ರಾಜಕೀಯ
ಕುಂದಗೋಳ ವಿಧಾನಸಭಾ ಕ್ಷೇತ್ರ ಚುನಾವಣಾ ಹಿನ್ನೋಟ
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರ ಉತ್ತಮವಾದ ಕೃಷಿಭೂಮಿ ಹಾಗೂ ಒಕ್ಕಲುತನಕ್ಕೆಹೆಸರುವಾಸಿಯಾಗಿದೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ರಂಗಭೂಮಿಗೆ ಈ ತಾಲೂಕು ಅನೇಕ ಹೆಮ್ಮೆಯ ಪ್ರತಿಭೆಗಳನ್ನು ನೀಡಿದೆ. ಇಲ್ಲಿ ಬೆಳೆಯುವ ಕೆಂಪು ಮೆಣಸಿನಕಾಯಿಯು ಮಾರುಕಟ್ಟೆಯಲ್ಲಿ ಪ್ರಸಿದ್ಧಿಗಳಿಸಿದೆ. ಈ ತಾಲೂಕಿನ ಕಮಡೊಳ್ಳಿ ಗ್ರಾಮದ ಎಸ್.ಆರ್.ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು.
ವಿಧಾನಸಭಾ ಕ್ಷೇತ್ರ
1957 ರಿಂದಲೂ ಕುಂದಗೋಳ ವಿಧಾನಸಭಾ ಕ್ಷೇತ್ರ ಅಸ್ತಿತ್ವದಲ್ಲಿದೆ. ಈ ಮೊದಲು 179-ಕುಂದಗೋಳ ವಿಧಾನಸಭಾ ಕ್ಷೇತ್ರವೆಂದು ಗುರುತಿಸಲ್ಪಡುತ್ತಿದ್ದ ಈ ಕ್ಷೇತ್ರ ,2008 ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ಬಳಿಕ 70-ಕುಂದಗೋಳ ವಿಧಾನಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದೆ. ಕುಂದಗೋಳ ತಾಲೂಕು ಹಾಗೂ ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ಮತ್ತು ಛಬ್ಬಿ ಕಂದಾಯ ವೃತ್ತಗಳನ್ನು ಈ ಕ್ಷೇತ್ರ ಒಳಗೊಂಡಿದೆ. ಇದುವರೆಗೆ 14 ಚುನಾವಣೆಗಳು ಈ ಕ್ಷೇತ್ರದಲ್ಲಿ ನಡೆದಿವೆ.
1,89,281 ಮತದಾರರು: ಕಳೆದ ಏಪ್ರಿಲ್ 16,2019 ರಂದು ಪ್ರಕಟಿಸಿರುವಂತೆ ಈ ಕ್ಷೇತ್ರದಲ್ಲಿ 97,457 ಪುರುಷ , 91,820 ಮಹಿಳೆಯರು ಹಾಗೂ 04 ತೃತೀಯ ಲಿಂಗಿಗಳು ಸೇರಿ ಒಟ್ಟು 1,89,281 ಮತದಾರರಿದ್ದಾರೆ. 214 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ.
ಚುನಾವಣಾ ಹಿನ್ನೋಟ
1957ರ ಮೊದಲ ಚುನಾವಣೆಯಲ್ಲಿ ಒಟ್ಟು 46,912 ಮತದಾರರಿದ್ದರು. 29,277 ಮತದಾರರು ತಮ್ಮ ಹಕ್ಕು ಚಳಾಯಿಸಿದ್ದರು.ಶೇ.62.38 ರಷ್ಟು ಮತದಾನವಾಗಿತ್ತು. ಕಾಂಗ್ರೆಸ್ನ ಟಿ.ಕೆ. ಕಾಂಬಳಿ 15,819 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಪಕ್ಷೇತರ ಅಭ್ಯರ್ಥಿ ಕೆ.ಆರ್. ನಾಡಗೇರ 13,458 ಮತಗಳನ್ನು ಪಡೆದುಕೊಂಡಿದ್ದರು.
