Connect with us

ರಾಜಕೀಯ

ಮೋದಿಯನ್ನು ಕಾಡುತ್ತಿದೆ ಮೈತ್ರಿಕೂಟ ಭೀತಿ

Published

on

  • ಕೇಂದ್ರದಲ್ಲಿ ಒಂದು ಜಾತ್ಯತೀತ ಸರಕಾರವನ್ನು ರಚಿಸಬಲ್ಲ ಒಂದು ಚುನಾವಣೋತ್ತರ ಮೈತ್ರಿಕೂಟ ರೂಪುಗೊಳ್ಳಲಿದೆ ಎಂಬ ಭೀತಿಯ ಭೂತ ಮೋದಿಯನ್ನು ಕಾಡುತ್ತಿದೆ, ಇಂತಹ ಒಂದು ಸರಕಾರ ಮೈತ್ರಿಕೂಟದ ಎಲ್ಲ ಅಂಗಪಕ್ಷಗಳು ಅಂಗೀಕರಿಸುವ ಒಂದು ಸಮಾನ ಕನಿಷ್ಟ ಕಾರ್ಯಕ್ರಮದ ಆಧಾರದಲ್ಲಿ ರಚನೆಗೊಳ್ಳುತ್ತದೆ. ಇಂತಹ ಒಂದು ಮೈತ್ರಿ ತನ್ನ ಜಾಗದಲ್ಲಿ ಅಧಿಕಾರಕ್ಕೆ ಬರಬಹುದು ಎಂಬ ಭೀತಿಯನ್ನೇ ಮೋದಿ ಮೈತ್ರಿಗಳ ವಿರುದ್ಧ ತನ್ನ ಆರ್ಭಟಗಳ ಮೂಲಕ ಪ್ರದರ್ಶಿಸುತ್ತಿದ್ದಾರೆ. ಆ ಭೀತಿಯ ಭೂತೋಚ್ಛಾಟನೆಗೆ ಅವರು ಪ್ರಯತ್ನಿಸುತ್ತಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ನರೇಂದ್ರ ಮೋದಿ ಮಹಾಗಟ್‌ಬಂಧನ್ ಅಥವ ಪ್ರತಿಪಕ್ಷಗಳ ಮೈತ್ರಿಯನ್ನು ಮಹಾಮಿಲಾವಟ್(ಮಹಾ ಕಲಸುಮೇಲೋಗರ) ಎಂದು ಅದರ ಮೇಲೆ ದಾಳಿ ನಡೆಸದ ದಿನವೇ ಇಲ್ಲ. ಪ್ರತಿಪಕ್ಷಗಳ ಮುಖಂಡರುಗಳು ಅಧಿಕಾರದಾಹ ತುಂಬಿದ ಸಮಯಸಾಧಕರ ಒಂದು ಪಡೆ ಎಂದು ವರ್ಣಿಸದ ದಿನವೇ ಇಲ್ಲ.

ಪ್ರಚಾರದ ಆರಂಭದಿಂದಲೂ, ಮೋದಿಯವರ ಭಾಷಣಗಳಲ್ಲಿ, ಮಹಾಮಿಲಾವಟ್ ಸರಕಾರ ಹೇಗೆ ಅಭಿವೃದ್ಧಿಗೆ ಕಂಟಕವಾಗುತ್ತದೆ, ರಾಷ್ಟ್ರೀಯ ಭದ್ರತೆಯನ್ನು ಖಾತ್ರಿಪಡಿಸಲಾರದ ಒಂದು ದುರ್ಬಲ ಸರಕಾರವಾಗುತ್ತದೆ, ಹೇಗೆ ಉತ್ತರ ಪ್ರದೇಶ ಮತ್ತು ಇತರೆಡೆಗಳಲ್ಲಿನ ಪ್ರತಿಪಕ್ಷಗಳ ಮೈತ್ರಿ ಮುಖಂಡರ ವೈಯಕ್ತಿಕ ಹಿತಗಳಿಗಾಗಿ ಅಧಿಕಾರವನ್ನು ಬಾಚಿಕೊಳ್ಳುವ ಒಂದು ನೀತಿವಿಹೀನ, ಸಮಯಸಾಧಕರ ಗುಂಪಷ್ಟೇ ಆಗಿದೆ, ಎಂಬುದೇ ನಿರಂತರವಾದ ರಾಗಾಲಾಪ.

