Connect with us

ರಾಜಕೀಯ

ಮೋದಿ ಅಮೆರಿಕದ ಮುಂದೆ ತೆಪ್ಪಗೆ ತಲೆಬಾಗುತ್ತಿದ್ದಾರೆ

Published

on

  • ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳ ಎದುರು ಮಂಡಿಯೂರುತ್ತಿದ್ದಾರೆ.ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು. ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ.ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್‌ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.

ಮೋದಿ ಸರಕಾರದ ಎರಡನೇ ಅವಧಿಯು ಅಮೆರಿಕದ ಕಿರಿಯ ಪಾಲುದಾರನಾಗಿ ಭಾರತದ ಪಾತ್ರವನ್ನು ಇನ್ನಷ್ಟು
ಗಟ್ಟಿಗೊಳಿಸುವಂತದ್ದಾಗುತ್ತದೆ ಎನ್ನುವುದಕ್ಕೆ ಆಗಲೇ ಎಲ್ಲ ಸುಳಿವುಗಳು ಸಿಕ್ಕಿವೆ. ಪರಿಣಾಮವಾಗಿ ಇದು ನವ-ಉದಾರವಾದಿ ಅಜೆಂಡಾದ ಅನುಷ್ಠಾನವನ್ನು ಇನ್ನಷ್ಟು ತ್ವರಿತಗೊಳಿಸುತ್ತದೆ, ಮತ್ತು ಅದರಿಂದಾಗಿ ಜನತೆಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.

2014-2019ರ ಅವಧಿಯಲ್ಲಿ ಮೋದಿ ಸರಕಾರವು ಭಾರತವನ್ನು ಅಮೆರಿಕದೊಂದಿಗೆ ವ್ಯೂಹಾತ್ಮಕವಾಗಿಯೂ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಮತ್ತಷ್ಟು ಜೋಡಿಸಿಕೊಳ್ಳಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿತ್ತು. ಮಿಲಿಟರಿ ಸಾಗಾಣಿಕೆ ಬೆಂಬಲ ಮತ್ತು ಸೇನಾ ಸಂಪರ್ಕ ಸಾಧನಗಳನ್ನು ಸಮಗ್ರೀಕರಿಸುವ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು. ಜಪಾನ್, ಆಸ್ಟ್ರೇಲಿಯಾ, ಭಾರತ ಮತ್ತು ಅಮೆರಿಕ ಒಳಗೊಂಡ ಚತುಷ್ಪಕ್ಷೀಯ ಮೈತ್ರಿಕೂಟ ಮಾಡಿಕೊಳ್ಳುವ ಬಗ್ಗೆ ಅಮೆರಿಕ ಮಾಡಿದ್ದ ಪ್ರಸ್ತಾವನೆಗೆ ಭಾರತವೂ ಕೈಜೋಡಿಸಿತ್ತು.

ಈ ವ್ಯೂಹಾತ್ಮಕ ಅಪ್ಪುಗೆಯು ಏಷ್ಯಾ-ಶಾಂತಸಾಗರ ವಲಯದಲ್ಲಿ ಅಮೆರಿಕದ ಭೌಗೋಳಿಕ-ರಾಜಕೀಯ ಹಿತಗಳಿಗೆ ಸಂಪೂರ್ಣವಾಗಿ ಅನುಕೂಲಕರವಾದ ಒಂದು ವಿದೇಶಾಂಗ ನೀತಿಯನ್ನು ಭಾರತವು ಅನುಸರಿಸುವಂತೆ ಮಾಡಿತು.

