೊನೈ ಕ್ಷೇತ್ರವನ್ನು, ಕಳೆದ ಬಾರಿಗಿಂತ 20,000 ಹೆಚ್ಚುಮತಗಳನ್ನು (34.67%) ಗಳಿಸಿ ಉಳಿಸಿಕೊಂಡಿದೆ.

ಪಕ್ಷದ ಸ್ವತಂತ್ರ ಶಕ್ತಿ ಮತ್ತು ರಾಜಕೀಯ ಮಧ್ಯಪ್ರವೇಶದ ಸಾಮರ್ಥ್ಯಗಳು ದುರ್ಬಲಗೊಳ್ಳುತ್ತಲೇ ಇವೆ ಎಂದು ಕೇಂದ್ರಸಮಿತಿ ಗಮನಿಸಿತು. ಇಂತಹ ಒಂದು ಪ್ರವೃತ್ತಿ ಆಳಗೊಳ್ಳಲು ಕಾರಣವಾಗಿರುವ ವಿವಿಧ ಅಂಶಗಳನ್ನು ಕೇಂದ್ರ ಸಮಿತಿ ಚರ್ಚಿಸಿತು. ಮತ್ತು ಈ ಅವನತಿಯನ್ನು ತಡೆಯಲು ಹಾಗೂ ತಿರುಗುಮುರುಗುಗೊಳಿಸಲು ಪಕ್ಷವುಕೈಗೊಳ್ಳುವ ತಕ್ಷಣದ ಸಂಘಟನಾತ್ಮಕ ಮತ್ತು ರಾಜಕೀಯ ಕ್ರಮಗಳನ್ನು ರೂಪಿಸಿತು.

ಚುನಾವಣೆಗಳ ನಂತರದ ಸವಾಲುಗಳು

ಈ ನಿರ್ಣಾಯಕ ಬಿಜೆಪಿ ವಿಜಯವು ಖಂಡಿತವಾಗಿಯೂ ಒಡ್ಡಲಿರುವ ಸವಾಲುಗಳನ್ನು ಎದುರಿಸಲು ದೇಶ ಮತ್ತು ಜನತೆ ಸಿದ್ಧರಾಗಬೇಕಾಗಿದೆ ಎಂಬ ತೀರ್ಮಾನಕ್ಕೆ ಕೇಂದ್ರಸಮಿತಿ ಬಂದಿದೆ. ಕೇಂದ್ರಸಮಿತಿ ಇಂತಹ ನಾಲ್ಕು ಸವಾಲುಗಳನ್ನು ಗಮನಿಸಿದೆ.

  1. ಬಿಜೆಪಿ ಈ ನಿರ್ಣಾಯಕ ವಿಜಯವನ್ನು ಅಭೂತಪೂರ್ವ ಹಣಬಲ ಮತ್ತು ಅಂತರ್ರಾಷ್ಟ್ರೀಯ ಹಾಗೂ ದೇಶೀಕಾರ್ಪೊರೇಟ್ಗಳ ಸಂಪೂರ್ಣ ಬೆಂಬಲದಿಂದ ಗೆದ್ದಿದೆ. ದೊಡ್ಡವ್ಯವಹಾರಸ್ಥರು ಮತ್ತು ಶ್ರೀಮಂತರಿಗೆ ಅನುಕೂಲಕರವಾದ ಜನ-ವಿರೋಧಿ ಆರ್ಥಿಕ ಸುಧಾರಣೆಗಳ ದಿಕ್ಪಥವನ್ನು ಅದು ಇನ್ನಷ್ಟು ತೀವ್ರಗೊಳಿಸಲು ಬಹುಪಾಲು ಜನತೆಯ ಮೇಲೆ ಮತ್ತಷ್ಟು ಹೆಚ್ಚಿನ ಸಂಕಟಗಳನ್ನು ಖಂಡಿತವಾಗಿಯೂ ಹೇರುತ್ತದೆ. ಇಂತಹ ಆರ್ಥಿಕ ಹೊಡೆತಗಳ ವಿರುದ್ಧ ಹೋರಾಟಗಳಲ್ಲಿ ಗರಿಷ್ಟ ಜನವಿಭಾಗಗಳನ್ನು ಅಣಿನೆರೆಸುವಲ್ಲಿ ಪಕ್ಷವು ನೇತೃತ್ವ ನೀಡುತ್ತದೆ.
  2. ಹಿಂದುತ್ವ ಕೋಮುವಾದಿ ಧ್ರುವೀಕರಣದ ಕ್ರೋಡೀಕರಣದಿಂದಾಗಿ ಧಾರ್ಮಿಕ ಮತ್ತು ಭಾಷಿಕ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ಹೆಚ್ಚೆಚ್ಚು ಹಲ್ಲೆಗಳು ನಡೆಯಲಿವೆ, ಇದರಿಂದಾಗಿ, ಈ ಜನ ವಿಭಾಗಗಳ ಭದ್ರತೆ ಮತ್ತು ಜೀವನಾಧಾರ ಕುರಿತ ಆತಂಕಗಳು ಇನ್ನಷ್ಟು ಹದಗೆಡಲಿವೆ. ನಮ್ಮ ಸಂವಿಧಾನದಲ್ಲಿ ಪ್ರತಿಷ್ಟಾಪಿಸಿರುವ ಜಾತ್ಯತೀತತೆಯನ್ನು ರಕ್ಷಿಸುವ ಮತ್ತು ಬಲಪಡಿಸುವ ಕೆಲಸವನ್ನು ಪಕ್ಷವು ಈ ಹೋರಾಟಗಳಲ್ಲಿ ಸಾಕಷ್ಟು ವಿಶಾಲ ಪ್ರಮಾಣದಲ್ಲಿ ಜನವಿಭಾಗಗಳನ್ನು ಸೆಳೆದುಕೊಂಡು ಕೈಗೆತ್ತಿಕೊಳ್ಳುತ್ತದೆ.
  3. ಕಳೆದ ಐದುವರ್ಷಗಳಲ್ಲಿ ಎಲ್ಲಸಂವಿಧಾನಿಕ ಅಧಿಕಾರ ಪಡೆದಿರುವ ಸಂಸ್ಥೆಗಳಲ್ಲಿ ನಡೆದಿರುವ ಆರೆಸ್ಸೆಸ್‍ ನ ನುಸುಳಿಕೆ ಇನ್ನಷ್ಟು ತೀವ್ರಗೊಳ್ಳುವುದು ಖಂಡಿತ. ಇದು, ಸಂವಿಧಾನಿಕ ಗಣತಂತ್ರವನ್ನು ಆರೆಸ್ಸೆಸ್‍ ನ ಸೈದ್ಧಾಂತಿಕ ಯೋಜನೆಯಾದ ‘ಹಿಂದೂರಾಷ್ಟ್ರ’ವಾಗಿ ಪರಿವರ್ತಿಸಲು ಅನುವುಮಾಡಿಕೊಳ್ಳುವುದಕ್ಕಾಗಿ, ಇಂತಹ ಸಂವಿಧಾನಿಕ ಪ್ರಾಧಿಕಾರಗಳನ್ನು ಶಿಥಿಲಗೊಳಿಸುವ ದಿಕ್ಕಿನಲ್ಲಿ ಸಾಗಲಿದೆ. ಎಲ್ಲ ಸಂವಿಧಾನಿಕ ಪ್ರಾಧಿಕಾರಗಳನ್ನು ರಕ್ಷಿಸುವ ಮತ್ತು ಬಲಪಡಿಸುವ ಕೆಲಸವನ್ನು ಸಿಪಿಐ(ಎಂ) ಈ ಹೋರಾಟಗಳಲ್ಲಿ ಜತೆಗೂಡಲು ಸಿದ್ಧವಿರುವ ಇತರ ಎಲ್ಲ ಶಕ್ತಿಗಳೊಂದಿಗೆ ಪ್ರತಿಪಾದಿಸುತ್ತದೆ.
  4. ಬಿಜೆಪಿಯ ವಿಜಯವು ಭಾರತದಲ್ಲಿ ಒಂದು “ಭದ್ರತಾ’ ಪ್ರಭುತ್ವವನ್ನು ಸ್ಥಾಪಿಸುವ ಅಗತ್ಯವಿದೆಯೆಂಬುದರತ್ತ ಗಮನ ಕೇಂದ್ರೀಕರಿಸಿತ್ತು. ಇದರಿಂದಾಗಿ ವ್ಯಕ್ತಿಗಳ ಹಕ್ಕುಗಳನ್ನು, ನಿರ್ದಿಷ್ಟವಾಗಿ ಭಿನ್ನಾಭಿಪ್ರಾಯದ ಹಕ್ಕನ್ನುತೀವ್ರವಾಗಿ ಮೊಟಕುಗೊಳಿಸಲಾಗುತ್ತದೆ. ಈಗಾಗಲೇ ಅನಿಷ್ಟಕಾರಿ ಸಂಕೇತಗಳು ಕಾಣುತ್ತಿವೆ. ಒಂದಿಲ್ಲೊಂದುನೆ ಪದಲ್ಲಿ ದಲಿತರು ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಖಾಸಗಿಪಡೆಗಳ ಹಲ್ಲೆಗಳು ತೀವ್ರಗೊಳ್ಳಲಿವೆ. ದುಡಿಯುವ ಜನಗಳ ಮತ್ತು ಧಾರ್ಮಿಕ, ಭಾಷಿಕ ಅಲ್ಪಸಂಖ್ಯಾತರ ಹಕ್ಕುಗಳು ದಾಳಿಗೆ ಒಳಗಾಗಲಿವೆ, ಅವರ ಬೇಟೆ ನಡೆಯಲಿದೆ.

ಈ ಸವಾಲುಗಳನ್ನುನೇರವಾಗಿ ಎದುರಿಸಲು, ಪ್ರಜಾಪ್ರಭುತ್ವ ಮತ್ತು ನಾಗರಿಕ ಸ್ವಾತಂತ್ರ್ಯಗಳನ್ನು ನೆಚ್ಚಿಕೊಂಡಿರುವ ಸಾಧ್ಯವಾದಷ್ಟು ವಿಶಾಲವಾದ ಜನವಿಭಾಗಗಳನ್ನು ಅಣಿ ನೆರೆಸುವಲ್ಲಿ ಸಿಪಿಐ(ಎಂ) ನೇತೃತ್ವವಹಿಸುತ್ತದೆ.

ಕಾರ್ಯಭಾರಗಳು

ಪಕ್ಷಕ್ಕೆ ಈ ಹಿನ್ನಡೆಯಿಂದಾಗಿ ಉಂಟಾಗಿರುವ ಗಂಭೀರ ಸನ್ನಿವೇಶವನ್ನು ಎದುರಿಸಲು ಕೇಂದ್ರಸಮಿತಿ ಹಲವಾರು ಕ್ರಮಗಳನ್ನು ಮತ್ತು ಕಾರ್ಯಭಾರಗಳನ್ನು ಅಂಗೀಕರಿಸಿದೆ.

  1. ಜನಗಳೊಂದಿಗೆ ಸಂಪರ್ಕವನ್ನು ಆಳಗೊಳಿಸಲು ಮತ್ತು ವಿವಿಧರಂಗಗಳ ಚಟುವಟಿಕೆಗಳನ್ನು ಬಲಪಡಿಸಲು ನಿರ್ದಿಷ್ಟಕ್ರಮಗಳನ್ನು ನಿರ್ಧರಿಸಲಾಗಿದೆ. ಜೀವನಾಧಾರದ ಪ್ರಶ್ನೆಗಳನ್ನು ಕುರಿತ ಹೋರಾಟಗಳನ್ನು, ಪರಿಶಿಷ್ಟಜಾತಿಗಳು, ಪರಿಶಿಷ್ಟ ಬುಡಕಟ್ಟುಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಸಾಮಾಜಿಕ ದಮನದ ವಿರುದ್ಧ ಹೋರಾಟಗಳೊಂದಿಗೆ ಸಮಗ್ರೀಕರಿಸಲು ನಿರ್ದಿಷ್ಟ ಗಮನವನ್ನು ಕೊಡಲಾಗುವುದು.
  2. ಪಕ್ಷವು 2015ರಲ್ಲಿ ಕೊಲ್ಕತಾಪ್ಲೀನಂನಲ್ಲಿ ಅಂಗೀಕರಿಸಿದ ಪಕ್ಷದ ಸಂಘಟನೆ ಮತ್ತು ಅದರ ಕಾರ್ಯವೈಖರಿ ಕುರಿತ ಮಹತ್ವದ ನಿರ್ಣಯಗಳ ಜಾರಿಯ ಒಂದು ಪರಾಮರ್ಶೆಯನ್ನು ನಡೆಸುತ್ತದೆ. ಆಗಸ್ಟ್ಕೊನೆಯ ವೇಳೆಗೆ ರಾಜ್ಯಗಳು ಈ ಪರಾಮರ್ಶೆಯನ್ನು ಪೂರ್ಣಗೊಳಿಸಲಿದ್ದು, ಇದರ ಆಧಾರದಲ್ಲಿ ಪಕ್ಷವನ್ನು ಬಲಿಷ್ಟಗೊಳಿಸುವ ಮತ್ತು ನಮ್ಮ ಕಾರ್ಯಕರ್ತರಲ್ಲಿ ಹುರುಪು ತುಂಬುವ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.
  3. ಈ ಚುನಾವಣೆಗಳ ಅನುಭವವು ವ್ಯಾಪಕವಾದ ಚುನಾವಣಾ ಸುಧಾರಣೆಗಳ ಅಗತ್ಯವನ್ನು, ಚುನಾವಣಾ ಆಯೋಗವನ್ನು ಸುಧಾರಿಸಬೇಕಾದ ತುರ್ತನ್ನು ತೋರಿದೆ. ಚುನಾವಣಾ ಆಯುಕ್ತರುಗಳನ್ನು ತತ್ಕಾಲೀನ ಸರಕಾರ ನೇಮಿಸುವ ಬದಲು ಭಾರತದ ರಾಷ್ಟ್ರಪತಿಗಳ ನೇತೃತ್ವದ ಒಂದು ವ್ಯವಸ್ಥೆಯ ಮೂಲಕ ನೇಮಿಸುವಂತೆ ಮಾಡಲು, ಇದನ್ನು ಒಪ್ಪುವ ಎಲ್ಲ ರಾಜಕಿಯ ಅಭಿಪ್ರಾಯದವರನ್ನು ಸಿಪಿಐ(ಎಂ) ಅಣಿನೆರೆಸುತ್ತದೆ.
  4. ಇಲೆಕ್ಟ್ರಾನಿಕ್ಮತಯಂತ್ರ(ಇವಿಎಂ)ಗಳ ತಟಸ್ಥತೆಯ ಕುರಿತಂತೆ ಇರುವ ವಿವಿಧ ದೂರುಗಳು ಮತ್ತು ಈ ಯಂತ್ರಗಳಲ್ಲಿ ಕೈಯಾಡಿಸುವ ಸಾಧ್ಯತೆಯ ಬಗ್ಗೆ ಎದ್ದಿರುವ ಸಂದೇಹಗಳನ್ನು ಕುರಿತ ವರದಿಗಳ ಒಂದು ಅಧ್ಯಯನವನ್ನು ಸಿಪಿಐ(ಎಂ) ನಡೆಸುತ್ತದೆ ಮತ್ತು ಇತರ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚಿಸಿ ಮುಂದಿನ ಕ್ರಮಗಳನ್ನು ನಿರ್ಧರಿಸುತ್ತದೆ.

ಜಾತ್ಯತೀತ ಚಿಂತಕ ಡಾ. ರಾಮ್‍ ಪುನಿಯಾನಿಯವರಿಗೆ ಚುನಾವಣೆಗಳ ನಂತರ ಬೆದರಿಕೆಯ ಕರೆಗಳನ್ನು ಮಾಡಿರುವುದನ್ನು ಕೇಂದ್ರ ಸಮಿತಿ ಖಂಡಿಸಿದೆ.ಒಬ್ಬ ಯುವಪರಿಶಿಷ್ಟ ಬುಡಕಟ್ಟಿನ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಡಾ. ಪಾಯಲ್‍ ತಡ್ವಿಯ ಆತ್ಮಹತ್ಯೆಯ ಬಗ್ಗೆ ಕೇಂದ್ರ ಸಮಿತಿ ತನ್ನ ದುಃಖವನ್ನು ವ್ಯಕ್ತಪಡಿಸಿದೆ. ಜಾತಿ ಕಿರುಕುಳಗಳು ಆಕೆಯನ್ನು ಆತ್ಮಹತ್ಯೆಯ ತ್ತತಳ್ಳಿದವು. ಮಹಾರಾಷ್ಟ್ರ ರಾಜ್ಯ ಸರಕಾರ ಅಪರಾಧಿಗಳ ವಿರುದ್ಧ ಮತ್ತು ಇಂತಹ ದ್ವೇಷಪ್ರಚಾರಗಳನ್ನು ಹುಟ್ಟಿಹಾಕುವವರ ವಿರುದ್ಧ ದೃಢವಾದ ಕ್ರಮವನ್ನು ಕೈಗೊಳ್ಳಬೇಕು.

