ರಾಜಕೀಯ
ಬಿಜೆಪಿ ಅಭ್ಯರ್ಥಿಯಾಗಿ ಭಯೋತ್ಪಾದನಾ ಆರೋಪಿ-ಒಂದು ಕೇಡಿನ ಪ್ರತೀಕ
- ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತು ಹಾಕಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಭೋಪಾಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಜ್ಞಾ ಸಿಂಗ್ ಠಾಕುರ್ ನಾಮಕರಣ 17ನೇ ಲೋಕಸಭಾ ಚುನಾವಣೆಗಳಲ್ಲಿ ಒಂದು ಮಹತ್ವದ, ಅಶುಭಕಾರೀ ಕ್ಷಣ. ಬಿಜೆಪಿಯ ಈ ನಿರ್ಧಾರ ಈ ಚುನಾವಣೆಯಲ್ಲಿ ಅದರ ನಿಜವಾದ ವೇದಿಕೆ ಏನೆಂಬುದರ ಒಂದು ಘೋಷಣೆಯಾಗಿದೆ. ಯಾವುದೇ ಮುಲಾಜಿಲ್ಲದ ಉಗ್ರ ಹಿಂದುತ್ವ, ಮತ್ತು ಅದರೊಂದಿಗೆ ಅದರ ಎಲ್ಲ ನಕಾರಾತ್ಮಕ ತೊಡಕುಗಳು-ಇದೇ ಆ ವೇದಿಕೆ.
ಪ್ರಜ್ಞಾ ಠಾಕುರ್ 2008ರ ಮಾಲೆಗಾಂವ್ ಸ್ಫೋಟದ ಒಬ್ಬ ಆರೋಪಿ. ಈ ಸ್ಫೊಟವನ್ನು ಸಂಘಟಿಸಿದ ಗುಂಪಿನ ಸೂತ್ರಧಾರಳು ಎಂಬ ಆಪಾದನೆ ಆಕೆಯ ಮೇಲಿದೆ. ಈ ಮೊಕದ್ದಮೆಯ ಆರೋಪ ಪತ್ರ ಆರು ಜನಗಳನ್ನು ಸಾಯಿಸಿದ ಈ ಸ್ಫೋಟವನ್ನು ಉಂಟು ಮಾಡುವಲ್ಲಿ ಬಳಸಿದ ಸ್ಫೋಟಕಗಳಿಂದ ತುಂಬಿದ್ದ ಮೋಟಾರ್ ಸೈಕಲ್ ಆಕೆಯದ್ದು ಎಂದು ಹೊರಗೆಡಹಿದೆ.
ಮೋದಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಆಕೆಯ ವಿರುದ್ಧ ಇದ್ದ ಮೊಕದ್ದಮೆಯನ್ನು ವಿಫಲಗೊಳಿಸಲು ಸಕಲ ಪ್ರಯತ್ನಗಳೂ ನಡೆದವು. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಆಕೆಯ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿಲ್ಲ ಎಂದು ನ್ಯಾಯಾಲಯಕ್ಕೆ ಹೇಳಿತು. ಆದರೆ ನ್ಯಾಯಾಲಯ ಅದನ್ನು ಒಪ್ಪದೆ ಆಕೆಯನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಆರೋಪಿಯಾಗಿಸಿದೆ. ಈಗ ಆಕೆ ವಿಚಾರಣೆಯ ನಡುವೆ ಜಾಮೀನಿನಲ್ಲಿ ಹೊರಗಿದ್ದಾರೆ.
ಇಂತಹ ಒಬ್ಬ ಭಯೋತ್ಪಾದನಾ ಆರೋಪಿಯನ್ನು ಭೋಪಾಲದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಮಾಡಿದೆ. ಈ ಎಲ್ಲ ವರ್ಷಗಳಲ್ಲಿ ಆಕೆ ತನ್ನ ಉನ್ಮತ್ತ ಹಿಂದುತ್ವ ಮತ್ತು ಮುಸ್ಲಿಂ-ದ್ವೇಷಿ ಅಭಿಪ್ರಾಯಗಳನ್ನು ಎಂದೂ ಗುಟ್ಟಾಗಿ ಇಟ್ಟಿಲ್ಲ.
