ರಾಜಕೀಯ
‘ಪಕ್ಷಾಂತರ’ ಎಂಬುದು ಪ್ರಜಾಪ್ರಭುತ್ವಕ್ಕಂಟಿದ ರೋಗ : ಸಿದ್ದರಾಮಯ್ಯ ಅವರ ಸಂಪೂರ್ಣ ಭಾಷಣ, ಮಿಸ್ ಮಾಡ್ದೆ ಓದಿ
- ಇಂದು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಿದ ಮಾತುಗಳು
ಮತಪ್ರಮಾಣದ ಪ್ರಕಾರ ಮತದಾರರು ನಮಗೆ ಬಹುಮತ ಕೊಟ್ಟಿದ್ದರು. ನಮ್ಮೆರಡು ಪಕ್ಷಗಳ ಒಟ್ಟು ಮತಪ್ರಮಾಣ ಶೇಕಡಾ 54.44. ಇದರ ಆಧಾರದಲ್ಲಿಯೇ ನಾವು ಸರ್ಕಾರ ರಚಿಸಿದ್ದು.
ಈ ಹಿಂದೆಯೂ ಕರ್ನಾಟಕದಲ್ಲಿ ಹಲವು ಬಾರಿ ಸಮ್ಮಿಶ್ರ ಸರ್ಕಾರಗಳು ರಚನೆಯಾಗಿ, ಆಡಳಿತ ನಡೆಸಿವೆ. ಇದೇನು ಮೊದಲ ಬಾರಿ ರಚನೆಯಾಗುತ್ತಿರುವುದಲ್ಲ.
2018ರ ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯೆ ಇಲ್ಲವೇ ಮತಪ್ರಮಾಣದಲ್ಲಿ ಬಹುಮತ ಇರಲಿಲ್ಲ. ಹೀಗಿದ್ದರೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದು ತಮ್ಮ ಬಲದ ಮೇಲಿನ ವಿಶ್ವಾಸದಿಂದ ಅಲ್ಲ. ಆಪರೇಷನ್ ಕಮಲದ ಮೇಲಿನ ವಿಶ್ವಾಸದಿಂದ. 15 ದಿನ ಕಾಲಾವಕಾಶ ಸಿಕ್ಕಿದ್ದರೆ ಈಗಿನದ್ದನ್ನು ಆಗಲೇ ಮಾಡಿಬಿಡುತ್ತಿದ್ದರು. ಈ ಹೊಲಸು ರಾಜಕೀಯ ಬೆಳವಣಿಗೆಗಳ ಹಿಂದೆ ಬಿಜೆಪಿ ಪಕ್ಷ ಇದೆ ಎಂಬುದು ಅತ್ಯಂತ ಸ್ಪಷ್ಟವಾಗಿ ಕಾಣಿಸುತ್ತಿದೆ. ರಾಜ್ಯದ ಮತದಾರರು ಮೂರ್ಖರಲ್ಲ. ಇದಕ್ಕೆ ಮುಂದಿನ ಚುನಾವಣೆಗಳು ತಕ್ಕ ಪಾಠ ಕಲಿಸಲಿವೆ. ಅಧಿಕಾರದಾಸೆಗೆ ಶಾಸಕರನ್ನು ಖರೀದಿಸಿ, ಇದ್ದ ಸರ್ಕಾರವನ್ನು ಅಸ್ಥಿರಗೊಳಿಸಿ ಜನರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ರಚಿಸುವುದು ಎಷ್ಟು ಸರಿ?
