ರಾಜಕೀಯ
ಹಿಂದುತ್ವ ಮತ್ತು ಬಿಜೆಪಿ
ಪ್ರಗ್ಯಾ ಸಿಂಗ್ ಠಾಕೂರ್ ಅನ್ನು ಲೋಕಸಭಾ ಚುನಾವಣೆಯಲ್ಲಿ ನಿಲ್ಲಿಸಿದ್ದು ನನಗೆ ತೀರಾ ಆಶ್ಚರ್ಯವಾಗಿಯೇನೂ ಕಾಣುತ್ತಿಲ್ಲ. ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೇಟು ನಿರಾಕರಿಸಿದ್ದು ಕೂಡ ದೊಡ್ಡ ಆಶ್ಚರ್ಯವೇನಲ್ಲ. ಇದು ಸಂಘ ಪರಿವಾರದಲ್ಲಿ ಸುಮಾರು ಒಂದು ದಶಕಕ್ಕೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಯೋಜನಾ ಪ್ರಕ್ರಿಯೆ ಮತ್ತು ಅನುಷ್ಠಾನ.
ಜನಸಾಮಾನ್ಯ ಹಿಂದುತ್ವವಾದ ಮತ್ತು ಹಿಂದೂರಾಷ್ಟ್ರದ ಕಲ್ಪನೆಯನ್ನು ಪರಿಗಣಿಸುವಂತೆ ಮಾಡುವುದು ಅವರ ಮೊದಲ ಹಂತದ ಕೆಲಸವಾಗಿತ್ತು. ಸ್ವಾತಂತ್ರ್ಯದ ನಂತರದ ದಶಕಗಳಲ್ಲಿ ಅದು ಅಷ್ಟು ಸುಲಭದ ಕೆಲಸವಾಗಿರಲಿಲ್ಲ. ಎಲ್ಲರನ್ನೂ ಒಳಗೊಳ್ಳುವ ಸಂವಿಧಾನ ಪ್ರೇರಿತ ರಾಷ್ಟ್ರೀಯತೆ ಬಹುಸಂಖ್ಯಾತ ಜನರಲ್ಲಿ ಸಾಮಾನ್ಯವಾಗಿಯೇ ಇತ್ತು. ಇಂಥಾ ವಾತಾವರಣದಲ್ಲಿ ವಾಜಪೇಯಿ, ಆಡ್ವಾಣಿ ಮತ್ತು ಜೋಷಿ ಸಾಕಷ್ಟು ಜಾಗರೂಕತೆಯಿಂದಲೇ ಕೆಲಸ ಮಾಡಬೇಕಿತ್ತು. ಇಲ್ಲದಿದ್ದರೆ ಅವರನ್ನಾಗಲೀ, ಅವರ ಸಿದ್ಧಾಂತವನ್ನಾಗಲೀ ಈಗ ಒಪ್ಪಿರುವವರೂ ಒಪ್ಪುವುದು ಕಷ್ಟವಿತ್ತು. ಈ ತಂಡ ಅದನ್ನು ಸಾಕಷ್ಟೂ ಯಶಸ್ವಿಯಾಗಿ ಮಾಡಿದ್ದಲ್ಲದೇ, ಬಲಪಂಥೀಯ ಸರ್ಕಾರಕ್ಕೂ ಕೂಡ ಒಂದು ಗಟ್ಟಿ ತಳಹದಿಯನ್ನು ಹಾಕಿಕೊಟ್ಟಿತು.
ಈ ತಳಹದಿ ದೊರೆತ ಮೇಲೆ ಹಿಂದುತ್ವವಾದವನ್ನು ಇನ್ನಷ್ಟು ನೆಲ-ಮನಕ್ಕಿಳಿಸಲು ಆ ತಲೆಮಾರಿಗಿಂತ ಹೆಚ್ಚು ಆಗ್ರಹಪೂರ್ವಕವಾಗಿ ಕೆಲಸ ಮಾಡುವ ತಲೆಮಾರಿನ ಅಗತ್ಯ ಕಾಣಿಸಿತು. ಹೀಗಾಗಿ ಮೋದಿಯನ್ನು ಮುನ್ನೆಲೆಗೆ ತರಲಾಯಿತು. ಜೋಷಿ, ಆಡ್ವಾಣಿಯವರನ್ನು ಬದಿಗೆ ಸರಿಸಿದ್ದು ಈ ಪ್ರಕ್ರಿಯೆಯೇ. ಮೋದಿಯವರ ಆಡಳಿತದಲ್ಲಿ ಪರಿವಾರ ಈ ಗುರಿಯತ್ತ ಸಾಕಷ್ಟು ದೂರ ಕ್ರಮಿಸುವುದು ಸಾಧ್ಯವಾಯಿತು ಎನ್ನುವುದನ್ನು ನಾವೆಲ್ಲ ಕಳೆದ ಐದು ವರ್ಷಗಳಲ್ಲಿ ಚೆನ್ನಾಗಿಯೇ ನೋಡಿದ್ದೇವೆ. ರಾಷ್ಟ್ರೀಯತೆಯ ವ್ಯಾಖ್ಯಾನವನ್ನು ಬದಲಿಸುವುದು, ದೇಶದ್ರೋಹವನ್ನು ಮರುವ್ಯಾಖ್ಯಾನಿಸುವುದು, ವಿಶ್ವವಿದ್ಯಾಲಯಗಳ ಮೇಲೆ, ವಿದ್ಯಾರ್ಥಿಗಳ ಮೇಲೆ ವೈಚಾರಿಕ ನಿರ್ಬಂಧ ಹೇರಿ, ತಮ್ಮದನ್ನು ಹೇರಲು ಮಾಡಿದಂಥಾ ಪ್ರಯತ್ನಗಳು, ದೇಶದ ಆಹಾರ ಪದ್ಧತಿಗಳ ಮೇಲೆ ಆದಂತಹ ಹಲ್ಲೆಗಳು, ಸಂವಿಧಾನವನ್ನು ನಿಕಶಕ್ಕೆ ಒಡ್ಡುವುದು, ಇನ್ನೂ ಮುಂತಾದವು ಕೇವಲ stray incidents ಅಲ್ಲ.