ಈ ಹಿಂದೆ ರಷ್ಯಾ ಭಾರತಕ್ಕೆ ಶಸ್ತ್ರಾಸ್ತ್ರಗಳ ಮತ್ತು ಸಾಧನಗಳ ಪ್ರಮುಖ ಪೂರೈಕೆದಾರನಾಗಿತ್ತು. ಈಗ ಅಮೆರಿಕದ ಒತ್ತಡಕ್ಕೆ ಮಣಿದು ರಷ್ಯಾವನ್ನು ಬಿಟ್ಟು ಅಮೆರಿಕದಿಂದ ಶಸ್ತ್ರಾಸ್ತ್ರ ಮತ್ತು ಉಪಕರಣಗಳನ್ನು ಖರೀದಿಸುವ ಪ್ರಕ್ರಿಯೆಗೆ ಭಾರತ ವೇಗವನ್ನು ನೀಡಿತು. ಆಂತರಿಕ ನೀತಿಗಳ ಬಗ್ಗೆ ಹೇಳುವುದಾದರೆ, ಮೋದಿ ಸರಕಾರವು ಅಮೆರಿಕದ ಬಹುರಾಷ್ಟ್ರೀಯ ಕಾರ್ಪೊರೇಟ್‌ಗಳು ಮತ್ತು ಹಣಕಾಸು ಹಿತಗಳಿಗೆ ನೆರವಾಗುವ ಅನೇಕ ಕ್ರಮಗಳನ್ನು ಕೈಗೊಂಡಿತು.

ಡೊನಾಲ್ಡ್ ಟ್ರಂಪ್ 2018ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಟ್ರಂಪ್‌ರ ಅಮೆರಿಕ ಮೊದಲು ಹಾಗೂ ಸ್ವರಕ್ಷಣಾತ್ಮಕ ನೀತಿಗಳಿಗೆ ಅನುಗುಣವಾಗಿ ಭಾರತದ ಮೇಲೆ ಅನೇಕ ಒತ್ತಡಗಳನ್ನು ಹೇರಲಾಯಿತು.

250 ಬಿಲಿಯ ಡಾಲರ್ ಮೌಲ್ಯದ ವಸ್ತುಗಳ ಮೇಲೆ ಸುಂಕವನ್ನು ಹೆಚ್ಚಿಸುವ ಮೂಲಕ ಹಾಗೂ ಇನ್ನೂ 325 ಬಿಲಿಯ ಡಾಲರ್ ವಸ್ತುಗಳಿಗೆ ಹಾಗೇ ಮಾಡುವುದಾಗಿ ಬೆದರಿಸುವ ಮೂಲಕ ಚೀನಾದ ವಿರುದ್ಧ ಟ್ರಂಪ್ ವಾಣಿಜ್ಯ ಸಮರವನ್ನು ಸಾರಿದರು. ಚೀನಾದ ಮಾರುಕಟ್ಟೆಯಲ್ಲಿ ಹೆಚ್ಚು ಅವಕಾಶಗಳನ್ನು ನೀಡಬೇಕು ಹಾಗೂ ಅಮೆರಿಕದ ತಂತ್ರಜ್ಞಾನ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳಿಗೆ ರಕ್ಷಣೆಗಳನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.