ಪ್ರತಿಪಕ್ಷಗಳ ಮೈತ್ರಿಯ ಮೇಲೆ ಇಂತಹ ಒಂದು ಸತತ ದಾಳಿ, ತನ್ನ ಆಳ್ವಿಕೆ ಹೋಗಿ ಒಂದು ಮೈತ್ರಿ ಸರಕಾರ ಬರುವ ಸಂಭವವಿದೆ ಎಂಬ ನಿಜವಾದ ಭೀತಿಯನ್ನು ಮೋದಿ ಹೊಂದಿದ್ದಾರೆ ಎಂಬುದನ್ನು ಪ್ರಕಟಪಡಿಸುತ್ತದೆ.

1977ರಿಂದೀಚೆಗೆ, ಕೆಲವು ಅಪವಾದಗಳನ್ನು ಬಿಟ್ಟರೆ, ಮೈತ್ರಿ ಸರಕಾರಗಳು ಒಂದು ಸಾಮಾನ್ಯ ಸಂಗತಿಯಾಗಿ ಬಿಟ್ಟಿದೆ. ಮೋದಿ ವರ್ಣನೆಗೆ ತದ್ವಿರುದ್ಧವಾಗಿ ಮೈತ್ರಿ ಸರಕಾರಗಳು ಸ್ಥಿರ ಸರಕಾರಗಳನ್ನು ಕೊಟ್ಟಿವೆ ಮತ್ತು ಅಭಿವೃದ್ಧಿ ಕುರಿತಂತೆ ಅವುಗಳ ದಾಖಲೆ ಬೇರೆ ಸರಕಾರಗಳಿಗಿಂತ ಭಿನ್ನವಾಗಿಯೇನೂ ಇಲ್ಲ, ಎಲ್ಲವೂ ಬಂಡವಾಳಶಾಹಿ ಅಭಿವೃದ್ಧಿಯ ಚೌಕಟ್ಟಿನಲ್ಲೇ ಇವೆ. ನಿಜಸಂಗತಿಯೆಂದರೆ, 1999-2004ರ ವಾಜಪೇಯಿ ನೇತೃತ್ವದ ಮೈತ್ರಿ ಸರಕಾರವನ್ನು ಬಿಜೆಪಿಯೇ ಪ್ರಕಾಶಮಾನ ಭಾರತದ ಒಂದು ಮಾದರಿ ಎಂದು ಹೇಳುತ್ತಿತ್ತು.

ಮೋದಿ ಏನೇ ಹೇಳಿಕೊಳ್ಳಲಿ, ಒಂದು ಸಮಾನ ಕನಿಷ್ಟ ಕಾರ್ಯಕ್ರಮವನ್ನು ಆಧರಿಸಿದ ಒಂದು ಚುನಾವಣೋತ್ತರ ಮೈತ್ರಿಯು ಸ್ಥಿರ ಸರಕಾರವೊಂದರ ರಚನೆಗೆ ಆಧಾರವಾಗುವುದಿಲ್ಲ ಎಂದು ನಂಬಲು ಕಾರಣಗಳೇನೂ ಇಲ್ಲ. 2004ರ ಚುನಾವಣೆಗಳ ನಂತರ ಯುಪಿಎ ರಚನೆಗೊಂಡು ಒಂದು ಸಮಾನ ಕನಿಷ್ಟ ಕಾರ್ಯಕ್ರಮ ಅಂಗೀಕಾರವಾಯಿತು ತಾನೇ. ಬಿಜೆಪಿಯ ಅನುಭವವೂ ಇದೇ. 1998 ರಲ್ಲಿ ಮತ್ತು 1999ರಲ್ಲಿ ಚುನಾವಣೆಗಳ ನಂತರ ಎನ್‌ಡಿಎ ಮೈತಿಕೂಟ ರಚಿಸಲು ಅದು ಆಳ್ವಿಕೆಯ ಅಜೆಂಡಾ ಎಂಬುದನ್ನು ರೂಪಿಸಿತು. ಆ ಸಮಯದಲ್ಲಿ ಬಿಜೆಪಿ ಇಂತಹ ಒಂದು ಸರಕಾರದ ರಚನೆಗಾಗಿ, 370ನೇ ವಿಧಿಯ ರದ್ಧತಿ, ರಾಮಮಂದಿರ ನಿರ್ಮಾಣ ಮತ್ತು ಸಮಾನ ನಾಗರಿಕ ಸಂಹಿತೆಯ ತನ್ನ ಮೂಲ ಬೇಡಿಕೆಗಳನ್ನು ಬದಿಗಿಟ್ಟಿತ್ತು. ಮೋದಿ ಈಗ ಇಂತಹ ಮೈತ್ರಿ ಸರಕಾರಗಳನ್ನು ದೂಷಿಸುವುದೆಂದರೆ, ತನ್ನದೇ ಪಕ್ಷದ ಸರಕಾರಗಳನ್ನೂ ಖಂಡಿಸಿದಂತೆಯೇ ಸರಿ.