ಜನಸೇವೆಯ ಉದ್ದೇಶದಿಂದ ರಾಜಕಾರಣಕ್ಕೆ ಬಂದಿದ್ದೇವೆ. ಇದು ನಮಗೆ ವೃತ್ತಿಯಲ್ಲ, ಪ್ರವೃತ್ತಿ. ಇಲ್ಲಿಗೆ ಬಂದ ನಂತರ ಒಂದು ಸಿದ್ದಾಂತವಿಲ್ಲದೇ ಹೋದರೆ ಬಂದದ್ದು ವ್ಯರ್ಥವಾಗುತ್ತದೆ. ನಾನು ಸಂವಿಧಾನದಲ್ಲಿ ನಂಬಿಕೆಯಿಟ್ಟವನು. ದೇಶದ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಸಂವಿಧಾನದ ಉದ್ದೇಶ. ಸಾಮಾಜಿಕ ನ್ಯಾಯ, ಸಮಾನ ಅವಕಾಶ ಇವು ನನ್ನ ಆಶಯಗಳು ಕೂಡ. ಅಧಿಕಾರ ಯಾರೂ ಬೇಕಾದರೂ ಮಾಡಬಹುದು, ಸರ್ಕಾರ ಯಾವುದು ಬೇಕಾದರೂ ಬರಬಹುದು. ಯಾರೂ ಇಲ್ಲಿ ಶಾಶ್ವತರಲ್ಲ. ಆದರೆ ಪಕ್ಷಾಂತರ ಎಂಬ ಪ್ರಜಾಪ್ರಭುತ್ವಕ್ಕಂಟಿದ ರೋಗದ ಬಗ್ಗೆ ಇಂದು ಚರ್ಚೆಯಾಗಬೇಕಿದೆ. ಇದರ ಬಗ್ಗೆ ಜನರನ್ನು ಎಚ್ಚರಿಸಬೇಕು. ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಬಿಜೆಪಿಯ ಈ ನಡೆ ನಾಚಿಕೆಗೇಡಿನ ಸಂಗತಿಯಲ್ಲವೇ?
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ104 ಸ್ಥಾನ ಪಡೆದಿದ್ದ ಕಾರಣದಿಂದ ರಾಜ್ಯಪಾಲರು ಯಡಿಯೂರಪ್ಪನವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು, ಜೊತೆಗೆ ಹದಿನೈದು ದಿನಗಳ ಕಾಲಾವಕಾಶ ಸಹ ನೀಡಿದ್ದರು. ಬಹುಮತ ಸಾಬೀತುಪಡಿಸುವಲ್ಲಿ ಅವರು ವಿಫಲರಾದ ನಂತರವೇ ನಾವು ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದು. ಹಾಗಾಗಿ ಇದೇನು ಜನಾಭಿಪ್ರಾಯದ ವಿರುದ್ಧವಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಹೆಚ್ಚು ಸ್ಥಾನ ಪಡೆಯದಿದ್ದರೂ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲಿಲ್ಲವೇ? ಕರ್ನಾಟಕದಲ್ಲಿ ನಮ್ಮದು ಅಪವಿತ್ರ ಮೈತ್ರಿಯಾದರೇ, ಗೋವಾದಲ್ಲಿ ಬಿಜೆಪಿ ಸಮ್ಮಿಶ್ರ ಸರ್ಕಾರ ರಚಿಸಿರುವುದು ಅಪವಿತ್ರ ಮೈತ್ರಿಯಲ್ಲವೇ?
ತಮಿಳುನಾಡಲ್ಲಿ ಪಳನಿಸ್ವಾಮಿಯವರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಾಸ್ಸು ಪಡೆಯುತ್ತೇವೆ ಎಂದು ಕೆಲವು ಶಾಸಕರು ರಾಜ್ಯಪಾಲರಿಗೆ ಪತ್ರ ನೀಡಿದ್ದರು. ಅಲ್ಲಿ ವಿಪ್ ಸಹ ನೀಡದೆ ಆ ಶಾಸಕರನ್ನು ಅನರ್ಹಗೊಳಿಸಲಾಗಿದೆ. ಯಾವುದೇ ಶಾಸಕ ಪಕ್ಷದ ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದರೆ ತಕ್ಷಣ ಅವರನ್ನು ವಜಾ ಮಾಡುವ ಅಧಿಕಾರವಿದೆ. ಇಂದು ಚರ್ಚೆಯಾಗಬೇಕಿರುವ ಮುಖ್ಯ ವಿಚಾರ ಶಾಸಕರ ಪಕ್ಷಾಂತರದ್ದು. ಇದೇ ರೀತಿಯ ಕೀಳು ಮನೋಭಾವ ಮುಂದುವರೆದರೆ ಯಾವ ಸರ್ಕಾರ ಕೂಡ ಸ್ಥಿರವಾಗಿ ನಿಲ್ಲಲಾರದು. ಬಿಜೆಪಿಯವರು ನಮ್ಮ ಶಾಸಕರನ್ನು ಸಾರಾಸಗಟಾಗಿ ಖರೀದಿ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಬೆಳವಣಿಗೆ. ಇದನ್ನು ರಾಜ್ಯದ ಜನ ಒಪ್ಪುತ್ತಾರೆಯೇ?