ಟ್ರಂಪ್ ಭಾರತವನ್ನು ಕೂಡ ಬಿಡಲಿಲ್ಲ. ಭಾರತದೊಂದಿಗಿನ ವಾಣಿಜ್ಯ ಕೊರತೆಯನ್ನು ತಿರುಗು-ಮುರುಗು ಮಾಡಬೇಕು ಹಾಗೂ ಭಾರತವು ಸುಂಕಗಳನ್ನು ಇಳಿಸಬೇಕು ಮತ್ತು ಅಮೆರಿಕದ ವಸ್ತುಗಳನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳಬೇಕು ಎಂಬುದು ಅವರ ಬೇಡಿಕೆಯಾಗಿತ್ತು. ಈ ವಿಷಯದಲ್ಲಿ ಮೊದಲ ಹೆಜ್ಜೆಯಾಗಿ ಅವರು ಅಮೆರಿಕ ಆಮದು ಮಾಡಿಕೊಳ್ಳುತ್ತಿದ್ದ ಭಾರತದ ಅಲ್ಯುಮಿನಿಯಮ್ ಮತ್ತು ಉಕ್ಕಿನ ಮೇಲಿನ ಸುಂಕಗಳನ್ನು ಹೆಚ್ಚಿಸಿದರು. ಅದರ ಬೆನ್ನಲ್ಲೇ ಸುಂಕಗಳಿಲ್ಲದೆ ಭಾರತವು ಅನೇಕ ವಸ್ತುಗಳನ್ನು ರಫ್ತು ಮಾಡಲು ಅವಕಾಶ ನೀಡುವ ಪ್ರಾಶಸ್ತ್ಯದ ವ್ಯಾಪಾರ ಎಂದು ಪರಿಗಣಿಸುವುದನ್ನು ಕೊನೆಗೊಳಿಸಲು ಅವರು ನಿರ್ಧರಿಸಿದರು. ಈ ವ್ಯವಸ್ಥೆಯನ್ನು ತೆಗೆದು ಹಾಕಿದ್ದರಿಂದ ಭಾರತದಿಂದ ರಫ್ತಾಗುವ 1900 ವಸ್ತುಗಳಿಗೆ ಈಗ ಕಸ್ಟಮ್ಸ್ ಸುಂಕ ತೆರಬೇಕಾಗಿದೆ.

ಮಾರ್ಚ್ ಆರಂಭದಲ್ಲಿ ಅಮೆರಿಕ ಈ ಪ್ರಕಟಣೆಯನ್ನು ಮಾಡಿತು ಹಾಗೂ 60 ದಿನಗಳ ನಂತರ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿತು ಎನ್ನುವುದನ್ನು ಇಲ್ಲಿ ಗಮನಿಸಬೇಕು. ಆದಾಗ್ಯೂ ಈ ಪ್ರತಿಕೂಲ ಕ್ರಮವನ್ನು ನಿಲ್ಲಿಸಲು ಮೋದಿ ಸರಕಾರ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಅಥವಾ ಪ್ರತಿ-ಕ್ರಮಗಳಿಗೂ ಮುಂದಾಗಲಿಲ್ಲ. ಸುಂಕ ಹೇರಿದ್ದನ್ನು ಚೀನಾ ಯಾವ ರೀತಿಯಲ್ಲಿ ನಿರ್ವಹಿಸಿತು ಎನ್ನುವುದಕ್ಕೆ ಪೂರ್ತಿ ವ್ಯತಿರಿಕ್ತವಾದ ನಡೆ ಭಾರತದ್ದಾಗಿದೆ. ಚೀನಾವನ್ನು ಪ್ರವೇಶಿಸುವ ಅಮೆರಿಕದ ವಸ್ತುಗಳ ಮೇಲೆ ಸುಂಕವನ್ನು ಹೇರುವ ಮೂಲಕ ಚೀನಾ ತಿರುಗೇಟು ನೀಡಿತು.

ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ವ್ಯೂಹಾತ್ಮಕ ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು.

ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳಿಗೆ ಮಂಡಿಯೂರುತ್ತಿದ್ದಾರೆ. ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ಶಿರಸಾವಹಿಸಿ ಪಾಲಿಸಲಾಯಿತು. ಇದರಿಂದಾಗಿ ಭಾರತಕ್ಕೆ ತುಂಬಾ ನಷ್ಟವಾಗಲಿದೆ. ಯಾಕೆಂದರೆ ಅಂತಾರ್ರಾಷ್ಟ್ರೀಯ ಮಾರುಕಟ್ಟೆಗಿಂತ ಕಡಿಮೆ ಬೆಲೆಯಲ್ಲಿ ಇರಾನ್‌ನಿಂದ ಎಣ್ಣೆಯನ್ನು ತರಿಸಿಕೊಳ್ಳಲಾಗುತ್ತಿತ್ತು. ಅದಾದ ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು.

ರಷ್ಯಾದ ಟ್ರೈಯಂಫ್ ಎಸ್-400 ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.

