ರಾಜಕೀಯ
ಈ ದಾಖಲೆಗಳಿದ್ದಲ್ಲಿ ಮತದಾನ ಮಾಡಬಹುದು
ಸುದ್ದಿದಿನ,ಧಾರವಾಡ : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಚುನಾವಣಾ ಆಯೋಗ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿ ಇಲ್ಲದಿದ್ದಲ್ಲಿ, ಪರ್ಯಾಯವಾಗಿ 11 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ.
ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಏಪ್ರಿಲ್ 23ರಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆಯವರೆಗೆ ನಡೆಯಲಿರುವ ಮತದಾನದಲ್ಲಿ ಮತದಾರರ ಗುರುತಿನ ಚೀಟಿ ಇಲ್ಲದೇ ಇದ್ದ ಪಕ್ಷದಲ್ಲಿ, ಈ ಕೆಳಕಂಡಂತೆ ಪರ್ಯಾಯ 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಪಾಸ್ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಬ್ಲಿಕ್ ಕಂಪನಿಗಳು ನೀಡಿರುವ ನೌಕರರ ಫೋಟೋ ಇರುವ ಗುರುತಿನ ಸೇವಾ ಕಾರ್ಡ್, ಸರ್ಕಾರಿ ವಲಯದ ಬ್ಯಾಂಕ್ ಅಥವಾ ಪೋಸ್ಟ್ ಆಫೀಸಿನಿಂದ ನೀಡಲಾದ ಫೋಟೋ ಇರುವ ಪಾಸ್ಬುಕ್, ಆದಾಯ ತೆರಿಗೆ ಗುರುತಿನ ಚೀಟಿ(ಪ್ಯಾನ್ ಕಾರ್ಡ್), ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಇಲಾಖೆ (ಆರ್.ಜಿ.ಐ).ಯಿಂದ ನೀಡಲಾದ ಸ್ಮಾರ್ಟ್ ಕಾರ್ಡ್, ನರೇಗಾ ಜಾಬ್ಕಾರ್ಡ್, ಕಾರ್ಮಿಕ ಸಚಿವಾಲಯದಿಂದ ನೀಡಲಾದ ಆರೋಗ್ಯ ಜೀವವಿಮೆ ಸ್ಮಾರ್ಟ್ ಕಾರ್ಡ್, ಪೆನ್ಷನ್ ದಾಖಲಾತಿ (ಫೋಟೋ ಇರುವ) ಮಾಜಿ ಸೈನಿಕ ಪಿಂಚಣಿ ಪುಸ್ತಕ ಪಿಂಚಣಿ ಪಾವತಿ ಆದೇಶ, ಮಾಜಿ ಸೈನಿಕರ, ವಿಧವೆ,ಅವಲಂಬಿತರ ದೃಢೀಕರಣ ಪತ್ರ, ವೃದ್ಧಾಪ್ಯ ವಿರಾಮ ವೇತನ ಆದೇಶ, ವಿಧವಾ ವೇತನ ಆದೇಶ, ಸ್ವಾತಂತ್ರ್ಯ ಯೋಧರ ಭಾವಚಿತ್ರವಿರುವ ಗುರುತಿನ ಚೀಟಿ, ಎಂ.ಪಿ., ಎಂ.ಎಲ್.ಎ., ಎಂ.ಎಲ್.ಸಿ. ಗಳಿಗೆ ಸರ್ಕಾರದಿಂದ ನೀಡಿರುವ ಅಧಿಕೃತ ಗುರುತಿನ ಚೀಟಿ ಮತ್ತು ಆಧಾರ್ಕಾರ್ಡ್ ಇದರಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಮತದಾರರು ತಪ್ಪದೇ ಏಪ್ರಿಲ್ 23 ರಂದು ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ)ಗಳು ಸಂಬಂಧಿಸಿದ ಮತಗಟ್ಟೆಯ ಮತದಾರರ ಭಾವಚಿತ್ರವಿರುವ ಮತದಾರ ಚೀಟಿಗಳನ್ನು (ಓಟರ್ ಸ್ಲಿಪ್) ಮತದಾರರ ಮನೆಗೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಓಟರ್ ಸ್ಲಿಪ್ಗಳನ್ನು ಬಿ.ಎಲ್.ಓ. ಗಳಿಂದ ಪಡೆದು ಏಪ್ರಿಲ್ 23 ರಂದು ಮತದಾನ ಮಾಡಬಹುದಾಗಿದೆ.
ಆದರೆ ಮತದಾರರ ಗುರುತಿನ ಚೀಟಿ ಅಥವಾ ಪರ್ಯಾಯ 11 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆ ಹಾಜರುಪಡಿಸುವುದು ಕಡ್ಡಾಯವಾಗಿದೆ. ಮತಗಟ್ಟೆಯೊಳಗೆ ಮತದಾರರು ಮೊಬೈಲ್, ಕ್ಯಾಮರಾ, ಲೇಸರ್ ಉಪಕರಣ ಇತ್ಯಾದಿ ಯಾವುದೇ ತರಹದ ಎಲೆಕ್ಟಾçನಿಕ್ ಉಪಕರಣಗಳನ್ನು ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಚುನಾವಣೆಗೆ ಸಂಬಂಧಿಸಿದ ಯಾವುದೇ ಮಾಹಿತಿ, ದೂರುಗಳಿಗೆ ಉಚಿತ ಸಹಾಯವಾಣಿ ಸಂಖ್ಯೆ.1950 ನ್ನು ಸಂಪರ್ಕಿಸಬಹುದಾಗಿದೆ. ಮತ್ತು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾದಲ್ಲಿ ಸಿ.ವಿಜಲ್ ಮೊಬೈಲ್ ಆ್ಯಪ್ ಮೂಲಕ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್
ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.
ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಹೇಳಿಕೆ
- ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.
| ಸಚಿವ ದಿನೇಶ್ ಗುಂಡೂರಾವ್
ಟ್ವೀಟ್
In consideration of public health, we are banning the use of artificial colours in Gobi Manchurian and cotton candy. Violation of this ban may result in imprisonment for up to 7 years and a fine of up to 10 lakhs.
Following reports of substandard quality and the presence of… pic.twitter.com/z2KWHi8Jbd
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 11, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243