ನಾಮಪತ್ರ ಸಲ್ಲಿಸಿದ ಕೂಡಲೇ ಆಕೆ ಮಹಾರಾಷ್ಟ್ರ ಪೋಲೀಸ್ ಪಡೆಯ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಮುಖ್ಯಸ್ಥರಾಗಿದ್ದ ದಿವಂಗತ ಹೇಮಂತ ಕರ್ಕರೆ ಮೇಲೆ ಎರಗಿದರು. ಕರ್ಕರೆ ಮಾಲೆಗಾಂವ್ ಸ್ಫೋಟದ ತನಿಖೆ ಮಾಡಿದ್ದ, ಮತ್ತು ಪ್ರಜ್ಞಾ ಠಾಕುರ್ ಮತ್ತು ಆಕೆಯ ಸಹಯೋಗಿಗಳನ್ನು ಬಂಧಿಸಿದ್ದ ಪೋಲೀಸ್ ಅಧಿಕಾರಿ. ತಾನು ಕರ್ಕರೆಗೆ ಶಾಪ ಹಾಕಿದ್ದೆ, ಅದರಿಂದಾಗಿ ೪೫ ದಿನಗಳೊಳಗೆ ಆತ ಭಯೋತ್ಪಾದಕ ಗುಂಡಿಗೆ ಬಲಿಯಾಗಿ ಸತ್ತರು ಎಂದು ಆಕೆ ಹೇಳಿದಳು. ಹೇಮಂತ ಕರ್ಕರೆ ಒಬ್ಬ ಧೀರ ಪೋಲೀಸ್ ಅಧಿಕಾರಿಯಾಗಿದ್ದು, ನವಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರು. ಇಂತಹ ಒಂದು ಆಘಾತಕಾರಿ ಹೇಳಿಕೆಯ ನಂತರವೂ, ಬಿಜೆಪಿ ಅದನ್ನು ಖಂಡಿಸುವ ಆಶಯವನ್ನು ತೋರಲಿಲ್ಲ, ಅದು ಆಕೆಯ ವೈಯಕ್ತಿಕ ಅಭಿಪ್ರಾಯವಷ್ಟೇ, ಬಹುಶಃ ಪೋಲೀಸರಿಂದ ಆಕೆ ಅನುಭವಿಸಿದ ಚಿತ್ರಹಿಂಸೆಯಿಂದಾಗಿ ಇರಬಹುದು ಎಂದಷ್ಟೇ ಹೇಳಿತು.
ಈ ಬಗ್ಗೆ ಬಂದ ಟೀಕೆಯಿಂದ ವಿಚಲಿತಳಾಗದ ಪ್ರಜ್ಞಾ ಠಾಕುರ್ ಇನ್ನೂ ಮುಂದೆ ಹೋಗಿ ಬಾಬ್ರಿ ಮಸೀದಿಯ ಧ್ವಂಸ ನಡೆಯುತ್ತಿದ್ದಾಗ ತಾನು ಗುಮ್ಮಟದ ತುದಿಯಲ್ಲಿದ್ದೆ, ಆ ಸ್ಥಳದಲ್ಲಿ ರಾಮ ದೇವಸ್ಥಾನ ಕಟ್ಟುವಾಗಲೂ ಆ ಸ್ಥಳದಲ್ಲಿ ಇರುತ್ತೇನೆ ಎಂದರು.
ಪ್ರಜ್ಞಾ ಠಾಕುರ್ನ್ನು ಅಭ್ಯರ್ಥಿಯಾಗಿ ನಿಲ್ಲಿಸಿದ್ದು ಒಂದು ಬಹಳ ಯೋಚನೆ ಮಾಡಿ ನಿರ್ಧರಿಸಿದ್ದ ನಡೆ ಎಂಬುದು ನರೇಂದ್ರ ಮೋದಿ ಅದನ್ನು ಸಮರ್ಥಿಸಿಕೊಂಡ ರೀತಿಯಲ್ಲೇ ಕಾಣುತ್ತದೆ. ಆಕೆ ಅಭ್ಯರ್ಥಿಯಾಗಿರುವುದು ವಸುಧೈವ ಕುಟುಂಬಕಮ್ ನಲ್ಲಿ ನಂಬಿಕೆಯಿರುವ 5000 ವರ್ಷಗಳಷ್ಟು ಹಳೆಯ ನಾಗರಿಕತೆಯ ಹೆಸರುಗೆಡಿಸುವವರಿಗೆ, ಭಯೋತ್ಪಾದಕರು ಎಂದು ಕರೆದವರಿಗೆ ನೀಡಿರುವ ಒಂದು ಉತ್ತರ ಎಂದು ಅವರು ಹೇಳಿದ್ದಾರೆ. ಇದಕ್ಕೆ ಮೊದಲು ಎಪ್ರಿಲ್ 1 ರಂದು ವರ್ಧಾದಲ್ಲಿ ಮಾತಾಡುತ್ತ ಮೋದಿ, ಹಿಂದು ಭಯೋತ್ಪಾದನೆಯ ಮಾತಾಡುವವರು ಇಡೀ ಹಿಂದೂ ಸಮುದಾಯವನ್ನು ಅವಮಾನ ಮಾಡುತ್ತಾರೆ ಎಂದು ಹೇಳಿದ್ದರು.