ಲಾಕ್‌ಹೀಡ್ ನಿರ್ಮಿತ ಎಫ್-21 ಯುದ್ಧ ವಿಮಾನಗಳನ್ನು ಖರೀದಿಸುವಂತೆ ಭಾರತದ ಮೇಲೆ ಅಪಾರ ಒತ್ತಡ ಹೇರಲಾಗುತ್ತಿದೆ. 110 ಯುದ್ಧ ವಿಮಾನಗಳ ಖರೀದಿಗೆ (ರಫೇಲ್ ಯುದ್ಧ ವಿಮಾನ ಖರೀದಿಯನ್ನು 36ಕ್ಕೆ ಇಳಿಸಿದ ನಂತರ) ಭಾರತದ ಒಂದು ಟೆಂಡರ್ ಪ್ರಕಟಿಸಿದೆ. ಬಿಲಿಯಗಟ್ಟಲೆ ಡಾಲರ್ ಮೌಲ್ಯದ ಈ ಗುತ್ತಿಗೆಯನ್ನು ಪಡೆಯಲು ಅಮೆರಿಕ ಭಾರತವನ್ನು ಪೀಡಿಸುತ್ತಿದೆ.

ಅಮೆರಿಕದ ವಿದೇಶ ಸಚಿವ ಮೈಕ್ ಪಾಂಪಿಯೊ ಜೂನ್ ಮೂರನೇ ವಾರದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮೋದಿ ಅಧಿಕಾರಕ್ಕೆ ಮರಳಿದ ನಂತರದ ಮೊದಲ ಭೇಟಿಯಿದು. ವಾಣಿಜ್ಯ ವಿಚಾರದಲ್ಲಿ ಕಠಿಣ ಮಾತು, ರಷ್ಯಾದ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ಪರಿಹಾರವಾಗಿ ಅಮೆರಿಕದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಒತ್ತಾಯಿಸುವುದು, ಚೀನಾದ ಬೃಹತ್ ಕಂಪೆನಿಯಾದ ಹುವೈ ಭಾರತದಲ್ಲಿ ನಡೆಯುವ 5ಜಿ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ನಿಷೇಧಿಸುವುದು- ಇವೆಲ್ಲ ಪಾಂಪಿಯೊ ಭೇಟಿ ವೇಳೆ ಇರಲಿರುವ ಕಾರ್ಯಸೂಚಿಯಾಗಿದೆ.

ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಇದೀಗ ಮೋದಿ ಸರಕಾರದ ಹೊಸ ವಿದೇಶ ಸಚಿವರು. ಒಬ್ಬ ವೃತ್ತಿನಿರತ ರಾಜತಾಂತ್ರಿಕನನ್ನು ನೇರವಾಗಿ ಸಚಿವ ಸಂಪುಟಕ್ಕೆ ಬಡ್ತಿ ನೀಡಿದ್ದು ಇದೇ ಮೊದಲ ಸಲವಾಗಿದೆ. ಅಮೆರಿಕ-ಪರ ಚಟುವಟಿಕೆಗಳಿಗೆ ಜೈಶಂಕರ್ ಖ್ಯಾತರು. ವಿದೇಶ ವ್ಯವಹಾರಗಳ ಸಚಿವಾಲಯದಲ್ಲಿನ ಹಾಗೂ ವಿದೇಶಾಂಗ ಕಾರ್ಯದರ್ಶಿಯಾಗಿ ಅವರ ಕಾರ್ಯಗಳ ದಾಖಲೆಗಳು ಹೇಗೆ ಅವರು ಅಮೆರಿಕದೊಂದಿಗೆ ನಿಕಟ ವ್ಯೂಹಾತ್ಮಕ ಮೈತ್ರಿಗೆ ಒತ್ತು ನೀಡಿದ್ದರು ಎನ್ನುವುದನ್ನು ತೋರಿಸುತ್ತವೆ.

ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ. ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್‌ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.

ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ,ದೇಶಕ್ಕೆತುಂಬಾನಷ್ಟವಾಗುತ್ತಿದ್ದರೂಶಿರಸಾವಹಿಸಿ ಪಾಲಿಸಲಾಯಿತು. ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು. ರಷ್ಯಾದ ಟ್ರೈಯಂಫ್ ಎಸ್-೪೦೦ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.

ಪ್ರಕಾಶ್ ಕಾರಟ್
ಅನು: ವಿಶ್ವ

(ಕೃಪೆ : ಜನಶಕ್ತಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್

Published

on

ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್‌ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.

ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್‌ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

ಹೇಳಿಕೆ


  • ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.

            | ಸಚಿವ ದಿನೇಶ್ ಗುಂಡೂರಾವ್


ಟ್ವೀಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ34 mins ago

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ. ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು...

ದಿನದ ಸುದ್ದಿ49 mins ago

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty...

ದಿನದ ಸುದ್ದಿ4 days ago

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ...

ದಿನದ ಸುದ್ದಿ6 days ago

ದಾವಣಗೆರೆ ವಿವಿ ಘಟಿಕೋತ್ಸವ ; ಮೂವರಿಗೆ ಗೌರವ ಡಾಕ್ಟರೇಟ್

ಸುದ್ದಿದಿನ, ದಾವಣಗೆರೆ : ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಶಿವರಾಜ ಪಾಟೀಲ, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ...

ದಿನದ ಸುದ್ದಿ6 days ago

ದಾವಣಗೆರೆ ವಿಶ್ವವಿದ್ಯಾಲಯ | 11ನೇ ಘಟಿಕೋತ್ಸವ :ದೀಪ್ತಿಗೆ ಐದು ; ಸಿಂಧುಬಾಯಿಗೆ ಮೂರು ಚಿನ್ನದ ಪದಕ

ಸುದ್ದಿದಿನ,ದಾವಣಗೆರೆ: ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ಒಟ್ಟು 14,357ವಿದ್ಯಾರ್ಥಿಗಳು ದಾವಣಗೆರೆ ವಿಶ್ವವಿದ್ಯಾಲಯದ ಹನ್ನೊಂದನೇ ಘಟಿಕೋತ್ಸವದಲ್ಲಿ ಪದವಿ ಪಡೆಯಲಿದ್ದಾರೆ. 45ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದರೆ, 64 ಸಂಶೋಧನಾ ವಿದ್ಯಾರ್ಥಿಗಳು...

ದಿನದ ಸುದ್ದಿ7 days ago

ಪಿಎಚ್ ಡಿ ; ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾ.19 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವ ವಿದ್ಯಾನಿಲಯದ ವೆಬ್‍ಸೈಟ್...

ದಿನದ ಸುದ್ದಿ7 days ago

ವಿಶ್ವ ಫ್ಲಂಬರ್ ದಿನಾಚರಣೆ

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕಾವೇರಿ ಮಾತಾ ಪ್ಲಂಬರ್ಸ್ ಕಾರ್ಮಿಕರ ಸಂಘದಿಂದ ಸಂಘದ ಕಚೇರಿಯಲ್ಲಿ ವಿಶ್ವ ಪ್ಲಂಬರ್ ದಿನಾಚರಣೆ ಹಾಗೂ ವಿಶ್ವ ಜಲ ಸಂಗ್ರಹಣಾ ದಿನವನ್ನು ಸರಳವಾಗಿ ಆಚರಿಸಲಾಯಿತು. ಈ...

ದಿನದ ಸುದ್ದಿ7 days ago

ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್

ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು...

ಕ್ರೀಡೆ7 days ago

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ....

ದಿನದ ಸುದ್ದಿ7 days ago

ನರೇಂದ್ರ ಮೋದಿ ಹರಿಯಾಣದ ಗುರುಗ್ರಾಮಕ್ಕೆ ಭೇಟಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ...

Trending