1962ರ ಚುನಾವಣೆಯಲ್ಲಿ ಒಟ್ಟು 51,904 ಮತದಾರರಿದ್ದರು. 32,530 ಮತದಾನವಾಗಿ,ಶೇ.62.67 ದಾಖಲಾಗಿತ್ತು. ಮೂವರು ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್ನ ಟಿ.ಕೆ. ಕಾಂಬಳಿ 13,265 ಮತಗಳನ್ನು ಪಡೆದುಕೊಂಡು ಎರಡನೇ ಬಾರಿಗೆ ಚುನಾಯಿತರಾಗಿದ್ದರು. ಎಸ್.ಆರ್. ಬೊಮ್ಮಾಯಿ 11,465 ಮತಗಳು ಹಾಗೂ ಸಿ.ಎಸ್. ಶಿಗ್ಗಾಂವಿ 5,315 ಮತಗಳನ್ನು ಪಡೆದುಕೊಂಡಿದ್ದರು.
1967ರ ಚುನಾವಣೆಯಲ್ಲಿ ಒಟ್ಟು 49,906 ಮತದಾರರಿದ್ದರು. 34,252 ಮತದಾರರು ಮತದಾನ ಮಾಡಿದ್ದರು. ಶೇ. 68.63 ಮತದಾನ ಪ್ರಮಾಣವಾಗಿತ್ತು. ಮೂವರು ಅಭ್ಯರ್ಥಿಗಳು ಕಣದಲ್ಲಿದ್ದರು. ಪಕ್ಷೇತರ ಅಭ್ಯರ್ಥಿ ಎಸ್.ಆರ್. ಬೊಮ್ಮಾಯಿ 20,291 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಕಾಂಗ್ರೆಸ್ ಪಕ್ಷದ ಟಿ.ಕೆ. ಕಾಂಬಳಿ 9,371 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿ ಸಿ.ಎಚ್. ಪಾಟೀಲ 2,439 ಮತಗಳನ್ನು ಪಡೆದುಕೊಂಡಿದ್ದರು.
1972ರ ಚುನಾವಣೆಯಲ್ಲಿ ಒಟ್ಟು 55,798 ಮತದಾರರಿದ್ದರು, 43,994 ಮತದಾನವಾಗಿ ಶೇ.79.10 ದಾಖಲಾಗಿತ್ತು. ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್ನ ಆರ್.ವಿ. ರಂಗನಗೌಡ 25,694 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಎನ್.ಸಿ.ಓ ಪಕ್ಷದ ಎಸ್.ಆರ್. ಬೊಮ್ಮಾಯಿ 16,659 ಮತಗಳನ್ನು ಪಡೆದುಕೊಂಡಿದ್ದರು.
1978ರ ಚುನಾವಣೆಯಲ್ಲಿ ಒಟ್ಟು 76,427 ಮತದಾರರಿದ್ದರು.59,186 ಮತದಾನವಾಗಿತ್ತು ಅಂದರೆ ಶೇ.77.44 ರಷ್ಟು ಪ್ರಮಾಣದಲ್ಲಿ ಮತಚಲಾವಣೆಯಾಗಿತ್ತು. ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್ನ ಎಮ್.ಎಸ್. ಕಟಗಿ 34,761 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಪಕ್ಷೇತರ ಅಭ್ಯರ್ಥಿಯಾದ ಡಿ.ಎಚ್ ಮುನೀರ 16,884 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿಯಾದ ಎಲ್.ಬಿ. ಉಮಚಗಿ 2,385 ಮತಗಳನ್ನು ಪಡೆದುಕೊಂಡಿದ್ದರು.
1983ರ ಚುನಾವಣೆಯಲ್ಲಿ ಒಟ್ಟು 81,454 ಮತದಾರರಿದ್ದರು. ಶೇ.67.19 ರಷ್ಟು ಅಂದರೆ 54,727 ಮತದಾನವಾಗಿತ್ತು. 5 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಕುಬಿಹಾಳ 28,848 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಜೆಎನ್ಪಿಯ ಎಸ್.ಆರ್. ಮುಲ್ಕಿಪಾಟೀಲ 22,489 ಮತಗಳು ಹಾಗು ಪಕ್ಷೇತರ ಅಭ್ಯರ್ಥಿ ಪಿ.ವಿ. ಪಾಟೀಲ 830 ಮತಗಳನ್ನು ಪಡೆದುಕೊಂಡಿದ್ದರು.
