ರಾಜಕೀಯ
NRC ಮತ್ತು CAA ಯಾರಿಗೆ ಲಾಭ..?
- ಬಿಂದು ಗೌಡ ಕೆಪಿಸಿಸಿ,ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ
ಒಂದು ಮನೆಯಲ್ಲಿ ನಾಲ್ಕು ಜನ ಇದ್ರು ಆದ್ರೆ ತಿನ್ನೋಕೆ ಇದ್ದಿದ್ದೇ ಎರಡು ರೊಟ್ಟಿ ಕಡೆಗೆ ಅರ್ಧ ಅರ್ಧ ತಗೊಂಡು ಹಂಚಿಕೊಂಡು ತಿನ್ನೋಣ ಅಂತ ಮಾತು ಕಥೆ ಆಯ್ತು ಇನ್ನೇನು ಎರಡು ರೊಟ್ಟಿ ಭಾಗ ಆಗಿ ನಾಲ್ಕು ಜನ ಹಂಚಿಕೊಳ್ಳಬೇಕು ಅಷ್ಟರಲ್ಲಿ ಹೊರಗಿಂದ ಯಾರೋ 3 ಜನ ಬಂದ್ರು ಈಗ ಇರುವ 2 ರೊಟ್ಟಿಯನ್ನು 4+3 ಅಂದ್ರೆ 7 ಜನ ಹಂಚಿಕೊಳ್ಳಬೇಕು , ಹೇಗೆ ಹಂಚಿಕೊಳ್ಳುತ್ತಾರೆ, ಇದರಿಂದ ಹೊಟ್ಟೆ ತುಂಬುತ್ತಾ ? ರೊಟ್ಟಿಯನ್ನು ಹಂಚಿಕೊಳ್ಳಬಹುದು ಭೂಮಿಯನ್ನು ಹಂಚಿಕೊಳ್ಳೋಕೆ ಸಾಧ್ಯವಾ ?
ಹೌದು ಈಗಿನ ಸಧ್ಯದ ಪರಿಸ್ಥಿತಿ ಹಾಗಿದೆ ದೇಶದಲ್ಲಿ ಈಗಾಗಲೇ ನಿರುದ್ಯೋಗ ಸಮಸ್ಯೆ ಕಳೆದ 45 ವರ್ಷದಲ್ಲೇ ಇದೆ ಮೊದಲ ಬಾರಿಗೆ ಇಷ್ಟರ ಮಟ್ಟಿಗೆ ನಿರುದ್ಯೋಗ ಸಮಸ್ಯೆ ಕಂಡು ಬಂದಿದೆ ಅಂತದರಲ್ಲಿ ಹೊರ ದೇಶಗಳಿಂದ ಬರುವವರಿಗೆ ಜಾಗ ಕೊಟ್ಟು ಪೌರತ್ವವನ್ನು ಕೊಡ್ತೀರಿ ಆಮೇಲೆ ಅವರಿಗೆ ಉದ್ಯೋಗ ಎಲ್ಲಿಂದ ಕೊಡ್ತೀರಿ ? ಬಂದವರು ಬಂದವರ ಹಾಗೆ ಇರ್ತಾರ ? ನೋ ಮದುವೆ ಮಕ್ಕಳು ಹೀಗೆ ಜನಸಂಖ್ಯೆ ಹೆಚ್ಚುತ್ತಲೇ ಹೋಗುತ್ತೆ ಅವರಿಗೆಲ್ಲ ಉದ್ಯೋಗ, ಆಹಾರ ಎಲ್ಲಿಂದ ಉತ್ಪತ್ತಿ ಆಗುತ್ತೆ ಈಗಾಗಲೇ ಅವೈಜ್ಞಾನಿಕ ಜಿ ಎಸ್ ಟಿ ಹೊರೆಯಾಗಿದೆ.
ನೋಟ್ ಬಂದಿಗಳ ಕಾರಣಕ್ಕೆ ಎಷ್ಟೋ ಕಾರ್ಖಾನೆ , ಉದ್ದಿಮೆ , ವ್ಯವಹಾರಗಳು ಮುಚ್ಚಿಹೋಗಿವೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ , ಇಲ್ಲಿರುವವರೇ ಕೆಲಸಗಳನ್ನ ಕಳೆದುಕೊಂಡು ಮನೆಯಲ್ಲಿ ಕೂತಿರುವಾಗ , ನಿರುದ್ಯೋಗ ಹಸಿವಿನ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ, ದೊಡ್ಡ ದೊಡ್ಡ ಉದ್ಯಮಿಗಳು ನಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ CAA ಅವಶ್ಯಕತೆ ಇದೆಯಾ ?