ಇಂತಹ ಮಹಾಮಿಲಾವಟ್ ಗ್ಯಾಂಗ್ ಸರಕಾರದಲ್ಲಿ ಇದ್ದಾಗ ಮಾವೋವಾದಿ ಚಟುವಟಿಕೆಗಳು ಭುಗಿಲೆದ್ದವು ಎಂದು ದೂಷಿಸಿರುವುದು, ಮತ್ತು ತನ್ನ ಸರಕಾರ ಬಂದ ಮೇಲೆ ಅವನ್ನು ಪರಿಣಾಮಕಾರಿ ಭದ್ರತಾ ಕಾರ್ಯಾಚರಣೆಗಳ ಮೂಲಕ ಮೆಟ್ಟಿ ಹಾಕಲಾಯಿತು ಎಂದಿರುವುದು ಕೂಡ ಮೋದಿಯ ಅಸಂಬದ್ಧ ಹೇಳಿಕೆ. ಮೋದಿಯ ಈ ಸುಳ್ಳು, ಪ್ರಸಕ್ತ ಚುನಾವಣಾ ಪ್ರಚಾರದ ವೇಳೆಯಲ್ಲೇ ಬಯಲಿಗೆ ಬಂದಿದೆ. ಗದ್ಚಿರೊಲಿಯಲ್ಲಿ ಒಂದು ಮಾವೋವಾದಿ ದಾಳಿಯಲ್ಲಿ 15 ಭದ್ರತಾ ಸಿಬ್ಬಂದಿಯ ಪ್ರಾಣ ಹೋದವು, ಮತ್ತು ಛತ್ತಿಸ್‌ಗಡ್‌ನ ದಾಂತೆವಾಡದಲ್ಲಿ ಒಂದು ಸ್ಫೋಟಕ ಉಪಕರಣದಿಂದ ಉಂಟಾದ ಕಾರ್ ಸ್ಫೋಟದಲ್ಲಿ ಆ ಕಾರಿನಲ್ಲಿದ್ದ ಒಬ್ಬ ಬಿಜೆಪಿ ಶಾಸಕ ಮತ್ತು ನಾಲ್ವರು ಭದ್ರತಾ ಸಿಬ್ಬಂದಿ ಕೊಲ್ಲಲ್ಪಟ್ಟರು.

ಈ ಪರಿಶುದ್ಧ ಮೋದಿ ಸರಕಾರದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸನ್ನಿವೇಶ ಹೇಗೆ ಹದಗೆಟ್ಟಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಅಲ್ಲಿ 2014ರಿಂದ 2019ರ ನಡುವೆ ಭಯೋತ್ಪಾದಕ ದಾಳಿಗಳ ಸಂಖ್ಯೆ 109ರಿಂದ 626ಕ್ಕೆ ಏರಿದೆ ಮತ್ತು ಕೊಲ್ಲಲ್ಪಟ್ಟ ಭದ್ರತಾ ಸಿಬ್ಬಂದಿಯ ಸಂಖ್ಯೆ 130ರಿಂದ 483ಕ್ಕೇರಿದೆ.