ಸಾವಿರ ವರ್ಷಗಳ ಇತಿಹಾಸದಲ್ಲಿ ಹಿಂದೂ ಭಯೋತ್ಪಾದನೆಯ ಕೃತ್ಯವನ್ನು ತೋರಿಸುವ ಒಂದೇ ಒಂದು ಘಟನೆ ನಡೆದಿಲ್ಲ ಎಂದು ಅವರು ಸಾರಿದರು. ಇದು ಎಲ್ಲ ತರ್ಕಗಳನ್ನೂ ಹುಸಿಯಾಗಿಸಿರುವ ಅಸಂಬದ್ಧ ಹೇಳಿಕೆ. ನಾಥುರಾಂ ಗೋಡ್ಸೆಯಿಂದ ಹಿಡಿದು 2002ರ ಗುಜರಾತ್ ಹತ್ಯಾಕಾಂಡದ ವರೆಗೆ, ನಂತರ ದಭೋಲ್ಕರ್, ಪನ್ಸರೆ, ಕಲ್ಬುರ್ಗಿ, ಗೌರಿ ಹತ್ಯೆಗಳ ವರೆಗೆ ಹಿಂದುತ್ವ ಭಯೋತ್ಪಾದನೆಯ ಒಂದು ದೊಡ್ಡ ಸಾಲೇ ಇದೆ. ಈ ಎಲ್ಲ ಹೇಳಿಕೆಗಳ ಹಿಂದೆ ಇರುವ ತಿಳುವಳಿಕೆಯೆಂದರೆ, ಹಿಂದೂಗಳು ಭಯೋತ್ಪಾದಕರಾಗಲು ಸಾಧ್ಯವಿಲ್ಲ, ಕೇವಲ ಮುಸ್ಲಿಮರು ಮಾತ್ರವೇ ಹಾಗಾಗಲು ಸಾಧ್ಯ.
ಪ್ರಜ್ಞಾ ಠಾಕುರ್ ಒಬ್ಬ ಅಮಾಯಕ ಸಾಧ್ವಿ, ಆಕೆಯನ್ನು ಒಂದು ಸುಳ್ಳು ಕೇಸಿನಲ್ಲಿ ಸಿಗಿಸಲಾಗಿದೆ ಎಂಬುದು ಅಮಿತ್ ಷಾ ಮತ್ತು ಬಿಜೆಪಿಯ ನಿಲುವು. ಆದರೆ, ಅದೇ ವೇಳೆಗೆ, ಸಂಘ ಪಡೆಗಳು ಆಕೆ ಹಿಂದೂಗಳನ್ನು ಸಾಯಿಸಿದ್ದಕ್ಕೆ ಪ್ರತೀಕಾರ ತೀರಿಸಿರುವ ಧೀರೆ ಎಂದು ವೈಭವೀಕರಿಸುತ್ತಿವೆ.