ಈಗ ಮೋದಿಯವರ “ಯಶಸ್ವೀ” ಪಾತ್ರವೂ ಕೊನೆಯ ಹಂತದಲ್ಲಿರುವಾಗ ಹಿಂದುತ್ವವಾದವನ್ನು ಅವರಿಗಿಂತ ಹೆಚ್ಚು ಭಾವೋದ್ವೇಗದಿಂದ ಹೇರುವ, ನಾಟಿಸುವ ತಲೆಮಾರಿನ ಅವಶ್ಯಕತೆ ಪರಿವಾರಕ್ಕೆ ಇದೆ. ಈ ಹಂತದಲ್ಲಿ ಬೌದ್ಧಿಕ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಭಾವನಾತ್ಮಕ ಸಾಮರ್ಥ್ಯದ ಅಗತ್ಯವಿದೆ. ಒಂದು ರೀತಿಯ ಮಿಲಿಟೆನ್ಸಿಯ ಅಗತ್ಯವೂ ಇದೆ. ಹೀಗಾಗಿಯೇ ಯಾರೂ ಊಹಿಸದ, ಆದರೆ ಅಂಥಾ ಉದ್ದೇಶಕ್ಕಾಗಿಯೇ ತರಬೇತಾಗಿರುವ ಯೋಗಿ, ಮಣಿಪುರ ಮತ್ತು ತ್ರಿಪುರಾದ ಮುಖ್ಯಮಂತ್ರಿಗಳು ಮುನ್ನೆಲೆಗೆ ಬಂದಿದ್ದು. ಅವರ ಕಾಲಾಳುಗಳಾಗಿ ದೇಶದ ತುಂಬಾ ಲಕ್ಷಾಂತರ ಯುವಕರು ತಯಾರಾಗಿದ್ದಾರೆ.
ಅವರಲ್ಲಿನ ಅನೇಕ ಮುಂದಾಳುಗಳಲ್ಲಿ ಒಬ್ಬ ಸೂರ್ಯ. ಆತನಿಗೆ ಇಂದು ಪ್ರವೇಶ ದೊರೆತಿದೆ. ಅದೇ ಪ್ರಕ್ರಿಯೆಯ ಭಾಗವಾಗಿಯೇ ಪ್ರಗ್ಯಾ ಸಿಂಗ್ ಠಾಕೂರ್ ಅನ್ನು ಕೂಡ ತರಲಾಗಿದೆ. ಒಂದು ವೇಳೆ ಇಂದು ಅನಂತಕುಮಾರ್ ಬದುಕಿದ್ದು, ಅವರನ್ನೂ ಈ ಚುನಾವಣೆಯಲ್ಲಿ ಬದಿಗೆ ಸರಿಸಿದ್ದರೂ ಕೂಡ ಆಶ್ಚರ್ಯವಾಗುತ್ತಿರಲಿಲ್ಲ. ಅದು ಕೂಡ ಆ ಕಾರ್ಯಕ್ರಮದ ಭಾಗವೇ ಆಗಿರುತ್ತಿತ್ತು. ಒಂದೆರಡು ದಿನಗಳ ಪ್ರತಿರೋಧದ ನಂತರ ಪರಿವಾರದೊಳಗೆ ಎಲ್ಲವೂ ತಣ್ಣಗಾಗುತ್ತಿತ್ತು. ಬಹುಶಃ ಈ ಚುನಾವಣೆಯಲ್ಲೇ ಹಾಗಾಗುತ್ತಿರಲಿಲ್ಲ ಎಂದುಕೊಳ್ಳುವುದು ಅವರ ಹತ್ತಿರದವರಿಗೆ ಸಮಾಧಾನ ತರಬಹುದು.
ಬಲಪಂಥೀಯತೆಯನ್ನು ಇಷ್ಟು ಕರಾರುವಾಕ್ಕಾಗಿ ಪಸರಿಸುತ್ತಿರುವ ಈ ಧೀರ್ಘಕಾಲೀನ ಕಾರ್ಯಕ್ರಮಕ್ಕೆ ತತ್ಸಮವಾಗಿ ಎದುರು ನಿಲ್ಲುವಂಥಾ ಮಾನವೀಯ ಕಾರ್ಯಕ್ರಮವೊಂದು ನಮ್ಮ ದೇಶದಲ್ಲಿ ಇನ್ನೂ ಗಟ್ಟಿಗೊಳ್ಳದಿರುವುದು ಶೋಚನೀಯ. ನಮ್ಮ ಯುವಪೀಳಿಗೆಗೆ ಇದನ್ನು ಮನದಟ್ಟು ಮಾಡಿಸುವ ಜವಾಬ್ದಾರಿ ನಮ್ಮ ಮೇಲಿದೆ.
–ಕೇಸರಿ ಹರವು
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್
ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.
ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.
ಹೇಳಿಕೆ
- ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.
| ಸಚಿವ ದಿನೇಶ್ ಗುಂಡೂರಾವ್
ಟ್ವೀಟ್
In consideration of public health, we are banning the use of artificial colours in Gobi Manchurian and cotton candy. Violation of this ban may result in imprisonment for up to 7 years and a fine of up to 10 lakhs.
Following reports of substandard quality and the presence of… pic.twitter.com/z2KWHi8Jbd
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 11, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243