ಹೀಗೆ ಇಲ್ಲಿರುವ ಪ್ರಶ್ನೆ ಒಂದು ಏಕ ಪಕ್ಷ ಬಹುಮತದ ಸರಕಾರ ಇದೆಯೇ ಅಥವ ಒಂದು ಮೈತ್ರಿಕೂಟದ ಸರಕಾರ ಇದೆಯೇ ಎಂಬುದಲ್ಲ. ಆ ಸರಕಾರ ಯಾವ ಧೋರಣೆಗಳನ್ನು ಮತ್ತು ಕಾರ್ಯಕ್ರಮವನ್ನು ಅನುಸರಿಸುತ್ತಿದೆ ಎಂಬುದೇ ಪ್ರಶ್ನೆ.

ನೋಟುರದ್ಧತಿಯ ಕರಾಳ ಧೋರಣೆಯನ್ನು ಹೇರಿದ್ದು ಲೋಕಸಭೆಯಲ್ಲಿ ಬಹುಮತ ಹೊಂದಿದ್ದ ಬಿಜೆಪಿಯ ನೇತೃತ್ವದ ಒಂದು ನಿರ್ಣಾಯಕ ಸರಕಾರವೇ ತಾನೇ? ಈ ವಿಧ್ವಂಸಕಾರಿ ಹೆಜ್ಜೆಗೆ ಯಾರನ್ನೂ ಹೊಣೆ ಮಾಡಲಾಗಿಲ್ಲ.

ಮಹಾಗಟ್‌ಬಂಧನ್ ರಚಿಸಿಕೊಂಡಿರುವ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಪಕ್ಷಗಳು ಮೋದಿಯವರ ಪ್ರಧಾನ ಗುರಿ, ಏಕೆಂದರೆ, ಈ ಮೈತ್ರಿಕೂಟ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಒಂದು ನಿರ್ಣಾಯಕ ಸೋಲು ಉಣ್ಣಿಸುವ ಬೆದರಿಕೆ ಒಡ್ಡಿದೆ. ಆದರೆ ಪ್ರತಿಪಕ್ಷಗಳ ಮೈತ್ರಿಗಳ ಮೇಲೆ ದಾಳಿ ಮಾಡುವ ಭರದಲ್ಲಿ ಎನ್‌ಡಿಎ 40 ಪಕ್ಷಗಳ ಒಂದು ಮಹಾಗಟ್‌ಬಂಧನ್ ಎಂಬುದನ್ನು ಮೋದಿ ಮರೆತಿದ್ದಾರೆ.

ಕೇಂದ್ರದಲ್ಲಿ ಒಂದು ಜಾತ್ಯತೀತ ಸರಕಾರವನ್ನು ರಚಿಸಬಲ್ಲ ಒಂದು ಚುನಾವಣೋತ್ತರ ಮೈತ್ರಿಯ ಭೀತಿಯ ಭೂತ ಮೋದಿಯನ್ನು ಕಾಡುತ್ತಿದೆ, ಇಂತಹ ಒಂದು ಸರಕಾರ ಮೈತ್ರಿಕೂಟದ ಎಲ್ಲ ಅಂಗಪಕ್ಷಗಳು ಅಂಗೀಕರಿಸುವ ಒಂದು ಸಮಾನ ಕನಿಷ್ಟ ಕಾರ್ಯಕ್ರಮ.

(ಈ ವಾರದ ಜನಶಕ್ತಿವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಪ್ರಕಾಶ ಕಾರಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ಚುನಾವಣಾ ಆಯೋಗ ಸಮಾವೇಶ

Published

on

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ.

ಈ ಸಮಾವೇಶದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಲಾಗುವುದು ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಮತದಾನದ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿತ ಮತ್ತು ನಿರ್ದಿಷ್ಟ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಲಾಗುವುದು.

ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಪುಣೆ, ಥಾಣೆ, ನಾಗ್ಪುರ, ಪಾಟ್ನಾ ಸಾಹಿಬ್, ಲಖನೌ ಮತ್ತು ಕಾನ್ಪುರ ನಗರ ಪಾಲಿಕೆಯ ಆಯುಕ್ತರು ಮತ್ತು ಬಿಹಾರ ಮತ್ತು ಉತ್ತರದ ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರುಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ6 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ2 weeks ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ2 weeks ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ2 weeks ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending