ರಾಜಕೀಯ
ಪಕ್ಷದ ಕಾರ್ಯಕರ್ತೆಯ ಭಾಷಣ ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ ಆಕಸ್ಮಿಕ : ಸಿದ್ದ ರಾಮಯ್ಯ ಟ್ವೀಟ್

ಸುದ್ದಿದಿನ ಡೆಸ್ಕ್ : ಇಂದು ಸೋಮವಾರ ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ ದೀರ್ಘ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ ಆಕಸ್ಮಿಕವಾದುದು, ಅದರಲ್ಲಿ ದುರುದ್ದೇಶ ಇರಲಿಲ್ಲ. 15 ವರ್ಷಗಳಿಂದ ನಾನು ಬಲ್ಲ ಆ ಕಾರ್ಯಕರ್ತೆ ನನ್ನಸೋದರಿ ಸಮಾನ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ವರುಣಾ ಕ್ಷೇತ್ರದಲ್ಲಿ ನಡೆದ ಘಟನೆ ಬಗ್ಗೆ ಪಕ್ಷದ ಕಾರ್ಯಕರ್ತೆ ಜಮಲಾರ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ನಾಯಕರು ಘಟನೆಗೆ ರಾಜಕೀಯ ಬಣ್ಣ ಬಳಿಯುವ ಮೂಲಕ ಆ ಹೆಣ್ಣುಮಗಳನ್ನು ಅವಮಾನಿಸುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮಹಿಳೆಯರ ಮೇಲೆ ಇರುವ ಗೌರವ ಲೋಕಕ್ಕೆ ಗೊತ್ತು. ಇವರಿಂದ ನಾನು ಕಲಿಯುವುದೇನಿಲ್ಲ ಎಂದೂ ಕೂಡ ಟ್ವೀಟ್ ನಲ್ಲಿ ಬಿಜೆಪಿ ನಾಯಕರಿಗರ ತಿರುಗೇಟು ನೀಡಿದ್ದಾರೆ.
ಇಂದು ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ ದೀರ್ಘ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ ಆಕಸ್ಮಿಕವಾದುದು, ಅದರಲ್ಲಿ ದುರುದ್ದೇಶ ಇರಲಿಲ್ಲ. 15 ವರ್ಷಗಳಿಂದ ನಾನು ಬಲ್ಲ ಆ ಕಾರ್ಯಕರ್ತೆ ನನ್ನಸೋದರಿ ಸಮಾನ.@INCKarnataka
— Siddaramaiah (@siddaramaiah) January 28, 2019
ವರುಣಾ ಕ್ಷೇತ್ರದಲ್ಲಿ ನಡೆದ ಘಟನೆ ಬಗ್ಗೆ ಪಕ್ಷದ ಕಾರ್ಯಕರ್ತೆ ಜಮಲಾರ್ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ನಾಯಕರು ಘಟನೆಗೆ ರಾಜಕೀಯ ಬಣ್ಣ ಬಳಿಯುವ ಮೂಲಕ ಆ ಹೆಣ್ಣುಮಗಳನ್ನು ಅವಮಾನಿಸುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಮಹಿಳೆಯರ ಮೇಲೆ ಇರುವ ಗೌರವ ಲೋಕಕ್ಕೆ ಗೊತ್ತು. ಇವರಿಂದ ನಾನು ಕಲಿಯುವುದೇನಿಲ್ಲ.@INCKarnataka
— Siddaramaiah (@siddaramaiah) January 28, 2019
The incident that happened, when I tried to stop our party worker for taking more time, was an accident.
I know that woman for more than 15 years now & she is like my sister.@INCKarnataka— Siddaramaiah (@siddaramaiah) January 28, 2019
Smt. Jamalar has given clarification about the incident that happened in the public meeting. @BJP4India leaders have insulted her by politicising the issue. There is nothing to learn from @BJP4India leaders & the whole world knows about how much they respect women.@INCKarnataka
— Siddaramaiah (@siddaramaiah) January 28, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401
ರಾಜಕೀಯ
ಸಿದ್ದರಾಮಯ್ಯ ಈಗಲೂ ನನ್ನ ಮುಖ್ಯಮಂತ್ರಿ ; ಕರ್ನಾಟಕದ ಬೊಬ್ಬುಲಿ ಪುಲಿ : ರಮೇಶ್ ಕುಮಾರ್

ಸುದ್ದಿದಿನ, ಕೋಲಾರ : ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿಗಳಾದರೂ ಅವರೇ ನನಗೆ ನಾಯಕ,ಅವರೇ ನನ್ನ ಮುಖ್ಯ ಮಂತ್ರಿಗಳು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.
ಕೋಲಾರ ಜಿಲ್ಲೆಯ ಶ್ರೀನಿವಾಸ ಕನಕ ಭವನದ ಉದ್ಘಾಟನೆ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕರ್ನಾಟಕದ ಬೊಬ್ಬುಲಿ ಪುಲಿ. ಅವರ ಮಾತು ಒರಟಾದರೂ ಅವರ ಮನಸ್ಸು ಮಾತ್ರ ತುಂಬಾ ಮೃದು. ದೇವರಾಜು ಅರಸು ಅವರಲ್ಲಿದ್ದ ಜಾತ್ಯಾತೀತ ಗುಣಗಳು ಸಿದ್ದರಾಮಯ್ಯ ಅವರಲ್ಲೂ ಇವೆ. ನಾನು ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಹಿಂದೆ ಸಿದ್ದ ರಾಮಯ್ಯ ಅವರ ಶ್ರಮ ತುಂಬಾ ಇದೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
‘ಕಾಶ್ಮೀರ ಸಮಸ್ಯೆ’ ಇತ್ಯರ್ಥಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಿದವರು ‘ಇಂದಿರಾಗಾಂಧಿ ಮತ್ತು ವಾಜಪೇಯಿ’..!

ನಿರಂತರವಾಗಿ ರಕ್ತ ಹರಿಯಲು ಕಾರಣವಾಗಿರುವ ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದವರು ಇಬ್ಬರು ಪ್ರಧಾನಿಗಳು. ಮೊದಲನೆಯವರು ಇಂದಿರಾಗಾಂಧಿ, ಎರಡನೆಯವರು ಅಟಲಬಿಹಾರಿ ವಾಜಪೇಯಿ.
ಇಂದಿರಾಗಾಂಧಿ ಮತ್ತು ಝುಲ್ಪಿಕರ್ ಅಲಿ ಭುಟ್ಟೋ ನಡುವೆ ನಡೆದಿದ್ದ ಶಿಮ್ಲಾ ಮಾತುಕತೆ ಬಹುತೇಕ ಯಶಸ್ವಿಯಾಗಿತ್ತು. ಬಾಂಗ್ಲಾದೇಶಕ್ಕೆ ಮಾನ್ಯತೆ, ಮೂರನೆಯವರ (ಯುಎನ್) ಮಧ್ಯಪ್ರವೇಶಕ್ಕೆ ನಿರಾಕರಣೆ ಮತ್ತು ಯುದ್ಧ ವಿರಾಮದ ಗಡಿರೇಖೆಯನ್ನು ಎಲ್ ಓ ಸಿಯಾಗಿ ಪರಿವರ್ತಿಸಲು ಒಪ್ಪಿಗೆ.. ಹೀಗೆ ಬಹುತೇಕ ವಿಷಯಗಳನ್ನು ಭುಟ್ಟೋ ಒಪ್ಪಿಕೊಂಡಿದ್ದರು. ಆ ಸಂಬಂಧ ಮತ್ತೆ ಹದಗೆಟ್ಟಿದ್ದು ಕಾರ್ಗಿಲ್ ಯುದ್ಧದಿಂದಾಗಿ.
ಅದೇ ರೀತಿ ವಾಜಪೇಯಿ ಮತ್ತು ಪರ್ವೇಜ್ ಮುಷರಪ್ ಅವರ ನಡುವೆ ಆಗ್ರಾ ಶೃಂಗ ಸಭೆಯ ಕೊನೆಯಲ್ಲಿ ಇನ್ನೇನು ಪರಸ್ಪರ ಸಮ್ಮತಿಯ ಒಪ್ಪಂದಕ್ಕೆ ಸಹಿ ಬೀಳುತ್ತದೆ ಎನ್ನುವಾಗ ಮುರಿದು ಬಿತ್ತು. ಅದಕ್ಕೆ ಕಾರಣವಾಗಿದ್ದು ಆಗಿನ ಉಕ್ಕಿನ ಮನುಷ್ಯ ಅಡ್ವಾಣಿ -ಸುಷ್ಮಾ ಜೋಡಿ. ಈ ಎರಡನೇ ಘಟನೆಗೆ ಪತ್ರಕರ್ತನಾಗಿ ನಾನು ಕೂಡಾ ಸಾಕ್ಷಿ. ಆಗ್ರಾ ಶೃಂಗ ಸಭೆಯ ಪ್ರತ್ಯಕ್ಷ ವರದಿ ಮಾಡಲು ಅಲ್ಲಿಗೆ ಹೋಗಿದ್ದೆ.
ಅಟಲಬಿಹಾರಿ ವಾಜಪೇಯಿ ಅವರಿಗೆ ತನ್ನ ಸಂಪುಟದ ಸದಸ್ಯರ ಹೆಸರುಗಳೇ ಒಮ್ಮೊಮ್ಮೆ ನೆನಪಾಗದೆ ಇದ್ದರೂ ವಿದೇಶಾಂಗ ವ್ಯವಹಾರದ ಬಗ್ಗೆ ಅಗಾಧವಾದ ತಿಳುವಳಿಕೆ ಇತ್ತು. ಅವರ ಸಮೀಪವರ್ತಿಗಳ ಪ್ರಕಾರ ಏನಾದರೂ ಮಾಡಿ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆಯಬೇಕೆಂಬ ಆಸೆ ಇತ್ತಂತೆ ಅವರಿಗೆ. ಅಂತಹ 2001ರ ಜುಲೈ ನಲ್ಲಿ ನಡೆದ ಆಗ್ರಾ ಶೃಂಗ ಸಭೆಯ ಬಗ್ಗೆ ವಾಜಪೇಯಿ ಅವರಲ್ಲಿ ಅಂತಹದ್ದೊಂದು ನಿರೀಕ್ಷೆಯೂ ಇತ್ತು.
ಕಾರ್ಗಿಲ್ ಯುದ್ದದ ವೈರತ್ವವನ್ನು ಮನಸ್ಸಲ್ಲಿಟ್ಟುಕೊಳ್ಳದೆ ಅದೇ ಯುದ್ಧದ ಖಳನಾಯಕ ಪರ್ವೇಜ್ ಮುಷರಫ್ ಕಡೆ ಸ್ನೇಹದ ಹಸ್ತ ಚಾಚಿದ್ದ ವಾಜಪೇಯಿ ಆಗ್ರಾಕ್ಕೆ ಬಂದಿದ್ದರು. ಜುಲೈ 15ರ ಸಂಜೆ ಪತ್ನಿ ಜತೆ ತಾಜಮಹಲ್ ವೀಕ್ಷಿಸಿ ಬಂದಿದ್ದ ಸೈನಿಕ ಮುಷರಫ್ ಹರ್ಷಚಿತ್ತರಾಗಿದ್ದರು.
ಅದೇ ರಾತ್ರಿ ವಾಜಪೇಯಿ ಜತೆ ಮಾತುಕತೆಗೆ ಕೂತಿದ್ದಾಗ ಬಾಗಿಲಿನೆಡೆಯಿಂದ ‘’ಗುಪ್ತ ಹಸ್ತ’’ವೊಂದು ಒಳಚಾಚಿತ್ತು. ಆ ಕೈಯಲ್ಲಿ ಒಂದು ಚೀಟಿ ಇತ್ತು. ಅದನ್ನು ಕಳಿಸಿದವರು ಐಎಸ್ ಐ ಮಾಜಿ ಮುಖ್ಯಸ್ಥ ಹಮೀದ್ ಗುಲ್ ಅನುಯಾಯಿಯಾಗಿದ್ದ ವಿದೇಶಾಂಗ ವ್ಯವಹಾರ ಖಾತೆ ಸಚಿವ ಅಬ್ದುಲ್ ಸತ್ತಾರ್. ಆ ಚೀಟಿ ನೋಡಿದೊಡನೆ ಮುಷರಫ್ ಮುಖಗಂಟಿಕ್ಕಿದ್ದರಂತೆ.
ಆಗ್ರಾ ಶೃಂಗ ಸಭೆಯಲ್ಲಿ ‘’ಕಾಶ್ಮೀರ ವಿಷಯವೇ ಪ್ರಧಾನ’’ ಎಂದು ಪಾಕಿಸ್ತಾನ ಹಠ ಮಾಡಿ ಕೂತಿದ್ದರೆ ‘’ಉಳಿದೆಲ್ಲವುಗಳ ಜತೆ ಕಾಶ್ಮೀರ ವಿಷಯವೂ ಇರಲಿ’’ ಎನ್ನುವುದು ಭಾರತದ ವಾದವಾಗಿತ್ತು. ಮುಷರಫ್ ಇದನ್ನು ಒಪ್ಪಿಕೊಂಡಿದ್ದರಂತೆ. ಆದರೆ ಅಷ್ಟರಲ್ಲಿ ಆಗ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಅನಿರೀಕ್ಷಿತವಾಗಿ ಪತ್ರಕರ್ತರ ಕೊಠಡಿಗೆ ಬಂದು ಆಫ್ ದಿ ರೆಕಾರ್ಡ್ ಮಾತನಾಡುತ್ತಾ ‘’ ಭಾರತ ಅಂದುಕೊಂಡಂತೆಯೇ ಎಲ್ಲ ನಡೆಯುತ್ತಿದೆ’’ ಎಂಬ ಸುದ್ದಿಯನ್ನು ತೂರಿಬಿಟ್ಟು ಹೊರಟುಹೋದರು. ಟಿವಿ ಚಾನೆಲ್ ಗಳಲ್ಲಿ ಸುದ್ದಿ ಬ್ರೇಕ್ ಆಯಿತು.
ಇದನ್ನು ನೋಡಿದೊಡನೆಯೆ ಪಾಕಿಸ್ತಾನದ ಐಎಸ್ ಐ ಪಡೆ ಕೆರಳಿ ಹೋಗಿತ್ತು. ಆಗಲೇ ಚೀಟಿ ರವಾನೆಯಾಗಿದ್ದು. ಅದರ ನಂತರ ಮುಷರಫ್ ಇನ್ನಷ್ಟು ಬಿಗಿಯಾಗಿ ಹೋದರು. ಕೊನೆಗೆ ತೇಪೆ ಹಚ್ಚುವ ರೀತಿಯಲ್ಲಿ ಆಗ್ರಾ ಘೋಷಣೆಗೆ ಸಹಿ ಹಾಕಿ ಸಂಪಾದಕರ ಸಭೆಯಲ್ಲಿ ಭಾರತದ ವಿರುದ್ಧ ಗುಡುಗಿ ಪಾಕಿಸ್ತಾನಕ್ಕೆ ಹಾರಿಹೋದರು.
ಸುಷ್ಮಾ ಸ್ವರಾಜ್ ಸ್ವಯಂ ಪ್ರೇರಣೆಯಿಂದ ಪತ್ರಕರ್ತರ ಕೊಠಡಿಗೆ ಖಂಡಿತ ಬಂದಿರಲಿಲ್ಲ, ಅವರಿಗೆ ಕೀ ಕೊಟ್ಟು ಕಲಿಸಿದವರು ಲಾಲ್ ಕೃಷ್ಣ ಅಡ್ವಾಣಿಯವರಂತೆ. ಅವರಿಗೆ ನಾಗಪುರದ ಕಡೆಯಿಂದ ಸಂದೇಶ ಬಂದಿರಬಹುದು. ಪರಿವಾರದಲ್ಲಿರುವ ಯಾರಿಗೂ ಪಾಕಿಸ್ತಾನದ ಜತೆ ಅಟಲಬಿಹಾರಿ ವಾಜಪೇಯಿ ಅವರು ಮಾತುಕತೆ ನಡೆಸುವುದು ಬೇಡವಾಗಿತ್ತು. ನಂತರದ ದಿನಗಳಲ್ಲಿ ವಾಜಪೇಯಿಯವರ ರಾಜಧರ್ಮ ಪಾಲನೆಯ ಆದೇಶ ಕೂಡಾ ಜಾರಿಯಾಗದಂತೆ ನೋಡಿಕೊಂಡವರು ಕೂಡಾ ಈಗಿನ ಮೂಕ ನಾಯಕ ಲಾಲ್ ಕೃಷ್ಣ ಅಡ್ವಾಣಿ.
-ದಿನೇಶ್ ಅಮಿನ್ ಮಟ್ಟು
ಸುದ್ದಿದಿನ.ಕಾಂ|ವಾಟ್ಸಾಪ್|9986715401
ರಾಜಕೀಯ
ಯೋಧರ ಸಂತಾಪ ಸಭೆಯನ್ನು ಸ್ವಾರ್ಥ ರಾಜಕೀಯಕ್ಕೆ ಬಳಸುವ ದೇಶದ್ರೋಹಿಗಳಿಗೆ ಧಿಕ್ಕಾರ : ಪ್ರಕಾಶ್ ರೈ ಆಕ್ರೋಶ

ಸುದ್ದಿದಿನ ಡೆಸ್ಕ್ : ನಿನ್ನೆ ಬೆಂಗಳೂರಿನಲ್ಲಿ ಹುತಾತ್ಮಯೋಧರಿಗೆ ಸಂತಾಪ ಸೂಚಿಸಲು ಖಾಸಗಿ ಸುದ್ದಿವಾಹಿನಿಯೊಂದು ಕಾರ್ಯಕ್ರಮ ಏರ್ಪಡಿಸಿತ್ತು. ಈ ಸಂತಾಪ ಸಭೆಯಲ್ಲಿ ಪ್ರಕಾಶ್ ರೈ ಮಾತನಾಡುವ ಸಂದರ್ಭದಲ್ಲಿ ‘ ಡೋಂಗೀ ದೇಶಭಕ್ತರು’ ಅವರ ಮಾತುಗಳನ್ನು ಸರಿಯಾಗಿ ಕೇಳಿಸಿಕೊಳ್ಳುವ ವ್ಯವ್ಯಧಾನವಿಲ್ಲದೆ ಅರೆ ಪ್ರಜ್ಞೆ ಯಲ್ಲಿರುವವರಂತೆ ವರ್ತಿಸಿದ್ದಾರೆ.
ಈ ದುರ್ಘಟನೆಯ ಲಾಭವನ್ನು ಪಡೆಯಲು ಮೋದಿ ಮತ್ತೊಮ್ಮೆ ಅಸ್ತಿತ್ವಕ್ಕೆ ಬರಲೆಂಬ ಉದ್ದೇಶದಿಂದ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಪುಡಿ ರಾಜಾಕೀಯ ರೌಡಿಗಳ ವರ್ತಿಸಿರುವುದನ್ನು ಖಂಡಿಸಿ ಪ್ರಕಾಶ್ ರೈ ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆ.
ಪ್ರಕಾಶ್ ರೈ ಟ್ವೀಟ್
When a Nation mourns n talks the need to be united ..SHAME on these who are politicising a tragedy .. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರನ್ನು ಸ್ಮರಿಸುತ್ತ…ನಾವು ಭಾರತಿಯರೆಲ್ಲ ಒಂದಾಗಿರಬೇಕೆಂದು ಮಾತನಾಡುತ್ತಿದ್ದ ಸಂತಾಪ ಸಭೆಯನ್ನು .. ಸ್ವಾರ್ಥ ರಾಜಕೀಯಕ್ಕೆ ಬಳಸುವ ಈ ದೇಶದ್ರೋಹಿಗಳಿಗೆ ಧಿಕ್ಕಾರ .. JAI HIND pic.twitter.com/4xSgP987i5
— Prakash Raj (@prakashraaj) February 16, 2019
When a Nation mourns n talks the need to be united ..SHAME on these who are politicising a tragedy .. ದೇಶಕ್ಕಾಗಿ ಪ್ರಾಣ…
Posted by Prakash Raj on Friday, 15 February 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401
-
ಬಹಿರಂಗ5 days ago
ಜಾತಿ ಪದ್ದತಿ : ಎಲ್ಲರೂ ಓದಲೇ ಬೇಕಾದ ಡಾ. ಅಂಬೇಡ್ಕರ್ ಅವರ ಬರಹ..!
-
ಲೈಫ್ ಸ್ಟೈಲ್5 days ago
ವೀರ್ಯಾಣು ವೃದ್ಧಿಸೋ ‘ಮಾವಿನ ಹಣ್ಣಿನ’ ಉಪಯೋಗಗಳಿಷ್ಟು..!
-
ಬಹಿರಂಗ4 days ago
‘ಹಿಂದೂ ಸಮಾಜ’ ವೆಂಬುದು ‘ಮಿಥ್ಯ ಪದ’ : ಡಾ.ಬಿ.ಆರ್.ಅಂಬೇಡ್ಕರ್ ಅವರ ಈ ಬರಹ ನಿಮಗಾಗಿ..!
-
ದಿನದ ಸುದ್ದಿ5 days ago
’42 ಪಿಡಿಓ’ಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ‘ದಲಿತ ಸೇನೆ’ಯಿಂದ ಪ್ರತಿಭಟನೆ
-
ಬಹಿರಂಗ4 days ago
‘ಧ್ರುವ್’ ಎಂಬ ಮಾಧ್ಯಮದ ‘ಧ್ರುವ ತಾರೆ’..!
-
ದಿನದ ಸುದ್ದಿ3 days ago
30 ಸಿ ಆರ್ ಪಿ ಎಫ್ ಯೋಧರ ಬಲಿಪಡೆದ ಉಗ್ರ
-
ದಿನದ ಸುದ್ದಿ7 days ago
ಯಡಿಯೂರಪ್ಪ ನುಡಿದಂತೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ : ಸಿದ್ದರಾಮಯ್ಯ
-
ಬಹಿರಂಗ3 days ago
ಆದಿವಾಸಿ ಬುಡಕಟ್ಟು ಜನಾಂಗ ಅಪರಾಧಿಗಳಾಗಿ ಬದುಕುತ್ತಿವೆ ; ಇದನ್ನು ಕಂಡು ಹಿಂದೂ ಜನಾಂಗ ನಾಚಿಕೆಯಿಲ್ಲದೆ ಬದುಕುತ್ತಿದೆ : ಡಾ.ಬಿ.ಆರ್.ಅಂಬೇಡ್ಕರ್ ರ ಈ ಬರಹ ಓದಿ