ದಿನದ ಸುದ್ದಿ
ಮಂಡ್ಯದಲ್ಲಿ ಹೈ ಅಲರ್ಟ್ : ಮೇ 23 ಕ್ಕೆ ಕರ್ಫ್ಯೂ ಜಾರಿ
ಸುದ್ದಿದಿನ, ಮಂಡ್ಯ : ಚುನಾವಣಾ ಫಲಿತಾಂಶದ ದಿನ ಹಾಗೂ ಮಾರನೆಯ ದಿನ ಅಂದರೆ ಮೇ 23 ಮತ್ತು 24ರಂದು ಯಾವುದೇ ಮೆರವಣಿಗೆ ಮಾಡುವುನ್ನು ಮತ್ತು ಪಟಾಕಿ ಸಿಡಿಸುವುದನ್ನು ಕೂಡಾ ತಡೆಯಬೇಕೆಂದು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ಮಕ್ಕಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಸಾಧ್ಯತೆಗಳು ಕೂಡಾ ಇದೆ. ಸಿನಿಮಾ ಥಿಯೇಟರ್, ಮಾಲ್ಗಳು ಕ್ಲೋಸ್ ಆಗಲಿವೆ. ಕೆಎಸ್ಆರ್ಟಿಸಿ ಮತ್ತು ರೈಲ್ವೇ ನಿಲ್ದಾಣಗಳಲ್ಲಿ ಕೂಡಾ ಹೆಚ್ಚಿನ ಭದ್ರತೆಗೆ ಒತ್ತು ನೀಡಲಾಗುವುದು.ಚುನಾವಣಾ ಫಲಿತಾಂಶದ ಒಂದು ದಿನ ಮೊದಲೇ ಅಂದರೆ ಮೇ 22 ರಿಂದಲೇ ಮಂಡ್ಯ ಜಿಲ್ಲೆಯಾದ್ಯಂತ ಕರ್ನಾಟಕ ಪೊಲೀಸ್ ಮಾತ್ರವಲ್ಲದೆ ಸಿಆರ್ಪಿಎಫ್ ಅವರು ಗಸ್ತು ತಿರುಗಲಿದ್ದಾರೆ ಎಂದು ತಿಳಿದು ಬಂದಿದೆ.
ಮೇ 23ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸೆಕ್ಷನ್ 144 ಕರ್ಫ್ಯೂ ಆದೇಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಡ್ಯದಲ್ಲಿ ಮೇ 22 ರಿಂದಲೇ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು. ಎರಡು ದಿನಗಳ ಕಾಲ ಮದ್ಯದಂಗಡಿಗಳನ್ನು ತೆರೆಯುವಂತಿಲ್ಲ.ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಬ್ಬರ ಸೃಷ್ಟಿಸಿದ ಮಂಡ್ಯದಲ್ಲಿ ಈಗ ಫಲಿತಾಂಶದ ದಿನ ಮಂಡ್ಯದ ಭದ್ರತೆಯ ಬಗ್ಗೆ ಚುನಾವಣಾ ಆಯೋಗ ಚಿಂತನೆ ನಡೆಸಬೇಕಾಗಿದೆ.
ಮೇ 23 ರಂದು ಮಂಡ್ಯದಲ್ಲಿ ಭದ್ರತೆಗಾಗಿ ಪೋಲಿಸ್ ಮಹಾನಿರ್ದೇಶಕರಿಂದ ಚುನಾವಣಾ ಆಯೋಗ ಮಾಹಿತಿಯನ್ನು ಕೇಳಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹೇಗೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಚರ್ಚೆ ನಡೆಸಿದ್ದಾರೆ. ಭದ್ರತೆಯ ದೃಷ್ಟಿಯಿಂದ ಅಕ್ಕಪಕ್ಕದ ಜಿಲ್ಲೆಗಳಿಂದಲೂ ಮಂಡ್ಯಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲು ಸಿದ್ಧತೆ ನಡೆಸಲಾಗಿದೆ. ಒಂದು ದಿನ ಮುಂಚಿತವಾಗಿಯೇ ಭದ್ರತೆಯ ಬಗ್ಗೆ ಕ್ರಮಗಳನ್ನು ಕೈಗೊಳ್ಳಲು ಕೂಡಾ ಸಿದ್ಧತೆ ನಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243