ಚುನಾವಣಾ ಅಭ್ಯರ್ಥಿಯಾಗಿ ಪ್ರಜ್ಞಾ ಠಾಕುರ್ ಆಯ್ಕೆ ಮತದಾರರಲ್ಲಿ ಧ್ರುವೀಕರಣ ತರುವ ಉದ್ದೆಶದಿಂದ ಕೋಮುವಾದವೇ ಮುಖ್ಯ ಒತ್ತಾಗಿರುವ ಬಿಜೆಪಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಬಂದಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ರಿಂದ ಹಿಡಿದು ಎಲ್ಲ ಬಿಜೆಪಿ ಮುಖಂಡರುಗಳ ಭಾಷಣಗಳು ದಿನಗಳೆದಂತೆ ಹೆಚ್ಚೆಚ್ಚು ಕರ್ಕಶಗೊಳ್ಳುತ್ತಿವೆ. ಹಿಂದೂಗಳಿಗೆ ಹೊರಗಿನ ಮತ್ತು ಒಳಗಿನ ಶತ್ರುಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕೆಂಬ ಕರೆ ನೀಡಲಾಗುತ್ತಿದೆ; ಅಲ್ಪಸಂಖ್ಯಾತರು ಬುಡಮೇಲು ಪಾತ್ರ ವಹಿಸುತ್ತಿದ್ದಾರೆ ಎಂದು ಸಾಕಷ್ಟು ಬಹಿರಂಗವಾಗಿಯೇ ಬೆದರಿಕೆ ಹಾಕಲಾಗುತ್ತಿದೆ; ತಮ್ಮ ರಾಷ್ಟ್ರೋನ್ಮಾದದ ಅಪಪ್ರಚಾರಕ್ಕೆ ಸಶಸ್ತ್ರ ಪಡೆಗಳ ಹೆಸರನ್ನು ಬಳಸಲಾಗುತ್ತಿದೆ; ಮತ್ತು ನಾಗರಿಕತ್ವ(ತಿದ್ದುಪಡಿ) ಮಸೂದೆ ಹಾಗೂ ರಾಷ್ಟ್ರೀಯ ನಾಗರಿಕರ ದಾಖಲೆ(ಎನ್ಆರ್ಸಿ) ಹೊರಗಿನವರನ್ನು ಹೊರಹಾಕುವ ಸಾಧನಗಳು ಎಂದು ಬಿಂಬಿಸಲಾಗುತ್ತಿದೆ.
ಇಂತಹ ಒಂದು ವಿಭಜನಕಾರೀ ಪ್ರಚಾರದಲ್ಲಿ, ಒಬ್ಬ ಕಾವಿಧಾರಿ ಭಯೋತ್ಪಾದನಾ-ಆರೋಪಿ ಮತ್ತು ಮುಸ್ಲಿಂ-ದ್ವೇಷಿ ಬಿಜೆಪಿಯ ಚುನಾವಣಾ ಅಜೆಂಡಾದ ಒಂದು ಪ್ರತೀಕವಾಗಿದ್ದಾರೆ. ಇದು ಕೂಡ ಬಹಳ ಹೊಸದೇನಲ್ಲ. ಇನ್ನೊಬ್ಬ ಮುಸ್ಲಿಂರ ವಿರುದ್ಧ ದ್ವೇಷ ಕಾರುವ, ಕಾವಿಧಾರಿ, ಆದಿತ್ಯನಾಥರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲಾಗಿದೆ ತಾನೇ?
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯನ್ನು ನಿಜವಾಗಿಯೂ ಬಿಟ್ಟೇ ಬಿಡಲಾಗಿದೆ. ಅದರ ಜಾಗದಲ್ಲಿ ಒಂದು ಬಹಿರಂಗ ಹಿಂದುತ್ವ ಕೋಮುವಾದಿ-ಮಿಲಿಟರಿಶಾಹಿಮಾದರಿ-ಸಂಕುಚಿತವಾದೀ ಮನವಿ ಬಂದಿದೆ. ಇದು, ಮೋದಿ ವಿಕಾಸದ ಮಾತಾಡುವವರು ಎಂಬ ನಂಬಿಕೆಗೆ ಜೋತು ಬಿದ್ದಿರುವವರನ್ನೂ ಬೆಚ್ಚಿ ಬೀಳಿಸುವಂತದ್ದು. ಇಂತಹ ಭ್ರಮೆಗಳಿಗೆ ಈಗ ಯಾವ ಅವಕಾಶವೂ ಉಳಿದಿಲ್ಲ. ದೇಶವನ್ನು ಉಳಿಸುವ ಏಕೈಕ ದಾರಿಯೆಂದರೆ, ಬಿಜೆಪಿ ಮತ್ತು ಮೋದಿ ಸೋಲುವಂತೆ ಮಾಡುವುದು.
( ಈ ವಾರದ ಜನಶಕ್ತಿವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
–ಪ್ರಕಾಶ ಕಾರಟ್
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.
ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.
ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