1985ರ ಚುನಾವಣೆಯಲ್ಲಿ ಒಟ್ಟು 87,286 ಮತದಾರರಿದ್ದರು. ಪ್ರತಿಶತ 74.91 ರಷ್ಟು ಅಂದರೆ 65,386 ಮತದಾನವಾಗಿತ್ತು. 8 ಅಭ್ಯರ್ಥಿಗಳು ಕಣದಲ್ಲಿದ್ದರು. ಜನತಾಪಕ್ಷದ ಅಭ್ಯರ್ಥಿ ಬಿ.ಎ. ಉಪ್ಪಿನ 28,038 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ವಿ.ಎಸ್.ಕುಬಿಹಾಳ 21.578 ಮತಗಳನ್ನು ,ಪಕ್ಷೇತರ ಅಭ್ಯರ್ಥಿ ಗುಡಗೇರಿ ಎನ್.ಬಸವರಾಜ 12,754 ಮತಗಳನ್ನು ಪಡೆದುಕೊಂಡಿದ್ದರು.
1989ರ ಚುನಾವಣೆಯಲ್ಲಿ ಒಟ್ಟು 1,07,633 ಮತದಾರರಿದ್ದರು.ಶೇ.70.82 ರಷ್ಟು ಅಂದರೆ 76,229 ಜನ ಮತ ಚಲಾಯಿಸಿದ್ದರು. 8 ಅಭ್ಯರ್ಥಿಗಳು ಕಣದಲ್ಲಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಗೋವಿಂದಪ್ಪ.ಎಚ್.ಜುಟ್ಟಲ 36,925 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಜನತಾದಳದ ಆರ್.ವಿ. ದೇಸಾಯಿ 31,404 ಮತಗಳು ಹಾಗೂ ಜನತಾಪಕ್ಷದ ಡಿ.ತಿಪ್ಪಣ್ಣವರ 1,652 ಮತಗಳನ್ನು ಪಡೆದುಕೊಂಡಿದ್ದರು.
1994ರ ಚುನಾವಣೆಯಲ್ಲಿ ಒಟ್ಟು 1,13,022 ಮತದಾರರಿದ್ದರು.ಶೇ.71.85 ಅಂದರೆ 80,410 ಜನ ಮತ ಚಲಾಯಿಸಿದ್ದರು. 12 ಅಭ್ಯರ್ಥಿಗಳು ಕಣದಲ್ಲಿದ್ದರು. ಜನತಾದಳದ ಎಂ.ಎಸ್. ಅಕ್ಕಿ 32,707 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಕೆಸಿಪಿಯ ಸಿ.ಎಸ್. ಶಿವಳ್ಳಿ 19,320 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಜಿ.ಎಚ್. ಜುಟ್ಟಲ 17,034 ಮತಗಳನ್ನು ಪಡೆದುಕೊಂಡಿದ್ದರು.
1999 ರ ಚುನಾವಣೆಯಲ್ಲಿ ಒಟ್ಟು 1,25,817 ಮತದಾರರಿದ್ದರು.ಶೇ.74 ರಷ್ಟು ಅಂದರೆ 93,716 ಮತದಾನವಾಗಿತ್ತು. 8 ಅಭ್ಯರ್ಥಿಗಳು ಕಣದಲ್ಲಿದ್ದರು. ಪಕ್ಷೇತರ ಅಭ್ಯರ್ಥಿ ಸಿ.ಎಸ್. ಶಿವಳ್ಳಿ 30,692 ಮತಗಳನ್ನು ಪಡೆದು ಮೊದಲಬಾರಿಗೆ ಜಯಶೀಲರಾಗಿದ್ದರು. ಜೆಡಿಯು ಪಕ್ಷದ ಅಭ್ಯರ್ಥಿ ಅಕ್ಕಿ ಮಲ್ಲಿಕಾರ್ಜುನ ಸಹದೇವಪ್ಪ 20,184 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಜುಟ್ಟಲ ಗೋವಿಂದಪ್ಪ ಹನುಮಂತಪ್ಪ 18,278 ಮತಗಳನ್ನು ಪಡೆದುಕೊಂಡಿದ್ದರು.
2004 ರ ಚುನಾವಣೆಯಲ್ಲಿ ಒಟ್ಟು 1,38,605 ಮತದಾರರಿದ್ದರು. ಶೇ.69.01 ರಷ್ಟು ಅಂದರೆ 95,653 ಮತದಾನವಾಗಿತ್ತು. ಒಟ್ಟು 17 ಅಭ್ಯರ್ಥಿಗಳು ಕಣದಲ್ಲಿದ್ದರು. ಜೆಡಿಯು ಪಕ್ಷದ ಅಭ್ಯರ್ಥಿ ಎಮ್.ಎಸ್.ಅಕ್ಕಿ 28,184 ಮತಗಳನ್ನು ಪಡೆದುಕೊಂಡು ಎರಡನೇ ಬಾರಿಗೆ ಚುನಾಯಿತರಾಗಿದ್ದರು. ಪಕ್ಷೇತರ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 23,942 ಮತಗಳು ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅರವಿಂದ.ಎಮ್.ಕಟಗಿ 12,110 ಮತಗಳನ್ನು ಪಡೆದುಕೊಂಡಿದ್ದರು.