ಇನ್ನು NRC ಇದಿನ್ನೂ ಜಾರಿಯಾಗಿಲ್ಲ , ಆಗುತ್ತೆ ಅನ್ನುವ ಸುಳಿವು ಇದೆ 1990ರಲ್ಲಿ ಹುಟ್ಟಿರುವ ನನ್ನಲ್ಲೇ BIRTH CERTIFICATE ಇಲ್ಲ ಇನ್ನು ಹಳ್ಳಿಗಾಡುಗಳಲ್ಲಿ ಹುಟ್ಟಿದ , ಮನೆಯಲ್ಲಿಯೇ ಹೆರಿಗೆ ಆದವರ ಜನನ ಪ್ರಮಾಣ ಪತ್ರವನ್ನು ಎಲ್ಲಿಂದ ತರೋದು , ಆದಿವಾಸಿಗಳು , ಹಕ್ಕಿ ಪಿಕ್ಕಿಯವರು ಬುಡಕಟ್ಟಿನವರು ಇಂದಿಗೂ ಸೌಲಭ್ಯ ವಂಚಿತರಾಗಿ ಅರಣ್ಯಗಳಲ್ಲಿ ಇದ್ದಾರೆ ಅವರೆಲ್ಲ ಎಲ್ಲಿಂದ ತರ್ತಾರೆ ?? ನಮ್ಮ ದೇಶದಲ್ಲಿ ಏನಿಲ್ಲ ಅಂದ್ರು ಸಾವಿರಾರು ಅನಾಥ ಆಶ್ರಮ , ವೃದ್ಧಾಶ್ರಮಗಳು ಇವೆ ಅವರೆಲ್ಲ ಎಲ್ಲಿಂದ ತರ್ತಾರೆ ತಮ್ಮ ಜನನ ಪ್ರಮಾಣ ಪತ್ರಗಳನ್ನು ?
ಆಧಾರ್ ಕಾರ್ಡ್ , ಪ್ಯಾನ್ ಕಾರ್ಡ್ , ವೋಟರ್ ಐಡಿ , ಪಾಸ್ ಪೋರ್ಟ್ , ರೇಶನ್ ಕಾರ್ಡ್ , ಡ್ರೈವಿಂಗ್ ಲೈಸನ್ಸ್ ಇದ್ಯಾವುದೂ ಕೂಡ ದಾಖಲೆ ಅಲ್ಲ ಅನ್ನೋದೇ ಆದ್ರೆ ಇನ್ನೇನು ಕೊಟ್ಟು ಸಾಭೀತು ಪಡಿಸಬೇಕು ??
ಬಿಜೆಪಿ MEMBERSHIP CARD ತೋರಿಸಿ ಈ ದೇಶದ ಪ್ರಜೆ ಅಂತ ಸಾಬೀತು ಪಡಿಸಬೇಕಾ ???
ಆಧಾರ್ ಕಾರ್ಡ್ ಆಧಾರ ಅಲ್ಲ ಅಂದಾದರೆ ಯಾವ ಆಧಾರದ ಮೇಲೆ ಮಾಡಿದ್ದು ಅದನ್ನ ಯಾತಕ್ಕಾಗಿ ಮಾಡಿದ್ದು , ಜನಗಳ ಸಮಯ ಜೊತೆಗೆ ಹಣ ಎರಡು ಖರ್ಚಾಗಿದೆ ಇನ್ನು ಆಗುತ್ತಲೇ ಇದೆ ಒಂದು ಸಾರಿ ಅಪ್ಡೇಟ್ ಮಾಡಿಸೋಕೆ 50 ರೂಪಾಯಿ ಕೊಡಬೇಕು ಆಧಾರ್ ಆಧಾರ ಅಲ್ಲ ಅಂದಮೇಲೆ ಅಪ್ಡೇಟ್ ಯಾಕೆ ಮಾಡಿಸಬೇಕು ಬ್ಯಾನ್ ಮಾಡಿ ಜನರ ಸಮಯ ಮತ್ತು ದುಡ್ಡು ಆದ್ರೂ ಉಳಿಯುತ್ತೆ!
ಇದರಿಂದ ಮುಸಲ್ಮಾನರಿಗೆ ಮಾತ್ರ ತೊಂದರೆ ಅನ್ನೋದು ಮೂರ್ಖತನ , ಪಕ್ಕದ ಮನೆ ಅಹ್ಮದ್ ಭಾಯ್ ಅವರ ಹಿರೀಕರು ಜನನ ಪುರಾವೆ ಇಟ್ಕೊಂಡಿದ್ರೆ ಅವರಿಗೇನು ಸಮಸ್ಯೆ ಇಲ್ಲ ಇಲ್ಲಿನ ಪೌರತ್ವ ಪಡೀತಾರೆ ಅದೇ ಅಹ್ಮದ್ ಅಣ್ಣನ ಪಕ್ಕದ ಮನೆಯವ ಸುರೇಶ ಯಾವ ದಾಖಲೆ ಇಟ್ಕೊಂಡಿಲ್ಲ ಅಂದ್ರೆ ಅವನು ಈ ದೇಶದ ಪ್ರಜೆ ಅಲ್ಲ ಅಂತ ಡೈರೆಕ್ಟ್ ಆಗಿ ಡಿಟೆಂಶನ್ ಸೆಂಟರ್ ಗೆ ಹಾಕ್ತಾರೆ ಹಿಂದೂ ಅಂತ ಸುಮ್ಮನೆ ಬಿಡೋದಿಲ್ಲ .
ಆದ್ದರಿಂದ NRC ಮತ್ತು CAA ಇಂದ ಅನಾನುಕೂಲವೆ ಹೊರತು ಅನುಕೂಲವಾಗಲಿ , ಲಾಭವಾಗಲಿ ದೇಶದ ಜನತೆಗೆ ಇಲ್ಲ ಇದರಿಂದ ಅನುಕೂಲ ಬಹುಶಃ ಬಿಜೆಪಿಗರಿಗೆ ಆಗಬಹುದು (ವೋಟರ್ಸ್ ಮ್ಯಾಟರ್ಸ್ ) ಅಷ್ಟೇ ಬಿಟ್ರೆ ಬೇರೆ ಇಲ್ಲ , ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ಕೆಲಸಕ್ಕೆ ಬಾರದ ಇಂತಹ ವಿಚಾರಗಳನ್ನು ಬಿಟ್ಟು ನಿಜವಾಗಿಯೂ ಗಮನ ಕೊಡಬೇಕಾದ ಆರ್ಥಿಕ ಸಮಸ್ಯೆ , ಶಿಕ್ಷಣ , ರಕ್ಷಣೆ , ಭದ್ರತೆ , ನಿರುದ್ಯೋಗ ಇವುಗಳ ಬಗ್ಗೆ ಗಮನ ಕೊಡಲಿ.
ಇನ್ನುಳಿದಂತೆ ಭಾವುಕವಾಗಿ ಯೋಚನೆ ಮಾಡೋದಾದರೆ ಹೌದು ನಮಗೆ ಬೇಕಿಲ್ಲ ನಾವು ಈ ಮಣ್ಣಿನ ಮಕ್ಕಳು ನಮ್ಮ ನೆಲದಲ್ಲಿ ನಾವು ಯಾರಿಗೂ ನಾವು ಇಲ್ಲಿಯವರು ಎಂದು ಸಾಬೀತು ಪಡಿಸುವ ಅವಶ್ಯಕತೆ ಇಲ್ಲ !
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್
ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.
ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಹೇಳಿಕೆ
- ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.
| ಸಚಿವ ದಿನೇಶ್ ಗುಂಡೂರಾವ್
ಟ್ವೀಟ್
In consideration of public health, we are banning the use of artificial colours in Gobi Manchurian and cotton candy. Violation of this ban may result in imprisonment for up to 7 years and a fine of up to 10 lakhs.
Following reports of substandard quality and the presence of… pic.twitter.com/z2KWHi8Jbd
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 11, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243