ರಾಜಕೀಯ
ದಾವಣಗೆರೆ ಮತದಾರ ಹೊಸ ಮುಖ ಬಯಸಿದ್ರೆ ‘ಹೊನ್ನಾಳಿ ಹೊಡೆತ’ ಗ್ಯಾರೆಂಟಿ.. !
ಸುದ್ದಿದಿನ,ದಾವಣಗೆರೆ: ನಿರಂತರ ಮೂರು ಸೋಲು, ಮೂರು ಗೆಲುವಿಗೆ ವೇದಿಕೆಯಾದ ದಾವಣಗೆರೆ ಲೋಕಸಭಾ ಕ್ಷೇತ್ರ, ಇದೀಗ ಹೊಸ ಮುಖ ಬಯಸಿದರೆ ರಾಜ್ಯದ ಜನತೆಗೆ ‘ಹೊನ್ನಾಳಿ ಹೊಡೆತ’ ಇನ್ನಷ್ಟು ಮುನ್ನೆಲೆಗೆ ಬರುವ ಸಾಧ್ಯತೆ ಇದೆ.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧಿಸಿದ್ದು, ಇದೀಗ ನಾಲ್ಕನೇ ಬಾರಿಗೆ ಆಯ್ಕೆ ಬಯಸಿರುವ ಜಿಎಂ ಸಿದ್ದೇಶ್ವರ್ ಅವರಿಗೆ ಸಾಂಪ್ರದಾಯಿಕ ಎದುರಾಳಿ ಎಸ್ ಎಸ್ ಮಲ್ಲಿಕಾರ್ಜನ್ ಕಣದಲ್ಲಿ ಇಲ್ಲ. ಕಳೆದ ಮೂರು ಭಾರಿ ಆಯ್ಕೆಯಲ್ಲೂ ಅಲೆಗಳ ಮೇಲೆ ಗೆದ್ದವರು ಎನ್ನುವುದು ಜನಜನಿತ. ಒಮ್ಮೆ ತಂದೆಯ ಸಾವಿನ ಅನುಕಂಪದ ಅಲೆ, ಇನ್ನೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಯಡ್ಡಿಯೂಪ್ಪ ಅವರ ಅಲೆ ಹಾಗೂ ಮೂರನೇ ಬಾರಿ ಪ್ರಧಾನಿ ಮೋದಿಯವರ ಅಬ್ಬರದ ಅಲೆಯಲ್ಲಿ ಹ್ಯಾಟ್ರಿಕ್ ಮಾಡಿದರು. ಅಲ್ಲದೆ ಕೇಂದ್ರ ಸಚಿವರು ಆಗಿದ್ದರು. ಅಷ್ಟೇ ಬೇಗ ಸ್ಥಾನವನ್ನೂ ಕಳೆದುಕೊಂಡರು ಎನ್ನುವುದು ಈಗ ಇತಿಹಾಸ. ಆದರೆ, ಇದೀಗ ನಾಲ್ಕನೇ ಬಾರಿಯೂ ಜನ ಕೈ ಹಿಡಿಯುವ ಸಾಧ್ಯತೆ ಕಡಿಮೆ ಎನ್ನುವ ಉದ್ದೇಶದಿಂದ ಹಳ್ಳಿ ಸುತ್ತಿದ್ದಾರೆ. ಅಬ್ಬರದ ಪ್ರಚಾರವೂ ಕೈಗೊಂಡಿದ್ದಾರೆ.
ಎಸ್. ಎಸ್. ಮಲ್ಲಿಕಾರ್ಜುನ್ ಕಣದಿಂದ ಹಿಂದಕ್ಕೆ
ಮೂರು ಬಾರಿ ಹ್ಯಾಟ್ರಿಕ್ ಸೋಲಿಂದ ಧೃತಿಗೆಡದೆ ಕೊನೆ ಪ್ರಯತ್ನಕ್ಕೆ ಮುಂದಾದ ಎಸ್ ಎಸ್ ಎಂ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ, ಅವರ ಆಪ್ತ ಎಚ್ ಬಿ ಮಂಜಪ್ಪ ಅವರನ್ನು ಕಣಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಇತ್ತ ಸಿದ್ದೇಶ್ವರ್ ನನಗೆ ಪೈಪೋಟಿ ನೀಡುವ ಎದುರಾಳಿ ಇಲ್ಲ, ಎಸ್ ಎಸ್ ಎಂ ಎದುರಾಳಿಯಾಗಬಹುದು ಎನ್ನುವ ನಿರೀಕ್ಷೆಯಲ್ಲಿ ಊರು ಸುತ್ತಿದ್ದು ನಷ್ಟವಾಯಿತು ಎನ್ನುವಂತ ಸ್ಥಿತಿಗೆ ಬಂದಿದ್ದು ಸುಳ್ಳಲ್ಲ.
ಹೊನ್ನಾಳಿ ಹೊಡೆತ ?
ಅತಿಯಾದ ಆತ್ಮವಿಶ್ವಾಸದಿಂದ ಒಂದು ಹಂತದಲ್ಲಿ ಸುತ್ತಾಟ ಕಡಿಮೆ ಮಾಡಿದ ಬಿಜೆಪಿ ಅಭ್ಯರ್ಥಿಗೆ ಎಚ್ ಬಿ ಮಂಜಪ್ಪ ಸುತ್ತಾಟ, ಅವರ ತಂತ್ರ, ಮೈತ್ರಿ ಧರ್ಮ, ಅಹಿಂದ ಸಂಘಟನೆ ರಾಜಕೀಯ ವಿಶ್ಲೇಷಕರು, ಇಂಟಲಿಜೆನ್ಸ್ ವರದಿಗಳು ಹೊನ್ನಾಳಿ ಹೊಡೆತದ ಸೂಚನೆ ನೀಡಿದ್ದು ಮತ್ತೆ ಪ್ರಚಾರ ಚುರುಕುಗೊಳಿಸುವಂತೆ ಮಾಡಿದೆ.
ಮಂಜಪ್ಪ ಕಡಿಮೆ ಅವಧಿಯಲ್ಲಿ ಜಿಲ್ಲಾದ್ಯಂತ ಪ್ರವಾಸ ಮಾಡುವುದನ್ನೆ ಸವಾಲಾಗಿ ಸ್ವೀಕರಿದ್ದಾರೆ. ಇನ್ನು ಟಿಕೆಟ್ ಘೋಷಣೆ ಆರಂಭದಿಂದಲೇ ಹಣ ಬಲದ ವಿರುದ್ಧ ಬಡವನ ಹೋರಾಟ, ಅಹಿಂದ, ಮೈತ್ರಿ ತಂತ್ರದಡಿ ಅಲ್ಪಸಂಖ್ಯಾತ, ಹಿಂದುಳಿದ ದಲಿತ ಸಮುದಾಯಗಳ ವಿಶ್ವಾಸಕ್ಕೆ ಪಡೆಯುವ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಹರಿಹರದಲ್ಲಿ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್, ಹಾಲಿ ಶಾಸಕ ರಾಮಪ್ಪ ಒಂದೇ ವೇದಿಕೆಯಲ್ಲಿ ಸುತ್ತಾಡುತ್ತಿದ್ದಾರೆ. ಹರಪನಹಳ್ಳಿಯಲ್ಲಿ ಜೆಡಿಎಸ್ ಮುಖಂಡ ಕೊಟ್ರೇಶ್, ದಿ. ಎಂಪಿ ರವೀಂದ್ರ ಅಭಿಮಾನಿಗಳು, ಜಗಳೂರಲ್ಲಿ ಎಚ್ ಪಿ ರಾಜೇಶ್, ಮೈತ್ರಿ ಟೀಮ್, ಚನ್ನಗಿರಿಯಲ್ಲಿ ವದ್ದಿಗೆರೆ ರಮೇಶ್, ವಡ್ನಾಳ್ ರಾಜಣ್ಣ, ಮಯಕೊಂಡದಲ್ಲಿ ಬಸವಂತಪ್ಪ, ಹೊನ್ನಾಳಿಯಲ್ಲಿ ಶಾಂತನಗೌಡ್ರು ಹಾಗೂ ಮೈತ್ರಿ ಟೀಮ್ ಹಾಗೂ ಸ್ಥಳೀಯ ಎನ್ನುವ ತಂತ್ರ ಪ್ರಯೋಗ ಮಾಡಲಾಗುತ್ತಿದೆ. ಸಿದ್ದೇಶ್ವರ್ ಹೊರಗಿನವರು, ಮಂಜಪ್ಪ ಸ್ಥಳೀಯ ಎನ್ನುವ ವಿಷಯ ಮುನ್ನೆಲೆಗೆ ಬಂದಿದೆ. ಸಿದ್ದೇಶ್ವರ್ ಗೆ ೧೫ ವರ್ಷ ಅಧಿಕಾರ ಕೊಟ್ಟಿದ್ದೀರಿ. ಈ ಬಾರಿ ಸ್ಥಳೀಯ ಮಂಜಪ್ಪನಿಗೆ ಅವಕಾಶ ಮಾಡಿಕೊಡುವಂತೆ ಒತ್ತಿ ಒತ್ತಿ ಪ್ರಚಾರ ಮಾಡಲಾಗುತ್ತಿದೆ.
ಮಂಜಪ್ಪ ಸಹಿತ ಮೈತ್ರಿ ತಂಡ ತಾಲೂಕುವಾರು ಸುತ್ತಾಟ ಮಾಡುತ್ತಿದ್ದರೆ, ಇತ್ತ ಎಸ್ ಎಸ್ ಎಂ, ಎಸ್ಎಸ್ ದಾವಣಗೆರೆ ನಗರದಲ್ಲಿ ಆಯ್ದ ಗ್ರಾಮಗಳಲ್ಲೂ ರೋಡ್ ಶೋ ಮಾಡುತ್ತಿದ್ದಾರೆ. ಕಾರ್ಮಿಕ ಮುಖಂಡ ಎಚ್ ಕೆ ರಾಮಚಂದ್ರಪ್ಪ, ಜೆಡಿಎಸ್ ಗುಡ್ಡಪ್ಪ, ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಅಹಿಂದ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನು ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯರು ವಾರ್ಡವಾರು, ತಮ್ಮ ಭೂತ್ ಮಟ್ಟದಲ್ಲಿ ಸಕ್ರಿಯವಾಗಿರುವುದು ಎದುರಾಳಿ ನಿದ್ದೆ ಕೆಡಿಸುವಂತಾಗಿದೆ.
ಮತದಾರರೇ ಹಣ ಕೊಟ್ರು…!
ಮಂಜಪ್ಪ ಊರು ಸುತ್ತಲು ವಾಹನ ವ್ಯವಸ್ಥೆ, ಚುನಾವಣಾ ಖರ್ಚಿಗೆ ಮತದಾರರೇ ಹಣ ನೀಡುತ್ತಿರುವುದು ಇನ್ನೊಂದು ವಿಶೇಷವಾಗಿದ್ದು, ಬಿಜೆಪಿಯಲ್ಲಿ ಹಣದ ಕೊರತೆ ಇಲ್ಲ, ಆದರೆ, ದೂರವಿದ್ದ ನಾಯಕರು ಮುನ್ನೆಲೆಗೆ ಬಂದಿದ್ದಾರೆ. ಮಂಜಪ್ಪ ಅಭ್ಯರ್ಥಿ ಆದ ಕೂಡಲೇ ಅದೇ ಸಮಾಜ ಹಾಗೂ ಅಹಿಂದ ಮುಖಂಡರಾದ ಬಿ ಎಂ ಸತೀಶ್, ಜಯಪ್ರಕಾಶ್, ಲಿಂಗರಾಜ್, ಶಿವಕುಮಾರ್ ರಂಥ ಆನೇಕರು ಮುನ್ನೆಲೆಗೆ ಬರುತ್ತಿದ್ದಾರೆ. ಒಟ್ಟಾರೆ ಏಕಮುಖವಾದ ಕಣ ಇದೀಗ ನೇರ ಹಣಾಹಣಿಯಾಗಿದೆ. ಬಿಜೆಪಿ, ಕಾಂಗ್ರೆಸ್ ಯಾರೇ ಗೆದ್ದರೂ ಅಲ್ಪ ಅಂತರವಷ್ಟೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್
ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.
ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಹೇಳಿಕೆ
- ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.
| ಸಚಿವ ದಿನೇಶ್ ಗುಂಡೂರಾವ್
ಟ್ವೀಟ್
In consideration of public health, we are banning the use of artificial colours in Gobi Manchurian and cotton candy. Violation of this ban may result in imprisonment for up to 7 years and a fine of up to 10 lakhs.
Following reports of substandard quality and the presence of… pic.twitter.com/z2KWHi8Jbd
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 11, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್
-
ಕ್ರೀಡೆ7 days ago
ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ7 days ago
ವಿಶ್ವ ಫ್ಲಂಬರ್ ದಿನಾಚರಣೆ
-
ದಿನದ ಸುದ್ದಿ7 days ago
ಪಿಎಚ್ ಡಿ ; ಅವಧಿ ವಿಸ್ತರಣೆ
-
ದಿನದ ಸುದ್ದಿ7 days ago
ದಾವಣಗೆರೆ ವಿಶ್ವವಿದ್ಯಾಲಯ | 11ನೇ ಘಟಿಕೋತ್ಸವ :ದೀಪ್ತಿಗೆ ಐದು ; ಸಿಂಧುಬಾಯಿಗೆ ಮೂರು ಚಿನ್ನದ ಪದಕ
-
ದಿನದ ಸುದ್ದಿ7 days ago
ದಾವಣಗೆರೆ ವಿವಿ ಘಟಿಕೋತ್ಸವ ; ಮೂವರಿಗೆ ಗೌರವ ಡಾಕ್ಟರೇಟ್
-
ದಿನದ ಸುದ್ದಿ4 days ago
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
-
ದಿನದ ಸುದ್ದಿ5 hours ago
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