2008ರ ವಿಧಾನ ಸಭಾ ಚುನಾವಣೆಯಲ್ಲಿ ಒಟ್ಟು 1,55,099 ಮತದಾರರಿದ್ದರು. ಶೇ. 71.54 ರಷ್ಟು ಅಂದರೆ 1,10,868 ಮತದಾನವಾಗಿತ್ತು. ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿದ್ದರು. ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಸಿದ್ಧನಗೌಡ ಈಶ್ವರಗೌಡ 43,307 ಮತಗಳನ್ನು ಪಡೆದುಕೊಂಡು ಚುನಾಯಿತರಾಗಿದ್ದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 36,931 ಮತಗಳು ಹಾಗೂ ಜೆ.ಡಿ.ಎಸ್.ಅಭ್ಯರ್ಥಿ ಪಿ.ಸಿ.ಸಿದ್ದನಗೌಡರ್ 19,077 ಮತಗಳನ್ನು ಪಡೆದುಕೊಂಡಿದ್ದರು.
2013ರ ಚುನಾವಣೆಯಲ್ಲಿ ಒಟ್ಟು 1,68,831 ಮತದಾರರಿದ್ದರು. ಶೇ.76.71 ರಷ್ಟು ಅಂದರೆ 1,29,088 ಮತದಾನವಾಗಿತ್ತು. ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 52,690 ಮತಗಳನ್ನು ಪಡೆದುಕೊಂಡು ಎರಡನೇ ಬಾರಿ ಚುನಾಯಿತರಾಗಿದ್ದರು. ಕೆಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಸಿದ್ಧನಗೌಡ ಈಶ್ವರಗೌಡ 31,618 ಮತಗಳು ಹಾಗೂ ಬಿಜೆಪಿ ಅಭ್ಯರ್ಥಿ ಎಂ.ಆರ್.ಫಾಟೀಲ 23,641 ಮತಗಳನ್ನು ಪಡೆದುಕೊಂಡಿದ್ದರು.
2018ರ ಚುನಾವಣೆಯಲ್ಲಿ ಒಟ್ಟು 1,87,513 ಮತದಾರರಿದ್ದರು. ಶೇ.78.67 ರಷ್ಟು ಅಂದರೆ 1,47,524 ಮತದಾನವಾಗಿತ್ತು. ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಎಸ್.ಶಿವಳ್ಳಿ 64,871 ಮತಗಳನ್ನು ಪಡೆದುಕೊಂಡು ಮೂರನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಬಿಜೆಪಿಯ ಚಿಕ್ಕನಗೌಡ್ರ ಸಿದ್ಧನಗೌಡ ಈಶ್ವರಗೌಡ 64,237 ಮತಗಳು, ಜೆಡಿಯುನ ಹಜರತ ಅಲಿ ಶೇಖ್ ಜೋಡಮನಿ 7,318 ಮತಗಳು ಹಾಗೂ ಜೆಡಿಎಸ್ನ ಅಕ್ಕಿ ಮಲ್ಲಿಕಾರ್ಜುನ ಸಹದೇವಪ್ಪ 6,280 ಮತಗಳನ್ನು ಪಡೆದುಕೊಂಡಿದ್ದರು.
2018 ರಲ್ಲಿ ಈ ಕ್ಷೇತ್ರದಿಂದ ಚುನಾಯಿತರಾಗಿದ್ದ ರಾಜ್ಯದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ಕಳೆದ ಮಾರ್ಚ 22 ರಂದು ಅಕಾಲಿಕವಾಗಿ ನಿಧನರಾದ ಪರಿಣಾಮ, ಬರುವ ಮೇ.19,2019 ರಂದು ಉಪಚುನಾವಣೆ ನಡೆಯುತ್ತಿದೆ.
–ಮಂಜುನಾಥ ಡಿ.ಡೊಳ್ಳಿನ
ಹಿರಿಯ ಸಹಾಯಕ ನಿರ್ದೇಶಕರು
ರಾಜ್ಯ ಸಮಾಚಾರ ಕೇಂದ್ರ, ಹುಬ್ಬಳ್ಳಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.
ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.
ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