ಇಷ್ಟೆಲ್ಲಾ ನಾಟಕ ಮಾಡಿ, ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದರೂ ಯಡಿಯೂರಪ್ಪನವರು ವರ್ಷಕ್ಕಿಂತ ಹೆಚ್ಚು ಕಾಲ ಅಧಿಕಾರ ನಡೆಸಲು ಆಗುವುದಿಲ್ಲ. 2008ರಲ್ಲೂ ಇದೇ ಪರಿಸ್ಥಿತಿಯನ್ನು ಅವರು ಎದುರಿಸಿದ್ದಾರೆ. ರೇಣುಕಾಚಾರ್ಯ, ಗೂಳಿಹಟ್ಟಿ ಶೇಖರ್ ಇವರೆಲ್ಲ ಅಂದು ಯಡಿಯೂರಪ್ಪನವರ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದವರಲ್ಲವೇ? ಇಂದಿನ ಹದಗೆಟ್ಟ ರಾಜಕೀಯ ಪರಿಸ್ಥಿತಿಗೂ ನಮಗೂ ಸಂಬಂಧವೇ ಇಲ್ಲ ಎಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ. ಇದೊಂದು ರೀತಿ ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚಕ್ಕೆ ತಿಳಿಯದು ಎಂಬಂತಿದೆ. ಮುಂದೆ ಬಿಜೆಪಿ ಸರ್ಕಾರ ಬಂದು ಈಗ ಪಕ್ಷಾಂತರ ಮಾಡಿದವರೆಲ್ಲ ಬಿಜೆಪಿಯಲ್ಲಿ ಮಂತ್ರಿಗಳಾದರೆ ಜಗತ್ತಿಗೆ ಇವರ ಕುತಂತ್ರ ತಿಳಿಯುವುದಿಲ್ಲವೇ?
ಕರ್ನಾಟಕಕ್ಕೆ ತನ್ನದೇ ಆದ ಇತಿಹಾಸವಿದೆ. ಹಲವು ಜನಪರ ಹೋರಾಟಗಳನ್ನು ಕಂಡ ನೆಲವಿದು. ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರುವಾಸಿ ರಾಜ್ಯ ನಮ್ಮದು. ಇಂತಹ ಪುಣ್ಯಭೂಮಿಯಲ್ಲಿ ಇಂದು ಎದುರಾಗಿರುವ ಸನ್ನಿವೇಶ ಎಲ್ಲರೂ ತಲೆತಗ್ಗಿಸುವಂತೆ ಮಾಡಿದೆ. ಪ್ರಜಾಪ್ರಭುತ್ವ, ಸಿದ್ದಾಂತ ಗೊತ್ತಿಲ್ಲದವರೆಲ್ಲ ರಾಜಕಾರಣಕ್ಕೆ ಬಂದಿರುವುದೇ ಈ ಪರಿಸ್ಥಿತಿಗೆ ಕಾರಣ. ಹಿಂದೆ ದೇವದುರ್ಗದಲ್ಲಿ ಮಾತನಾಡಿದ್ದ ಆಡಿಯೋ ಟೇಪ್ನಲ್ಲಿದ್ದ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದೇ ತರ ಎಷ್ಟೋ ಆಡಿಯೋಗಳು ಹೊರಬಂದಿವೆ, ಬಂಡಾಯ ಶಾಸಕರಿಗೆ ವಿಮಾನ ವ್ಯವಸ್ಥೆ ಮಾಡಿಕೊಡೋದು, ಪಂಚತಾರಾ ಹೋಟೆಲುಗಳಲ್ಲಿ ವಾಸ್ತವ್ಯದ ವ್ಯವಸ್ಥೆ, ಪೊಲೀಸ್ ಬೆಂಗಾವಲು ಇವೆಲ್ಲ ಬಿಜೆಪಿಯವರು ಮಾಡಿಕೊಟ್ಟಿದ್ದಲ್ಲವೇ?