ಕೃಪೆ : ಜನಶಕ್ತಿ

ಸುದ್ದಿದಿನ.ಕಾಂ|ವಾಟ್ಸಾಪ್| 9980346243

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?

Published

on

ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.

ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.

ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.

ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ

Published

on

ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.

ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.

ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ22 hours ago

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್...

ದಿನದ ಸುದ್ದಿ2 days ago

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು...

ದಿನದ ಸುದ್ದಿ2 days ago

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ. ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ...

ದಿನದ ಸುದ್ದಿ5 days ago

ಕವಿತೆ | ನೆನಪು

ರುದ್ರಪ್ಪ ಹನಗವಾಡಿ ಅಪ್ಪನನ್ನು ಒಪ್ಪ ಮಾಡಿ ವರ್ಷಗಳೇ ಕಳೆದವು ಮುವ್ವತ್ತೇಳು ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ ಅರಸರ ಮೀಸಲಾತಿ ಬಸವಲಿಂಗಪ್ಪನವರ ಬೂಸಾ ಖ್ಯಾತಿ ಮಲ ಹೊತ್ತು ಮಲಗಿದ್ದ ಕಾಲಕ್ಕೆ...

ದಿನದ ಸುದ್ದಿ5 days ago

ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?

ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ...

ದಿನದ ಸುದ್ದಿ5 days ago

ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ

ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ...

ದಿನದ ಸುದ್ದಿ5 days ago

ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ ಗ್ರಾಮದವರಾದ ಮೈಬೂಬಸಾಹೇಬ, ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಹುಟ್ಟೂರಲ್ಲಿ ಪಡೆದುಕೊಂಡು ಉನ್ನತ ಶಿಕ್ಷಣವನ್ನು ವಿದ್ಯಾಕಾಶಿ ಧಾರವಾಡದಲ್ಲಿ ಮುಗಿಸಿ, ಪ್ರಸ್ತುತ...

ದಿನದ ಸುದ್ದಿ5 days ago

ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ

ರಾಜ್ಯದ 28ಲೋಕಸಭಾ ಮತಕ್ಷೇತ್ರಗಳನ್ನು ಒಳಗೊಂಡ ಜಿಲ್ಲೆಗಳಲ್ಲಿ ನಡೆದಿರುವ ಚುನಾವಣಾ ಚಟುವಟಿಕೆಗಳ ಬಗ್ಗೆ ಮಾಹಿತಿ ಸುದ್ದಿದಿನ ಡೆಸ್ಕ್ : ದಾವಣಗೆರೆಯಲ್ಲಿ ಚುನಾವಣಾ ಕಾರ್ಯಗಳ ವೀಕ್ಷಣೆ ಮತ್ತು ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ...

ದಿನದ ಸುದ್ದಿ7 days ago

ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ

ಸುದ್ದಿದಿನ,ದಾವಣಗೆರೆ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಶ್ರೀಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 26 ರಂದು ಜರುಗಲಿರುವ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗದ...

mallikarjun kharge_suddidina mallikarjun kharge_suddidina
ದಿನದ ಸುದ್ದಿ7 days ago

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ

ಸುದ್ದಿದಿನ, ದೆಹಲಿ : ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವುದರಿಂದ ಚುನಾವಣಾ ಖರ್ಚುವೆಚ್ಚ ನಿರ್ವಹಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ. ಆಡಳಿತ ಪಕ್ಷ ಬಿಜೆಪಿಗೆ ಅನುಕೂಲವಾಗುವಂತೆ...

Trending