ಹಾಗಾದರೆ ಮಹಾರಾಷ್ಟ್ರದಲ್ಲಿ ಯಾವ ಸರ್ಕಾರವಿದೆ? ಹದಿನೈದು ಜನ ಪಕ್ಷಾಂತರ ಶಾಸಕರನ್ನು ಕಾಯಲು ಸಾವಿರಾರು ಜನರನ್ನು ಬಿಟ್ಟಿದ್ದಾರಲ್ಲ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ? ನಾವು ನಮ್ಮ ಪಕ್ಷದ ಶಾಸಕರ ಬಳಿಯೇ ಮಾತನಾಡುವಂತಿಲ್ಲ, ಇಂದು ಇಂದಿನ ರಾಜಕಾರಣದ ವಾಸ್ತವ ಪರಿಸ್ಥಿತಿ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು.
ಹಾಗಾದರೆ ಮಹಾರಾಷ್ಟ್ರದಲ್ಲಿ ಯಾವ ಸರ್ಕಾರವಿದೆ? ಹದಿನೈದು ಜನ ಪಕ್ಷಾಂತರಿ ಶಾಸಕರನ್ನು ಕಾಯಲು ಸಾವಿರಾರು ಜನರನ್ನು ಬಿಟ್ಟಿದ್ದಾರಲ್ಲ ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ? ನಾವು ನಮ್ಮ ಪಕ್ಷದ ಶಾಸಕರ ಬಳಿಯೇ ಮಾತನಾಡುವಂತಿಲ್ಲ, ಇಂದು ಇಂದಿನ ರಾಜಕಾರಣದ ವಾಸ್ತವ ಪರಿಸ್ಥಿತಿ.
— Siddaramaiah (@siddaramaiah) July 23, 2019
ಹಿಂದೆ ದೇವದುರ್ಗದಲ್ಲಿ ಮಾತನಾಡಿದ್ದ ಆಡಿಯೋ ಟೇಪ್ನಲ್ಲಿದ್ದ ಧ್ವನಿ ನನ್ನದೇ ಎಂದು ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದೇ ತರ ಎಷ್ಟೋ ಆಡಿಯೋಗಳು ಹೊರಬಂದಿವೆ, ಬಂಡಾಯ ಶಾಸಕರಿಗೆ ವಿಮಾನ ವ್ಯವಸ್ಥೆ ಮಾಡಿಕೊಡೋದು, ಪಂಚತಾರಾ ಹೋಟೆಲುಗಳಲ್ಲಿ ವಾಸ್ತವ್ಯದ ವ್ಯವಸ್ಥೆ, ಪೊಲೀಸ್ ಬೆಂಗಾವಲು ಇವೆಲ್ಲ ಬಿಜೆಪಿಯವರು ಮಾಡಿಕೊಟ್ಟಿದ್ದಲ್ಲವೇ?
— Siddaramaiah (@siddaramaiah) July 23, 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
ಸುದ್ದಿದಿನ ಡೆಸ್ಕ್ : 2024ರ ಲೋಕಸಭಾ ಚುನಾವಣೆಯಲ್ಲಿ ಅಂದಾಜು ಒಂದು ಕೋಟಿ 80 ಲಕ್ಷ ಹೊಸ ಮತದಾರರು ತಮ್ಮ ಅಮೂಲ್ಯ ಹಕ್ಕನ್ನು ಮೊದಲ ಬಾರಿಗೆ ಚಲಾಯಿಸಲಿದ್ದಾರೆ. ಇವರೆಲ್ಲ 18-19ರ ಪ್ರಾಯದವರು.
ಮೊದಲ ಬಾರಿಗೆ ಮತ ಚಲಾಯಿಸುವ ಯುವಕರಿಗೆ ಅವರ ಈ ಪವಿತ್ರ ಕರ್ತವ್ಯದ ಮಹತ್ವವನ್ನು ಮನಗಾಣಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ’ನಾನು ಖಂಡಿತ ಮತ ಚಲಾಯಿಸುತ್ತೇನೆ’ ಎನ್ನುವ ಪ್ರಚಾರ ಆಂದೋಲನಗಳು ನಡೆಯುತ್ತಿವೆ.
ಈ ಬಾರಿ ಚುನಾವಣೆಯಲ್ಲಿ ಭಾಗವಹಿಸುವ ಯುವ ಮತದಾರರ ಪೈಕಿ 20ರಿಂದ 29ವರ್ಷ ವಯೋಮಾನದ ಅಂದಾಜು 19 ಕೋಟಿ 74 ಲಕ್ಷ ಮತದಾರರು ಪಾಲ್ಗೊಳ್ಳಲಿದ್ದಾರೆ. 18 ವರ್ಷಕ್ಕೆ ಮತದಾನದ ಹಕ್ಕು ದೊರೆಯುವುದಾದರೂ ಈಗ 17 ವರ್ಷ ತುಂಬಿರುವ ಯುವಜನ ಸಮೂಹದಿಂದ 13.4ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಮುಂಚಿತವಾಗಿಯೇ ಸ್ವೀಕರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗ ಯುವ ಜನರಿಗೆ ಮತದಾನಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸಚಿನ್ ತೆಂಡುಲ್ಕರ್ ಮತ್ತು ರಾಜಕುಮಾರ್ ರಾವ್ ಅವರಂತಹ ರಾಷ್ಟ್ರೀಯ ದಿಗ್ಗಜರಿಂದ ಸಂದೇಶಗಳನ್ನು ಪ್ರಸಾರ ಮಾಡುತ್ತಿದೆ. ಸಾಮಾಜಿಕ ಮಾಧ್ಯಮ ಅಭಿಯಾನಗಳು ಮತ್ತು ರೇಡಿಯೋ ಮೂಲಕವೂ ಸಂದೇಶಗಳನ್ನು ಪ್ರಸಾರ ಮಾಡಲಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
ಸುದ್ದಿದಿನ,ಬೆಂಗಳೂರು : ದಕ್ಷಿಣ ಭಾರತದಲ್ಲಿ ಭಾರತೀಯ ಜನತಾಪಕ್ಷಕ್ಕೆ, ಕರ್ನಾಟಕ ಹೆಬ್ಬಾಗಿಲಿನಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬರಲಿರುವ ಮಹಾಚುನಾವಣೆಗೆ ಪಕ್ಷದ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸಲಿರುವ ನೂತನ ಮಾಧ್ಯಮ ಕೇಂದ್ರದಲ್ಲಿ ಪಕ್ಷದ ರಾಜ್ಯ ನಾಯಕರು ಇಂದು ಬೆಳಿಗ್ಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ಜನಪರ ಆಡಳಿತ ನೀಡುವಲ್ಲಿ ಮತ್ತು ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು.
ಜನವಿರೋಧಿ ಕ್ರಮಗಳಿಂದಾಗಿ ರಾಜ್ಯದ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅತಿಹೆಚ್ಚು ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಕಾರ್ಯತಂತ್ರ ರೂಪಿಸಲು ತನ್ನ 200ಕ್ಕೂ ಹೆಚ್ಚು ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ನಡುವೆ ಲೋಕಸಭಾ ಚುನಾವಣೆ ಕುರಿತಂತೆ ದೆಹಲಿಯಲ್ಲಿ ಇಂದು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಯ ಸಭೆ ನಡೆಯಲಿದೆ.
ಚುನಾವಣೆಗೆ ಪಕ್ಷದ ಕಾರ್ಯತಂತ್ರಗಳನ್ನು ಕುರಿತು ಸಮಾಲೋಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಚುನಾವಣಾ ಸಮಿತಿಯ ಸದಸ್ಯರು ಮತ್ತಿತರ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
"ವಿಕಸಿತ ಭಾರತಕ್ಕಾಗಿ
ಮತ್ತೊಮ್ಮೆ ಮೋದಿ ಸರ್ಕಾರ"ಮಲ್ಲೇಶ್ವರಂನ ಜಿ.ಎಂ. ರಿಜಾಯ್ಸ್ ಹೋಟೆಲ್ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ನೆರವೇರಿಸಲಾಯಿತು. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿ ಜೀ ಅವರ ಪರವಾದ ಅಲೆ ವ್ಯಾಪಕವಾಗಿದ್ದು 'ಮೋದಿ ಮತ್ತೊಮ್ಮೆ' ಎಂಬುದು ಜನಸಾಮಾನ್ಯರ ಸಂಕಲ್ಪವಾಗಿದೆ. ದೇಶದಲ್ಲಿ 400 ಹಾಗೂ… pic.twitter.com/gYbNmo1Poo
— Vijayendra Yediyurappa (Modi Ka Parivar) (@BYVijayendra) March 23, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ6 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
-
ದಿನದ ಸುದ್ದಿ2 days ago
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